Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 23:16 - ಕನ್ನಡ ಸತ್ಯವೇದವು C.L. Bible (BSI)

16 ಸರ್ವಶಕ್ತ ಸರ್ವೇಶ್ವರನ ನುಡಿಯಿದು: “ಪ್ರವಾದಿಗಳು ನಿಮಗೆ ಹೇಳುವ ಮಾತುಗಳನ್ನು ಕೇಳಬೇಡಿ. ಅವರು ನಿಮ್ಮಲ್ಲಿ ವ್ಯರ್ಥವಾದ ನಂಬಿಕೆ ನಿರೀಕ್ಷೆಯನ್ನು ಹುಟ್ಟಿಸುತ್ತಾರಷ್ಟೆ. ಸರ್ವೇಶ್ವರನ ಬಾಯಿಂದ ಹೊರಟದ್ದನ್ನು ನುಡಿಯದೆ ತಮ್ಮ ಸ್ವಂತ ಮನಸ್ಸಿಗೆ ತೋಚಿದ್ದನ್ನೇ ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಸೇನಾಧೀಶ್ವರನಾದ ಯೆಹೋವನು, “ನಿಮಗೆ ಪ್ರವಾದಿಸುವ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ. ಅವರು ನಿಮ್ಮಲ್ಲಿ ವ್ಯರ್ಥ ನಿರೀಕ್ಷೆಯನ್ನು ಹುಟ್ಟಿಸುತ್ತಾರೆ; ಯೆಹೋವನ ಬಾಯಿಂದ ಹೊರಟದ್ದನ್ನು ನುಡಿಯದೆ ಸ್ವಂತ ಮನಸ್ಸಿಗೆ ಬಂದದ್ದನ್ನೇ ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ನಿಮಗೆ ಪ್ರವಾದಿಸುವ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ; ನಿಮ್ಮಲ್ಲಿ ವ್ಯರ್ಥನಿರೀಕ್ಷೆಯನ್ನು ಹುಟ್ಟಿಸುತ್ತಾರೆ; ಯೆಹೋವನ ಬಾಯಿಂದ ಹೊರಟದ್ದನ್ನು ನುಡಿಯದೆ ಸ್ವಂತ ಹೃದಯಕ್ಕೆ ಹೊಳೆದದ್ದನ್ನೇ ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ಆ ಪ್ರವಾದಿಗಳು ನಿಮಗೆ ಹೇಳುತ್ತಿರುವ ವಿಷಯಗಳ ಕಡೆಗೆ ಗಮನ ಕೊಡಬೇಡಿರಿ. ಅವರು ನಿಮ್ಮನ್ನು ಮರುಳುಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಅವರು ದರ್ಶನಗಳ ಬಗ್ಗೆ ಹೇಳುತ್ತಾರೆ. ಅವರ ದರ್ಶನಗಳು ಅವರ ಮನಸ್ಸಿನಿಂದ ಬಂದವುಗಳೇ ಹೊರತು ನನ್ನಿಂದ ಬಂದವುಗಳಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮಗೆ ಪ್ರವಾದಿಸುವ ಪ್ರವಾದಿಗಳ ವಾಕ್ಯಕ್ಕೆ ಕಿವಿಗೊಡಬೇಡಿರಿ. ಅವರು ನಿಮ್ಮಲ್ಲಿ ವ್ಯರ್ಥವಾದ ನಿರೀಕ್ಷೆಯನ್ನು ಹುಟ್ಟಿಸುತ್ತಾರೆ. ಯೆಹೋವ ದೇವರ ಬಾಯಿಂದಲ್ಲ, ಸ್ವಂತ ಹೃದಯದಿಂದ ದರ್ಶನವನ್ನು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 23:16
26 ತಿಳಿವುಗಳ ಹೋಲಿಕೆ  

ಅದಕ್ಕೆ ಸರ್ವೇಶ್ವರ ನನಗೆ : “ಪ್ರವಾದಿಗಳು ನನ್ನ ಹೆಸರೆತ್ತಿ ಸುಳ್ಳು, ಪ್ರವಾದನೆ ಮಾಡುತ್ತಿದ್ದಾರೆ. ನಾನು ಅವರನ್ನು ಕಳಿಸಲಿಲ್ಲ, ಅವರಿಗೆ ಅಪ್ಪಣೆಕೊಟ್ಟಿಲ್ಲ. ಅವರೊಡನೆ ಮಾತಾಡಿದ್ದಿಲ್ಲ. ಅವರು ಕಳ್ಳದರ್ಶನಗಳನ್ನು, ಕಣಿಗಳನ್ನು, ಮಾಯಮಂತ್ರಗಳನ್ನು ಹಾಗು ತಾನೇ ಕಲ್ಪಿಸಿಕೊಂಡ ಕಪಟವನ್ನು ನಿಮಗೆ ಪ್ರಕಟಿಸುತ್ತಿದ್ದಾರೆ.


ಸರ್ವೇಶ್ವರ ಇಂತೆನ್ನುತ್ತಾರೆಂದು ನುಡಿ: ಅಂಥವರಿಗೆ ಆದ ದರ್ಶನ ಮಿಥ್ಯ; ಕೇಳಿಸಿದ ವಾಣಿ ಸುಳ್ಳು; ಸರ್ವೇಶ್ವರ ಅವರನ್ನು ಕಳುಹಿಸಲಿಲ್ಲ. ತಾವು ನುಡಿದ ಮಾತು ನೆರವೇರುವುದೆಂದು ಸುಮ್ಮಸುಮ್ಮನೆ ನಿರೀಕ್ಷಿಸಿಕೊಂಡಿದ್ದಾರೆ.


“ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆಯಿಂದಿರಿ. ಹೊರಗೆ ಕುರಿಯ ವೇಷದಲ್ಲಿ ಬಂದರೂ ಒಳಗೆ ಅವರು ಕಿತ್ತುತಿನ್ನುವ ತೋಳಗಳು.


‘ಯಾವ ಸಾಕ್ಷಾತ್ಕಾರವೂ ಇಲ್ಲದೆ ಸ್ವಬುದ್ಧಿಯನ್ನೇ ಅನುಸರಿಸುವ ಮೂರ್ಖಪ್ರವಾದಿಗಳಿಗೆ ಧಿಕ್ಕಾರ!


ಪ್ರಿಯರೇ, “ನಾವು ಪವಿತ್ರಾತ್ಮ ಪ್ರೇರಿತರು” ಎಂದು ಹೇಳುವ ಎಲ್ಲರನ್ನೂ ನಂಬಬಾರದು. ಆ ಪ್ರೇರಣೆ ದೇವರಿಂದ ಬಂದಿದೆಯೇ ಎಂದು ಪರೀಕ್ಷಿಸಿ ನೋಡಬೇಕು. ಏಕೆಂದರೆ, ಎಷ್ಟೋ ಮಂದಿ ಕಪಟ ಪ್ರವಾದಿಗಳು ಎಲ್ಲೆಡೆಯಲ್ಲೂ ಹರಡಿದ್ದಾರೆ.


ಸರ್ವೇಶ್ವರ: “ಈ ಪ್ರವಾದಿಗಳನ್ನು ಕಳುಹಿಸಿದವನು ನಾನಲ್ಲ; ತಾವೇ ಓಡೋಡಿ ಬಂದಿದ್ದಾರೆ. ನಾನು ಇವರಿಗೆ ಏನೂ ಹೇಳಲಿಲ್ಲ; ತಾವೇ ಪ್ರವಾದನೆ ಮಾಡುತ್ತಿದ್ದಾರೆ.


ಸರ್ವೇಶ್ವರ ತಮ್ಮ ಪೂರ್ವಜರಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ ತಮಗೆ ಹೇಳಿಸಿದ ಬುದ್ಧಿವಾಕ್ಯಗಳನ್ನೂ ತಿರಸ್ಕರಿಸಿ, ಮಿಥ್ಯಾದೇವತೆಗಳನ್ನು ಪೂಜಿಸಿ ನಿಸ್ಸಾರ್ಥಕರಾದರು. ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಸರ್ವೇಶ್ವರ ಆಜ್ಞಾಪಿಸಿದ್ದರೂ ಕೇಳದೆ ಆ ಜನಾಂಗಗಳನ್ನೇ ಅನುಸರಿಸಿದರು.


“ಗಾಳಿಮಾತಿನಿಂದ ಮೋಸಮಾಡುವಂಥ ಸುಳ್ಳುಗಾರನೊಬ್ಬನು: ‘ದ್ರಾಕ್ಷಾರಸ, ಮದ್ಯಪಾನಗಳ ಕುರಿತು ಪ್ರವಾದನೆ ಮಾಡುತ್ತೇನೆ, ಎಂದು ಹೇಳಿದರೆ ಅಂಥವನೇ ಈ ಜನರಿಗೆ ಸರಿಯಾದ ಪ್ರವಾದಿ ಎನಿಸಿಕೊಳ್ಳುವನು.


ಇವರ ಪೂರ್ವಜರು ಬಾಳ್‍ದೇವತೆಯನ್ನು ಸೇರಿಕೊಂಡು ನನ್ನ ಹೆಸರನ್ನು ಮರೆತುಬಿಟ್ಟರು. ಅದೇ ಪ್ರಕಾರ ಈ ಪ್ರವಾದಿಗಳು ಸ್ವಕಲ್ಪಿತ ಸುಳ್ಳು ಕನಸುಗಳನ್ನು ಒಬ್ಬರಿಗೊಬ್ಬರು ತಿಳಿಸುವುದರ ಮೂಲಕ ನನ್ನ ಜನರು ನನ್ನ ಹೆಸರನ್ನು ಮರೆಯುವಂತೆ ಮಾಡಬೇಕೆಂದು ಆಲೋಚಿಸುತ್ತಿದ್ದಾರೆ.


ಅಲ್ಲಿನ ಪ್ರವಾದಿಗಳು ಇವರಿಗಾಗಿ ಮಿಥ್ಯ ದರ್ಶನವನ್ನು ಕಂಡು, ಸುಳ್ಳು ಕಣಿಯನ್ನು ಹೇಳಿ, ಸರ್ವೇಶ್ವರ ಮಾತಾಡದಿದ್ದರೂ ‘ಸರ್ವೇಶ್ವರ ದೇವರು ಇಂತೆನ್ನುತ್ತಾರೆ’ ಎಂದು ನುಡಿಯುತ್ತಾ ಮೇಲೆ ಮೇಲೆ ಸುಣ್ಣ ಬಳಿದಿದ್ದಾರೆ.


ಆದಕಾರಣ ನೀವು ಮಿಥ್ಯದರ್ಶನವನ್ನು ಹೊಂದಿ, ಸುಳ್ಳುಭವಿಷ್ಯ ಹೇಳುವ ಕೆಲಸ ಇನ್ನು ನಡೆಯುವುದೇ ಇಲ್ಲ; ನನ್ನ ಜನರನ್ನು ನಿಮ್ಮ ಕೈವಶದಿಂದ ಬಿಡಿಸುವೆನು; ನಾನೆ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.”


‘ಇಸ್ರಯೇಲಿನ ಪ್ರವಾದಿಗಳೇ, ಅಶಾಂತಿಯಿದ್ದರೂ ಶಾಂತಿಯ ದರ್ಶನಗಳನ್ನು ನೀವು ಕಂಡು ಜೆರುಸಲೇಮಿನ ಬಗ್ಗೆ ಪ್ರವಾದಿಸಿದ್ದೀರಲ್ಲವೆ? ಗೋಡೆ ಇಲ್ಲವಾಯಿತು, ಅದಕ್ಕೆ ಸುಣ್ಣ ಬಳಿದವರೂ ಇಲ್ಲವಾದರು; ಇದು ಸರ್ವೇಶ್ವರನಾದ ದೇವರ ನುಡಿ.’


ಇಸ್ರಯೇಲರ ದೇವರೂ ಸೇನಾಧೀಶ್ವರ ಸರ್ವೇಶ್ವರನೂ ಆದ ನಾನು ನಿಮಗೆ ಹೇಳುತ್ತೇನೆ: ನಿಮ್ಮ ಮಧ್ಯೆ ಇರುವ ಪ್ರವಾದಿಗಳಿಗೂ ಶಕುನದವರಿಗೂ ಕಿವಿಗೊಟ್ಟು ಮೋಸಹೋಗದಿರಿ. ನಿಮಗಾಗಿ ಕನಸುಕಂಡು ಹೇಳುವವರನ್ನು ನಂಬಬೇಡಿ.


ನಾನು : “ಮಹಿಳೆಯರೇ, ಸರ್ವೇಶ್ವರ ಸ್ವಾಮಿಯ ನುಡಿಯನ್ನು ಕೇಳಿರಿ ಅವರ ಬಾಯಿಂದ ಹೊರಟ ಮಾತಿಗೆ ಕಿವಿ ತೆಗೆಯಿರಿ ನಿಮ್ಮ ಹೆಣ್ಣುಮಕ್ಕಳಿಗೂ ಗೋಳಾಟವನ್ನು ಕಲಿಸಿರಿ ಪ್ರತಿಯೊಬ್ಬಳೂ ತನ್ನ ನೆರೆಯವಳಿಗೆ ಶೋಕಗೀತೆಯನ್ನು ಹೇಳಿಕೊಡಲಿ.


“ನಿಮ್ಮ ಪಿತೃಗಳು ನನ್ನಲ್ಲಿ ಯಾವ ಕೊರತೆಯನ್ನು ಕಂಡು ನನ್ನಿಂದ ದೂರವಾದರು? ಅವರು ವ್ಯರ್ಥಾಚಾರಗಳನ್ನು ಅನುಸರಿಸುತ್ತಾ ತಾವೇ ವ್ಯರ್ಥವಾಗಿಬಿಟ್ಟರು !


ಮಗನೇ, ಉಪದೇಶ ಕೇಳುವುದನ್ನು ನಿಲ್ಲಿಸಬೇಡ; ನಿಲ್ಲಿಸಿದೆಯಾದರೆ ಬುದ್ಧಿಮಾತಿನಿಂದ ವಂಚಿತನಾಗುವೆ.


ದೇವರನ್ನು ಅವರು ಅರಿತಿದ್ದರೂ ದೇವರೆಂದು ಗೌರವಿಸಲಿಲ್ಲ; ದೇವರಿಗೆ ಉಪಕಾರ ಸ್ಮರಣೆಯನ್ನು ಮಾಡಲಿಲ್ಲ. ಬದಲಾಗಿ ಅವರು ವ್ಯರ್ಥ ಆಲೋಚನೆಗಳಲ್ಲಿ ಮಗ್ನರಾದರು. ಅವರ ವಿವೇಕರಹಿತ ಮನಸ್ಸು ಅಂಧಕಾರಮಯ ಆಯಿತು.


ನಾನು : “ಈ ನಾಡು ಯಾರೂ ಹಾದುಹೋಗದಷ್ಟು ಹಾಳಾಗಿ ಕಾಡಿನಂತೆ ಸುಟ್ಟುಹೋದದ್ದು ಏಕೆ? ಈ ವಿಷಯವನ್ನು ಗ್ರಹಿಸತಕ್ಕ ಜ್ಞಾನಿ ಯಾರು? ಅದನ್ನು ಸರ್ವೇಶ್ವರನ ಬಾಯಿಂದಲೆ ಕೇಳಿ ತಿಳಿಸಬಲ್ಲವನಾರು?”


ಹೂತುಹೋಗಿವೆ ಸಿಯೋನ್ ಹೆಬ್ಬಾಗಿಲುಗಳು ಚೂರುಚೂರಾಗಿ ಬಿದ್ದಿವೆ ಅದರ ಅಗುಳಿಗಳು. ಅರಸರೂ ಪಾಲಕರೂ ಸೇರಿಹೋದರು ಅನ್ಯಜನಾಂಗಗಳೊಳು. ನಿಂತುಹೋಗಿವೆ ಧರ್ಮಶಾಸ್ತ್ರ ಬೋಧನೆಗಳು. ಸರ್ವೇಶ್ವರನಿಂದ ಪ್ರವಾದಿಗಳಿಗೆ ಆಗುತ್ತಿದ್ದ ದಿವ್ಯದರ್ಶನಗಳು.


ಅವರಲ್ಲಿ ಕೆನಾನನ ಮಗ ಚಿದ್ಕೀಯ ಎಂಬವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ ತಲೆಗೆ ಕಟ್ಟಿಕೊಂಡು ಬಂದು, “ಕೊಂಬುಗಳಿಂದಲೋ ಎಂಬಂತೆ ನೀವು ಸಿರಿಯಾದವರನ್ನು ಇರಿದು ಕೊಂದುಹಾಕುವಿರಿ,” ಎಂದನು.


ಆಗ ಇಸ್ರಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ನಾನೂರು ಮಂದಿ ಪ್ರವಾದಿಗಳನ್ನು ಸೇರಿಸಿ, “ನಾವು ರಾಮೋತ್‍ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ? ಬಾರದೋ?", ಎಂದು ಕೇಳಿದನು. ಅವರು, “ಹೋಗಬಹುದು, ದೇವರು ಅದನ್ನು ಅರಸನ ಕೈಗೆ ಒಪ್ಪಿಸುವರು,” ಎಂದರು.


ಏಕೆಂದರೆ ಇವರು ಇಸ್ರಯೇಲಿನಲ್ಲಿ ದುರಾಚಾರವನ್ನು ನಡೆಸಿದರು. ನೆರೆಯವರ ಹೆಂಡಿರಲ್ಲಿ ವ್ಯಭಿಚಾರಮಾಡಿದರು. ನಾನು ಆಜ್ಞಾಪಿಸಿದ ಮಾತುಗಳನ್ನು ನನ್ನ ಹೆಸರೆತ್ತಿಯೇ ಸುಳ್ಳಾಗಿ ಸಾರಿದರು. ಇದೆಲ್ಲ ನನಗೆ ಗೊತ್ತಿದೆ, ಇದಕ್ಕೆಲ್ಲಾ ನಾನೇ ಸಾಕ್ಷಿ’ ಎನ್ನುತ್ತಾರೆ ಸರ್ವೇಶ್ವರ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು