Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 23:18 - ಕನ್ನಡ ಸತ್ಯವೇದವು C.L. Bible (BSI)

18 ಇವರಲ್ಲಿ ಯಾರು ತಾನೆ ಸರ್ವೇಶ್ವರನ ಆಲೋಚನಾ ಸಭೆಯಲ್ಲಿ ಹಾಜರಿದ್ದರು? ಸರ್ವೇಶ್ವರನ ವಾಕ್ಯವನ್ನು ಕೇಳಿ ತಿಳಿದುಕೊಂಡವನಾರು? ಆ ವಾಕ್ಯಕ್ಕೆ ಲಕ್ಷ್ಯಕೊಟ್ಟು ಗ್ರಹಿಸಿಕೊಂಡವನಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವರಲ್ಲಿ ಯಾರು ಯೆಹೋವನ ಆಲೋಚನಾಸಭೆಯಲ್ಲಿ ನಿಂತು ಆತನ ಮಾತನ್ನು ಕೇಳಿ ತಿಳಿದುಕೊಂಡಿದ್ದಾರೆ? ಯಾರು ಆತನ ನುಡಿಗೆ ಕಿವಿಗೊಟ್ಟು ಗಮನಿಸಿದ್ದಾರೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 [ಅವರಲ್ಲಿ] ಯಾರು ಯೆಹೋವನ ಆಲೋಚನಾಸಭೆಯಲ್ಲಿ ನಿಂತು ಆತನ ಮಾತನ್ನು ಕೇಳಿ ಕಂಡಿದ್ದಾರೆ? ಯಾರು ಆತನ ನುಡಿಗೆ ಕಿವಿಗೊಟ್ಟು ಗಮನಿಸಿದ್ದಾರೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಈ ಪ್ರವಾದಿಗಳಲ್ಲಿ ಒಬ್ಬನಾದರೂ ಪರಲೋಕದ ಸಭೆಯಲ್ಲಿ ನಿಂತಿಲ್ಲ. ಒಬ್ಬನಾದರೂ ಯೆಹೋವನ ಸಂದೇಶವನ್ನು ಕೇಳಿಲ್ಲ, ಅಥವಾ ನೋಡಿಲ್ಲ. ಒಬ್ಬನಾದರೂ ಆತನ ಸಂದೇಶವನ್ನು ಸೂಕ್ಷ್ಮವಾಗಿ ಪರಿಶೀಲಿಸಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆದರೆ ಯಾರು ಯೆಹೋವ ದೇವರ ಆಲೋಚನೆಯ ಸಭೆಯಲ್ಲಿ ನಿಂತು ಆತನ ವಾಕ್ಯವನ್ನು ತಿಳಿದುಕೊಂಡು ಕೇಳಿದ್ದಾರೆ? ಯಾರು ಆತನ ವಾಕ್ಯವನ್ನು ಲಕ್ಷ್ಯವಿಟ್ಟು ಕೇಳಿದ್ದಾರೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 23:18
11 ತಿಳಿವುಗಳ ಹೋಲಿಕೆ  

ಇವರು ನನ್ನ ಆಲೋಚನಾ ಸಭೆಯಲ್ಲಿ ಹಾಜರಿದ್ದಿದ್ದರೆ, ನನ್ನ ವಾಕ್ಯಗಳನ್ನು ನನ್ನ ಜನರ ಕಿವಿಗೆ ಮುಟ್ಟಿಸುತ್ತಿದ್ದರು; ಅವರನ್ನು ದುರ್ಮಾರ್ಗದಿಂದಲೂ ದುಷ್ಕೃತ್ಯಗಳಿಂದಲೂ ತಪ್ಪಿಸುತ್ತಿದ್ದರು.


“ಪ್ರಭುವಿನ ಮನಸ್ಸನ್ನರಿತವರಾರು? ಪ್ರಭುವಿಗೆ ಉಪದೇಶಿಸುವವರಾರು?” ಎಂದು ಲಿಖಿತವಾಗಿದೆ. ನಾವಾದರೋ, ಕ್ರಿಸ್ತಯೇಸುವಿನ ಮನೋಭಾವನೆಯುಳ್ಳವರು.


ನಾನಿನ್ನು ನಿಮ್ಮನ್ನು ದಾಸರೆಂದು ಕರೆಯುವುದಿಲ್ಲ. ಧಣಿಯ ಕೆಲಸಕಾರ್ಯಗಳು ದಾಸನಿಗೆ ತಿಳಿಯವು. ನಾನಾದರೋ ಪಿತನಿಂದ ಕೇಳಿಸಿಕೊಂಡದ್ದನ್ನೆಲ್ಲಾ ನಿಮಗೆ ತಿಳಿಸಿದ್ದೇನೆ. ಈ ಕಾರಣ ನಿಮ್ಮನ್ನು ಗೆಳೆಯರೆಂದು ಕರೆದಿದ್ದೇನೆ.


ತನ್ನ ಪರಿಚಾರಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ ಸ್ವಾಮಿ ಸರ್ವೇಶ್ವರ ಏನೂ ಮಾಡುವುದಿಲ್ಲ.


ಪ್ರಭುವಿನ ಮೈತ್ರಿ, ಭಯಭಕುತಿಯುಳ್ಳವರಿಗೆ I ಅಂಥವರಿಗೆ ವ್ಯಕ್ತ, ಆತನ ಒಡಂಬಡಿಕೆ II


ಆಗ ಕೆನಾನನ ಮಗ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಬಂದು ಅವನ ಕೆನ್ನೆಗೆ ಒಂದು ಪೆಟ್ಟುಕೊಟ್ಟು, “ಸರ್ವೇಶ್ವರನ ಆತ್ಮ ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತಾಡುವುದಕ್ಕೆ ಯಾವ ಮಾರ್ಗವಾಗಿ ಬಂದಿತು?” ಎಂದನು. ಮೀಕಾಯೆಹುವು,


ಆಗ ಕೆನಾನನ ಮಗ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಬಂದು ಅವನ ಕೆನ್ನೆಗೆ ಒಂದು ಪೆಟ್ಟುಕೊಟ್ಟು, “ಸರ್ವೇಶ್ವರನ ಆತ್ಮ ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತಾಡುವುದಕ್ಕೆ ಯಾವ ಮಾರ್ಗವಾಗಿ ಬಂದಿತು?” ಎಂದನು.


ಯೋಬನೇ, ನನ್ನ ಮಾತಿಗೆ ಕಿವಿಗೊಡು, ಮೌನದಿಂದ ಕೇಳು, ನಾನೇ ಮಾತಾಡಲಿರುವೆ:


ದೇವರಿಗೆ ಜ್ಞಾನಬೋಧೆ ಮಾಡಬಲ್ಲವನು ಇದ್ದಾನೆಯೇ? ಉನ್ನತರಿಗೂ ನ್ಯಾಯತೀರಿಸುವಂಥವನು ಆತನೇ ಅಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು