Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 23:2 - ಕನ್ನಡ ಸತ್ಯವೇದವು C.L. Bible (BSI)

2 ಇಸ್ರಯೇಲರ ದೇವರಾದ ಸರ್ವೇಶ್ವರ, ತಮ್ಮ ಜನರೆಂಬ ಕುರಿಗಳನ್ನು ಮೇಯಿಸುವ ಕುರಿಗಾಹಿಗಳ ದ್ರೋಹವನ್ನು ಅರಿತಿದ್ದಾರೆ. ಅಂಥವರನ್ನು ಕುರಿತು ಹೀಗೆನ್ನುತ್ತಾರೆ : “ನೀವು ನನ್ನ ಮಂದೆಯನ್ನು ಚದರಿಸಿ ಓಡಿಸಿಬಿಟ್ಟಿದ್ದೀರಿ. ಅವುಗಳ ಬಗ್ಗೆ ಎಚ್ಚರ ವಹಿಸಲೇ ಇಲ್ಲ. ನಿಮ್ಮ ನೀಚಕಾರ್ಯಗಳ ನಿಮಿತ್ತ ನಿಮ್ಮನ್ನು ವಿಚಾರಣೆಗೆ ಗುರಿಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇಸ್ರಾಯೇಲರ ದೇವರಾದ ಯೆಹೋವನು ತನ್ನ ಜನರೆಂಬ ಕುರಿಗಳನ್ನು ಮೇಯಿಸುವ ಕುರುಬರ ದ್ರೋಹವನ್ನು ಕಂಡು ಅವರನ್ನು ಕುರಿತು ಇಂತೆನ್ನುತ್ತಾನೆ, “ನೀವು ನನ್ನ ಮಂದೆಯನ್ನು ಚದರಿಸಿ ಅಟ್ಟಿಬಿಟ್ಟಿದ್ದೀರಿ, ವಿಚಾರಿಸಲೇ ಇಲ್ಲ. ಆಹಾ, ನಿಮ್ಮ ದುಷ್ಕೃತ್ಯಗಳ ನಿಮಿತ್ತ ನಾನು ನಿಮ್ಮನ್ನು ವಿಚಾರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇಸ್ರಾಯೇಲ್ಯರ ದೇವರಾದ ಯೆಹೋವನು ತನ್ನ ಜನರೆಂಬ ಕುರಿಗಳನ್ನು ಮೇಯಿಸುವ ಕುರುಬರ ದ್ರೋಹವನ್ನು ಕಂಡು ಅವರನ್ನು ಕುರಿತು ಇಂತೆನ್ನುತ್ತಾನೆ - ನೀವು ನನ್ನ ಮಂದೆಯನ್ನು ಚದರಿಸಿ ಅಟ್ಟಿಬಿಟ್ಟಿದ್ದೀರಿ, ವಿಚಾರಿಸಲೇ ಇಲ್ಲ; ಆಹಾ, ನಿಮ್ಮ ದುಷ್ಕೃತ್ಯಗಳ ನಿವಿುತ್ತ ನಾನು ನಿಮ್ಮನ್ನು ವಿಚಾರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆ ಕುರುಬರು ನನ್ನ ಜನರಿಗೆ ಹೊಣೆಗಾರರಾಗಿದ್ದಾರೆ. ಇಸ್ರೇಲಿನ ದೇವರಾದ ಯೆಹೋವನು ಆ ಕುರುಬರಿಗೆ ಹೀಗೆ ಹೇಳುತ್ತಾನೆ, “ನನ್ನ ಕುರಿಗಳು ಎಲ್ಲಾ ದಿಕ್ಕುಗಳಿಗೂ ಚದರುವಂತೆ ನೀವು ಮಾಡಿರುವಿರಿ. ನೀವು ಅವುಗಳನ್ನು ಓಡಿಸಿಬಿಟ್ಟಿದ್ದೀರಿ. ನೀವು ಅವುಗಳ ಯೋಗಕ್ಷೇಮವನ್ನು ನೋಡಿಕೊಳ್ಳಲಿಲ್ಲ. ಈಗ ನಾನು ನಿಮ್ಮನ್ನು ವಿಚಾರಿಸಿಕೊಳ್ಳುತ್ತೇನೆ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮ್ಮನ್ನು ದಂಡಿಸುತ್ತೇನೆ.” ಯೆಹೋವನು ಹೀಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ತನ್ನ ಜನರನ್ನು ಮೇಯಿಸುವ ಕುರುಬರಿಗೆ ವಿರೋಧವಾಗಿ ಹೀಗೆ ಹೇಳುತ್ತಾರೆ: “ನೀವು ನನ್ನ ಮಂದೆಯನ್ನು ಚದರಿಸಿ ಓಡಿಸಿಬಿಟ್ಟು ಮತ್ತು ಅವುಗಳ ಮೇಲೆ ಕಾಳಜಿ ತೋರಿಸಲಿಲ್ಲ. ಇಗೋ, ನೀನು ಮಾಡಿದ ಕೆಟ್ಟತನಕ್ಕಾಗಿ ನಾನು ನಿನಗೆ ಶಿಕ್ಷೆಯನ್ನು ಕೊಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 23:2
21 ತಿಳಿವುಗಳ ಹೋಲಿಕೆ  

ಅವರಲ್ಲಿ ಅತ್ಯುತ್ತಮನಾದವನೂ ಮುಳ್ಳಿನ ಪೊದೆಗೆ ಸಮಾನ. ಸತ್ಯವಂತನೂ ಮುಳ್ಳುಬೇಲಿಗಿಂತ ಕಡೆ. ಜನರ ದಂಡನೆಯ ದಿನ ಸಮೀಪಿಸಿದೆ. ಅವರ ಕಾವಲುಗಾರರಾದ ಪ್ರವಾದಿಗಳು ಮುಂತಿಳಿಸಿದ ಕಾಲ ಬಂದಿದೆ. ಜನರೆಲ್ಲರು ದಿಗ್ಭ್ರಾಂತರಾಗುವರು.


‘ದಾವೀದ ಮನೆತನದವರೇ, ಸರ್ವೇಶ್ವರನ ಮಾತಿದು: ಮುಂಜಾನೆಯೆ ನ್ಯಾಯನೀತಿಯನ್ನು ಪರಿಪಾಲಿಸಿರಿ; ವಂಚಿತರನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ. ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ಕೋಪಾಗ್ನಿಯು ಜ್ವಾಲೆಯಂತೆ ಭುಗಿಲೇಳುವುದು, ಅದರ ಕಿಚ್ಚನ್ನು ಮುಚ್ಚಿಡಲು ಯಾರಿಂದಲೂ ಆಗದು.


ನೀನಾದರೋ ಇಲ್ಲಿಂದ ಹೊರಟು ನಾನು ನಿನಗೆ ಹೇಳಿದ ನಾಡಿಗೆ ಈ ಜನರನ್ನು ನಡೆಸಿಕೊಂಡು ಹೋಗು. ನನ್ನ ದೂತನು ನಿನ್ನ ಮುಂದುಗಡೆ ನಡೆಯುವನು. ಆದರೂ ನಾನು ಅವರನ್ನು ದಂಡಿಸುವ ದಿನದಂದು ಅವರ ಪಾಪಕ್ಕೆ ತಕ್ಕಂತೆ ದಂಡಿಸುವೆನು.


“ಸರ್ವೇಶ್ವರನ ಹೊರೆ” ಎಂದು ಒಬ್ಬ ಪ್ರವಾದಿಯಾಗಲಿ, ಯಾಜಕನಾಗಲಿ ಅಥವಾ ಒಬ್ಬ ಜನಸಾಮಾನ್ಯನೇ ಆಗಲಿ, ಹೇಳಿದ್ದೇ ಆದರೆ ನಾನು ಅವನನ್ನೂ ಅವನ ಮನೆಯವರನ್ನೂ ದಂಡಿಸುವೆನು.


ಕಷ್ಟಸಂಕಟಗಳಲ್ಲಿರುವ ಅನಾಥರಿಗೂ ವಿಧವೆಯರಿಗೂ ನೆರವಾಗುವುದು ಹಾಗೂ ಪ್ರಾಪಂಚಿಕ ಮಲಿನತೆಯಿಂದ ದೂರವಿರುವುದು - ನಮ್ಮ ತಂದೆಯಾದ ದೇವರ ಮುಂದೆ ನಿಷ್ಕಳಂಕವಾದ ಮತ್ತು ನಿರ್ಮಲವಾದ ಧರ್ಮವೆನಿಸುತ್ತದೆ.


ಬಟ್ಟೆಬರೆಯಿಲ್ಲದೆ ಇದ್ದೆ, ನನಗೆ ಉಡಲು ಕೊಡಲಿಲ್ಲ; ರೋಗಿಯಾಗಿದ್ದೆ, ಬಂಧಿಯಾಗಿದ್ದೆ, ನೀವು ನನ್ನನ್ನು ಸಂಧಿಸಲಿಲ್ಲ,’ ಎಂದು ಹೇಳುವನು.


ಅವಳು ನನ್ನನ್ನು ಮರೆತುಬಿಟ್ಟಿದ್ದಾಳೆ; ಬಂಗಾರದ ಮೂಗುತಿ ಮುಂತಾದ ಒಡವೆಗಳಿಂದ ಶೃಂಗರಿಸಿಕೊಂಡು ನಲ್ಲರನ್ನು ವರಿಸುತ್ತಾ ಹೋಗಿದ್ದಾಳೆ. ಅಷ್ಟೇ ಅಲ್ಲ, ಬಾಳ್ ದೇವತೆಗಳ ಹಬ್ಬದಲ್ಲಿ ಧೂಪಾರತಿಯನ್ನು ಬೆಳಗಿದ್ದಾಳೆ. ಈ ಕಾರಣ ನಾನು ಅವಳನ್ನು ದಂಡಿಸುವೆನು. ಇದು ಸರ್ವೇಶ್ವರಸ್ವಾಮಿಯ ನುಡಿ.


ನಿನ್ನೊಡನೆ ಗೆಳೆಯರಂತೆ ಬಾಳಲು ನೀನೇ ಪಳಗಿಸಿದವರನ್ನು ನಿನಗೆ ಒಡೆಯರನ್ನಾಗಿ ನಾನು ನೇಮಿಸುವಾಗ ಏನು ಹೇಳುವೆ? ಹೆರುವವಳಿಗೆ ಬರುವಂಥ ವೇದನೆ ಆಗ ನಿನಗೆ ಬರದೆ ಇರುವುದೆ?


ಅವರ ವಿಷಯವಾಗಿ ಸರ್ವೇಶ್ವರ, “ಇಗೋ ಅವರನ್ನು ನಾನು ದಂಡಿಸಿಯೇ ತೀರುವೆನು. ಅವರ ಯುವಕರು ಕತ್ತಿಗೆ ತುತ್ತಾಗುವರು. ಅವರ ಗಂಡುಹೆಣ್ಣು ಮಕ್ಕಳು ಕ್ಷಾಮದಿಂದ ಸಾಯುವರು.


ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾಗಿದ್ದರೂ ಎಳ್ಳಷ್ಟೂ ನಾಚಿಕೆ ಇಲ್ಲದಿದ್ದಾರೆ. ಲಜ್ಜೆಯ ಗಂಧವೂ ಅವರಿಗಿಲ್ಲ. ಆದಕಾರಣ ಬೇರೆಯವರಂತೆ ಅವರೂ ಬೀಳುವರು. ನಾನು ದಂಡಿಸುವಾಗ ಅವರು ಏಳಲಾಗದಂತೆ ಮುಗ್ಗರಿಸಿ ಬೀಳುವರು. ಇದು ಸರ್ವೇಶ್ವರನಾದ ನನ್ನ ನುಡಿ.


“ನಾನು ಇವುಗಳಿಗಾಗಿ ಇವರನ್ನು ದುಡಿಸಬಾರದೋ? ಇಂಥ ಜನತೆಯ ಮೇಲೆ ನನ್ನ ಕೋಪ ತೀರಿಸದೆ ಇರುವೆನೋ? ಇದು ಸರ್ವೇಶ್ವರನಾದ ನನ್ನ ನುಡಿ.


ಇವುಗಳ ನಿಮಿತ್ತ ನಾನು ದಂಡಿಸಬಾರದೋ? ಇಂಥ ಜನತೆಯ ಮೇಲೆ ನನ್ನ ಕೋಪವನ್ನು ತೀರಿಸದಿರುವೆನೋ?


ಬಟ್ಟೆಬರೆಯಿಲ್ಲದೆ ಇದ್ದೆ, ನನಗೆ ಉಡಲು ಕೊಟ್ಟಿರಿ. ರೋಗದಿಂದಿದ್ದೆ, ನನ್ನನ್ನು ಆರೈಕೆಮಾಡಿದಿರಿ. ಬಂಧಿಯಾಗಿದ್ದೆ, ನೀವು ನನ್ನನ್ನು ಸಂಧಿಸಿದಿರಿ,’ ಎಂದು ಹೇಳುವನು.


ನಮ್ಮ ಪಾಲಕರು ಪಶುಪ್ರಾಯರು ಸರ್ವೇಶ್ವರನ ಕಡೆಗೆ ಕಣ್ಣೆತ್ತದೆಹೋದರು. ಆ ಕಾರಣ ಅವರ ಕಾರ್ಯ ಸಾರ್ಥಕವಾಗಲಿಲ್ಲ ಚದರಿಹೋದವು ಅವರ ಹಿಂಡುಗಳೆಲ್ಲ.


ನೀವು ಕಿವಿಗೊಡದಿದ್ದರೆ ನಿಮ್ಮ ಗರ್ವದ ನಿಮಿತ್ತ ನನ್ನ ಮನ ಗೋಳಾಡುವುದು ಗುಟ್ಟಾಗಿ. ನೀವು ಸೆರೆಯಾಗಿ ಹೋಗುವುದರಿಂದ ಅಳುವೆನು ಸರ್ವೇಶ್ವರನ ಮುಂದೆ ಬಹಳವಾಗಿ. ನನ್ನ ಕಣ್ಣುಗಳಿಂದ ಕಂಬನಿ ಹರಿವುದು ಧಾರಾಕಾರವಾಗಿ.


“ಜೆರುಸಲೇಮ್, ಕಣ್ಣೆತ್ತಿ ನೋಡು, ಉತ್ತರದಿಂದ ಬರುವವರನ್ನು ನೋಡು. ನಿನಗೆ ಒಪ್ಪಿಸಿದ ಹಿಂಡು, ಅಂದವಾದ ಆ ನಿನ್ನ ಹಿಂಡು ಎಲ್ಲಿ?


ನೀವು ನಡೆಸಿದ ದುರಾಚಾರಗಳನ್ನು ಹಾಗು ಅಸಹ್ಯಕಾರ್ಯಗಳನ್ನು ಸರ್ವೇಶ್ವರ ಇನ್ನು ಸಹಿಸಲಾರದೆ ಹೋದುದರಿಂದಲೇ ನಿಮ್ಮ ನಾಡು ಹಾಳುಬಿದ್ದಿದೆ. ನಿರ್ಜನವಾಗಿ ಭಯಭೀತಿಗೆ ಎಡೆ ಆಗಿದೆ. ಅದರ ಸ್ಥಿತಿ ಈಗಲೂ ಬದಲಾಗಿಲ್ಲ.


ಕುರಿಗಾಹಿಗಳು ಇರಲಿಲ್ಲವಾದುದರಿಂದ ಅವು ಚದುರಿಹೋದುವು; ದಿಕ್ಕಾಪಾಲಾಗಿ ಕಾಡಿನ ಸಕಲ ಮೃಗಗಳಿಗೆ ತುತ್ತಾದವು;


ಏಕೆಂದರೆ ನಾಡಿನಲ್ಲಿ ಒಬ್ಬ ಕುರುಬನು ಏಳುವಂತೆ ನಾನು ಮಾಡುವೆನು. ಅವನು ಅಳಿದುಹೋದ ಕುರಿಗಳನ್ನು ಗುಣಪಡಿಸನು; ಚದರಿಹೋದ ಕುರಿಗಳನ್ನು ಹುಡುಕಿತರನು; ಉಳಿದವುಗಳನ್ನು ಸಾಕಲಾರನು. ಕೊಬ್ಬಿದ ಕುರಿಗಳನ್ನು ಕಡಿದು, ಅವುಗಳ ಗೊರಸುಗಳನ್ನೂ ಸುಲಿದು ಕಬಳಿಸುವನು.


ಸರ್ವೇಶ್ವರನಾದ ನಾನು ಹೃದಯ ಪರಿಶೀಲಕ ಹೌದು, ಅಂತರಿಂದ್ರಿಯಗಳನ್ನು ಪರಿಶೋಧಿಸುವಾತ.


ಸರ್ವೇಶ್ವರ ಹೀಗೆನ್ನುತ್ತಾರೆ: “ಎಂತಲೇ ಕುರಿಗಾಹಿಗಳ ಮೇಲೆ ನನ್ನ ಕೋಪ ಭುಗಿಲೆದ್ದಿದೆ. ಆ ಮುಂದಾಳುಗಳ ಮೇಲೆ ನನ್ನ ದಂಡನೆ ಎರಗಲಿದೆ. ಸೇನಾಧೀಶ್ವರ ಸರ್ವೇಶ್ವರನಾದ ನಾನು ಜುದೇಯ ಕುಲವನ್ನು ನನ್ನ ಮಂದೆಯಂತೆ ಪರಿಪಾಲಿಸುವೆನು. ಅದನ್ನು ವೀರ ಯುದ್ಧಾಶ್ವವನ್ನಾಗಿ ಮಾಡಿಕೊಳ್ಳುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು