Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 23:21 - ಕನ್ನಡ ಸತ್ಯವೇದವು C.L. Bible (BSI)

21 ಸರ್ವೇಶ್ವರ: “ಈ ಪ್ರವಾದಿಗಳನ್ನು ಕಳುಹಿಸಿದವನು ನಾನಲ್ಲ; ತಾವೇ ಓಡೋಡಿ ಬಂದಿದ್ದಾರೆ. ನಾನು ಇವರಿಗೆ ಏನೂ ಹೇಳಲಿಲ್ಲ; ತಾವೇ ಪ್ರವಾದನೆ ಮಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಾನು ಈ ಪ್ರವಾದಿಗಳನ್ನು ಕಳುಹಿಸಲಿಲ್ಲ, ತಾವೇ ಆತುರಗೊಂಡರು; ನಾನು ಇವರಿಗೆ ಏನೂ ಹೇಳಲಿಲ್ಲ, ಅವರೇ ಪ್ರವಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಾನು ಈ ಪ್ರವಾದಿಗಳನ್ನು ಕಳುಹಿಸಲಿಲ್ಲ, ತಾವೇ ಆತುರಗೊಂಡರು; ನಾನು ಇವರಿಗೆ ಏನೂ ಹೇಳಲಿಲ್ಲ, ತಾವೇ ಪ್ರವಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನಾನು ಆ ಪ್ರವಾದಿಗಳನ್ನು ಕಳುಹಿಸಲಿಲ್ಲ. ಆದರೂ ಅವರು ತಮ್ಮ ಸಂದೇಶವನ್ನು ಕೊಡಲು ಆತುರಪಟ್ಟರು. ನಾನು ಅವರೊಂದಿಗೆ ಮಾತನಾಡಲಿಲ್ಲ ಆದರೂ ಅವರು ನನ್ನ ಹೆಸರು ಹೇಳಿ ಉಪದೇಶ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಾನು ಈ ಪ್ರವಾದಿಗಳನ್ನು ಕಳುಹಿಸಲಿಲ್ಲ; ಆದರೂ ಅವರು ತಮ್ಮ ಸಂದೇಶದೊಂದಿಗೆ ಓಡಿದ್ದಾರೆ ನಾನು ಅವರ ಸಂಗಡ ಮಾತನಾಡಲಿಲ್ಲ. ಆದರೂ ಪ್ರವಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 23:21
12 ತಿಳಿವುಗಳ ಹೋಲಿಕೆ  

ಅದಕ್ಕೆ ಸರ್ವೇಶ್ವರ ನನಗೆ : “ಪ್ರವಾದಿಗಳು ನನ್ನ ಹೆಸರೆತ್ತಿ ಸುಳ್ಳು, ಪ್ರವಾದನೆ ಮಾಡುತ್ತಿದ್ದಾರೆ. ನಾನು ಅವರನ್ನು ಕಳಿಸಲಿಲ್ಲ, ಅವರಿಗೆ ಅಪ್ಪಣೆಕೊಟ್ಟಿಲ್ಲ. ಅವರೊಡನೆ ಮಾತಾಡಿದ್ದಿಲ್ಲ. ಅವರು ಕಳ್ಳದರ್ಶನಗಳನ್ನು, ಕಣಿಗಳನ್ನು, ಮಾಯಮಂತ್ರಗಳನ್ನು ಹಾಗು ತಾನೇ ಕಲ್ಪಿಸಿಕೊಂಡ ಕಪಟವನ್ನು ನಿಮಗೆ ಪ್ರಕಟಿಸುತ್ತಿದ್ದಾರೆ.


ಅವರನ್ನು ನಾನು ಕಳಿಸಲಿಲ್ಲ; ನನ್ನ ಹೆಸರೆತ್ತಿ ಸುಳ್ಳನ್ನು ಸಾರುತ್ತ ಇದ್ದಾರೆ. ಅವರ ದುರ್ಬೋಧನೆಯ ನಿಮಿತ್ತ ನಾನು ನಿಮ್ಮನ್ನು ಹೊರದೂಡಬೇಕಾಗುವುದು, ನೀವು ನಾಶವಾಗುವಿರಿ, ಎಂದು ಸರ್ವೇಶ್ವರನೇ ನುಡಿದಿದ್ದಾರೆ.”


ಸುಳ್ಳು ಕನಸುಗಳನ್ನು ಪ್ರಕಟಿಸುತ್ತಾ ಹಾಗು ವಿವರಿಸುತ್ತಾ ತಮ್ಮ ಅಬದ್ಧ ಮಾತುಗಳಿಂದಲೂ ಕಚ್ಚಾಟದಿಂದಲೂ ನನ್ನ ಜನರಿಗೆ ದಾರಿ ತಪ್ಪಿಸುವ ಪ್ರವಾದಿಗಳನ್ನು ನಾನು ಖಂಡಿಸುತ್ತೇನೆ. ನಾನು ಅವರನ್ನು ಕಳುಹಿಸಲಿಲ್ಲ, ಅಥವಾ ಅವರಿಗೆ ಆಜ್ಞಾಪಿಸಲಿಲ್ಲ. ಅವರಿಂದ ಈ ಜನರಿಗೆ ಯಾವ ಪ್ರಯೋಜನವೂ ಇಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.”


ಹೀಗೆ ಪವಿತ್ರಾತ್ಮ ಅವರೇ ಕಳುಹಿಸಿದ ಬಾರ್ನಬ ಮತ್ತು ಸೌಲ ಸೆಲೂಸಿಯಾಕ್ಕೆ ಹೋದರು. ಅಲ್ಲಿಂದ ಸೈಪ್ರಸ್ ದ್ವೀಪಕ್ಕೆ ನೌಕಾಯಾನ ಮಾಡಿದರು.


ಯೇಸು ಪುನಃ, “ನಿಮಗೆ ಶಾಂತಿ, ಪಿತನು ನನ್ನನ್ನು ಕಳುಹಿಸಿದಂತೆಯೇ ನಾನೂ ನಿಮ್ಮನ್ನು ಕಳುಹಿಸುತ್ತೇನೆ,” ಎಂದರು.


‘ಸೆರೆಯಲ್ಲಿ ಇರುವ ಎಲ್ಲರಿಗೆ ಹೀಗೆಂದು ಹೇಳಿಕಳಿಸು - ನೆಹೆಲಾಮ್ಯನಾದ ಶೆಮಾಯನ ವಿಷಯದಲ್ಲಿ ಸರ್ವೇಶ್ವರ ಇಂತೆನ್ನುತ್ತಾರೆ: ನಾನು ಕಳಿಸದೆ ಇದ್ದರೂ ಶೆಮಾಯನು ನಿಮಗೆ ಪ್ರವಾದನೆಮಾಡಿ ಸುಳ್ಳನ್ನು ನಂಬುವಂತೆ ಮಾಡಿದ್ದಾನೆ.


ಅವರು ನನ್ನ ಹೆಸರಿನಲ್ಲಿ ನಿಮಗೆ ಸುಳ್ಳನ್ನೇ ಸಾರುತ್ತಾರೆ. ಅವರು ನನ್ನಿಂದ ಕಳಿಸಿದವರಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.


ಆಗ ಪ್ರವಾದಿ ಯೆರೆಮೀಯನು ಪ್ರವಾದಿ ಹನನ್ಯನಿಗೆ, “ಹನನ್ಯನೇ ಕೇಳು, ಸರ್ವೇಶ್ವರ ನಿನ್ನನ್ನು ಕಳಿಸಲಿಲ್ಲ. ಆದರೂ ಈ ಜನರು ಸುಳ್ಳನ್ನು ನಂಬುವಂತೆ ಮಾಡುತ್ತಿರುವೆ.


ಆಗ, “ಯಾರನ್ನು ಕಳುಹಿಸಲಿ? ನಮ್ಮ ಪರವಾಗಿ ಹೋಗುವವರು ಯಾರು?” ಎಂಬ ನುಡಿ ಕೇಳಿಸಿತು. ಅದಕ್ಕೆ ನಾನು, “ಇಗೋ, ನಾನು ಸಿದ್ಧ, ನನ್ನನ್ನು ಕಳುಹಿಸಿ” ಎಂದೆನು.


ಬೋಧಿಸುವವರನ್ನು ಕಳುಹಿಸದೆಹೋದರೆ, ಅವರು ಶುಭಸಂದೇಶವನ್ನು ಬೋಧಿಸುವುದಾದರೂ ಹೇಗೆ? “ಶುಭಸಂದೇಶವನ್ನು ತರುವವರ ಬರುವಿಕೆ ಎಷ್ಟೋ ಶುಭದಾಯಕ,” ಎಂದು ಪವಿತ್ರಗ್ರಂಥದಲ್ಲೇ ಬರೆಯಲಾಗಿದೆ.


‘ನೀವು ಬಾಬಿಲೋನಿಯದ ಅರಸನ ಅಡಿಯಾಳಾಗುವುದಿಲ್ಲ’ ಎಂದು ನಿಮಗೆ ನುಡಿಯುವ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿ; ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ.


ಇಸ್ರಯೇಲರ ದೇವರೂ ಸೇನಾಧೀಶ್ವರ ಸರ್ವೇಶ್ವರನೂ ಆದ ನಾನು ನಿಮಗೆ ಹೇಳುತ್ತೇನೆ: ನಿಮ್ಮ ಮಧ್ಯೆ ಇರುವ ಪ್ರವಾದಿಗಳಿಗೂ ಶಕುನದವರಿಗೂ ಕಿವಿಗೊಟ್ಟು ಮೋಸಹೋಗದಿರಿ. ನಿಮಗಾಗಿ ಕನಸುಕಂಡು ಹೇಳುವವರನ್ನು ನಂಬಬೇಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು