Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 23:24 - ಕನ್ನಡ ಸತ್ಯವೇದವು C.L. Bible (BSI)

24 ನನ್ನ ಕಣ್ಣಿಗೆ ಬೀಳದಂತೆ ಯಾವನಾದರು ಗುಪ್ತಸ್ಥಳಗಳಲ್ಲಿ ಮರೆಮಾಚಿಕೊಳ್ಳಲು ಸಾಧ್ಯವೇ? ನಾನು ಭೂಮ್ಯಾಕಾಶಗಳಲ್ಲಿ ವ್ಯಾಪಿಸಿರುವವನಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ದೂರದಲ್ಲಿಯೂ ಇರುವವನಲ್ಲವೋ? ನನ್ನ ಕಣ್ಣಿಗೆ ಬೀಳದಂತೆ ಯಾರಾದರೂ ಗುಪ್ತಸ್ಥಳಗಳಲ್ಲಿ ತನ್ನನ್ನು ತಾನೇ ಮರೆಮಾಡಿಕೊಂಡಾನೇ? ನಾನು ಭೂಮ್ಯಾಕಾಶಗಳಲ್ಲಿಯೂ ವ್ಯಾಪಿಸಿರುವವನಲ್ಲವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನನ್ನ ಕಣ್ಣಿಗೆ ಬೀಳದಂತೆ ಯಾವನಾದರೂ ಗುಪ್ತಸ್ಥಳಗಳಲ್ಲಿ ತನ್ನನ್ನು ಮರೆಮಾಡಿಕೊಂಡಾನೇ? ನಾನು ಭೂಮ್ಯಾಕಾಶಗಳಲ್ಲಿಯೂ ವ್ಯಾಪಿಸಿರುವವನಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಒಬ್ಬನು ನನಗೆ ಕಾಣದಂತೆ ಗುಪ್ತವಾದ ಸ್ಥಳದಲ್ಲಿ ಅಡಗಿಕೊಳ್ಳಲು ಪ್ರಯತ್ನಿಸಿದರೂ ನಾನು ಅವನನ್ನು ಸರಾಗವಾಗಿ ನೋಡಬಲ್ಲೆನು. ನಾನು ಭೂಮ್ಯಾಕಾಶಗಳ ಎಲ್ಲಾ ಕಡೆಗಳಲ್ಲೂ ಇದ್ದೇನೆ.” ಯೆಹೋವನೇ ಇವುಗಳನ್ನು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನನ್ನ ಕಣ್ಣಿಗೆ ಬೀಳದಂತೆ ಯಾವನಾದರೂ ಗುಪ್ತಸ್ಥಳಗಳಲ್ಲಿ ಮರೆಮಾಚಿಕೊಳ್ಳಲು ಸಾಧ್ಯವೇ? ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಭೂಮ್ಯಾಕಾಶಗಳಲ್ಲಿ ವ್ಯಾಪಿಸಿರುವವನಲ್ಲವೇ?” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 23:24
28 ತಿಳಿವುಗಳ ಹೋಲಿಕೆ  

ಸರ್ವೇಶ್ವರನ ದೃಷ್ಟಿ ಸರ್ವವ್ಯಾಪ್ತ; ಕೆಟ್ಟವರ ಮೇಲೂ ಒಳ್ಳೆಯವರ ಮೇಲೂ ಆತನ ನೋಟ.


ನಾನೆಲ್ಲಿಗೆ ಹೋಗಲು ಸಾಧ್ಯ, ನಿನ್ನಾತ್ಮನಿಂದ ತಪ್ಪಿಸಿಕೊಳ್ಳಲು? I ನಾನೆಲ್ಲಿಗೆ ಓಡಲು ಸಾಧ್ಯ, ನಿನ್ನ ಸನ್ನಿಧಿಯಿಂದ ಮರೆಯಾಗಲು? II


ನಿನ್ನ ನೋಟಕೆ ಮರೆಯಾಗಿಲ್ಲ ನಮ್ಮ ಪಾಪದೋಷಗಳು I ನಿನ್ನ ಮುಖಕಾಂತಿಗೆ ಬಟ್ಟಬಯಲಾಗಿವೆ ಗುಪ್ತಾಪರಾಧಗಳು II


ತಮ್ಮ ಆಲೋಚನೆಯನ್ನು ಸರ್ವೇಶ್ವರ ಸ್ವಾಮಿಯಿಂದ ಬಚ್ಚಿಡುವುದಕ್ಕಾಗಿ ಒಳಸಂಚುಮಾಡುವವರಿಗೆ ಧಿಕ್ಕಾರ ! ಇವರು, “ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ಗಮನಿಸಿಯಾರು?” ಎಂದುಕೊಂಡು ಕತ್ತಲಲ್ಲೇ ತಮ್ಮ ಕೃತ್ಯಗಳನ್ನು ನಡೆಸುತ್ತಾರೆ.


“ದೇವರು ನಿಜವಾಗಿ ಭೂಲೋಕದಲ್ಲಿ ವಾಸಿಸುವರೋ? ಆಕಾಶವೂ, ಉನ್ನತೋನ್ನತ ಆದ ಆಕಾಶವೂ, ನಿಮ್ಮ ವಾಸಕ್ಕೆ ಸಾಲದು; ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ತಾನೆ ಸಾಕಾದೀತು?


“ಪರಮ ಪವಿತ್ರನ, ಶಾಶ್ವತ ಲೋಕದ ನಿತ್ಯನಿವಾಸಿಯಾದ ಮಹೋನ್ನತನ ಮಾತಿದು : ಉನ್ನತವಾದ ಪವಿತ್ರಾಲಯದಲ್ಲಿ ವಾಸಿಸುವವನು ನಾನು; ಆದರೂ ಪಶ್ಚಾತ್ತಾಪಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಆಕಾಶವೇ ನನಗೆ ಸಿಂಹಾಸನವಾಗಿರಲು, ಭೂಮಿಯೇ ನನಗೆ ಪಾದಪೀಠವಾಗಿರಲು ನೀವು ನನಗೆ ಕಟ್ಟುವ ಮನೆ ಇನ್ನು ಎಂಥದ್ದು? ನನ್ನ ವಿಶ್ರಾಂತಿಗೆ ತಕ್ಕ ಸ್ಥಳ ಯಾವುದು?


ಮನದೊಳಿಂತೆಂದು ನೆನೆದನಾ ದುರುಳನು: I “ದೇವನಿದನು ಮರೆತು ವಿಮುಖನಾಗಿಹನು I ಇನ್ನೆಂದಿಗು ನೋಡನು ಇದೆಲ್ಲವನು” II


“ದೇವರು ನಿಜವಾಗಿ ಮಾನವರೊಡನೆ ಭೂಲೋಕದಲ್ಲಿ ವಾಸಿಸುವರೋ? ಆಕಾಶವೂ ಉನ್ನತೋನ್ನತವಾದ ಆಕಾಶವೂ ನಿಮ್ಮ ವಾಸಕ್ಕೆ ಸಾಲವು; ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ತಾನೆ ಸಾಕಾದೀತು?


ಧರ್ಮಸಭೆಯೇ ಯೇಸುಕ್ರಿಸ್ತರ ದೇಹ. ಎಲ್ಲವನ್ನೂ ಎಲ್ಲಾ ವಿಧದಲ್ಲೂ ಪೂರೈಸುವಾತನಿಂದ ಅದು ಪರಿಪೂರ್ಣ ಉಳ್ಳದ್ದಾಗಿದೆ.


ಅವರಿಗೆ ಆಲಯವನ್ನು ಕಟ್ಟುವುದಕ್ಕೆ ಯಾರೂ ಶಕ್ತರಲ್ಲ; ಆಕಾಶವೂ ಉನ್ನತೋನ್ನತವಾದ ಆಕಾಶವೂ ಅವರ ವಾಸಕ್ಕೆ ಸಾಲದಿರುವಲ್ಲಿ ಅವರಿಗಾಗಿ ಆಲಯವನ್ನು ಕಟ್ಟುವುದಕ್ಕೆ ಯಾರು ತಾನೆ ಶಕ್ತರು? ನಾನು ಅವರ ಸನ್ನಿಧಿಯಲ್ಲಿ ಧೂಪಾರತಿ ಎತ್ತುವ ಒಂದು ಸ್ಥಳವನ್ನು ಕಟ್ಟಿಸಬಲ್ಲೆನೇ ಹೊರತು, ಅವರ ವಾಸಕ್ಕಾಗಿ ಆಲಯವನ್ನು ಕಟ್ಟಿಸುವುದಕ್ಕೆ ನಾನು ಎಷ್ಟು ಮಾತ್ರಕ್ಕೂ ಶಕ್ತನಲ್ಲ.


ಆತನ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರು ಶೂನ್ಯರು ಇಹದ ಜನರೂ ಪರದ ದೂತರೂ ಆತನಿಗೆ ಅಧೀನರು. ಆತನ ಶಕ್ತಿಯುತ ಹಸ್ತವನ್ನು ಯಾರಿಂದಲೂ ತಡೆಯಲಾಗದು. ‘ನೀನು ಮಾಡುತ್ತಿರುವುದೇನು?’ ಎಂದು ಯಾರೂ ಆತನನ್ನು ಪ್ರಶ್ನಿಸಲಾರರು.


ಆಗ ಅವರು ನನಗೆ, “ಇಸ್ರಯೇಲ್ ಮತ್ತು ಯೆಹೂದ ವಂಶದವರ ಅಧರ್ಮ ತುಂಬಿಹೋಗಿದೆ; ನಾಡು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು, ‘ನಮ್ಮ ನಾಡನ್ನು ಸರ್ವೇಶ್ವರ ತೊರೆದುಬಿಟ್ಟಿದ್ದಾರೆ, ಸರ್ವೇಶ್ವರ ನಮ್ಮನ್ನು ನೋಡುವುದಿಲ್ಲ’ ಎಂದು ಮಾತಾಡಿಕೊಳ್ಳುತ್ತಿದ್ದಾರೆ;


ಆಗ ದೇವರು ನನಗೆ, “ನರಪುತ್ರನೇ, ಇಸ್ರಯೇಲ್ ವಂಶದ ಹಿರಿಯರೆಲ್ಲರು ನಾನಾ ರೂಪಗಳಿಂದ ಚಿತ್ರಿತವಾದ ತಮ್ಮ ತಮ್ಮ ಕೊಠಡಿಗಳೊಳಗೆ, ಕತ್ತಲೆಯಲ್ಲಿ ನಡೆಸುವ ಕೆಲಸವನ್ನು ನೋಡಿದೆಯಾ? ‘ಸರ್ವೇಶ್ವರ ನಮ್ಮನ್ನು ನೋಡನು, ಸರ್ವೇಶ್ವರ ನಾಡನ್ನು ತೊರೆದುಬಿಟ್ಟಿದ್ದಾನೆ,’ ಎಂದು ಮಾತಾಡಿಕೊಳ್ಳುತ್ತಾರಷ್ಟೆ,” ಎಂಬುದಾಗಿ ಹೇಳಿದರು.


ಆದರೆ ನಾನು ಏಸಾವನನ್ನು ಬರೀ ಮೈಯಾಗಿಸಿಬಿಟ್ಟಿದ್ದೇನೆ. ಅವನ ಗುಪ್ತಸ್ಥಳಗಳನ್ನು ಬಟ್ಟಬೈಲಾಗಿಸಿಬಿಟ್ಟಿದ್ದೇನೆ. ಅವಿತುಕೊಳ್ಳಲಾಗದು. ಅವನ ಸಂತಾನದವರು, ಸಹೋದರರು ಹಾಗು ನೆರೆಹೊರೆಯವರು ಹಾಳಾದರು. ಅವನೂ ಇಲ್ಲವಾದನು.


ಹೊಗಳಲಿ ಇವರೆಲ್ಲರು ಪ್ರಭುವಿನ ನಾಮವನು I ಭೂಮ್ಯಾಕಾಶ ಮೀರಿದ ಆತನ ಮಹಿಮೆಯನು I ಆತನ ಮಹತ್ತಾದ ಏಕೈಕ ನಾಮವನು II


ಹಾಗರಳು, “ನನ್ನನ್ನು ನೋಡುವಾತ ದೇವರನ್ನು ನಾನಿಲ್ಲೇ ನೋಡಿಬಿಟ್ಟೆನಲ್ಲಾ!” ಎಂದುಕೊಂಡು ತನ್ನ ಸಂಗಡ ಮಾತನಾಡಿದ ಸರ್ವೇಶ್ವರ ಸ್ವಾಮಿಗೆ, “ಎಲ್ಲವನ್ನು ನೋಡುವಾತ ದೇವರು" ಎಂದು ಹೆಸರಿಟ್ಟಳು.


ನಾವು ಯಾರಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ, ಅವರ ಕಣ್ಣಿಗೆ ಮುಚ್ಚುಮರೆಯಾದುದು ಯಾವುದೂ ಇಲ್ಲ. ಅವರ ದೃಷ್ಟಿಗೆ ಎಲ್ಲವೂ ಬಟ್ಟಬಯಲು.


ದೇವರ ಕಣ್ಣು ಮನುಷ್ಯನ ಮಾರ್ಗಗಳ ಮೇಲೆ ಅವನ ಹೆಜ್ಜೆಗಳೆಲ್ಲ ಗೋಚರವಾಗಿವೆ ಆತನಿಗೆ.


ಆತನ ದೃಷ್ಟಿಯಿಂದ ದುರುಳರು ಅಡಗಿಕೊಳ್ಳುವಂತಿಲ್ಲ ಅಂಥವರನ್ನು ಅಡಗಿಸಬಲ್ಲ ಇರುಳಿಲ್ಲ ಕಾರಿರುಳೂ ಇಲ್ಲ.


ಈ ಜನರ ನಡತೆ ನನ್ನ ಮುಖಕ್ಕೆ ಮರೆಯಾಗಿಲ್ಲ, ಎಲ್ಲವು ನನ್ನ ಕಣ್ಣಿಗೆ ಕಟ್ಟಿದಂತಿದೆ. ಅವರ ಅಕ್ರಮ ನನಗೆ ಗುಟ್ಟೇನೂ ಅಲ್ಲ, ಎಲ್ಲವು ಬಟ್ಟಬಯಲಾಗಿದೆ.


ನೀವು ಆಲೋಚನೆಯಲ್ಲಿ ಶ್ರೇಷ್ಟರು, ಕಾರ್ಯದಲ್ಲಿ ಸಮರ್ಥರು. ನರಮಾನವರ ಮಾರ್ಗಗಳನ್ನೆಲ್ಲ ಕಣ್ಣಾರೆ ನೋಡುವವರು. ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೂ ನಡತೆಗೂ ತಕ್ಕ ಫಲಕೊಡುವವರು.


ಅಗಾಧ ವಿಷಯಗಳನ್ನೂ ನಿಗೂಢ ರಹಸ್ಯಗಳನ್ನೂ ತರುವನಾತ ಬಯಲಿಗೆ. ಕಗ್ಗತ್ತಲೆಯಲ್ಲಿ ಅಡಗಿರುವುದೂ ಆತನಿಗೆ ಗೋಚರ ಏಕೆಂದರೆ ಬೆಳಕು ಆತನಲ್ಲೇ ಸುಸ್ಥಿರ.


ಆಕಾಶಕೆ ನಾನೇರಿದರೂ ನೀನಿರುವೆ ಅಲ್ಲಿ I ಪಾತಾಳದಲಿ ನಾ ನಿದ್ರಿಸಿದರೂ ನೀನಿರುವೆ ಅಲ್ಲಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು