Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 23:30 - ಕನ್ನಡ ಸತ್ಯವೇದವು C.L. Bible (BSI)

30 ನನ್ನ ವಾಕ್ಯಗಳನ್ನು ಒಬ್ಬರಿಂದೊಬ್ಬರು ಕದ್ದುಕೊಳ್ಳುವ ಪ್ರವಾದಿಗಳಿಗೆ ನಾನು ವಿರುದ್ಧವಾಗಿ ಇದ್ದೇನೆ. ಇದು ಸರ್ವೇಶ್ವರನಾದ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆಹಾ, ನನ್ನ ಮಾತುಗಳನ್ನು ತಮ್ಮ ತಮ್ಮ ನೆರೆಯವರಿಂದ ಕದ್ದುಕೊಳ್ಳುವ ಪ್ರವಾದಿಗಳಿಗೆ ನಾನು ವಿರುದ್ಧನಾಗಿದ್ದೇನೆ. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆಹಾ, ನನ್ನ ಮಾತುಗಳನ್ನು ತಮ್ಮ ತಮ್ಮ ನೆರೆಯವರಿಂದ ಕದ್ದುಕೊಳ್ಳುವ ಪ್ರವಾದಿಗಳಿಗೆ ನಾನು ವಿರುದ್ಧನಾಗಿದ್ದೇನೆ. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 “ನಾನು ಸುಳ್ಳುಪ್ರವಾದಿಗಳ ವಿರೋಧಿಯಾಗಿದ್ದೇನೆ.” ಇದು ಯೆಹೋವನ ನುಡಿ. “ಈ ಪ್ರವಾದಿಗಳು ನನ್ನ ಪದಗಳನ್ನು ಒಬ್ಬರಿಂದೊಬ್ಬರು ಕದಿಯುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆದ್ದರಿಂದ ಇಗೋ, “ತನ್ನ ನೆರೆಯವನಿಂದ ನನ್ನ ವಾಕ್ಯಗಳನ್ನು ಕದ್ದುಕೊಳ್ಳುವ ಪ್ರತಿಯೊಬ್ಬ ಪ್ರವಾದಿಗೆ ನಾನು ವಿರೋಧವಾಗಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 23:30
14 ತಿಳಿವುಗಳ ಹೋಲಿಕೆ  

ಆದರೆ ಯಾವ ಪ್ರವಾದಿ ನನ್ನಿಂದ ಅಧಿಕಾರ ಹೊಂದದೆ ನಾನು ಪ್ರೇರಣೆಮಾಡದ ಮಾತುಗಳನ್ನು ಸರ್ವೇಶ್ವರನ ಮಾತೆಂದು ಜನರಿಗೆ ತಿಳಿಸುವನೋ, ಇಲ್ಲವೆ ಇತರ ದೇವರುಗಳ ಹೆಸರಿನಲ್ಲಿ ಮಾತಾಡುವನೋ, ಅವನಿಗೆ ಮರಣಶಿಕ್ಷೆಯಾಗಬೇಕು,’ ಎಂದು ಹೇಳಿದರು.


ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನೀವು ವ್ಯರ್ಥವಾದುದನ್ನು ನುಡಿದು ಸುಳ್ಳಾದುದನ್ನು ಕಂಡದ್ದರಿಂದ ಇಗೋ, ನಿಮಗೆ ವಿರುದ್ಧವಾಗಿದ್ದೇನೆ, ಇದು ಸರ್ವೇಶ್ವರನಾದ ದೇವರೆಂಬ ನನ್ನ ನುಡಿ.


ಹೀಗಿರಲು, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಅಕಟಾ! ನೀವು ಜನರ ಪ್ರಾಣಗಳನ್ನು ಪಕ್ಷಿಗಳನ್ನೋ ಎಂಬಂತೆ ಬೇಟೆಯಾಡುವುದಕ್ಕೆ ಸಾಧನವಾದ ನಿಮ್ಮ ತಾಯಿತಿಗಳಿಗೆ ನಾನು ಹೇಸಿ, ಅವುಗಳನ್ನು ನಿಮ್ಮ ಕೈಗಳಿಂದ ಕಿತ್ತುಹಾಕುವೆನು; ನೀವು ಬೇಟೆಯಾಡುವ ಪ್ರಾಣಿಗಳನ್ನು ಬಿಡುಗಡೆಮಾಡಿ ಪಕ್ಷಿಗಳ ಹಾಗೆ ಸ್ವತಂತ್ರವಾಗಿಸುವೆನು.


ದುರ್ಜನರಿಗಾದರೋ ಪ್ರಭು ವಿಮುಖನು I ಅವರ ಹೆಸರನು ಧರೆಯಿಂದ ಅಳಿಸುವನು II


ನಾನವರ ಮೇಲಿಡುವೆನು ಕೋಪ ದೃಷ್ಟಿಯನ್ನು; ಬೆಂಕಿಯಿಂದ ತಪ್ಪಿಸಿಕೊಂಡರೂ ನುಂಗಿಬಿಡುವುದು ಅದು ಅವರನ್ನು. ನಾನವರ ಮೇಲೆ ಕೋಪ ದೃಷ್ಟಿಯನ್ನಿಟ್ಟಾಗ ನಾನೇ ಸರ್ವೇಶ್ವರನೆಂದು ನಿಮಗೆ ಮನದಟ್ಟಾಗುವುದು.


ನೀತಿವಂತರನು ಕಾಯುವನು ಸರ್ವೇಶ್ವರನು ಅವರ ವಿಜ್ಞಾಪನೆಗೆ ಕಿವಿಗೊಡುವನು. ಕೆಡುಕರಿಗಾದರೋ ಆತನು ವಿಮುಖನು,” ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ.


‘ನಾನು ನಿಮ್ಮನ್ನು ಈ ಸ್ಥಳದಲ್ಲೇ ದಂಡಿಸುವೆನು ಎಂಬುದಕ್ಕೆ ಒಂದು ಗುರುತು ಕಾಣುವುದು. ನನ್ನ ಮಾತು ಈಡೇರಿ ನಿಮಗೆ ಕೇಡು ಉಂಟಾಗುವುದು ಎಂಬುದಾಗಿ ಅದರಿಂದಲೇ ನಿಮಗೆ ತಿಳಿದುಬರುವುದು;


“ಆದಕಾರಣ ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಹೇಳುವುದನ್ನು ಕೇಳಿರಿ: ‘ಜುದೇಯವನ್ನೆಲ್ಲ ನಿರ್ಮೂಲ ಮಾಡುವೆನು. ಕೇಡಿಗಾಗಿಯೇ ನಿಮ್ಮ ಮೇಲೆ ಕಣ್ಣಿಡುವೆನು.


ಸರ್ವೇಶ್ವರ ಅಂಥವನನ್ನು ಎಂದಿಗೂ ಕ್ಷಮಿಸರು; ಬದಲಿಗೆ ಅವನ ಮೇಲೆ ಸಿಟ್ಟುಗೊಂಡು, ತಮ್ಮ ಗೌರವವನ್ನು ಕಾಪಾಡಿಕೊಳ್ಳುವವರಾಗಿ, ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸುವರು. ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವರು.


ನಾನು ನಿಮ್ಮ ಮೇಲೆ ಕಡುಕೋಪಗೊಳ್ಳುವೆನು; ನೀವು ನಿಮ್ಮ ಶತ್ರುಗಳ ಮುಂದೆಯೇ ಸೋತುಬೀಳುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು. ಯಾರೂ ಬೆನ್ನಟ್ಟಿ ಬರದಿದ್ದರೂ ನೀವು ಹೆದರಿ ಓಡುವಿರಿ.


ಅವನು ತನ್ನ ಮಕ್ಕಳಲ್ಲಿ ಒಂದನ್ನು ಮೋಲೆಕ ದೇವತೆಗೆ ಅರ್ಪಿಸಿ ನನ್ನ ದೇವಸ್ಥಾನವನ್ನು ಅಶುದ್ಧಮಾಡಿ ನನ್ನ ಪವಿತ್ರ ನಾಮಕ್ಕೆ ಅಪಕೀರ್ತಿ ತಂದಿದ್ದಾನೆ. ಆದ್ದರಿಂದ ನಾನು ಅವನಿಗೆ ವಿಮುಖನಾಗಿ ಅವನನ್ನು ನನ್ನ ಜನತೆಯಿಂದ ತೆಗೆದುಹಾಕುವೆನು.


ಕಣಿವೆಯಲ್ಲಿನ ನಗರಿಯೇ, ಬಯಲಿನ ಬಂಡೆಯಲ್ಲಿರುವ ಪುರಿಯೇ, ‘ನಮ್ಮ ಮೇಲೆ ಯಾರಿಳಿದು ಬಂದಾರು? ನಮ್ಮ ನಿವಾಸಗಳಿಗೆ ಯಾರು ನುಗ್ಗಿಯಾರು?’ ಎನ್ನುವವರೇ, ಇಗೋ ನಾನೆ ನಿಮಗೆ ವಿರುದ್ಧವಾಗಿದ್ದೇನೆ.


ತಮ್ಮ ನಾಲಿಗೆಗಳನ್ನು ಆಡಿಸುತ್ತಾ, ‘ಇದು ಸರ್ವೇಶ್ವರನ ನುಡಿ’ ಎಂದು ಹೇಳುವ ಪ್ರವಾದಿಗಳನ್ನು ನಾನು ಪ್ರತಿಭಟಿಸುತ್ತೇನೆ. ಇದು ಸರ್ವೇಶ್ವರನಾದ ನನ್ನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು