Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 23:9 - ಕನ್ನಡ ಸತ್ಯವೇದವು C.L. Bible (BSI)

9 ಪ್ರವಾದಿಗಳ ವಿಷಯ : ನನ್ನ ಗುಂಡಿಗೆ ಒಡೆದುಹೋಗಿದೆ ನನ್ನೆಲುಬುಗಳು ನಡುನಡುಗುತ್ತಿವೆ ಸರ್ವೇಶ್ವರನಿಗೆ, ಆತನ ಪವಿತ್ರವಾಕ್ಯಕ್ಕೆ ಪರವಶನಾದ ನಾನು ಅಮಲೇರಿದಂತವನಾದೆ. ಹೌದು, ಮದ್ಯಪಾನಕ್ಕೆ ಸೋತ ಮನುಷ್ಯನಂತಾದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಪ್ರವಾದಿಗಳ ವಿಷಯ: ನನ್ನ ಹೃದಯವು ನನ್ನೊಳಗೆ ಒಡೆದುಹೋಗಿದೆ; ನನ್ನ ಎಲುಬುಗಳೆಲ್ಲಾ ಕರಗಿಹೋಗಿವೆ. ನಾನು ಯೆಹೋವನಿಗೂ ಆತನ ಪರಿಶುದ್ಧ ವಾಕ್ಯಗಳಿಗೂ ವಶನಾಗಿ ಅಮಲೇರಿದವನಂತಿದ್ದೇನೆ. ಹೌದು, ದ್ರಾಕ್ಷಾರಸಕ್ಕೆ ಸೋತವನ ಹಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಪ್ರವಾದಿಗಳ ವಿಷಯ. ನನ್ನ ಹೃದಯವು ನನ್ನೊಳಗೆ ಒಡೆದುಹೋಗಿದೆ; ನನ್ನ ಎಲುಬುಗಳೆಲ್ಲಾ ಕರಗಿಹೋಗಿವೆ. ನಾನು ಯೆಹೋವನಿಗೂ ಆತನ ಪರಿಶುದ್ಧವಾಕ್ಯಗಳಿಗೂ ವಶನಾಗಿ ಅಮಲೇರಿದವನಂತಿದ್ದೇನೆ. ಹೌದು, ದ್ರಾಕ್ಷಾರಸಕ್ಕೆ ಸೋತವನ ಹಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಪ್ರವಾದಿಗಳಿಗೊಂದು ಸಂದೇಶ. ನಾನು ಬಹಳ ದುಃಖಿತನಾಗಿದ್ದೇನೆ. ನನ್ನ ಹೃದಯ ಒಡೆದುಹೋಗಿದೆ. ನನ್ನ ಎಲುಬುಗಳೆಲ್ಲಾ ನಡುಗುತ್ತಿವೆ. ನಾನು ಅಮಲೇರಿದವನಂತಿದ್ದೇನೆ. ಯೆಹೋವನೂ ಆತನ ಪರಿಶುದ್ಧ ನುಡಿಗಳೂ ಇದಕ್ಕೆ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಪ್ರವಾದಿಗಳ ನಿಮಿತ್ತ: ನನ್ನ ಹೃದಯವು ನನ್ನಲ್ಲಿ ಮುರಿದಿದೆ. ನನ್ನ ಎಲುಬುಗಳೆಲ್ಲಾ ಕದಲುತ್ತವೆ. ಯೆಹೋವ ದೇವರ ನಿಮಿತ್ತವೂ, ಆತನ ಪರಿಶುದ್ಧ ವಾಕ್ಯಗಳ ನಿಮಿತ್ತವೂ, ಮತ್ತನಾದ ಮನುಷ್ಯನ ಹಾಗೆಯೂ, ದ್ರಾಕ್ಷಾರಸಕ್ಕೆ ಒಳಗಾದ ಪುರುಷನ ಹಾಗೆಯೂ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 23:9
21 ತಿಳಿವುಗಳ ಹೋಲಿಕೆ  

ಇದಕೇಳಿ ನಡುನಡುಗಿತು ನನ್ನ ಒಡಲು ಅದುರಿದವು ಆ ಶಬ್ದಕ್ಕೆ ನನ್ನ ತುಟಿಗಳು ಕೊಳೆತಂತಾದವು ನನ್ನೆಲುಬುಗಳು ನಿಂತಲ್ಲೇ ತತ್ತರಿಸಿದವು ನನ್ನ ಕಾಲುಗಳು ಆಪತ್ತು ಬಂದೊದಗುವುದು ನಮ್ಮನ್ನು ಆಕ್ರಮಿಸುವವರಿಗೆ ಕಾದಿರುವೆ ನಾನು ಸಹನಶೀಲನಾಗಿ ಅಂದಿನವರೆಗೆ.


ದಾನಿಯೇಲನಾದ ನಾನು ಮೂರ್ಛೆಗೊಂಡೆ. ಕೆಲವು ದಿವಸ ಕಾಯಿಲೆ ಬಿದ್ದೆ. ಆಮೇಲೆ ಎದ್ದು ರಾಜಕಾರ್ಯವನ್ನು ಆರಂಭಿಸಿದೆ. ಆದರೂ ಆ ಕನಸಿಗೆ ಬೆಚ್ಚಿಬೆರಗಾದೆ. ಅದರ ಅರ್ಥವನ್ನು ಗ್ರಹಿಸಿಕೊಳ್ಳಲಾಗಲಿಲ್ಲ.


ಆತ ನನಗೆ ಕಹಿ ಉಣ್ಣಿಸಿದ್ದಾನೆ ಹೊಟ್ಟೆತುಂಬ ನನ್ನನ್ನು ತಣಿಸಿದ್ದಾನೆ ವಿಷಪದಾರ್ಥಗಳಿಂದ.


ಇಂತಿರಲು ಶೋಷಿತಳೇ, ಕೇಳು ನನ್ನ ಮಾತನು ದ್ರಾಕ್ಷಾರಸದಿಂದಲ್ಲ ನೀ ಅಮಲೇರಿರುವುದು.


ನಿನ್ನ ಜನರನು ಗುರಿಪಡಿಸಿದೆ ಸಂಕಟಕೆ I ಭ್ರಮಣಗೊಳಿಪ ಮದ್ಯವ ಕುಡಿಸಿದೆ ನಮಗೆ II


ಧರ್ಮಶಾಸ್ತ್ರದ ಅರಿವಿಲ್ಲದೆ ಒಮ್ಮೆ ನಾನು ಜೀವಿಸುತ್ತಿದ್ದೆನು; ಆಜ್ಞೆ ಎಂಬುದು ತಲೆದೋರಿದ ಕೂಡಲೇ ಪಾಪಕ್ಕೆ ಜೀವ ಬಂದಿತು.


ವೃದ್ಧ, ಯುವಕ, ಯುವತಿ, ಮಹಿಳೆ, ಬಾಲಕ ಎನ್ನದೆ ಸಕಲರನ್ನೂ ಸಂಹಾರ ಮಾಡಿಬಿಡಿ; ಆದರೆ ಆ ಗುರುತುಳ್ಳವರಲ್ಲಿ ಯಾರನ್ನೂ ಮುಟ್ಟಬೇಡಿ; ನನ್ನ ಆಲಯದಲ್ಲಿಯೇ ಪ್ರಾರಂಭಮಾಡಿ,” ಎಂದು ನನಗೆ ಕೇಳಿಸುವಂತೆ ಅಪ್ಪಣೆಮಾಡಿದರು. ಆಗ ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು.


“ನೀನು ಜೆರುಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಾಡಿ, ಅದರೊಳಗೆ ನಡೆಯುವ ಸಮಸ್ತ ಅಸಹ್ಯಕಾರ್ಯಗಳಿಗೆ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು,” ಎಂದು ಅಪ್ಪಣೆಕೊಟ್ಟರು.


ನನ್ನ ತಲೆ ಒಂದು ಚಿಲುಮೆಯಾಗಿರಬಾರದಿತ್ತೆ? ನನ್ನ ಕಣ್ಣು ಒಂದು ಒರತೆಯಾಗಿರಬಾರದಿತ್ತೆ? ಆಗ ನನ್ನ ಜನರಲ್ಲಿ ಹತರಾದವರಿಗಾಗಿ ಹಗಲಿರುಳು ಅಳುತ್ತಿದ್ದೆ.


ಪ್ರವಾದಿಗಳೇ ಸುಳ್ಳು ಪ್ರವಾದನೆಮಾಡುತ್ತಾರೆ. ಯಾಜಕರು ಅಂಥವರಿಂದ ಅಧಿಕಾರ ಪಡೆದು ದೊರೆತನಮಾಡುತ್ತಾರೆ. ನನ್ನ ಜನರಿಗೆ ಚೆನ್ನಾಗಿ ಹಿಡಿಸುವುದು ಇಂಥದ್ದೇ. ಆದರೆ ಅಂತ್ಯ ಬಂದಾಗ ಏನು ಮಾಡುವರು?”


ನಿಮ್ಮನ್ನು ನೀವೇ ಬೆರಗುಮಾಡಿಕೊಂಡು ನಿಬ್ಬೆರಗಾಗಿರಿ. ಕುರುಡು ಮಾಡಿಕೊಂಡು ಕಡುಕುರುಡರಾಗಿರಿ. ಮದ್ಯಪಾನ ಮಾಡದೆಯೇ ಮತ್ತರಾಗಿರಿ, ಕುಡಿಯದೆಯೇ ಓಲಾಡಿರಿ.


ಕುಡುಕರಿಂದ ಕೂಡಿದ ಎಫ್ರಯಿಮಿನ ಕಿರೀಟದಂತಿರುವ ನಗರಕ್ಕೆ ಧಿಕ್ಕಾರ ! ಒಮ್ಮೆ ಕುಡಿತಕ್ಕೆ ಸೋತು ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು ಈಗ ಬಾಡಿಹೋಗುತ್ತಿರುವ ಆ ಹೂವಿಗೆ ಧಿಕ್ಕಾರ !


ಆಗ ನಾನು “ಅಯ್ಯೋ, ನನ್ನ ಗತಿಯೇನು? ನನ್ನ ಕಥೆ ಮುಗಿಯಿತು. ಅಶುದ್ಧ ವದನದವನು ನಾನು. ಅಶುದ್ಧ ವದನದವರ ಮಧ್ಯೆ ಬಾಳುವವನು. ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರ ಸರ್ವೇಶ್ವರನನ್ನು ಕಂಡೆವಲ್ಲಾ !” ಎಂದು ಕೂಗಿಕೊಂಡೆನು.


ನಿಂದೆಯಿಂದ ಮನನೊಂದು ಹತಾಶನಾಗಿರುವೆನಯ್ಯಾ I ಹಾತೊರೆದರೂ ದಯೆತೋರುವನಾರೂ ಸಿಗಲಿಲ್ಲ I ಅರಸಿದರೂ ಸಾಂತ್ವನನೀಡುವವನು ದೊರಕಲಿಲ್ಲ II


ಅಯ್ಯೋ, ನಾನು ಮುಕ್ತನಾಗಿಲ್ಲ ದುಃಖದಿಂದ ನನ್ನ ಹೃದಯ ಕುಂದಿಹೋಗಿದೆ ಶೋಕದಿಂದ.


‘ಸರ್ವೇಶ್ವರನ ವಿಷಯವನ್ನು ಪ್ರಕಟಿಸೆನು, ಅವರ ಹೆಸರಿನಲ್ಲಿ ಇನ್ನು ಮಾತಾಡೆನು’ ಎಂದುಕೊಂಡೆನಾದರೆ ನನ್ನ ಹೃದಯದೊಳು ಸಂಕಟ ಉಂಟಾಗುತ್ತದೆ. ಸುಡುಬೆಂಕಿ ನನ್ನೆಲುಬುಗಳಲ್ಲಿ ಅಡಗಿದೆಯೋ ಎಂಬಂತೆ ಅದನ್ನು ತಡೆತಡೆದು ದಣಿದಿರುವೆ, ಇನ್ನು ಸಹಿಸಲಾಗದಿದೆ.


ಆ ಎಲ್ಲ ಮಾತುಗಳನ್ನು ಅವರು ಕೇಳಿ ತಳಮಳಗೊಂಡು ಒಬ್ಬರನ್ನೊಬ್ಬರು ನೋಡಿದರು. “ನಾವು ಈ ಮಾತುಗಳನ್ನೆಲ್ಲ ಅರಸನಿಗೆ ತಿಳಿಸಲೇಬೇಕು” ಎಂದು ಬಾರೂಕನಿಗೆ ಹೇಳಿದರು.


‘ಯಾವ ಸಾಕ್ಷಾತ್ಕಾರವೂ ಇಲ್ಲದೆ ಸ್ವಬುದ್ಧಿಯನ್ನೇ ಅನುಸರಿಸುವ ಮೂರ್ಖಪ್ರವಾದಿಗಳಿಗೆ ಧಿಕ್ಕಾರ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು