Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 24:5 - ಕನ್ನಡ ಸತ್ಯವೇದವು C.L. Bible (BSI)

5 “ಇಸ್ರಯೇಲರ ದೇವರಾದ ಸರ್ವೇಶ್ವರ ಹೇಳುವುದನ್ನು ಕೇಳು - ನಾನು ಈ ಸ್ಥಳದಿಂದ ಬಾಬಿಲೋನಿಗೆ ಕಳಿಸಿಬಿಟ್ಟು ಅಲ್ಲಿ ಸೆರೆಯಾಳುಗಳಾಗಿರುವ ಯೆಹೂದ್ಯರು ಈ ಉತ್ತಮವಾದ ಅಂಜೂರದ ಹಣ್ಣುಗಳಂಥವರು. ಅವರನ್ನು ಆದರದಿಂದ ನೋಡಿ ಅವರಿಗೆ ಒಳ್ಳೆಯದನ್ನೇ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 “ಇಸ್ರಾಯೇಲ ದೇವರಾದ ಯೆಹೋವನು ಇಂತೆನ್ನುತ್ತಾನೆ, ನಾನು ಈ ಸ್ಥಳದೊಳಗಿಂದ ಕಸ್ದೀಯರ ದೇಶಕ್ಕೆ ಕಳುಹಿಸಿಬಿಟ್ಟ ಸೆರೆಯವರಾದ ಯೆಹೂದ್ಯರನ್ನು ಈ ಉತ್ತಮವಾದ ಅಂಜೂರದ ಫಲಗಳಂತೆ ಲಕ್ಷಿಸಿ, ಅವರಿಗೆ ಮೇಲನ್ನುಂಟುಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇಸ್ರಾಯೇಲ್ಯರ ದೇವರಾದ ಯೆಹೋವನು ಇಂತೆನ್ನುತ್ತಾನೆ - ನಾನು ಈ ಸ್ಥಳದೊಳಗಿಂದ ಕಸ್ದೀಯರ ದೇಶಕ್ಕೆ ಕಳುಹಿಸಿಬಿಟ್ಟ ಸೆರೆಯವರಾದ ಯೆಹೂದ್ಯರನ್ನು ಈ ಉತ್ತಮವಾದ ಅಂಜೂರದ ಫಲಗಳಂತೆ ಲಕ್ಷಿಸಿ ಅವರಿಗೆ ಮೇಲನ್ನುಂಟುಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಇಸ್ರೇಲಿನ ದೇವರಾದ ಯೆಹೋವನು ಹೇಳಿದನು: “ಯೆಹೂದದ ಜನರನ್ನು ಅವರ ದೇಶದಿಂದ ತೆಗೆದುಕೊಂಡು ಹೋಗಲಾಯಿತು. ಅವರ ಶತ್ರು ಅವರನ್ನು ಬಾಬಿಲೋನಿಗೆ ತಂದನು. ಆ ಜನರು ಈ ಒಳ್ಳೆಯ ಅಂಜೂರದಂತಿರುವರು. ಆ ಜನರಿಗೆ ನಾನು ದಯೆತೋರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ಇಸ್ರಾಯೇಲರ ದೇವರಾದ ಯೆಹೋವ ದೇವರು ಹೇಳುವುದನ್ನು ಕೇಳು, ‘ನಾನು ಈ ಸ್ಥಳದಿಂದ ಬಾಬಿಲೋನಿಗೆ ಕಳುಹಿಸಿಬಿಟ್ಟು, ಅಲ್ಲಿ ಸೆರೆಯಾಳುಗಳಾಗಿರುವ ಯೆಹೂದ್ಯರು ಈ ಉತ್ತಮವಾದ ಅಂಜೂರದ ಹಣ್ಣುಗಳಂತವರು. ನಾನು ಅವರನ್ನು ಒಳ್ಳೆಯವರಂತೆ ಪರಿಗಣಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 24:5
21 ತಿಳಿವುಗಳ ಹೋಲಿಕೆ  

ಹಾಕುವೆನಾ ಮೂರನೇ ಭಾಗದವರನ್ನು ಬೆಂಕಿಗೆ, ಶೋಧಿಸುವೆನು ಅವರನ್ನು ಬೆಳ್ಳಿಯ ಹಾಗೆ. ಶುದ್ಧೀಕರಿಸುವೆನು ಬಂಗಾರದ ಹಾಗೆ. ಕಿವಿಗೊಡುವೆ ನನ್ನ ಹೆಸರೆತ್ತಿ ಪ್ರಾರ್ಥಿಸುವವರಿಗೆ. ಹೇಳುವೆನು, ‘ಇವರೇ ನನ್ನ ಪ್ರಜೆಯೆಂದು. ಹೇಳುವರವರು ‘ಸರ್ವೇಶ್ವರನೇ ನಮ್ಮ ದೇವ’ ಎಂದು.


ಒಳ್ಳೆಯವನು ಸರ್ವೇಶ್ವರ ಸಂಕಟದಲಿ ಆಶ್ರಯದುರ್ಗ ಮೊರೆಹೊಕ್ಕವರನು ಚೆನ್ನಾಗಿ ಬಲ್ಲನಾತ.


ನನ್ನ ಪ್ರೀತಿಪಾತ್ರರನ್ನು ನಾನು ಖಂಡಿಸುತ್ತೇನೆ ಮತ್ತು ದಂಡಿಸುತ್ತೇನೆ. ಆದುದರಿಂದ ಉತ್ಸಾಹದಿಂದಿರು, ದೇವರಿಗೆ ಅಭಿಮುಖನಾಗಿರು.


ಆದರೆ ದೇವರು ಹಾಕಿದಂಥ ಸುಸ್ಥಿರವಾದ ಅಸ್ತಿವಾರವನ್ನು ಯಾರಿಂದಲೂ ಕದಲಿಸಲಾಗದು. ಅದರಲ್ಲಿ “ತನ್ನವರು ಯಾರು ಎಂದು ಪ್ರಭು ಅರಿತಿದ್ದಾರೆ; ಮತ್ತು ತಾನು ಪ್ರಭುವಿನವನೆಂದು ಹೇಳಿಕೊಳ್ಳುವವರೆಲ್ಲರೂ ದುರ್ಮಾರ್ಗದಿಂದ ದೂರವಿರಲಿ,” ಎಂದು ಲಿಖಿತವಾಗಿದೆ.


ಈಗಲಾದರೋ ನಿಜದೇವರನ್ನು ಅರಿತುಕೊಂಡಿದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ಅರಿತುಕೊಂಡಿದ್ದಾರೆ. ಹೀಗಿರಲಾಗಿ, ದುರ್ಬಲ ಹಾಗೂ ದರಿದ್ರವಾದ ಮೂಲಭೂತ ಶಕ್ತಿಗಳಿಗೆ ನೀವು ಮರಳುವುದೇಕೆ? ಪುನಃ ಅವುಗಳಿಗೆ ಗುಲಾಮರಾಗಲು ಇಚ್ಛಿಸುವುದೇಕೆ?


ಆದರೆ ದೇವರನ್ನು ಪ್ರೀತಿಸುವವನನ್ನು ದೇವರು ಗುರುತಿಸುತ್ತಾರೆ.


ದೇವರನ್ನು ಪ್ರೀತಿಸುವವರಿಗೂ ದೇವರ ಸಂಕಲ್ಪದ ಮೇರೆಗೆ ಕರೆಹೊಂದಿದವರಿಗೂ ಸಕಲವೂ ಹಿತಕರವಾಗಿ ಪರಿಣಮಿಸುವುದು.ಇದನ್ನು ನಾವು ಚೆನ್ನಾಗಿ ಅರಿತಿದ್ದೇವೆ.


ನನ್ನ ಕುರಿಗಳಾದರೋ ನನ್ನ ಸ್ವರವನ್ನು ಗುರುತಿಸುತ್ತವೆ. ನಾನು ಅವನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.


ಅದಕ್ಕೆ ಉತ್ತರವಾಗಿ ಆ ಮದುವಣಿಗ, ‘ಅದಾಗದು, ನೀವು ಯಾರೋ ನನಗೆ ಗೊತ್ತಿಲ್ಲ,’ ಎಂದುಬಿಟ್ಟ.


ಕಷ್ಟಾನುಭವವೂ ಆಯಿತೆನಗೆ ಹಿತಕರ I ಅದು ತಂದಿತು ನಿನ್ನ ನಿಬಂಧನೆಗಳೆಚ್ಚರ II


ಕಷ್ಟಾನುಭವಕೆ ಮುಂಚೆ ದಾರಿತಪ್ಪಿ ನಡೆದೆ I ಆದರೀಗ ನಡೆಯುತ್ತಿರುವೆ ನಿನ್ನ ನುಡಿಯಂತೆ II


ಆಗ ಸರ್ವೇಶ್ವರ ನನಗೆ ದಯಪಾಲಿಸಿದ ಸಂದೇಶ ಇದು:


“ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಸ್ವಾಮಿ ಜೆರುಸಲೇಮಿನಿಂದ ಬಾಬಿಲೋನಿಗೆ ಸಾಗಿಸಲಾಗಿರುವ ಸೆರೆಯವರೆಲ್ಲರಿಗೆ ಹೀಗೆಂದು ತಿಳಿಸುತ್ತಾರೆ:


ಜೆರುಸಲೇಮಿನಿಂದ ಬಾಬಿಲೋನಿಗೆ ಸಾಗಿಸಲಾಗಿರುವ ಸೆರೆಯವರೇ, ನೀವೆಲ್ಲರು ಸರ್ವೇಶ್ವರನಾದ ನನ್ನ ವಾಕ್ಯಕ್ಕೆ ಕಿವಿಗೊಡಿ.’


“ಆಮೇಲೆ ಅವರನ್ನು ಜನಾಂಗಗಳಿಂದ ಒಟ್ಟುಗೂಡಿಸುವೆನು. ಚದರಿರುವ ದೇಶಗಳಿಂದ ಅವರನ್ನು ಒಟ್ಟಿಗೆ ಬರಮಾಡಿ ಇಸ್ರಯೇಲ್ ನಾಡನ್ನು ಅವರಿಗೆ ದಯಪಾಲಿಸುವೆನು.


ಅವರು ಶತ್ರುಗಳ ದೇಶದಲ್ಲಿರುವಾಗಲೂ ನಾನು ಅವರನ್ನು ಬೇಡವೆನ್ನುವುದಿಲ್ಲ. ತಾತ್ಸಾರ ಮಾಡುವುದಿಲ್ಲ, ನಾನು ಅವರಿಗೆ ಮಾಡಿದ ವಾಗ್ದಾನವನ್ನು ಮೀರುವುದಿಲ್ಲ. ನಾನು ಅವರ ದೇವರಾದ ಸರ್ವೇಶ್ವರನಲ್ಲವೆ?


ನಿಮಗೆ ಇಂಥ ಗತಿ ಬರಲಿ ಎಂದಲ್ಲ, ನಿರೀಕ್ಷೆ ಇರಲಿ ಎಂದೇ ನಾನು ನಿಮ್ಮ ವಿಷಯದಲ್ಲಿ ಮಾಡಿಕೊಂಡ ಆಲೋಚನೆಗಳನ್ನು ನಾನು ಮಾತ್ರ ಬಲ್ಲೆ. ಅವು ಅಹಿತ ಯೋಜನೆಗಳೇನೂ ಅಲ್ಲ, ಹಿತಕರವಾದ ಯೋಜನೆಗಳೇ.


ಕಲ್ಲಾದ ಹೃದಯವನ್ನು ಅವರೊಳಗಿಂದ ತೆಗೆದು ಮೃದುವಾದ ಹೃದಯವನ್ನು ಅವರಿಗೆ ಅನುಗ್ರಹಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು