Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 25:13 - ಕನ್ನಡ ಸತ್ಯವೇದವು C.L. Bible (BSI)

13 ನಾನು ಈ ನಾಡಿನ ವಿಷಯದಲ್ಲಿ ನುಡಿದುದೆಲ್ಲವನ್ನು, ಅಂದರೆ ಯೆರೆಮೀಯನ ಮುಖಾಂತರ ಸಕಲ ರಾಷ್ಟ್ರಗಳ ವಿರುದ್ಧ ನುಡಿದಿರುವ ಹಾಗು ಪ್ರವಾದನೆಗಳ ಗ್ರಂಥದಲ್ಲಿ ಬರೆದುದೆಲ್ಲವನ್ನು ಅದರ ಮೇಲೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನು ಆ ದೇಶದ ವಿಷಯದಲ್ಲಿ ನುಡಿದದ್ದನ್ನೆಲ್ಲಾ ಅಂದರೆ ಯೆರೆಮೀಯನು ಸಕಲ ಜನಾಂಗಗಳ ವಿಷಯವಾಗಿ ಮಾಡಿರುವ ಈ ಪ್ರವಾದನೆಗಳ ಗ್ರಂಥದಲ್ಲಿ ಬರೆದದ್ದನ್ನೆಲ್ಲಾ ಅದರ ಮೇಲೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾನು ಆ ದೇಶದ ವಿಷಯದಲ್ಲಿ ನುಡಿದದ್ದನ್ನೆಲ್ಲಾ (ಅಂದರೆ ಯೆರೆಮೀಯನು ಸಕಲ ಜನಾಂಗಗಳ ವಿಷಯವಾಗಿ ಮಾಡಿರುವ ಈ ಪ್ರವಾದನೆಗಳ ಗ್ರಂಥದಲ್ಲಿ ಬರೆದದ್ದನ್ನೆಲ್ಲಾ) ಅದರ ಮೇಲೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಬಾಬಿಲೋನಿಗೆ ಅನೇಕ ಕೇಡುಗಳು ಬರುವವೆಂದು ನಾನು ಹೇಳಿದ್ದೇನೆ. ಅದೆಲ್ಲ ನಡೆಯುವುದು. ಯೆರೆಮೀಯನು ಆ ಅನ್ಯಜನಾಂಗಗಳ ಬಗ್ಗೆ ಬೋಧಿಸಿದ್ದಾನೆ. ಆ ಮೂನ್ಸೂಚನೆಗಳೆಲ್ಲಾ ಈ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಿಶ್ಚಯವಾಗಿ ಆ ದೇಶದ ಮೇಲೆ ನಾನು ಅದಕ್ಕೆ ವಿರೋಧವಾಗಿ ಹೇಳಿದ ನನ್ನ ಎಲ್ಲಾ ವಾಕ್ಯಗಳನ್ನೂ, ಯೆರೆಮೀಯನು ಜನಾಂಗಗಳಿಗೆ ವಿರೋಧವಾಗಿ ಪ್ರವಾದಿಸಿ, ಈ ಪುಸ್ತಕದಲ್ಲಿ ಬರೆದಿರುವ ಎಲ್ಲವನ್ನೂ ಅವರ ಮೇಲೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 25:13
10 ತಿಳಿವುಗಳ ಹೋಲಿಕೆ  

ರಾಷ್ಟ್ರಗಳ ಮೇಲೂ ರಾಜ್ಯಗಳ ಮೇಲೂ ಅಧಿಕಾರವುಳ್ಳವನನ್ನಾಗಿ ನಾನು ನಿನ್ನನ್ನು ಈ ದಿನ ನೇಮಿಸಿದ್ದೇನೆ. ಇದರಿಂದಾಗಿ ಕಿತ್ತುಹಾಕುವ ಹಾಗು ಕೆಡುವುವ, ನಾಶಪಡಿಸುವ ಹಾಗು ನೆಲಸಮಮಾಡುವ, ಕಟ್ಟುವ ಹಾಗು ನೆಡುವ ಕಾರ್ಯ ನಿನ್ನದು,” ಎಂದರು


“ನಿನ್ನನ್ನು ತಾಯಿಯ ಗರ್ಭದಲ್ಲಿ ರೂಪಿಸುವುದಕ್ಕೆ ಮುಂಚೆಯೇ ನಿನ್ನನ್ನು ನಾನು ತಿಳಿದಿದ್ದೇ; ನೀನು ಉದರದಿಂದ ಹೊರಬರುವುದಕ್ಕೆ ಮೊದಲೇ ನಿನ್ನನ್ನು ಪವಿತ್ರೀಕರಿಸಿದ್ದೇ; ನಿನ್ನನ್ನು ರಾಷ್ಟ್ರಗಳಿಗೆ ಪ್ರವಾದಿಯನ್ನಾಗಿ ನೇಮಿಸಿದ್ದೇನೆ.”


ಅನಂತರ, ದೇವದೂತನು ನನಗೆ, “ನೀನು ಇನ್ನೂ ಅನೇಕ ಜನರ, ಜನಾಂಗಗಳ, ಭಾಷೆಗಳನ್ನಾಡುವವರ ಹಾಗು ಅರಸರಾದವರ ವಿರುದ್ಧ ಪ್ರವಾದನೆಯನ್ನು ಸಾರಬೇಕು,” ಎಂದು ಆಜ್ಞಾಪಿಸಿದನು.


ಸುಮಾರು 62 ವಯಸ್ಸಿನ ಮೇದ್ಯನಾದ ದಾರ್ಯಾವೆಷನು ರಾಜ್ಯವನ್ನು ವಹಿಸಿಕೊಂಡನು.


‘ಫರ್ಸಿನ್’ ಎಂದರೆ ನಿನ್ನ ರಾಜ್ಯವನ್ನು ವಿಭಾಗಮಾಡಿ ಮೇದ್ಯರಿಗೂ ಪರ್ಷಿಯದವರಿಗೂ ಕೊಡಲಾಗಿದೆ,” ಎಂದು ಅರಿಕೆಮಾಡಿದನು.


“ಇಸ್ರಯೇಲರ ದೇವರಾದ ಸರ್ವೇಶ್ವರ ಹೀಗೆನ್ನುತ್ತಾರೆ - ‘ನಾನು ನಿನಗೆ ಹೇಳಿರುವ ಮಾತುಗಳನ್ನೆಲ್ಲ ಗ್ರಂಥರೂಪವಾಗಿ ಬರೆ.


“ನೀನು ಗ್ರಂಥ ಬರೆಯುವ ಒಂದು ಸುರುಳಿಯನ್ನು ತೆಗೆದುಕೊಂಡು, ನಾನು ಯೋಷೀಯನ ಕಾಲದಲ್ಲಿ ನಿನ್ನ ಸಂಗಡ ಮಾತಾಡಿದಂದಿನಿಂದ ಇಂದಿನವರೆಗೆ ಇಸ್ರಯೇಲ್, ಯೆಹೂದ ಹಾಗೂ ಸಕಲ ರಾಷ್ಟ್ರಗಳ ವಿಷಯವಾಗಿ ನಿನಗೆ ನುಡಿಯುತ್ತಾ ಬಂದಿರುವ ಮಾತುಗಳನ್ನೆಲ್ಲ ಬರೆ.


ಆಗ ಯೆರೆಮೀಯನು ನೇರೀಯನ ಮಗ ಬಾರೂಕನನ್ನು ಕರೆಯಿಸಿ ಸರ್ವೇಶ್ವರನ ಮಾತುಗಳನ್ನೆಲ್ಲ ಹೇಳಿದನು. ಅವನು ಯೆರೆಮೀಯನ ಬಾಯಿಂದ ಬಂದ ಹಾಗೆಯೇ ಅವುಗಳನ್ನು ಗ್ರಂಥದ ಸುರುಳಿಯಲ್ಲಿ ಬರೆದನು.


ಅದೂ ಅಲ್ಲದೆ ಜುದೇಯದ ಅರಸ ಯೆಹೋಯಾಕೀಮನ ವಿಷಯದಲ್ಲಿ ಹೀಗೆ ಬರೆಯಿಸು: ‘ಸರ್ವೇಶ್ವರ ಹೀಗೆಂದಿದ್ದಾರೆ - ಬಾಬಿಲೋನಿನ ಅರಸನು ಬಂದು ಈ ನಾಡನ್ನು ಜನ ಅಥವಾ ಜಾನುವಾರುಗಳಿಲ್ಲದಂತೆ ಹಾಳುಮಾಡುವುದು ಖಂಡಿತ ಎಂದು ಈ ಸುರುಳಿಯಲ್ಲಿ ಬರೆಸಿದ್ದು ಏಕೆ ಎಂದು ಪ್ರಶ್ನಿಸಿ, ಆಕ್ಷೇಪಿಸಿ ಅದನ್ನು ನೀನು ಸುಟ್ಟುಬಿಟ್ಟಿಯಲ್ಲವೆ?


ಅಂತೆಯೇ, ನನ್ನ ಬಾಯಿಂದ ಹೊರಡುವ ಮಾತು ನನ್ನ ಇಷ್ಟಾರ್ಥವನು ನೆರವೇರಿಸಿದ ಹೊರತು, ನನ್ನ ಉದ್ದೇಶವನು ಕೈಗೂಡಿಸಿದ ಹೊರತು. ನನ್ನ ಬಳಿಗೆ ವ್ಯರ್ಥವಾಗಿ ಹಿಂದಿರುಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು