Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 25:22 - ಕನ್ನಡ ಸತ್ಯವೇದವು C.L. Bible (BSI)

22 ಟೈರ್ ಮತ್ತು ಸಿದೋನ್ ಇವುಗಳ ಅರಸರೆಲ್ಲರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ತೂರಿನ ಎಲ್ಲಾ ಅರಸರು, ಚೀದೋನಿನ ಎಲ್ಲಾ ಅರಸರು, ಸಮುದ್ರದ ಆಚೆಯ ಕರಾವಳಿಯ ಅರಸರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅಮ್ಮೋನ್ಯರು, ತೂರಿನ ಎಲ್ಲಾ ಅರಸರು, ಚೀದೋನಿನ ಎಲ್ಲಾ ಅರಸರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ತೂರಿನ ಮತ್ತು ಚೀದೋನಿನ ಎಲ್ಲಾ ರಾಜರು ಈ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ. ಬಹಳ ದೂರದೇಶದ ರಾಜರು ಸಹ ಈ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಟೈರಿನ ಅರಸರೆಲ್ಲರಿಗೂ, ಸೀದೋನಿನ ಅರಸರೆಲ್ಲರಿಗೂ, ಸಮುದ್ರದ ಆಚೆಯಲ್ಲಿರುವ ದ್ವೀಪದ ಅರಸರಿಗೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 25:22
20 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ಸೂರೆಯಾಗುವರು ಫಿಲಿಷ್ಟಿಯರೆಲ್ಲರು ನಿರ್ಮೂಲವಾಗುವರು ಟೈರ್-ಸಿಡೋನಿನ ಸಹಾಯಕರಲ್ಲಿ ಅಳಿದುಳಿದವರು. ಸರ್ವೇಶ್ವರನೆ ನಾಶಮಾಡುವನು ಕ್ರೇಟ್ ದ್ವೀಪದಿಂದ ಉತ್ಪನ್ನರಾದ ಫಿಲಿಷ್ಟಿಯರನ್ನು.


“ಉತ್ತರದೇಶದ ಸಕಲ ರಾಜರುಗಳೂ ಸಮಸ್ತ ಸಿದೋನ್ಯರೂ ಸಂಹೃತರೊಂದಿಗೆ ಇಳಿದು ಅಲ್ಲಿದ್ದಾರೆ; ಭಯಂಕರರಾಗಿದ್ದ ತಮ್ಮ ಶೌರ್ಯಕ್ಕೆ ನಾಚಿಕೆಗೊಂಡು, ಖಡ್ಗಹತರ ಮಧ್ಯೆ ಸುನ್ನತಿಹೀನರಾಗಿ ಬಿದ್ದು, ಪ್ರೇತಗಳ ನಡುವೆ ಅವಮಾನಪಟ್ಟಿದ್ದಾರೆ.


“ನರಪುತ್ರನೇ, ಬಾಬಿಲೋನಿನ ನೆಬೂಕದ್ನೆಚ್ಚರನು ಟೈರಿಗೆ ಮುತ್ತಿಗೆ ಹಾಕಿ, ತನ್ನ ಸೈನಿಕರಿಂದ ಬಹು ಶ್ರಮದ ಸೇವೆಯನ್ನು ಮಾಡಿಸಿದ್ದಾನೆ; ಪ್ರತಿಯೊಬ್ಬನ ತಲೆ ಬೋಳಾಗಿದೆ. ಪ್ರತಿಯೊಬ್ಬನ ಹೆಗಲು ಕಾಯಿಕಟ್ಟಿದೆ; ಆದರೂ ಆ ಮುತ್ತಿಗೆಯಲ್ಲಿ ಅವನು ಪಟ್ಟ ಶ್ರಮಕ್ಕೆ ಅವನಿಗಾಗಲಿ ಅವನ ಸೈನಿಕರಿಗಾಗಲಿ ಟೈರಿನಿಂದ ಫಲವೇನೂ ಸಿಕ್ಕಲಿಲ್ಲ.


ರಾಷ್ಟ್ರಗಳೇ, ಸರ್ವೇಶ್ವರನ ವಾಕ್ಯವನ್ನು ಕೇಳಿರಿ: ದೂರದ ದ್ವೀಪಗಳಲ್ಲೂ ಅದನ್ನು ಸಾರಿರಿ: ಇಸ್ರಯೇಲರನ್ನು ಚದುರಿಸಿದಾತ ಕುರಿಮಂದೆಯನ್ನು ಕಾಯುವ ಕುರುಬನಂತೆ ಅವರನ್ನು ಕೂಡಿಸಿ ಕಾಪಾಡುವನೆಂದು ಪ್ರಕಟಿಸಿರಿ.


ಜುದೇಯದ ಅರಸ ಚಿದ್ಕೀಯನನ್ನು ನೋಡಲು ಜೆರುಸಲೇಮಿಗೆ ಬಂದಿರುವ ರಾಯಭಾರಿಗಳ ಮೂಲಕ ಎದೋಮಿನ ರಾಜ, ಮೋವಾಬಿನ ರಾಜ, ಅಮ್ಮೋನ್ಯ ರಾಜ, ಟೈರಿನ ರಾಜ, ಸಿದೋನಿನ ರಾಜ ಇವರುಗಳಿಗೆ ಒಂದು ಸಮಾಚಾರವನ್ನು ಕಳಿಸು.


ಟೈರ್ ನಗರವನ್ನು ಕುರಿತ ದೈವೋಕ್ತಿ : “ಗೋಳಾಡಿರಿ ತಾರ್ಷಿಷಿನ ನಾವಿಕರೆಲ್ಲ, ಹಾಳಾಗಿವೆ ನಿಮ್ಮ ಬಂದರುಗಳೆಲ್ಲ; ಹಡಗುಗಳಿಗೆ ರೇವಿಲ್ಲ, ನೆಲೆಯಿಲ್ಲ, ಸೈಪ್ರಸ್ಸಿನಿಂದ ಬಂದ ನಾವಿಕರಿಂದ ಈ ಸುದ್ದಿ ನಿಮಗೆ ತಿಳಿಯುವುದು.”


ಸಿದೋನ್ ನಗರವೇ, ನಿನಗೆ ನಾಚಿಕೆಗೇಡು ! ಸಮುದ್ರವೂ ಸಮುದ್ರ ತಳವೂ ನಿನ್ನನ್ನು ನಿರಾಕರಿಸುತ್ತಾ; “ನಾನು ಗರ್ಭಧರಿಸಲಿಲ್ಲ, ಪ್ರಸವಿಸಲಿಲ್ಲ, ಪುತ್ರಪುತ್ರಿಯರನ್ನು ಸಾಕಿ ಸಲಹಲಿಲ್ಲ,” ಎಂದು ನುಡಿದಿದೆ.


ಒಬ್ಬ ಅರಸನ ಜೀವಮಾನ ಕಾಲದಷ್ಟು ದಿನ - ಅಂದರೆ ಎಪ್ಪತ್ತು ವರ್ಷಕಾಲ - ನಗರವು ಯಾರ ನೆನಪಿಗೂ ಬಾರದೆಹೋಗುವುದು. ಆ ಅವಧಿಯು ಮುಗಿದ ಮೇಲೆ ಅದರ ಗತಿ ವೇಶ್ಯೆಯ ಗೀತದಂತಾಗುವುದು:


ನಾನು ಮಾಗೋಗ್ ದೇಶದ ಮೇಲೂ ಕರಾವಳಿಯ ಸೀಮೆಗಳಲ್ಲಿ ನಿರ್ಭಯವಾಗಿ ವಾಸಿಸುವವರ ಮೇಲೂ ಬೆಂಕಿಯನ್ನು ಕಳುಹಿಸುವೆನು; ಆಗ ನಾನೇ ಸರ್ವೇಶ್ವರ ಎಂದು ಅವರಿಗೆ ನಿಶ್ಚಿತವಾಗುವುದು.


ವಿನಾಶದಿನದೊಳು ಮುಳುಗಿಹೋಗುವುವು ಸಮುದ್ರದೊಳು ನಿನ್ನ ಆಸ್ತಿ, ನಿನ್ನ ದಿನಸು, ನಿನ್ನ ಸರಕುಗಳು ನಿನ್ನ ನಾವಿಕರು, ಅಂಬಿಗರು, ಕಂಡಿ ಭದ್ರಪಡಿಸುವವರು, ನಿನ್ನ ವ್ಯಾಪಾರಿಗಳು, ಸೈನಿಕರೆಲ್ಲರು, ನಿನ್ನ ಸಿಬ್ಬಂದಿಯೆಲ್ಲವು.


ಸರ್ವೇಶ್ವರ ಇನ್ನೊಂದು ವಾಣಿಯನ್ನು ನನಗೆ ದಯಪಾಲಿಸದರು -


ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು:-


“ನರಪುತ್ರನೇ, ನೀನು ಸಿದೋನಿಗೆ ಅಭಿಮುಖನಾಗಿ ಅದರ ಬಗ್ಗೆ ಹೀಗೆ ನುಡಿ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು