Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 25:32 - ಕನ್ನಡ ಸತ್ಯವೇದವು C.L. Bible (BSI)

32 ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: ‘ಹರಡುವುದು ಕೇಡು ಜನಾಂಗದಿಂದ ಜನಾಂಗಕ್ಕೆ ಏಳುವುದು ಚಂಡಮಾರುತ ಲೋಕದ ಕಟ್ಟಕಡೆಯಿಂದ’.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಸೇನಾಧೀಶ್ವರನಾದ ಯೆಹೋವನು, “ಆಹಾ, ಕೇಡು ಜನಾಂಗದಿಂದ ಜನಾಂಗಕ್ಕೆ ಹರಡುವುದು; ದೊಡ್ಡ ಬಿರುಗಾಳಿಯು ಲೋಕದ ಕಟ್ಟಕಡೆಯಿಂದ ಎದ್ದು ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ಕೇಡು ಜನಾಂಗದಿಂದ ಜನಾಂಗಕ್ಕೆ ಹರಡುವದು; ದೊಡ್ಡ ಬಿರುಗಾಳಿಯು ಲೋಕದ ಕಟ್ಟಕಡೆಯಿಂದ ಎದ್ದುಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 “ವಿಪತ್ತುಗಳು ಬಹುಬೇಗ ದೇಶದಿಂದ ದೇಶಕ್ಕೆ ಹರಡುವವು. ಅವು ಭೂಲೋಕದ ಎಲ್ಲಾ ದೂರದೂರದ ದೇಶಗಳಲ್ಲಿ ಭಯಂಕರವಾದ ಬಿರುಗಾಳಿಯಂತೆ ಬರುವವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಜನಾಂಗದಿಂದ ಜನಾಂಗಕ್ಕೆ ಕೇಡು ಹೊರಡುವುದು. ಭೂಮಿಯ ಮೇರೆಗಳಿಂದ ಮಹಾ ಬಿರುಗಾಳಿ ಏಳುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 25:32
12 ತಿಳಿವುಗಳ ಹೋಲಿಕೆ  

ಇಗೋ ಕೇಳಿ: ಸರ್ವೇಶ್ವರನ ಕೋಪವೆಂಬ ಬಿರುಗಾಳಿ ಹೊರಟಿದೆ. ಅದು ದುಷ್ಟರ ತಲೆಯ ಮೇಲೆ ಸುಂಟರಗಾಳಿಯಂತೆ ಬಡಿಯುವುದು.


ಸರ್ವೇಶ್ವರ ಸ್ವಾಮಿ ಸಕಲ ರಾಷ್ಟ್ರಗಳ ಮೇಲೆ ಕೋಪಗೊಂಡಿದ್ದಾರೆ - ಅವುಗಳ ಸೈನ್ಯಗಳ ಮೇಲೆ ರೋಷಗೊಂಡಿದ್ದಾರೆ. ಅವರನ್ನು ಕೊಲೆಗೆ ಈಡುಮಾಡಿ ಸಂಪೂರ್ಣವಾಗಿ ಸಂಹರಿಸಲು ನಿಶ್ಚಯಿಸಿದ್ದಾರೆ.


ಒಂದು ಜನಾಂಗ ಇನ್ನೊಂದು ಜನಾಂಗವನ್ನೂ ಒಂದು ಪಟ್ಟಣದವರು ಇನ್ನೊಂದು ಪಟ್ಟಣದವರನ್ನೂ ಹಾಳುಮಾಡುತ್ತಿದ್ದರು. ದೇವರು ನಾನಾ ತರದ ಕಷ್ಟದಿಂದ ಅವರನ್ನು ತಳಮಳಗೊಳಿಸಿದ್ದರು.


ಇಗೋ, ಹೊರಟಿದೆ ಬಡಿದುಕೊಂಡು ಹೋಗುವ ಗಾಳಿ ಸರ್ವೇಶ್ವರನ ರೋಷವೆಂಬ ಬಿರುಗಾಳಿ ದುರುಳರ ತಲೆಯ ಮೇಲೆ ಬಡಿದೋಡುವ ಸುಂಟರ ಗಾಳಿ!


ಆಗ ಸರ್ವೇಶ್ವರ ತಮ್ಮ ಗಂಭೀರವಾದ ವಾಣಿಯನ್ನು ಕೇಳುವಂತೆ ಮಾಡುವರು. ತೀವ್ರಕೋಪ, ದಹಿಸುವ ಅಗ್ನಿಜ್ವಾಲೆ, ಸಿಡಿಯುವ ಮೋಡ, ಚಂಡಮಾರುತ, ಕಲ್ಮಳೆ - ಇವುಗಳಿಂದ ತಮ್ಮ ಶಿಕ್ಷಾಹಸ್ತವನ್ನು ಪ್ರದರ್ಶಿಸುವರು.


“ಸೂರ್ಯ, ಚಂದ್ರ, ನಕ್ಷತ್ರಗಳಲ್ಲಿ ವಿಚಿತ್ರ ಸೂಚನೆಗಳು ಕಾಣಿಸಿಕೊಳ್ಳುವುವು; ಮೊರೆಯುವ ತೆರೆಗಳ ಹಾಗೂ ಭೋರ್ಗರೆಯುವ ಸಮುದ್ರದ ನಿಮಿತ್ತ ಭೂಮಿಯಲ್ಲಿ ಜನಾಂಗಗಳು ದಿಕ್ಕುತೋಚದೆ ತತ್ತರಿಸಿಹೋಗುವುವು.


ಅದೂ ಅಲ್ಲದೆ ಯೇಸು ಇಂತೆಂದರು: “ಜನಾಂಗಕ್ಕೆ ವಿರುದ್ಧವಾಗಿ ಜನಾಂಗ, ರಾಷ್ಟ್ರಕ್ಕೆ ವಿರುದ್ಧವಾಗಿ ರಾಷ್ಟ್ರ ಯುದ್ಧಕ್ಕಿಳಿಯುವುವು;


ಆದುದರಿಂದ ಸರ್ವೇಶ್ವರ ಇಂತೆನ್ನುತ್ತಾರೆ: “ಸ್ವಲ್ಪತಾಳಿರಿ, ನಾನು ತಪ್ಪನ್ನು ನಿಮಗೆ ತೋರಿಸುವ ದಿನಕ್ಕಾಗಿ ಕಾದಿರಿ. ರಾಷ್ಟ್ರಗಳನ್ನು ಒಂದಾಗಿಸಲು, ರಾಜ್ಯಗಳನ್ನು ಒಂದುಗೂಡಿಸಲು ನಿರ್ಧರಿಸಿದ್ದೇನೆ; ಹೀಗೆ ಅವುಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನು ಸುರಿಸಲು ತೀರ್ಮಾನಿಸಿದ್ದೇನೆ. ಲೋಕವೆಲ್ಲವು ನನ್ನ ಕೋಪಾಗ್ನಿಯಿಂದ ಧ್ವಂಸವಾಗುವುದು.


“ಅವರ ಕೃತ್ಯಗಳೂ ಆಲೋಚನೆಗಳೂ ನನಗೆ ತಿಳಿದಿವೆ. ಸಮಸ್ತ ರಾಷ್ಟ್ರಗಳನ್ನೂ ಸಕಲ ಭಾಷೆಯವರನ್ನೂ ಒಟ್ಟಿಗೆ ಬರಮಾಡುವೆನು. ಅವರು ಬಂದು ನನ್ನ ಮಹಿಮೆಯ ಪ್ರಕಾಶವನ್ನು ಕಾಣುವರು.


ಚೂಪಾಗಿವೆ ಅವರ ಬಾಣಗಳು; ಬಿಗಿದಿವೆ ಬಿಲ್ಲುಗಳು, ಬೆಣಚುಕಲ್ಲಿನಂತಿವೆ ಕುದುರೆಗಳ ಗೊರಸುಗಳು, ಸುತ್ತುತ್ತಿವೆ ಸುಂಟರಗಾಳಿಯಂತವರ ಚಕ್ರಗಳು.


ಮತ್ತೆ ಸರ್ವೇಶ್ವರ ಸ್ವಾಮಿ, “ಇಗೋ, ಉತ್ತರದಿಂದ ಒಂದು ರಾಷ್ಟ್ರ ಬರುತ್ತಿದೆ. ಅದು ಮಹಾ ಬಲಿಷ್ಠ ರಾಷ್ಟ್ರ. ಜಗದ ಕಟ್ಟಕಡೆಯಿಂದ ಹೊರಟುಬರುತ್ತಿದೆ.


ಅವರು ಬಿಲ್ಲನ್ನೂ ಈಟಿಯನ್ನೂ ಹಿಡಿದಿದ್ದಾರೆ. ಅವರು ಕ್ರೂರಿಗಳು, ನಿಷ್ಕರುಣಿಗಳು. ಅವರ ಧ್ವನಿ ಸಮುದ್ರದಂತೆ ಭೋರ್ಗರೆಯುತ್ತಿದೆ. ಕುದುರೆಗಳನ್ನು ಏರಿದ್ದಾರೆ. ಎಲೌ ಸಿಯೋನ್ ನಗರಿಯೇ, ಆ ಶತ್ರುಸೈನ್ಯ ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು