Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 25:38 - ಕನ್ನಡ ಸತ್ಯವೇದವು C.L. Bible (BSI)

38 ಗುಹೆಬಿಟ್ಟು ಬಂದ ಸಿಂಹದಂತೆ ಬಂದಿರುವನಾತ. ಆತನ ಕೋಪಾಗ್ನಿಯ ನಿಮಿತ್ತ ತುಂಡರಿಸುವಾ ಖಡ್ಗದ ಪ್ರಯುಕ್ತ ಅವರ ನಾಡಾಗಿದೆ ಬೆಂಗಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಆತನು ಸಿಂಹದಂತೆ ತನ್ನ ಗವಿಯನ್ನು ಬಿಟ್ಟು ಬಂದಿದ್ದಾನೆ. ಹಿಂಸಿಸುವ ಖಡ್ಗದಿಂದಲೂ ಆತನ ರೋಷಾಗ್ನಿಯಿಂದಲೂ ಅವರ ದೇಶವು ಬೆರಗಿಗೆ ಈಡಾಗಿದೆ” ಎಂದು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಆತನು ಸಿಂಹದಂತೆ ತನ್ನ ಹಕ್ಕೆಯನ್ನು ಬಿಟ್ಟುಬಂದಿದ್ದಾನೆ; ಹಿಂಸಿಸುವ ಖಡ್ಗದಿಂದಲೂ ಆತನ ರೋಷಾಗ್ನಿಯಿಂದಲೂ ಅವರ ದೇಶವು ಬೆರಗಿಗೆ ಈಡಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಯೆಹೋವನು, ತನ್ನ ಗುಹೆಯಿಂದ ಹೊರಬರುತ್ತಿರುವ ಭಯಂಕರವಾದ ಸಿಂಹದಂತಿದ್ದಾನೆ. ಯೆಹೋವನು ಕೋಪಗೊಂಡಿದ್ದಾನೆ. ಯೆಹೋವನ ಕೋಪವು ಆ ಜನರನ್ನು ಪೀಡಿಸುವುದು. ಅವರ ದೇಶವು ಬರಿದಾದ ಮರುಭೂಮಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಅವರು ಸಿಂಹದಂತೆ ತಮ್ಮ ಗವಿಯನ್ನು ತೊರೆದುಬಿಟ್ಟಿದ್ದಾರೆ. ಏಕೆಂದರೆ ಉಪದ್ರವ ಪಡಿಸುವವನ ಉರಿಯ ನಿಮಿತ್ತವೂ, ಅವರ ಕೋಪದ ಉರಿಯ ನಿಮಿತ್ತವೂ ಅವರ ದೇಶವು ಹಾಳಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 25:38
15 ತಿಳಿವುಗಳ ಹೋಲಿಕೆ  

ಗುಹೆಬಿಟ್ಟು ಹೊರಟುಬರುವ ಸಿಂಹದಂತೆ ರಾಷ್ಟ್ರಗಳ ವಿನಾಶಕನೊಬ್ಬನು ಎದ್ದಿದ್ದಾನೆ; ಹೊರಟು ಬರುತ್ತಿದ್ದಾನೆ. ಅವನು ಜುದೇಯ ನಾಡನ್ನು ಹಾಳುಮಾಡುವನು. ಅದರ ಪಟ್ಟಣಗಳು ನಿರ್ಜನ ಪ್ರದೇಶಗಳಾಗುವುವು.


ಎಫ್ರಯಿಮಿಗೆ ನಾನು ಸಿಂಹ; ಯೆಹೂದ್ಯಕುಲಕ್ಕೆ ಪ್ರಾಯದ ಸಿಂಹ; ಅದನ್ನು ಸೀಳಿಬಿಡುವೆನು; ಎಳೆದುಕೊಂಡು ಹೋಗುವೆನು; ಯಾರೂ ಅದನ್ನು ನನ್ನಿಂದ ಬಿಡಿಸಿಕೊಳ್ಳಲಾರರು.


ಆದಕಾರಣ ಅಡವಿಯ ಸಿಂಹ ಅವರನ್ನು ಕೊಲ್ಲುವುದು ಕಾಡಿನ ತೋಳ ಕೊಳ್ಳೆಹೊಡೆಯುವುದು ಚಿರತೆ ಅವರ ಪಟ್ಟಣಗಳಿಗೆ ಹೊಂಚುಹಾಕುವುದು ಅಲ್ಲಿಂದ ಹೊರಬರುವ ಪ್ರತಿಯೊಬ್ಬನನ್ನು ಸೀಳುವುದು. ಅವರ ಅಪರಾಧಗಳೋ ಬಹಳ, ಅವರ ದ್ರೋಹಗಳೋ ಅಪಾರ !


ಆಗ ಸೂತ್ರಧಾರಿಯಾದ ದೂತನು ಮುಂದೆ ಬರುತ್ತಿರಲು, ಇನ್ನೊಬ್ಬ ದೂತನು ಆತನನ್ನು ಎದುರಗೊಂಡು,


ಅವರ ದುಷ್ಕೃತ್ಯಗಳ ನಿಮಿತ್ತವೇ ನಾಡು ಕಂಪಿಸುವುದು; ನಿವಾಸಿಗಳೆಲ್ಲರು ದುಃಖಿಸುವರು. ನಾಡೆಲ್ಲವು ನೈಲ್ ನದಿಯಂತೆ ಉಬ್ಬುವುದು. ಅಲ್ಲೋಲಕಲ್ಲೋಲವಾಗಿ ಈಜಿಪ್ಟಿನ ನದಿಯಂತೆ ಕುಗ್ಗಿ ಕರಗಿಹೋಗುವುದು.


“ಶತ್ರುಗಳ ಕಡೆಗೆ ಸಿಂಹದಂತೆ ಗರ್ಜಿಸುವ ಸ್ವಾಮಿಯನ್ನು ಆ ಜನರು ಹಿಂಬಾಲಿಸುತ್ತಾರೆ. ಆತ ಆರ್ಭಟಿಸಲು ಅವರ ಮಕ್ಕಳು ನಡುನಡುಗುತ್ತಾ ಬರುತ್ತಾರೆ.


ಬಾಬಿಲೋನಿಯರಿಗೆ ನಿತ್ಯ ನೆಲೆಯಾದ ಗೋಮಾಳಕ್ಕೆ ಇಗೋ, ಜೋರ್ಡನ್ ದಟ್ಟಡವಿಯಿಂದ ಸಿಂಹದೋಪಾದಿ ನಾನು ಏರಿಬರುವೆನು. ಕ್ಷಣಮಾತ್ರದಲ್ಲಿ ಆ ಬಾಬಿಲೋನಿಯರನ್ನು ಅಲ್ಲಿಂದ ಓಡಿಸಿಬಿಡುವೆನು. ಅದನ್ನು ಪಾಲಿಸುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನ್ಯಾಯವಿಚಾರಣೆಗೆ ನನ್ನನ್ನು ಎಳೆಯಬಲ್ಲ ವ್ಯಕ್ತಿ ಯಾರು? ಮಂದೆಯನ್ನು ಕಾಯುವ ಯಾವನು ತಾನೆ ನನ್ನೆದುರಿಗೆ ನಿಲ್ಲಬಲ್ಲನು?


“ಎದೋಮ್ಯರಿಗೆ ನಿತ್ಯ ನೆಲೆಯಾದ ಗೋಮಾಳಕ್ಕೆ ಇದೋ ಜೋರ್ಡನ್ ದಟ್ಟಡವಿಯಿಂದ ಸಿಂಹದೋಪಾದಿ ಏರಿಬರುವೆನು. ಕ್ಷಣಮಾತ್ರದಲ್ಲಿ ಅವರನ್ನು ಅಲ್ಲಿಂದ ಓಡಿಸಿಬಿಡುವೆನು. ಅದನ್ನು ಪಾಲಿಸುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನ್ಯಾಯವಿಚಾರಣೆಗೆ ನನ್ನನ್ನು ಎಳೆಯುವಂಥ ವ್ಯಕ್ತಿ ಯಾರು? ಮಂದೆಯನ್ನು ಕಾಯುವ ಯಾವನು ತಾನೆ ನನ್ನೆದುರಿಗೆ ನಿಲ್ಲಬಲ್ಲನು?


ಆತನ ಬಿಡಾರ ಸಾಲೇಮಿನಲಿ I ಆತನ ನಿವಾಸ ಸಿಯೋನಿನಲಿ II


ಜನರು ಗೋದಿಯನ್ನು ಬಿತ್ತಿದರು ಆದರೆ ಮುಳ್ಳುಗಿಡವನ್ನು ಕೊಯ್ದರು ! ಕ್ಷೇಮ ಕೆಡುವಷ್ಟು ಪ್ರಯಾಸಪಟ್ಟರು ಆದರೆ ಯಾವ ಲಾಭವೂ ಗಿಟ್ಟದೆಹೋಯಿತು. ತಮ್ಮ ಬೆಳೆಯ ವಿಷಯವಾಗಿ ಹೇಸಬೇಕಾಯಿತು ನನ್ನ ಕೋಪಾಗ್ನಿಯೆ ಇದಕ್ಕೆ ಕಾರಣವಾಯಿತು.”


“(ಯೆರೆಮೀಯನೇ), ನೀನು ಪ್ರವಾದಿಸುತ್ತಾ ಅವರಿಗೆ ಈ ಮಾತುಗಳನ್ನು ಹೇಳು: ‘ಸರ್ವೇಶ್ವರ ಗರ್ಜಿಸುವನು ಮೇಲಣಲೋಕದಿಂದ ದನಿಗೈವನು ತನ್ನ ಘನ ನಿವಾಸದಿಂದ ಗಟ್ಟಿಯಾಗಿ ಕೂಗುವನು ತನ್ನ ಹುಲ್ಲುಗಾವಲಿನ ಮಂದೆಯ ವಿರುದ್ಧ ಕೂಗಾಡುವನು ದ್ರಾಕ್ಷೆಯ ಹಣ್ಣನ್ನು ತುಳಿಯುವವರಂತೆ ಭೂನಿವಾಸಿಗಳೆಲ್ಲರು ಭಯಭ್ರಾಂತರಾಗುವಂತೆ.


ಬೀಜಬಿತ್ತುವವನಾಗಲಿ, ಸುಗ್ಗಿಯಲ್ಲಿ ಕುಡುಗೋಲು ಹಿಡಿಯುವವನಾಗಲಿ ಆ ಬಾಬಿಲೋನಿನಲ್ಲಿ ಇಲ್ಲದಂತೆ ಮಾಡಿ. ಪ್ರತಿಯೊಬ್ಬ ವಿದೇಶಿಯನು ಹತ್ಯಮಾಡುವ ಆ ಖಡ್ಗದ ಮುಂದೆ ನಿಲ್ಲಲಾಗದೆ ಸ್ವಜನರ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು.


ಬಹುಮಂದಿ ಕುರಿಗಾಹಿಗಳು ಬಂದು ಹಾಳುಮಾಡಿದ್ದಾರೆ ನನ್ನ ದ್ರಾಕ್ಷಾತೋಟವನ್ನು. ತುಳಿದುಹಾಕಿದ್ದಾರೆ ನನ್ನಾ ಸೊತ್ತನ್ನು ಕಾಡನ್ನಾಗಿಸಿದ್ದಾರೆ ಆ ನನ್ನ ಪ್ರಿಯ ಆಸ್ತಿಯನ್ನು.


ಈ ನಾಡೆಲ್ಲ ಹಾಳಾಗಿ ಇದನ್ನು ನೋಡುವವರು ನಿಬ್ಬೆರಗಾಗುವರು. ಇದರ ಜನರು ಎಪ್ಪತ್ತು ವರ್ಷ ಕಾಲ ಬಾಬಿಲೋನಿನ ಅರಸನಿಗೆ ಗುಲಾಮರಾಗಿ ಇರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು