Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 26:15 - ಕನ್ನಡ ಸತ್ಯವೇದವು C.L. Bible (BSI)

15 ಆದರೆ ಒಂದು ವಿಷಯ ನಿಮಗೆ ಚೆನ್ನಾಗಿ ತಿಳಿದಿರಲಿ - ನೀವು ನನ್ನನ್ನು ಕೊಂದುಹಾಕಿದ್ದೇ ಆದರೆ, ನಿರ್ದೋಷಿಯ ರಕ್ತ ಸುರಿಸಿದ ಅಪರಾಧಕ್ಕೆ ನೀವೂ ಈ ನಗರವೂ ಇದರ ನಿವಾಸಿಗಳೂ ಗುರಿಯಾಗುವಿರಿ. ಏಕೆಂದರೆ ಈ ಮಾತುಗಳನ್ನೆಲ್ಲ ನಿಮ್ಮ ಕಿವಿಗೆ ಮುಟ್ಟಿಸುವಂತೆ ನನ್ನನ್ನು ಕಳಿಸಿದವರು ಸರ್ವೇಶ್ವರ ಎಂಬುದು ಸತ್ಯ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದರೆ ನೀವು ನನ್ನನ್ನು ಕೊಂದು ಹಾಕಿದ ಪಕ್ಷಕ್ಕೆ, ನೀವೂ, ಈ ಪಟ್ಟಣವೂ ಮತ್ತು ಇದರ ನಿವಾಸಿಗಳೂ ನಿರ್ದೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ಪಾತ್ರರಾಗುವಿರಿ ಎಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ಮಾತುಗಳನ್ನೆಲ್ಲಾ ನಿಮ್ಮ ಕಿವಿಗೆ ಮುಟ್ಟಿಸುವಂತೆ ಯೆಹೋವನು ನನ್ನನ್ನು ಕಳುಹಿಸಿರುವುದು ಖಂಡಿತ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆದರೆ ನೀವು ನನ್ನನ್ನು ಕೊಂದುಹಾಕಿದ ಪಕ್ಷಕ್ಕೆ ನೀವೂ ಈ ಪಟ್ಟಣವೂ ಇದರ ನಿವಾಸಿಗಳೂ ನಿರ್ದೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ಪಾತ್ರರಾಗುವಿರಿ ಎಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ಮಾತುಗಳನ್ನೆಲ್ಲಾ ನಿಮ್ಮ ಕಿವಿಗೆ ಮುಟ್ಟಿಸುವಂತೆ ಯೆಹೋವನು ನನ್ನನ್ನು ಕಳುಹಿಸಿರುವದು ಖಂಡಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದರೆ ನೀವು ನನ್ನನ್ನು ಕೊಂದರೆ ಒಬ್ಬ ನಿರಪರಾಧಿಯನ್ನು ಕೊಂದದೋಷಕ್ಕೆ ಗುರಿಯಾಗುವಿರೆಂಬುದನ್ನು ಸ್ಪಷ್ಟವಾಗಿ ತಿಳಿದುಕೊಳ್ಳಿರಿ. ನೀವು ಈ ನಗರವನ್ನೂ ಇದರ ಪ್ರತಿಯೊಬ್ಬ ನಿವಾಸಿಯನ್ನೂ ಸಹ ದೋಷಿಗಳನ್ನಾಗಿ ಮಾಡುವಿರಿ. ನಿಜವಾಗಿಯೂ, ಯೆಹೋವನು ನನ್ನನ್ನು ನಿಮ್ಮಲ್ಲಿಗೆ ಕಳಿಸಿದ್ದಾನೆ. ನೀವು ಕೇಳಿದ ಸಂದೇಶವು ನಿಜವಾಗಿಯೂ ಯೆಹೋವನಿಂದ ಬಂದದ್ದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೂ ನೀವು ನನ್ನನ್ನು ಕೊಂದುಹಾಕಿದರೆ, ನಿಮ್ಮ ಮೇಲೆಯೂ, ಈ ಪಟ್ಟಣದ ಮೇಲೆಯೂ, ಅದರ ನಿವಾಸಿಗಳ ಮೇಲೆಯೂ ನಿರ್ದೋಷಿಯ ರಕ್ತವನ್ನು ಬರಮಾಡುತ್ತೀರೆಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ವಾಕ್ಯಗಳನ್ನೆಲ್ಲಾ ನಿಮ್ಮ ಕಿವಿಗಳಲ್ಲಿ ಹೇಳುವ ಹಾಗೆ ಸತ್ಯವಾಗಿ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 26:15
21 ತಿಳಿವುಗಳ ಹೋಲಿಕೆ  

“ನೀವು ಈ ಪ್ರಕಾರ ನಡೆದುಕೊಂಡರೆ ನಿಮ್ಮ ನಾಡು ಅಪವಿತ್ರವಾಗುವುದಿಲ್ಲ. ರಕ್ತಪಾತವು ನಾಡನ್ನು ಅಪವಿತ್ರಗೊಳಿಸುತ್ತದೆ. ಅದಕ್ಕೆ ಕೊಲ್ಲಲ್ಪಟ್ಟವನ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.


ದೇವಜನರ, ಪೂಜ್ಯಪ್ರವಾದಿಗಳ ರಕ್ತಪಾತಕರಿಗೆ ಕುಡಿಯಲು ನೀನಿತ್ತೆ ಆ ರಕ್ತವ ನೇ ಅವರ ಕೃತ್ಯಕ್ಕದುವೇ ತಕ್ಕ ಸಂಭಾವನೆ,” ಎಂದು ಹಾಡುವುದನ್ನು ನಾನು ಕೇಳಿಸಿಕೊಂಡೆ.


ಅನಂತರ ಮೊಣಕಾಲೂರಿ, “ಪ್ರಭೂ, ಈ ಪಾಪವನ್ನು ಇವರ ಮೇಲೆ ಹೊರಿಸಬೇಡಿ,” ಎಂದು ಧ್ವನಿಯೆತ್ತಿ ಹೇಳುತ್ತಾ ಪ್ರಾಣಬಿಟ್ಟನು. ಸೌಲನು ಸ್ತೇಫನನ ಕೊಲೆಗೆ ಸಮ್ಮತಿಸಿದ್ದನು.


ಗುರುದ್ರೋಹಿಯಾದ ಯೂದನು ಆಗ, “ಗುರುವೇ, ಅವನು ನಾನಲ್ಲ ತಾನೇ?” ಎಂದನು. ಅದಕ್ಕೆ ಯೇಸು, “ಅದು ನಿನ್ನ ಬಾಯಿಂದಲೇ ಬಂದಿದೆ,” ಎಂದರು.


ಸರ್ವೇಶ್ವರನ ಸಂದೇಶ ಇದು: ನ್ಯಾಯನೀತಿಯನ್ನು ಆಚರಿಸಿರಿ. ವಂಚಿತನಾದವನನ್ನು ದೋಚಿಕೊಳ್ಳುವವನ ಕೈಯಿಂದ ಬಿಡಿಸಿರಿ. ಪರದೇಶೀಯರಿಗೆ, ಅನಾಥರಿಗೆ, ವಿಧವೆಯರಿಗೆ ಅನ್ಯಾಯಮಾಡಬೇಡಿ, ಅವರನ್ನು ಹಿಂಸಿಸಬೇಡಿ. ನಿರಪರಾಧಿಗಳ ರಕ್ತವನ್ನು ಈ ಸ್ಥಳದಲ್ಲಿ ಸುರಿಸಬೇಡಿ.


ಅನ್ಯರನ್ನಾಗಲಿ, ಅನಾಥರನ್ನಾಗಲಿ, ವಿಧವೆಯರನ್ನೇ ಆಗಲಿ ಶೋಷಣೆಗೆ ಗುರಿಪಡಿಸಬೇಡಿ! ಇಲ್ಲೆಲ್ಲೂ ನಿರ್ದೋಷಿಗಳ ರಕ್ತವನ್ನು ಸುರಿಸಬೇಡಿ. ನಿಮಗೆ ಹಾನಿಕರವಾದ ಅನ್ಯದೇವತಾ ಭಕ್ತಿಯನ್ನು ಬಿಟ್ಟುಬಿಡಿ.


ಯೇಸುವನ್ನು ಉಪಾಯದಿಂದ ಹಿಡಿದು ಕೊಲ್ಲಿಸುವುದಕ್ಕೆ ಸಮಾಲೋಚಿಸಿಕೊಂಡರು.


ಆದರೆ ನಿನ್ನ ದೃಷ್ಟಿ, ನಿನ್ನ ಮನಸ್ಸು ನೆಲೆಗೊಂಡಿವೆ ದುರ್ಲಾಭದಲ್ಲಿ, ನಿರ್ದೋಷಿಯ ರಕ್ತ ಸುರಿಸುವುದರಲ್ಲಿ ದಬ್ಬಾಳಿಕೆಯಲ್ಲಿ, ಹಿಂಸಾಚಾರಗಳಲ್ಲಿ.”


ಇದಲ್ಲದೆ, ನಿರ್ದೋಷಿಗಳಾದ ದೀನದಲಿತರ ಪ್ರಾಣರಕ್ತ ನಿಮ್ಮ ಬಟ್ಟೆಗೆ ಅಂಟಿಕೊಂಡಿದೆ! ‘ಇವರು ಕನ್ನ ಕೊರೆಯುವುದನ್ನು ಕಂಡೆವು’ ಎಂದು ನೀವು ನೆವ ಹೇಳುವಂತಿಲ್ಲ. ನಿಮ್ಮ ಈ ಎಲ್ಲ ದುರಭ್ಯಾಸಗಳ ನಿಮಿತ್ತ ದಂಡಿಸುವೆನು.


ನಾನು ನಿಮ್ಮನ್ನು ದಂಡಿಸಿದ್ದು ವ್ಯರ್ಥವಾಯಿತು, ನೀವು ತಿದ್ದುಕೊಳ್ಳಲಿಲ್ಲ. ಸಂಹರಿಸುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ಕತ್ತಿಗೆ ತುತ್ತಾಗಿಸಿದ್ದೀರಿ.


ಅವುಗಳಿಗಾಗಿ ಯೆಹೂದ್ಯರನ್ನು ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದುದರಿಂದ ಸರ್ವೇಶ್ವರನ ಅಪ್ಪಣೆಯ ಪ್ರಕಾರ ಈ ಶಿಕ್ಷೆ ಅವರಿಗೆ ವಿಧಿಸಲಾಯಿತು.


ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡಿನಲ್ಲಿ ನಿರಪರಾಧಿಗೆ ಮರಣ ಶಿಕ್ಷೆಯಾಗಬಾರದು; ಅಂಥವನಿಗೆ ಮರಣಶಿಕ್ಷೆ ಆದರೆ ಆ ರಕ್ತದೋಷ ನಿಮ್ಮದಾಗಿಯೇ ಇರುವುದು.


ಅಂತೆಯೇ ರೂಬೇನನು, “ಆ ಹುಡುಗನಿಗೆ ಯಾವ ಕೇಡೂ ಮಾಡಬೇಡಿ’ ಎಂದು ನಾನು ಹೇಳಲಿಲ್ಲವೆ? ನೀವು ಕೇಳದೆಹೋದಿರಿ. ಅವನ ರಕ್ತ ಈಗ ನಮ್ಮಿಂದ ಪ್ರಾಯಶ್ಚಿತ್ತ ಕೇಳುತ್ತಿದೆ,” ಎಂದ.


ಆಗ ಸರ್ವೇಶ್ವರ, “ನೀನು ಎಂಥ ಕೃತ್ಯ ಎಸಗಿದೆ? ಪ್ರತೀಕಾರಕ್ಕಾಗಿ ನೆಲದಿಂದ ನಿನ್ನ ತಮ್ಮನ ರಕ್ತ ಕೂಗಿ ನನಗೆ ಮೊರೆಯಿಡುತ್ತಿದೆ, ಕೇಳು.


ಸರ್ವೇಶ್ವರ ಹಗೆಮಾಡುವಂಥಹವು ಆರು: ಆತ ಖಂಡನೆ ಮಾಡುವಂಥಹವು ಏಳು: ಅಹಂಕಾರ ದೃಷ್ಟಿ, ಕಪಟವಾಡುವ ನಾಲಿಗೆ, ನಿರಪರಾಧಿಯನ್ನು ಕೊಲೆಮಾಡುವ ಕೈ, ದುರಾಲೋಚನೆಯನ್ನು ಕಲ್ಪಿಸುವ ಹೃದಯ, ಕೇಡುಮಾಡಲು ತವಕಪಡುವ ಕಾಲು, ಅಸತ್ಯವನ್ನು ಉಸುರುವ ಸುಳ್ಳುಸಾಕ್ಷಿ, ಸೋದರರಲ್ಲಿ ಜಗಳ ಹುಟ್ಟಿಸುವ ವ್ಯಕ್ತಿ.


ಆಗ ಯೆರೆಮೀಯನು, “ನೀವು ಕೇಳಿದ ಮಾತುಗಳನ್ನೆಲ್ಲ, ಅಂದರೆ ಈ ದೇವಾಲಯಕ್ಕೂ ನಗರಕ್ಕೂ ವಿರುದ್ಧವಾದ ಮಾತುಗಳನ್ನು ನುಡಿಯಲು ನನ್ನನ್ನು ಕಳಿಸಿದವರು ಸರ್ವೇಶ್ವರನೇ.


ಜೆಕರ್ಯನ ತಂದೆ ಯೆಹೋಯಾದನಿಂದ ತನಗಾದ ಉಪಕಾರವನ್ನು ನೆನಪುಮಾಡಿಕೊಳ್ಳದೆ ಈ ಯೆಹೋವಾಷನು ಅವನ ಮಗನನ್ನು ಕೊಲ್ಲಿಸಿದನು. ಜೆಕರೀಯನು ಸಾಯುವಾಗ, “ಸರ್ವೇಶ್ವರಸ್ವಾಮಿಯೇ ಇದನ್ನು ನೋಡಿ ತಕ್ಕ ಶಾಸ್ತಿಮಾಡಲಿ,” ಎಂದನು.


ಸರ್ವೇಶ್ವರ ಸ್ವಾಮಿ ಯೆರೆಮೀಯನಿಗೆ ಮತ್ತೊಮ್ಮೆ ಈ ಸಂದೇಶವನ್ನು ದಯಪಾಲಿಸಿದರು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು