Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 27:18 - ಕನ್ನಡ ಸತ್ಯವೇದವು C.L. Bible (BSI)

18 ಅವರು ನಿಜವಾದ ಪ್ರವಾದಿಗಳಾಗಿದ್ದರೆ, ಸರ್ವೇಶ್ವರನ ವಾಕ್ಯ ಅವರಲ್ಲಿ ನೆಲೆಸಿದ್ದರೆ, ದೇವಾಲಯದಲ್ಲೂ ಜುದೇಯದ ಅರಸನ ಮನೆಯಲ್ಲೂ ಜೆರುಸಲೇಮಿನಲ್ಲೂ ಇನ್ನು ಉಳಿದಿರುವ ಉಪಕರಣಗಳು ಬಾಬಿಲೋನಿಗೆ ಹೋಗದಂತೆ ಸರ್ವಶಕ್ತ ಸರ್ವೇಶ್ವರನಿಗೆ ವಿಜ್ಞಾಪನೆಮಾಡಿ ಬೇಡಿಕೊಳ್ಳಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಈ ಪಟ್ಟಣವು ಏಕೆ ಹಾಳಾಗಬೇಕು? ಅವರು ಪ್ರವಾದಿಗಳಾಗಿದ್ದು ಯೆಹೋವನ ವಾಕ್ಯಕ್ಕೆ ನೆಲೆಯಾಗಿದ್ದರೆ, ಈಗ ಸೇನಾಧೀಶ್ವರನಾದ ಯೆಹೋವನಿಗೆ ವಿಜ್ಞಾಪನೆ ಮಾಡಿ ಯೆಹೋವನ ಆಲಯದಲ್ಲಿಯೂ ಯೆಹೂದದ ಅರಸನ ಮನೆಯಲ್ಲಿಯೂ ಯೆರೂಸಲೇಮಿನಲ್ಲಿಯೂ ಉಳಿದಿರುವ ಉಪಕರಣಗಳು ಬಾಬಿಲೋನಿಗೆ ಹೋಗದಂತೆ ಬೇಡಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಈ ಪಟ್ಟಣವು ಏಕೆ ಹಾಳಾಗಬೇಕು? ಅವರು ಪ್ರವಾದಿಗಳಾಗಿದ್ದು ಯೆಹೋವನ ವಾಕ್ಯಕ್ಕೆ ನೆಲೆಯಾಗಿದ್ದರೆ ಈಗ ಸೇನಾಧೀಶ್ವರನಾದ ಯೆಹೋವನಿಗೆ ವಿಜ್ಞಾಪನೆ ಮಾಡಿ ಯೆಹೋವನ ಆಲಯದಲ್ಲಿಯೂ ಯೆಹೂದದ ಅರಸನ ಮನೆಯಲ್ಲಿಯೂ ಯೆರೂಸಲೇವಿುನಲ್ಲಿಯೂ ಉಳಿದಿರುವ ಉಪಕರಣಗಳು ಬಾಬೆಲಿಗೆ ಹೋಗದಂತೆ ಬೇಡಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆ ಜನರು ಯೆಹೋವನ ಸಂದೇಶವನ್ನು ತಂದ ಪ್ರವಾದಿಗಳಾಗಿದ್ದರೆ, ಅವರು ಪ್ರಾರ್ಥನೆ ಸಲ್ಲಿಸಲಿ. ಇನ್ನೂ ಯೆಹೋವನ ಆಲಯದಲ್ಲಿರುವ ವಸ್ತುಗಳ ಬಗ್ಗೆ ಅವರು ಪ್ರಾರ್ಥನೆ ಸಲ್ಲಿಸಲಿ. ಇನ್ನೂ ರಾಜನ ಅರಮನೆಯಲ್ಲಿರುವ ವಸ್ತುಗಳ ಬಗ್ಗೆ ಅವರು ಪ್ರಾರ್ಥನೆ ಸಲ್ಲಿಸಲಿ. ಇನ್ನೂ ಜೆರುಸಲೇಮಿನಲ್ಲಿರುವ ಪದಾರ್ಥಗಳ ಬಗ್ಗೆ ಅವರು ಪ್ರಾರ್ಥನೆ ಸಲ್ಲಿಸಲಿ. ಆ ವಸ್ತುಗಳನ್ನೆಲ್ಲ ಬಾಬಿಲೋನಿಗೆ ತೆಗೆದುಕೊಂಡು ಹೋಗಬಾರದೆಂದು ಅವರು ಪ್ರಾರ್ಥನೆ ಸಲ್ಲಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವರು ನಿಜವಾದ ಪ್ರವಾದಿಗಳಾಗಿದ್ದರೆ, ಯೆಹೋವ ದೇವರ ವಾಕ್ಯ ಅವರಲ್ಲಿ ನೆಲಸಿದ್ದರೆ, ದೇವಾಲಯದಲ್ಲೂ, ಯೆಹೂದದ ಅರಸನ ಅರಮನೆಯಲ್ಲೂ, ಯೆರೂಸಲೇಮಿನಲ್ಲೂ, ಇನ್ನು ಉಳಿದಿರುವ ಉಪಕರಣಗಳು ಬಾಬಿಲೋನಿಗೆ ಹೋಗದಂತೆ ಸೇನಾಧೀಶ್ವರ ಯೆಹೋವ ದೇವರಿಗೆ ವಿಜ್ಞಾಪನೆಮಾಡಿ ಬೇಡಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 27:18
18 ತಿಳಿವುಗಳ ಹೋಲಿಕೆ  

ಅವರು ಸಮುವೇಲನಿಗೆ, “ನಮ್ಮ ದೇವರಾದ ಸರ್ವೇಶ್ವರ ನಮ್ಮನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವ ಹಾಗೆ ನೀವು ನಮಗೋಸ್ಕರ ಪ್ರಾರ್ಥನೆಮಾಡಿ, ಸುಮ್ಮನಿರಬೇಡಿ,” ಎಂದರು.


ಮಾಡಿದ ಮೇಲಿಗೆ ಕೇಡಿನ ಪ್ರತಿಫಲವೆ? ನನ್ನ ಪ್ರಾಣ ಹಿಡಿಯಲು ಗುಂಡಿಯನ್ನು ತೋಡಿದ್ದಾರೆ. ಅವರ ಮೇಲೆ ನಿಮಗಿದ್ದ ಕೋಪಾವೇಶವನ್ನು ಶಮನಗೊಳಿಸಲು ನಿಮ್ಮ ಮುಂದೆ ನಿಂತು ನಾನು ವಿನಂತಿಸಿದ್ದನ್ನು ನೆನಪಿಗೆ ತಂದುಕೊಳ್ಳಿ.


ನೀವು ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ. ಅನಂತರ ನಾನು ಸರ್ವೇಶ್ವರನ ಹೆಸರು ಹೇಳಿ ಪ್ರಾರ್ಥಿಸುವೆನು. ಅವರಿಬ್ಬರಲ್ಲಿ ಯಾರು ಆಲಿಸಿ ಬೆಂಕಿಯನ್ನು ಕಳುಹಿಸುವನೋ ಅವನೇ ದೇವರೆಂದು ನಿಶ್ಚಯಿಸೋಣ,” ಎಂದನು. ಜನರೆಲ್ಲರು, “ಸರಿ, ನೀನು ಹೇಳಿದಂತೆಯೇ ಆಗಲಿ,” ಎಂದು ಉತ್ತರಕೊಟ್ಟರು.


ನಾನಾದರೋ ನಿಮ್ಮ ಪರವಾಗಿ ಸರ್ವೇಶ್ವರನನ್ನು ಪ್ರಾರ್ಥಿಸುತ್ತೇನೆ; ಅವರ ನೀತಿಯುತ ಉತ್ತಮ ಮಾರ್ಗವನ್ನು ನಿಮಗೆ ತೋರಿಸಿಕೊಡುವುದನ್ನು ಬಿಡುವುದಿಲ್ಲ; ಬಿಟ್ಟರೆ ದೇವರ ದೃಷ್ಟಿಯಲ್ಲಿ ನಾನೂ ಪಾಪಿಯಾಗುತ್ತೇನೆ.


ಸಮುವೇಲನನ್ನು, “ನಮಗೊಬ್ಬ ಅರಸನು ಬೇಕೆಂದು ನಾವು ಬೇಡಿಕೊಂಡದ್ದರಿಂದ ನಮ್ಮ ಪಾಪಗಳಿಗೆ ಮತ್ತೊಂದು ಪಾಪ ಕೂಡಿತು; ಆದುದರಿಂದ ನಿಮ್ಮ ಸೇವಕರಾದ ನಾವು ಸಾಯದಂತೆ ನಿಮ್ಮ ದೇವರಾದ ಸರ್ವೇಶ್ವರನನ್ನು ಬೇಡಿಕೊಳ್ಳಿ,” ಎಂದು ಸಮುವೇಲನನ್ನು ವಿಜ್ಞಾಪಿಸಿದರು.


ಆದುದರಿಂದ ಯಾಜಕರೇ, ದೇವರ ದಯೆ ನಿಮಗೆ ದೊರಕುವಂತೆ ಅವರನ್ನು ಒಲಿಸಿಕೊಳ್ಳಿರಿ. ಇಂಥ ಕಾಣಿಕೆ ನಿಮ್ಮ ಕೈಯಲ್ಲಿದ್ದರೆ ಯಾರಿಗಾದರು ದೇವರು ನಿಮ್ಮ ಕೋರಿಕೆಯನ್ನು ಈಡೇರಿಸುವುದುಂಟೋ? ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ:


ನಾನು ದೇಶವನ್ನು ಹಾಳುಮಾಡದಂತೆ ನನ್ನೆದುರಿಗೆ ದೇಶ ರಕ್ಷಣೆಗಾಗಿ, ಪೌಳಿಯ ಒಡಕಿನಲ್ಲಿ ನಿಲ್ಲುವುದಕ್ಕೂ ಗೋಡೆಯನ್ನು ಗಟ್ಟಿಮಾಡುವುದಕ್ಕೂ ತಕ್ಕವನನ್ನು ನಾನು ಹುಡುಕಿದರೂ ಯಾರೂ ಸಿಕ್ಕಲಿಲ್ಲ.


ನೋಹ, ದಾನಿಯೇಲ, ಯೋಬ, ಎಂಬೀ ಮೂವರು ವ್ಯಕ್ತಿಗಳು ಆ ನಾಡಿನಲ್ಲಿದ್ದರೂ ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರು; ಇದು ಸರ್ವೇಶ್ವರನಾದ ದೇವರ ನುಡಿ.


“ದಯಮಾಡಿ ನಮ್ಮ ಬಿನ್ನಹವನ್ನು ಆಲಿಸಬೇಕು.


ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದರು : “ಮೋಶೆ ಮತ್ತು ಸಮುವೇಲನು ನನ್ನ ಮುಂದೆ ನಿಂತು ವಿಜ್ಞಾಪಿಸಿದರೂ ನಾನು ಈ ಜನರ ಬಗ್ಗೆ ನನ್ನ ಮನಸ್ಸನ್ನು ಬದಲಾಯಿಸೆನು. ಇವರನ್ನು ನನ್ನ ಸಮ್ಮುಖದಿಂದ ತಳ್ಳಿಬಿಡು; ತೊಲಗಿಹೋಗಲಿ!


“ಯೆರೆಮೀಯನೇ, ನೀನಂತು ಈ ಜನರಿಗಾಗಿ ಬೇಡಿಕೊಳ್ಳಬೇಡ. ಇವರ ಪರವಾಗಿ ಮೊರೆ ಇಡಬೇಡ. ಪ್ರಾರ್ಥಿಸಲೂ ಬೇಡ, ನನ್ನ ಬಳಿ ವಿಜ್ಞಾಪಿಸಲೂ ಬೇಡ. ನಾನು ಅದನ್ನು ಕೇಳಲಾರೆ.


ಈ ಕಾರಣ ಅರಸ ಹಿಜ್ಕೀಯನು ಹಾಗು ಆಮೋಚನ ಮಗ ಯೆಶಾಯನೆಂಬ ಪ್ರವಾದಿಯು ಪರಲೋಕಕ್ಕೆ ಮೊರೆಯಿಟ್ಟು ಪ್ರಾರ್ಥಿಸಿದರು. ಸರ್ವೇಶ್ವರಸ್ವಾಮಿ ದೂತನನ್ನು ಕಳುಹಿಸಿ


ಅಂತೆಯೇ ತರಲಾದ ಹೋರಿಗಳಲ್ಲಿ ಒಂದನ್ನು ಅವರು ತೆಗೆದುಕೊಂಡು ಸಿದ್ಧಪಡಿಸಿದರು. ತಮ್ಮ ದೇವರಾದ ಬಾಳನ ಹೆಸರು ಹೇಳಿ, “ಬಾಳನೇ, ನಮಗೆ ಕಿವಿಗೊಡು,” ಎಂದು ಹೊತ್ತಾರೆಯಿಂದ ಮಧ್ಯಾಹ್ನದವರೆಗೆ ಕೂಗಿದರು. ಆದರೆ ಯಾವ ವಾಣಿಯೂ ಕೇಳಿಸಲಿಲ್ಲ; ಅವರು ಪೀಠದ ಸುತ್ತಲೂ ಕುಣಿದಾಡಿದರು. ಆದರೂ ಯಾರೂ ಉತ್ತರಕೊಡಲಿಲ್ಲ.


ತರುವಾಯ ಅಬ್ರಹಾಮನು ಅಬೀಮೆಲೆಕನಿಗೋಸ್ಕರ ದೇವರಲ್ಲಿ ಪ್ರಾರ್ಥನೆ ಮಾಡಿದನು. ದೇವರು ಅಬೀಮೆಲೆಕನನ್ನು, ಅವನ ಪತ್ನಿಯನ್ನು ಹಾಗೂ ದಾಸಿಯರನ್ನು ಗುಣಪಡಿಸಿದನು; ಅವರಿಗೆ ಮಕ್ಕಳಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು