Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 27:6 - ಕನ್ನಡ ಸತ್ಯವೇದವು C.L. Bible (BSI)

6 ಈಗ ಈ ನಾಡುಗಳನ್ನೆಲ್ಲ ಬಾಬಿಲೋನಿಯದ ಅರಸ ಹಾಗೂ ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈವಶಮಾಡಿದ್ದೇನೆ. ಅವನ ಸೇವೆಗಾಗಿ ಕಾಡುಮೃಗಗಳನ್ನೂ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಈಗ ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನ ಕೈವಶಮಾಡಿದ್ದೇನೆ; ಅವನ ಸೇವೆಗಾಗಿ ಭೂಜಂತುಗಳನ್ನೂ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಈ ನನ್ನ ಸೃಷ್ಟಿಯನ್ನು ನನಗೆ ಸರಿತೋಚಿದವನಿಗೆ ಕೊಡಬಲ್ಲೆನು; ಈಗ ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನ ಕೈವಶ ಮಾಡಿದ್ದೇನೆ; ಅವನ ಸೇವೆಗಾಗಿ ಭೂಜಂತುಗಳನ್ನೂ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಈಗ ನಾನು ನಿಮ್ಮೆಲ್ಲ ದೇಶಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸಿದ್ದೇನೆ. ಅವನು ನನ್ನ ಸೇವಕನಾಗಿದ್ದಾನೆ. ಕಾಡುಪ್ರಾಣಿಗಳು ಸಹ ಅವನ ಆಜ್ಞೆಯನ್ನು ಪಾಲಿಸುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಈಗ ಈ ನಾಡುಗಳನ್ನೆಲ್ಲಾ ಬಾಬಿಲೋನಿಯದ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈವಶ ಮಾಡಿದ್ದೇನೆ. ಅವನ ಸೇವೆಗಾಗಿ ಕಾಡುಮೃಗಗಳನ್ನೂ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 27:6
19 ತಿಳಿವುಗಳ ಹೋಲಿಕೆ  

ಏಕೆಂದರೆ ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರನ ಮಾತಿವು: ಈ ಎಲ್ಲ ರಾಷ್ಟ್ರಗಳು ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನಿಗೆ ಸೇವೆಮಾಡಲೆಂದು ನಾನು ಅವುಗಳ ಹೆಗಲಿಗೆ ಕಬ್ಬಿಣದ ನೊಗವನ್ನು ಹೇರಿದ್ದೇನೆ. ಅವು ಅವನಿಗೆ ಸೇವೆ ಸಲ್ಲಿಸೇತೀರಬೇಕು; ಕಾಡುಮೃಗಗಳು ಕೂಡ ಸೇವೆಸಲ್ಲಿಸುವಂತೆ ಅವನಿಗೆ ಅವುಗಳನ್ನು ಒಪ್ಪಿಸಿದ್ದೇನೆ, ಎಂದು ಹೇಳು.”


“ನೀವು ನನ್ನ ಮಾತನ್ನು ಕೇಳದ ಕಾರಣ ನಾನು ಉತ್ತರಭಾಗದ ರಾಷ್ಟ್ರಗಳನ್ನೆಲ್ಲ ಕರೆಯಿಸುವೆನು. ಬಾಬಿಲೋನಿನ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನನ್ನೂ ಬರಮಾಡುವೆನು. ಅವರು ಈ ನಾಡಿನ, ಇದರ ನಿವಾಸಿಗಳ, ಮತ್ತು ಸುತ್ತಮುತ್ತಲಿನ ನಾಡುಗಳ ಮೇಲೂ ಬೀಳುವರು. ಹೀಗೆ ಇವುಗಳನ್ನು ತೀರ ಹಾಳುಮಾಡುವೆನು. ನಿರಂತರ ಪರಿಹಾಸ್ಯಕ್ಕೂ ಪರಿವಿನಾಶಕ್ಕೂ ಇವನ್ನು ಗುರಿಪಡಿಸುವೆನು.


‘ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಹೇಳುವುದನ್ನು ಕೇಳಿ: ನಾನು ಬಾಬಿಲೋನಿನ ಅರಸನು ಹಾಗು ನನ್ನ ಸೇವಕನು ಆದ ನೆಬೂಕದ್ನೆಚ್ಚರನನ್ನು ನಾನು ಕರೆಯಿಸುವೆನು. ನಾನು ಮರೆಮಾಡಿಟ್ಟಿರುವ ಈ ಕಲ್ಲುಗಳ ಮೇಲೆಯೆ ಅವನು ತನ್ನ ಸಿಂಹಾಸನವನ್ನು ಹಾಕಿಸುವನು. ಈ ಕಲ್ಲುಗಳ ಮೇಲೆಯೆ ತನ್ನ ರತ್ನಗಂಬಳಿಯನ್ನು ಹಾಸಿಸುವನು.


ಕೋರೆಷನಿಗೆ ಇಂತೆನ್ನುವೆನು ನಾನು : ನನ್ನ ಮಂದೆ ಕಾಯುವವನು ನೀನು ನನ್ನ ಇಷ್ಟಾರ್ಥವನು ನೆರವೇರಿಸುವವನು ನೀನು; 'ಪುನಃ ನಿರ್ಮಾಣವಾಗುವೆ' ಎನ್ನುವೆ ಜೆರುಸಲೇಮಿಗೆ, ನೀನು; ‘ಪುನಃ ನಿನಗೆ ಅಸ್ತಿವಾರ ಹಾಕಿಸುವೆ’ ಎನ್ನುವೆ ಆ ದೇವಾಲಯಕೆ ನೀನು.”


ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗ ಹಾಗೂ ಜುದೇಯದ ಅರಸ ಆದ ಯೆಕೊನ್ಯನನ್ನು, ಜುದೇಯದ ಪ್ರಧಾನಿಗಳನ್ನು, ಶಿಲ್ಪಿಗಳನ್ನು ಮತ್ತು ಕಮ್ಮಾರರನ್ನು ಜೆರುಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದನು. ಇದಾದ ಬಳಿಕ ಸರ್ವೇಶ್ವರ ಸ್ವಾಮಿ ತಮ್ಮ ಆಲಯದ ಮುಂದೆ ಇಟ್ಟಿದ್ದ, ಅಂಜೂರದ ಹಣ್ಣು ತುಂಬಿದ್ದ, ಎರಡು ಬುಟ್ಟಿಗಳನ್ನು ನನಗೆ ಕಾಣುವಂತೆ ಮಾಡಿದರು.


ಬಳಿಕ ನಾನು ಜುದೇಯದ ಅರಸ ಚಿದ್ಕೀಯನನ್ನೂ ಅವನ ಸೇವಕರನ್ನೂ ಹಾಗೂ ವ್ಯಾಧಿ, ಖಡ್ಗ, ಕ್ಷಾಮಗಳಿಂದ ಅಳಿಯದೆ ಉಳಿದ ಪ್ರಜೆಗಳನ್ನೂ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಕೈಗೂ ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಬಿಟ್ಟುಬಿಡುವೆನು. ಅವನು ಅವರನ್ನು ಕತ್ತಿಯಿಂದ ಕೊಂದುಹಾಕುವನು. ಅವರನ್ನು ಕರುಣಿಸನು, ಕನಿಕರಿಸನು, ಉಳಿಯಗೊಳಿಸನು.”


ನಿನ್ನ ಪ್ರಾಣ ಹುಡುಕುತ್ತಿರುವವರ ಕೈಗೆ, ನಿನ್ನಲ್ಲಿ ಭಯಹುಟ್ಟಿಸುವವರ ಕೈಗೆ, ಅಂದರೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಮತ್ತು ಬಾಬಿಲೋನಿನ ಜನರ ಕೈಗೆ ನಿನ್ನನ್ನು ಕೊಟ್ಟುಬಿಡುವೆನು.


ಸರ್ವೇಶ್ವರ ಹೀಗೆನ್ನುತ್ತಾರೆ: “ಹಾಜೋರಿನವರೇ, ಓಡಿಹೋಗಿ. ದೂರ ಹೋಗಿ, ಒಳಪ್ರಾಂತ್ಯಗಳಲ್ಲಿ ಅವಿತುಕೊಳ್ಳಿ. ಏಕೆಂದರೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ನಿಮಗೆ ಕೇಡನ್ನು ಮಾಡಬೇಕೆಂದಿದ್ದಾನೆ. ನಿಮ್ಮ ವಿನಾಶಕ್ಕೆ ಉಪಾಯವನ್ನು ಹೂಡಿದ್ದಾನೆ. ‘ಬಾಬಿಲೋನಿನವರೇ, ಏಳೀ! ನೆಮ್ಮದಿಯಿಂದ, ನಿರ್ಭಯವಾಗಿ ಪ್ರತ್ಯೇಕ ವಾಸಿಸುವ ಆ ರಾಷ್ಟ್ರದ ಮೇಲೆ ದಾಳಿಮಾಡಿ.


ಹಾಳುಬಿದ್ದಿರುವ ದೇಶಗಳೊಳಗೆ ಈಜಿಪ್ಟ್ ದೇಶವನ್ನೂ ಹಾಳು ಬೀಳಿಸುವೆನು; ಪಾಳುಬಿದ್ದಿರುವ ಪಟ್ಟಣಗಳೊಳಗೆ ಅದರ ಪಟ್ಟಣಗಳನ್ನೂ ಪಾಳುಬೀಳಿಸುವೆನು; ನಲವತ್ತು ವರ್ಷ ಹಾಗೆಯೇ ಇರುವುವು; ನಾನು ಈಜಿಪ್ಟಿನವರನ್ನು ಜನಾಂಗಗಳಲ್ಲಿ ಚದರಿಸ, ದೇಶವಿದೇಶಗಳಿಗೆ ತೂರಿಬಿಡುವೆನು.


ಅದರ ಎಲೆಗಳು ಚೆಲುವಾಗಿದ್ದವು. ಅದು ಹಣ್ಣುಗಳಿಂದ ತುಂಬಿತ್ತು. ಅದರಿಂದ ಎಲ್ಲಕ್ಕೂ ಆಹಾರ, ವನ್ಯಮೃಗಗಳಿಗೆ ಅದರ ನೆರಳಿನಲ್ಲಿ ಆಶ್ರಯ, ಆಕಾಶದ ಪಕ್ಷಿಗಳಿಗೆ ಅದರ ಕೊಂಬೆಗಳಲ್ಲಿ ನೆಲೆ, ಎಲ್ಲಾ ಪ್ರಾಣಿಗಳಿಗೂ ಅದರಿಂದ ಪೋಷಣೆ ದೊರಕುತ್ತಿತ್ತು.


“ರಾಜರೇ, ನೀವು ಬೆಳೆದು ಬಲಗೊಂಡಿದ್ದೀರಿ. ನಿಮ್ಮ ಕೀರ್ತಿ ವೃದ್ಧಿಯಾಗಿ ಗಗನಕ್ಕೇರಿದೆ. ನಿಮ್ಮ ಆಳ್ವಿಕೆ ಲೋಕದ ಕಟ್ಟಕಡೆಗೂ ವ್ಯಾಪಿಸಿದೆ.


ಅದು ಮಾತ್ರವಲ್ಲ, ಅವನೊಡನೆ ಪ್ರೀತಿಯಿಂದ ಮಾತಾಡಿ, ತನ್ನ ಸಂಗಡ ಬಾಬಿಲೋನಿನಲ್ಲಿದ್ದ ಎಲ್ಲ ಅರಸುಗಳಲ್ಲಿ ಅವನಿಗೇ ಉನ್ನತ ಸ್ಥಾನವನ್ನು ಕೊಟ್ಟನು.


"ಪರ್ಷಿಯದ ರಾಜ ಸೈರಸ್ ಎಂಬ ನನ್ನ ಮಾತಿಗೆ ಕಿವಿಗೊಡಿ; ಪರಲೋಕ ದೇವರಾದ ಸರ್ವೇಶ್ವರ ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನು ಒಪ್ಪಿಸಿದ್ದಾರೆ; ತಮಗಾಗಿ ಜುದೇಯ ನಾಡಿನ ಜೆರುಸಲೇಮಿನಲ್ಲಿ ಆಲಯವನ್ನು ಕಟ್ಟಬೇಕೆಂದು ಆಜ್ಞಾಪಿಸಿದ್ದಾರೆ; ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತಾರೋ ಅವರು ಸ್ವಂತನಾಡಿಗೆ ಹೋಗಬಹುದು; ಅವರ ದೇವರಾದ ಸರ್ವೇಶ್ವರ ಅವರೊಂದಿಗೆ ಇರುತ್ತಾರೆ!” ಎಂದು ಪ್ರಕಟಿಸಿದನು.


ನಾನು ಬಾಬಿಲೋನಿನ ಅರಸನ ಕೈಗಳನ್ನು ಬಲಪಡಿಸಿ, ನನ್ನ ಖಡ್ಗವನ್ನು ಅವನ ಕೈಗೆ ಕೊಟ್ಟು, ಫರೋಹನ ಕೈಗಳನ್ನು ಮುರಿಸುವಾಗ ಗಾಯದಿಂದ ಪ್ರಾಣಸಂಕಟ ಪಡುವವನಂತೆ ಫರೋಹನು ಆ ಅರಸನ ಮುಂದೆ ನರಳಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು