Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 28:17 - ಕನ್ನಡ ಸತ್ಯವೇದವು C.L. Bible (BSI)

17 ಅಂತೆಯೇ ಹನನ್ಯನು ಅದೇ ವರ್ಷದ ಏಳನೆಯ ತಿಂಗಳಲ್ಲಿ ಸತ್ತುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅದರಂತೆ ಪ್ರವಾದಿಯಾದ ಹನನ್ಯನು ಅದೇ ವರ್ಷ ಏಳನೆಯ ತಿಂಗಳಲ್ಲಿ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅದರಂತೆ ಪ್ರವಾದಿಯಾದ ಹನನ್ಯನು ಅದೇ ವರುಷ ಏಳನೆಯ ತಿಂಗಳಲ್ಲಿ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಹನನ್ಯನು ಅದೇ ವರ್ಷದ ಏಳನೆಯ ತಿಂಗಳಲ್ಲಿ ಮರಣಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಹಾಗೆಯೇ ಪ್ರವಾದಿಯಾದ ಹನನ್ಯನು ಅದೇ ವರ್ಷದಲ್ಲಿ ಏಳನೆಯ ತಿಂಗಳಲ್ಲಿ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 28:17
8 ತಿಳಿವುಗಳ ಹೋಲಿಕೆ  

ಆದರೂ ನನ್ನ ದಾಸರಾದ ಪ್ರವಾದಿಗಳಿಗೆ ನಾನು ಕೊಟ್ಟ ಆಜ್ಞೆಗಳು, ವಿಧಿನಿಯಮಗಳು ನಿಮ್ಮ ಪಿತೃಗಳ ಮರಣದ ನಂತರವೂ ಶಾಶ್ವತವಾಗಿ ಉಳಿದಿವೆಯಲ್ಲವೆ? ಅವರು ಪಶ್ಚಾತ್ತಾಪಪಟ್ಟು, ‘ಸೇನಾಧೀಶ್ವರ ಸರ್ವೇಶ್ವರ ನಮ್ಮ ದುರ್ಮಾರ್ಗ ಹಾಗೂ ದುಷ್ಕೃತ್ಯಗಳಿಗೆ ತಕ್ಕಂತೆ ಏನು ಮಾಡಬೇಕೆಂದು ಸಂಕಲ್ಪಿಸಿದ್ದರೋ, ಅದನ್ನು ನಮಗೆ ಮಾಡಿಯೇ ಮಾಡಿದ್ದಾರೆ’ ಎಂದು ಹೇಳಿಕೊಂಡರಲ್ಲವೆ?”


ಅದೇ ವರ್ಷದಲ್ಲಿ, ಅಂದರೆ ಜುದೇಯದ ಅರಸ ಚಿದ್ಕೀಯನ ಆಳ್ವಿಕೆಯಲ್ಲಿ ನಾಲ್ಕನೆಯ ವರ್ಷದ ಐದನೆಯ ತಿಂಗಳಲ್ಲಿ, ಪ್ರವಾದಿಯಾದ ಅಜ್ಜೂರನ ಮಗನು ಹಾಗು ಗಿಬ್ಯೋನ್ ಊರಿನವನು ಆದ ಹನನ್ಯನು ಸರ್ವೇಶ್ವರನ ಆಲಯದೊಳಗೆ ಬಂದು ಯಾಜಕರ ಮತ್ತು ಸಕಲ ಜನರ ಮುಂದೆ ನಿಂತು ನನಗೆ ಹೀಗೆ ಹೇಳಿದ -


ಆದಕಾರಣ ಸರ್ವೇಶ್ವರ ಇಂತೆನ್ನುತ್ತಾರೆ: ಇಗೋ, ನಾನು ನಿನ್ನನ್ನು ಈ ಜಗತ್ತಿನಿಂದ ತೊಲಗಿಸುವೆನು. ನೀನು ಸರ್ವೇಶ್ವರನಾದ ನನಗೆ ವಿರುದ್ಧವಾಗಿ ದ್ರೋಹದ ಮಾತುಗಳನ್ನು ಆಡಿದ್ದರಿಂದ ಇದೇ ವರ್ಷ ಸಾಯುವೆ,” ಎಂದು ಹೇಳಿದನು.


ಜೆರುಸಲೇಮಿನಿಂದ ಬಾಬಿಲೋನಿಗೆ ನೆಬೂಕದ್ನೆಚ್ಚರನು ಸೆರೆ ಒಯ್ದಿದ್ದ ಹಿರಿಯರಿಗೂ ಯಾಜಕರಿಗೂ ಪ್ರವಾದಿಗಳಿಗೂ ಸಕಲ ಜನರಿಗೂ ಪ್ರವಾದಿ ಯೆರೆಮೀಯನು ಜೆರುಸಲೇಮಿನಿಂದ ಒಂದು ಪತ್ರವನ್ನು ಬರೆದನು.


ಆದರೆ ಯಾವ ಪ್ರವಾದಿ ನನ್ನಿಂದ ಅಧಿಕಾರ ಹೊಂದದೆ ನಾನು ಪ್ರೇರಣೆಮಾಡದ ಮಾತುಗಳನ್ನು ಸರ್ವೇಶ್ವರನ ಮಾತೆಂದು ಜನರಿಗೆ ತಿಳಿಸುವನೋ, ಇಲ್ಲವೆ ಇತರ ದೇವರುಗಳ ಹೆಸರಿನಲ್ಲಿ ಮಾತಾಡುವನೋ, ಅವನಿಗೆ ಮರಣಶಿಕ್ಷೆಯಾಗಬೇಕು,’ ಎಂದು ಹೇಳಿದರು.


ಊರು ಬಾಗಿಲಿನಲ್ಲಿ ಜನರಿಂದ ತುಳಿತಕ್ಕೆ ಸಿಕ್ಕಿ ಅವನು ಸತ್ತದ್ದರಿಂದ ಈ ಮಾತು ನೆರವೇರಿತು.


ತಮ್ಮ ನಾಲಿಗೆಗಳನ್ನು ಆಡಿಸುತ್ತಾ, ‘ಇದು ಸರ್ವೇಶ್ವರನ ನುಡಿ’ ಎಂದು ಹೇಳುವ ಪ್ರವಾದಿಗಳನ್ನು ನಾನು ಪ್ರತಿಭಟಿಸುತ್ತೇನೆ. ಇದು ಸರ್ವೇಶ್ವರನಾದ ನನ್ನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು