Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 29:11 - ಕನ್ನಡ ಸತ್ಯವೇದವು C.L. Bible (BSI)

11 ನಿಮಗೆ ಇಂಥ ಗತಿ ಬರಲಿ ಎಂದಲ್ಲ, ನಿರೀಕ್ಷೆ ಇರಲಿ ಎಂದೇ ನಾನು ನಿಮ್ಮ ವಿಷಯದಲ್ಲಿ ಮಾಡಿಕೊಂಡ ಆಲೋಚನೆಗಳನ್ನು ನಾನು ಮಾತ್ರ ಬಲ್ಲೆ. ಅವು ಅಹಿತ ಯೋಜನೆಗಳೇನೂ ಅಲ್ಲ, ಹಿತಕರವಾದ ಯೋಜನೆಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇವರಿಗೆ ಒಳ್ಳೆಯದಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇವರಿಗೆ ಗತಿಯಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಾನು ನಿಮಗಾಗಿ ಹಾಕಿದ ಯೋಜನೆಗಳು ನನಗೆ ಗೊತ್ತಿರುವುದರಿಂದ ನಾನು ಹೀಗೆ ಹೇಳುತ್ತಿದ್ದೇನೆ.” ಇದು ಯೆಹೋವನ ಸಂದೇಶ. “ನಾನು ನಿಮಗಾಗಿ ಒಳ್ಳೆಯ ಯೋಜನೆಗಳನ್ನು ಹಾಕಿದ್ದೇನೆ. ನಿಮಗೆ ಕೆಟ್ಟದ್ದನ್ನು ಮಾಡುವ ವಿಚಾರ ನನಗಿಲ್ಲ. ನಾನು ನಿಮಗಾಗಿ ಆಶಾದಾಯಕವಾದ ಮತ್ತು ಒಳ್ಳೆಯ ಭವಿಷ್ಯದ ವಿಚಾರಗಳನ್ನಿಟ್ಟುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಾನು ನಿಮ್ಮನ್ನು ಕುರಿತು ಮಾಡುವ ಯೋಜನೆಗಳನ್ನು ಬಲ್ಲೆನು. ಅವು ಕೇಡಿಗಲ್ಲ, ಹಿತಕ್ಕಾಗಿರುವ ಯೋಜನೆಗಳು. ನಿಮಗೆ ಭವಿಷ್ಯವನ್ನೂ, ನಿರೀಕ್ಷೆಯನ್ನೂ ಕೊಡುವುದಕ್ಕಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 29:11
38 ತಿಳಿವುಗಳ ಹೋಲಿಕೆ  

ಪ್ರಭುವಿನ ಯೋಜನೆ ಶಾಶ್ವತ I ಅವನ ಸಂಕಲ್ಪ ಅನವರತ II


ಆದರೆ ಸರ್ವೇಶ್ವರಸ್ವಾಮಿಯ ಆಲೋಚನೆಗಳನ್ನು ಅವರು ಅರಿತುಕೊಂಡಿಲ್ಲ. ಆ ಸ್ವಾಮಿಯ ಉದ್ದೇಶವನ್ನು ಅವರು ಗ್ರಹಿಸಿಕೊಂಡಿಲ್ಲ; ಕಣಕ್ಕೆ ಹಾಕಿದ ಕಂತೆಗಳಂತೆ ಅವರನ್ನು ಸ್ವಾಮಿ ಸೇರಿಸಿದ್ದಾರೆ ಎಂಬುದನ್ನು ಅವರು ಅರ್ಥೈಸಿಕೊಂಡಿಲ್ಲ.”


ಪ್ರಭು, ಎನ್ನ ದೇವ, ನಿನಗೆ ಸಮಾನತೆ ಎಲ್ಲಿಯದು I ನೀನೆಸಗಿದ ಪವಾಡ ಪ್ರಯೋಜನಗಳೆನಿತು I ಅಗಣಿತವಾದವುಗಳ ವಿವರ ಅಸದಳವಾದುದು II


ಆತನದು ಏಕಚಿತ್ತ; ಅದನು ಬದಲಾಯಿಸಲಸಾಧ್ಯ ಆತ ಬಯಸಿದ್ದೆ ಸಿದ್ಧಿಯಾದಕಾರ್ಯ.


ಸರ್ವೇಶ್ವರನು ನಮ್ಮನ್ನು ಉದ್ಧರಿಸುವನೆಂದು ಎದುರುನೋಡುತ್ತಾ ತಾಳ್ಮೆಯಿಂದಿರುವುದು ಒಳಿತು.


ತದನಂತರ ಇಸ್ರಯೇಲಿನವರು ತಮ್ಮ ದೇವರಾದ ಸರ್ವೇಶ್ವರನನ್ನು ಮತ್ತು ಅರಸ ದಾವೀದನನ್ನು ಆಶ್ರಯಿಸುವರು. ಅಂತಿಮ ದಿನಗಳಲ್ಲಿ ಅವರು ಭಯಭಕ್ತಿಯುಳ್ಳವರಾಗಿ ಸರ್ವೇಶ್ವರಸ್ವಾಮಿಯನ್ನೂ ಅವರ ಕೃಪಾಶ್ರಯವನ್ನೂ ಮರೆಹೋಗುವರು.


ಆದರೂ ನನ್ನ ದಾಸರಾದ ಪ್ರವಾದಿಗಳಿಗೆ ನಾನು ಕೊಟ್ಟ ಆಜ್ಞೆಗಳು, ವಿಧಿನಿಯಮಗಳು ನಿಮ್ಮ ಪಿತೃಗಳ ಮರಣದ ನಂತರವೂ ಶಾಶ್ವತವಾಗಿ ಉಳಿದಿವೆಯಲ್ಲವೆ? ಅವರು ಪಶ್ಚಾತ್ತಾಪಪಟ್ಟು, ‘ಸೇನಾಧೀಶ್ವರ ಸರ್ವೇಶ್ವರ ನಮ್ಮ ದುರ್ಮಾರ್ಗ ಹಾಗೂ ದುಷ್ಕೃತ್ಯಗಳಿಗೆ ತಕ್ಕಂತೆ ಏನು ಮಾಡಬೇಕೆಂದು ಸಂಕಲ್ಪಿಸಿದ್ದರೋ, ಅದನ್ನು ನಮಗೆ ಮಾಡಿಯೇ ಮಾಡಿದ್ದಾರೆ’ ಎಂದು ಹೇಳಿಕೊಂಡರಲ್ಲವೆ?”


ಸರ್ವೇಶ್ವರ ಹೇಳುವುದನ್ನು ಗಮನಿಸಿರಿ: “ದಿನಗಳು ಬರಲಿವೆ; ಆಗ ನಾನು ದಾವೀದನೆಂಬ ಮೂಲದಿಂದ ಒಂದು ‘ಮೊಳಿಕೆ’ಯನ್ನು ಚಿಗುರಿಸುವೆನು. ಆತ ಸತ್ಪುರುಷ; ರಾಜನಾಗಿ ಆಳುವನು. ವಿವೇಕದಿಂದ ಕಾರ್ಯ ಸಾಧಿಸುವನು. ಧರೆಯಲ್ಲಿ ನ್ಯಾಯನೀತಿಯನ್ನು ನಿರ್ವಹಿಸುವನು.


ಆತನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿ ಇರುವರು. ಇಸ್ರಯೇಲರು ನೆಮ್ಮದಿಯಿಂದ ಬಾಳುವರು. ‘ಯೆಹೋವ ಚಿದ್ಕೇನು’ (ಎಂದರೆ ಸರ್ವೇಶ್ವರನೇ ನಮ್ಮ ಸದ್ಧರ್ಮ) ಎಂಬ ಹೆಸರು ಆತನಿಗಿರುವುದು.


ಅವರು ತಮ್ಮ ದೇವರಾದ ಸರ್ವೇಶ್ವರನೆಂಬ ನನಗೆ ಮತ್ತು ಅವರಿಗಾಗಿ ನಾನು ಏರ್ಪಡಿಸಲಿರುವ ರಾಜ ದಾವೀದನಿಗೆ ಸೇವೆಸಲ್ಲಿಸುವರು.)


“ನನ್ನ ದಾಸ ಯಕೋಬನೇ, ಅಂಜಬೇಡ! ಇಸ್ರಯೇಲೇ, ಭಯಪಡಬೇಡ” ಎನ್ನುತ್ತಾರೆ ಸರ್ವೇಶ್ವರ. “ದೂರ ನಾಡಿನಿಂದ ನಿನ್ನನ್ನು ಮುಕ್ತನನ್ನಾಗಿಸುವೆನು ನಿನ್ನ ಸಂತಾನ ಸೆರೆಹೋದ ಸೀಮೆಯಿಂದ ನಿನ್ನನ್ನು ಉದ್ಧರಿಸುವೆನು. ಹಿಂದಿರುಗಿ, ಹಾಯಾಗಿ ನೆಮ್ಮದಿಯಿಂದಿರುವುದು ಯಕೋಬು ಯಾರಿಂದಲೂ ಅದನ್ನು ಹೆದರಿಸಲಾಗದು.


“ಆದಕಾರಣ ನೀನು ಹೀಗೆ ಸಾರು; ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ನಾನು ಅವರನ್ನು ದೂರ ಗಡೀಪಾರುಮಾಡಿ, ಅನ್ಯದೇಶದ ಜನಾಂಗಗಳಲ್ಲಿ ಚದರಿಸಿದ್ದರೂ ಅವರು ಸೇರಿರುವ ದೇಶಗಳಲ್ಲಿಯೇ ನಾನು ಕೊಂಚಕಾಲದ ಮಟ್ಟಿಗೆ ಅವರಿಗೆ ಪವಿತ್ರಾಲಯವಾಗಿರುವೆನು.


ಹಾಕುವೆನಾ ಮೂರನೇ ಭಾಗದವರನ್ನು ಬೆಂಕಿಗೆ, ಶೋಧಿಸುವೆನು ಅವರನ್ನು ಬೆಳ್ಳಿಯ ಹಾಗೆ. ಶುದ್ಧೀಕರಿಸುವೆನು ಬಂಗಾರದ ಹಾಗೆ. ಕಿವಿಗೊಡುವೆ ನನ್ನ ಹೆಸರೆತ್ತಿ ಪ್ರಾರ್ಥಿಸುವವರಿಗೆ. ಹೇಳುವೆನು, ‘ಇವರೇ ನನ್ನ ಪ್ರಜೆಯೆಂದು. ಹೇಳುವರವರು ‘ಸರ್ವೇಶ್ವರನೇ ನಮ್ಮ ದೇವ’ ಎಂದು.


ಭಯಭಕ್ತಿಯುಳ್ಳವರಿಗಾತನ ರಕ್ಷಣೆ ಸನ್ನಿಹಿತ I ಇದರಿಂದಾತನ ಮಹಿಮೆ ನಾಡಿಲ್ಲಿರುವುದು ನಿರುತ II


ಇದರ ಬಗ್ಗೆ ನನಗೆ ಇನ್ನಿಲ್ಲ ರೌದ್ರ, ಇದರೊಳಗಿಲ್ಲ ಮುಳ್ಳುಕಳ್ಳಿಗಳ ಗಹ್ವರ, ಇದ್ದಿದ್ದರೆ ಸುಟ್ಟು ಭಸ್ಮ ಮಾಡುತ್ತಿದ್ದೆ ಹೂಡಿ ಸಮರ.


“ಇಸ್ರಯೇಲರ ದೇವರಾದ ಸರ್ವೇಶ್ವರ ಹೇಳುವುದನ್ನು ಕೇಳು - ನಾನು ಈ ಸ್ಥಳದಿಂದ ಬಾಬಿಲೋನಿಗೆ ಕಳಿಸಿಬಿಟ್ಟು ಅಲ್ಲಿ ಸೆರೆಯಾಳುಗಳಾಗಿರುವ ಯೆಹೂದ್ಯರು ಈ ಉತ್ತಮವಾದ ಅಂಜೂರದ ಹಣ್ಣುಗಳಂಥವರು. ಅವರನ್ನು ಆದರದಿಂದ ನೋಡಿ ಅವರಿಗೆ ಒಳ್ಳೆಯದನ್ನೇ ಮಾಡುವೆನು.


ಆದರೂ ಈ ನಗರವನ್ನು ಉದ್ಧಾರಮಾಡಿ, ಸುಧಾರಿಸಿ, ಇದರ ನಿವಾಸಿಗಳನ್ನು ಗುಣಪಡಿಸುವೆನು. ಸಮೃದ್ಧಿಯಾದ ಸೌಭಾಗ್ಯವನ್ನು ಹಾಗೂ ಶಾಂತಿಸಮಾಧಾನವನ್ನು ಇವರಿಗೆ ಅನುಗ್ರಹಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು