Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 29:15 - ಕನ್ನಡ ಸತ್ಯವೇದವು C.L. Bible (BSI)

15 “ನೀವೋ, ‘ಸರ್ವೇಶ್ವರ ನಮಗಾಗಿ ಬಾಬಿಲೋನಿನಲ್ಲೇ ಪ್ರವಾದಿಗಳನ್ನು ಏರ್ಪಡಿಸಿದ್ದಾರೆ’ ಎಂದುಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೀವೋ, “ಯೆಹೋವನು ನಮಗಾಗಿ ಬಾಬೆಲಿನಲ್ಲೇ ಪ್ರವಾದಿಗಳನ್ನು ಏರ್ಪಡಿಸಿದ್ದಾನಲ್ಲಾ” ಅಂದುಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 (ನೀವೋ - ಯೆಹೋವನು ನಮಗಾಗಿ ಬಾಬೆಲಿನಲ್ಲೇ ಪ್ರವಾದಿಗಳನ್ನು ಏರ್ಪಡಿಸಿದ್ದಾನಲ್ಲಾ ಅಂದುಕೊಂಡಿದ್ದೀರಿ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಆದರೆ ಯೆಹೋವನು ನಮಗೆ ಬಾಬಿಲೋನಿನಲ್ಲಿಯೇ ಪ್ರವಾದಿಗಳನ್ನು ಕೊಟ್ಟಿದ್ದಾನೆ” ಎಂದು ನೀವು ಹೇಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೆ, “ಯೆಹೋವ ದೇವರು ನಮಗೆ ಬಾಬಿಲೋನಿನಲ್ಲಿ ಪ್ರವಾದಿಗಳನ್ನು ಎಬ್ಬಿಸಿದ್ದಾನೆ,” ಎಂದು ನೀವು ಹೇಳಿದ್ದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 29:15
6 ತಿಳಿವುಗಳ ಹೋಲಿಕೆ  

ಬಾಬಿಲೋನಿಯಾ ದೇಶದ ಕೇಬಾರ್ ನದಿಯ ಹತ್ತಿರ, ಬೂಜಿಯ ಮಗ ಹಾಗೂ ಯಾಜಕನಾದ ಯೆಜೆಕಿಯೇಲ ಎಂಬ ನನಗೆ ಸರ್ವೇಶ್ವರ ಸ್ವಾಮಿಯ ವಾಣಿ ನೇರವಾಗಿ ಕೇಳಿಸಿತು; ಅವರ ಹಸ್ತಸ್ಪರ್ಶದಿಂದ ನಾನು ಪರವಶನಾದೆ.


ಮೂವತ್ತನೆಯ ವರ್ಷದ ನಾಲ್ಕನೆಯ ತಿಂಗಳಿನ ಐದನೆಯ ದಿನ ನಾನು ಗಡೀಪಾರಾಗಿದ್ದ ಯೆಹೂದ್ಯರ ಮಧ್ಯೆ ಕೆಬಾರ್ ನದಿಯ ಹತ್ತಿರ ಇದ್ದೆ. ಆಗ ಆಕಾಶ ತೆರೆಯಿತು. ನನಗೆ ದೇವದರ್ಶನಗಳಾದವು.


“ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ತಮ್ಮ ಹೆಸರೆತ್ತಿ ಸುಳ್ಳನ್ನು ಸಾರುವ ಕೊಲಾಯನ ಮಗ ಅಹಾಬ ಮತ್ತು ಮಾಸೇಯನ ಮಗ ಚಿದ್ಕೀಯ ಇವರ ವಿಷಯವಾಗಿ ಹೀಗೆನ್ನುತ್ತಾರೆ: ‘ಇಗೋ ನಾನು ಇವರನ್ನು ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನ ಕೈಗೆ ಬಿಡುವೆನು. ಅವನು ನಿಮ್ಮ ಕಣ್ಣೆದುರಿಗೆ ಇವರನ್ನು ಕೊಲ್ಲಿಸುವನು.


ನೆಹೆಲಾಮ್ಯನಾದ ಶೆಮಾಯನಿಗೆ ಹೀಗೆ ತಿಳಿಸಬೇಕೆಂದು ಸರ್ವೇಶ್ವರ ಯೆರೆಮೀಯನಿಗೆ ಅಪ್ಪಣೆಕೊಟ್ಟರು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು