Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 29:17 - ಕನ್ನಡ ಸತ್ಯವೇದವು C.L. Bible (BSI)

17 ‘ಇಗೋ, ನಾನು ಅವರ ಮೇಲೆ ಖಡ್ಗ-ಕ್ಷಾಮ-ವ್ಯಾಧಿಗಳನ್ನು ಬರಮಾಡುವೆನು. ಯಾರೂ ತಿನ್ನಲಾಗದಷ್ಟು ಕೆಟ್ಟು ಅಸಹ್ಯವಾದ ಅಂಜೂರದ ಹಣ್ಣಿನ ಗತಿಗೆ ಅವರನ್ನು ಇಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “ಆಹಾ, ನಾನು ಅವರ ಮೇಲೆ ಖಡ್ಗ, ಕ್ಷಾಮ ಮತ್ತು ವ್ಯಾಧಿಗಳನ್ನು ಬರಮಾಡಿ ಯಾರೂ ತಿನ್ನದ ಹಾಗೆ ಕೆಟ್ಟು ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳ ಗತಿಗೆ ಅವರನ್ನು ತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಹಾ, ನಾನು ಅವರ ಮೇಲೆ ಖಡ್ಗಕ್ಷಾಮವ್ಯಾಧಿಗಳನ್ನು ಬರಮಾಡಿ ಯಾರೂ ತಿನ್ನದ ಹಾಗೆ ಕೆಟ್ಟು ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳ ಗತಿಗೆ ಅವರನ್ನು ತರುವೆನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಸರ್ವಶಕ್ತನಾದ ಯೆಹೋವನು ಹೇಳಿದನು: “ಇನ್ನೂ ಜೆರುಸಲೇಮಿನಲ್ಲಿಯೇ ಇದ್ದ ಜನರ ವಿರುದ್ಧ ನಾನು ಬೇಗನೆ ಖಡ್ಗವನ್ನು, ಹಸಿವನ್ನು ಮತ್ತು ಭಯಂಕರವಾದ ವ್ಯಾಧಿಯನ್ನು ಕಳುಹಿಸುವೆನು. ನಾನು ಅವರನ್ನು, ಅತೀ ಕೊಳೆತು ತಿನ್ನಲಾಗದ ಅಂಜೂರದ ಹಣ್ಣುಗಳಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ, “ಇಗೋ, ನಾನು ಅವರಲ್ಲಿ ಖಡ್ಗವನ್ನೂ ಕ್ಷಾಮವನ್ನೂ ವ್ಯಾಧಿಯನ್ನೂ ಕಳುಹಿಸಿ, ಅವರನ್ನು ಕೆಟ್ಟವರನ್ನಾಗಿ ಮಾಡಿರುವುದರಿಂದ, ತಿನ್ನಕೂಡದ ಅಸಹ್ಯವಾದ ಅಂಜೂರಗಳ ಹಾಗೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 29:17
14 ತಿಳಿವುಗಳ ಹೋಲಿಕೆ  

ಖಡ್ಗ-ಕ್ಷಾಮ-ವ್ಯಾಧಿಗಳಿಂದ ಅವರನ್ನು ಹಿಂದಟ್ಟುತ್ತಾ ಲೋಕದ ಎಲ್ಲ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು. ಅವರನ್ನು ಅಟ್ಟಲಾಗಿರುವ ಎಲ್ಲ ರಾಷ್ಟ್ರಗಳಲ್ಲಿ ಅವರು ಶಾಪ, ಪರಿಹಾಸ್ಯ, ದೂಷಣೆಗಳಿಗೆ ಗುರಿಯಾಗುವಂತೆ ಮಾಡುವೆನು.


ಅಯ್ಯೋ, ಆ ದಿನಗಳಲ್ಲಿ ಗರ್ಭಿಣಿಯರ ಮತ್ತು ಹಾಲೂಡಿಸುವ ತಾಯಂದಿರ ಗೋಳೇನು! ಈ ನಾಡು ಮಹಾವಿಪತ್ತಿಗೆ ಈಡಾಗುವುದು. ಈ ಜನತೆ ದೈವಕೋಪಕ್ಕೆ ಗುರಿಯಾಗುವುದು.


ಭೀಕರ ಭೂಕಂಪಗಳಾಗುವುವು; ಕ್ಷಾಮಡಾಮರಗಳು ತಲೆದೋರುವುವು, ಭಯಂಕರ ಘಟನೆಗಳೂ ಬಾಹ್ಯಾಕಾಶದಲ್ಲಿ ಅಪೂರ್ವ ಸೂಚನೆಗಳೂ ಕಾಣಿಸಿಕೊಳ್ಳುವುವು.


ಘೋರಕ್ಷಾಮದ ಕಾರಣ ನಗರದವರಿಗೆ ಆಹಾರ ಸಿಕ್ಕದೆ ಹೋಯಿತು. ನಗರಕ್ಕೆ ಮುತ್ತಿಗೆ ಹಾಕಿದ್ದ ಬಾಬಿಲೋನಿಯರು ಹನ್ನೊಂದನೆಯ ತಿಂಗಳಿನ ಒಂಬತ್ತನೆಯ ದಿವಸ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದರು.


ಅವನು ಬಂದು ಈಜಿಪ್ಟ್ ದೇಶದ ಮೇಲೆ ಧಾಳಿಮಾಡುವನು. ಮರಣಕ್ಕೆ ಗೊತ್ತಾದವರು ಮರಣಕ್ಕೆ, ಸೆರೆಮನೆಗೆ ಗೊತ್ತಾದವರು ಸೆರೆಮನೆಗೆ, ಖಡ್ಗಕ್ಕೆ ಗೊತ್ತಾದವರು ಖಡ್ಗಕ್ಕೆ ಗುರಿಯಾಗುವರು.


“ಆದರೆ ಯಾವುದಾದರು ರಾಷ್ಟ್ರ ಅಥವಾ ರಾಜ್ಯ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಅಡಿಯಾಳಾಗಲು, ಅದರ ಅರಸನ ನೊಗಕ್ಕೆ ಹೆಗಲುಕೊಡಲು ಒಪ್ಪದೆಹೋದರೆ, ಆ ರಾಷ್ಟ್ರವನ್ನು ನಾನು ಖಡ್ಗ-ಕ್ಷಾಮ-ವ್ಯಾಧಿಗಳಿಂದ ದಂಡಿಸುತ್ತಾ ಬರುವೆನು. ಕೊನೆಗೆ ಆ ಅರಸನ ಕೈಯಿಂದಲೆ ಅದನ್ನು ನಿರ್ಮೂಲಮಾಡಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.


ಆಗ ಬೂದು ಕುದುರೆಯೊಂದು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಹೆಸರು, ‘ಮೃತ್ಯು’ ಎಂದು. ಅವನನ್ನು ‘ಮೃತ್ಯುಲೋಕ’ ಎಂಬಾತನು ಹಿಂಬಾಲಿಸಿದನು. ಇವರಿಗೆ ಖಡ್ಗ, ಕ್ಷಾಮ, ಅಂಟುಜಾಡ್ಯ, ಕಾಡುಮೃಗ ಇವುಗಳಿಂದ ಭೂಲೋಕದ ಕಾಲುಭಾಗದ ಜನತೆಯನ್ನು ಕೊಂದುಹಾಕುವುದಕ್ಕೆ ಅಧಿಕಾರವನ್ನು ಕೊಡಲಾಗಿತ್ತು.


“ಇಗೋ, ಮುತ್ತಿಗೆಯ ದಿಬ್ಬಗಳು! ನಗರವನ್ನು ಆಕ್ರಮಿಸಲು ಬಂದುಬಿಟ್ಟಿದ್ದಾರೆ. ಖಡ್ಗ-ಕ್ಷಾಮ-ವ್ಯಾಧಿಗಳಿಂದ ನಗರವು ವಿರೋಧಿಗಳಾದ ಬಾಬಿಲೋನಿಯರ ಕೈ ಹಿಡಿತಕ್ಕೆ ಸಿಕ್ಕಿಹೋಗಿದೆ. ನೀವು ನುಡಿದಂತೆ ನೆರವೇರಿದೆ. ನಿಮ್ಮ ಕಣ್ಣಿಗೆ ಎಲ್ಲ ಬಟ್ಟಬಯಲಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು