Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 29:27 - ಕನ್ನಡ ಸತ್ಯವೇದವು C.L. Bible (BSI)

27 ಹೀಗಿರುವಲ್ಲಿ, ನಿಮ್ಮ ಮಧ್ಯೆ ಪ್ರವಾದಿಯಾಗಿ ನಟಿಸುವ ಅನಾತೋತಿನವನಾದ ಯೆರೆಮೀಯನನ್ನು ನೀನು ಖಂಡಿಸಲಿಲ್ಲವೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಹೀಗಿರಲು ನಿಮ್ಮ ಮಧ್ಯದಲ್ಲಿ ಪ್ರವಾದಿಯಾಗಿ ನಟಿಸುವ ಅನಾತೋತಿನವನಾದ ಯೆರೆಮೀಯನನ್ನು ನೀನು ಏಕೆ ಖಂಡಿಸಲಿಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಹೀಗಿರಲು ನಿಮ್ಮ ಮಧ್ಯದಲ್ಲಿ ಪ್ರವಾದಿಯಾಗಿ ನಟಿಸುವ ಅನಾತೋತಿನವನಾದ ಯೆರೆಮೀಯನನ್ನು ನೀನು ಏಕೆ ಖಂಡಿಸಲಿಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಈಗ ಯೆರೆಮೀಯನು ಪ್ರವಾದಿಯಂತೆ ನಟಿಸುತ್ತಿದ್ದಾನೆ. ನೀನು ಅವನನ್ನು ಏಕೆ ಬಂಧಿಸಲಿಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಹೀಗಿರಲಾಗಿ ನಿಮಗೆ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವ ಅನಾತೋತಿನವನಾದ ಯೆರೆಮೀಯನನ್ನು ನೀನು ಏಕೆ ಗದರಿಸಲಿಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 29:27
13 ತಿಳಿವುಗಳ ಹೋಲಿಕೆ  

ಯನ್ನ ಮತ್ತು ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆ, ಇವರು ಸತ್ಯವನ್ನು ಪ್ರತಿಭಟಿಸುತ್ತಾರೆ.


ಪ್ರೇಷಿತರನ್ನು ಒಳಗೆ ಕರೆದು, ಚಾವಟಿಯಿಂದ ಹೊಡೆದು, ಇನ್ನು ಮೇಲೆ ಯೇಸುವಿನ ಹೆಸರಿನಲ್ಲಿ ಬೋಧಿಸಬಾರದೆಂದು ಕಟ್ಟಪ್ಪಣೆಮಾಡಿ ಅವರನ್ನು ಬಿಟ್ಟುಬಿಟ್ಟರು.


“ಆ ವ್ಯಕ್ತಿಯ ಹೆಸರಿನಲ್ಲಿ ಉಪದೇಶ ಮಾಡಕೂಡದು ಎಂದು ನಿಮಗೆ ಕಟ್ಟಪ್ಪಣೆ ಮಾಡಿದೆವು. ಆದರೂ ನೀವು ಮಾಡಿರುವುದೇನು? ನಿಮ್ಮ ಬೋಧನೆ ಜೆರುಸಲೇಮ್ ಆದ್ಯಂತ ಹಬ್ಬಿಹರಡಿದೆ. ಅಷ್ಟುಮಾತ್ರವಲ್ಲ, ಆ ವ್ಯಕ್ತಿಯ ಕೊಲೆಗೆ ನಮ್ಮನ್ನೇ ಹೊಣೆಗಾರರನ್ನಾಗಿ ಮಾಡಬೇಕೆಂದಿರುವಿರಿ,” ಎಂದು ಆಪಾದಿಸಿದನು.


“ಸ್ವಾಮೀ, ಆ ಮೋಸಗಾರ ಬದುಕಿದ್ದಾಗ, ‘ಮೂರು ದಿನಗಳಾದ ಮೇಲೆ ನಾನು ಪುನರ್ಜೀವಂತನಾಗಿ ಏಳುವೆನು,’ ಎಂದು ಹೇಳಿದ್ದು ನಮಗೆ ಜ್ಞಾಪಕದಲ್ಲಿದೆ.


‘ಸರ್ವೇಶ್ವರ ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ದೇವಾಲಯದ ಯಾಜಕನನ್ನಾಗಿ ನೇಮಿಸಿದ್ದಾರೆ. ಯಾವನಾದರು ಮೈದುಂಬಿ ಪ್ರವಾದಿಯಾಗಿ ನಟಿಸಿದ್ದೇ ಆದರೆ ಅವನನ್ನು ಕೊಳಕ್ಕೆಹಾಕಿ, ಕೊರಳಿಗೆ ಕವೆಯೊಡ್ಡುವ ಅಧಿಕಾರವನ್ನು ನಿನಗೆ ವಹಿಸಿದ್ದಾರೆ.


ಇವು ಯೆರೆಮೀಯನ ಪ್ರವಚನಗಳು. ಈತ ಬೆನ್ಯಮೀನ್ ಪ್ರಾಂತ್ಯಕ್ಕೆ ಸೇರಿದ ಅನಾತೋತ್ ಊರಿನ ಯಾಜಕ ವರ್ಗದವನು. ಇವನ ತಂದೆ ಹಿಲ್ಕೀಯನು.


ಈ ಮಾತನ್ನು ಹೇಳಿದ ಪ್ರವಾದಿಗೆ ಅರಸನು, “ನಿನ್ನನ್ನು ನಾನು ಆಲೋಚನಾಮಂತ್ರಿಯನ್ನಾಗಿ ನೇಮಿಸಲಿಲ್ಲ; ಬಾಯಿಮುಚ್ಚುವಿಯೋ: ಅಥವಾ ಏಟು ತಿನ್ನುವಿಯೋ?’ ಎಂದನು. ಅದಕ್ಕೆ ಅವನು, “ನೀವು ನನ್ನ ಬುದ್ಧಿವಾದವನ್ನು ಆಲಿಸದೆ ಹೀಗೆ ಮಾಡುವುದರಿಂದ ದೇವರು ನಿಮ್ಮನ್ನು ನಾಶಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾರೆಂದು ನಾನು ಬಲ್ಲೆ,” ಎಂದು ಹೇಳಿ ಸುಮ್ಮನಾದನು.


ಇವರೆಲ್ಲರೂ ಜೊತೆಗೂಡಿ ಮೋಶೆ ಮತ್ತು ಆರೋನರ ಬಳಿಗೆ ಬಂದು, “ನಿಮ್ಮ ವರ್ತನೆ ಅಧಿಕವಾಯಿತು. ಈ ಸಮುದಾಯದಲ್ಲಿ ಪ್ರತಿಯೊಬ್ಬನೂ ಪ್ರತಿಷ್ಠಿತನೇ. ಸರ್ವೇಶ್ವರ ಇವರೆಲ್ಲರಲ್ಲಿ ವಾಸವಾಗಿದ್ದಾರಲ್ಲವೇ? ಹೀಗಿರಲಾಗಿ ಸರ್ವೇಶ್ವರನ ಸಮುದಾಯದವರಿಗಿಂತ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದೇಕೆ?” ಎಂದು ವಾದಿಸಿದರು.


ಗಿಬ್ಯೋನ್, ಗೆಬ, ಗೆನತೋತ್, ಅಲ್ಮೋನ್ ಎಂಬ ನಾಲ್ಕು ಗೋಮಾಳ ಸಹಿತವಾದ ನಗರಗಳು ದೊರೆತವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು