Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 3:14 - ಕನ್ನಡ ಸತ್ಯವೇದವು C.L. Bible (BSI)

14 “ಭ್ರಷ್ಟರಾದ ಜನರೇ, ನನಗೆ ಅಭಿಮುಖರಾಗಿರಿ, ನಾನು ನಿಮಗೆ ಅಧಿಪತಿ. ನಿಮ್ಮಲ್ಲಿ ಒಂದು ಪಟ್ಟಣಕ್ಕೆ ಒಬ್ಬನಂತೆ, ಗೋತ್ರಕ್ಕೆ ಇಬ್ಬರಂತೆ ಆರಿಸಿ ಸಿಯೋನಿಗೆ ಕರೆತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಭ್ರಷ್ಟರಾದ ಮಕ್ಕಳೇ, ತಿರುಗಿಕೊಳ್ಳಿರಿ, ನಾನು ನಿಮಗೆ ಪತಿ. ಒಂದು ಪಟ್ಟಣಕ್ಕೆ ಒಬ್ಬನಂತೆಯೂ, ಗೋತ್ರಕ್ಕೆ ಇಬ್ಬರಂತೆಯೂ ಆರಿಸಿ ಚೀಯೋನಿಗೆ ಕರೆತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇದೇ ಯೆಹೋವನ ನುಡಿ - ಭ್ರಷ್ಟರಾದ ಮಕ್ಕಳೇ, ತಿರುಗಿಕೊಳ್ಳಿರಿ, ನಾನು ನಿಮಗೆ ಪತಿ; ಒಂದು ಪಟ್ಟಣಕ್ಕೆ ಒಬ್ಬನಂತೆಯೂ ಗೋತ್ರಕ್ಕೆ ಇಬ್ಬರಂತೆಯೂ ಆರಿಸಿ ಚೀಯೋನಿಗೆ ಕರತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ವಿಶ್ವಾಸದ್ರೋಹಿಗಳಾದ ಜನರೇ, ನನ್ನಲ್ಲಿಗೆ ಹಿಂತಿರುಗಿ ಬನ್ನಿ” ಇದು ಯೆಹೋವನ ನುಡಿಯಾಗಿತ್ತು. “ನಾನೇ ನಿಮ್ಮ ಒಡೆಯನು. ನಾನು ಪ್ರತಿಯೊಂದು ನಗರದಿಂದ ಒಬ್ಬ ವ್ಯಕ್ತಿಯನ್ನು ಮತ್ತು ಪ್ರತಿಯೊಂದು ಕುಲದಿಂದ ಇಬ್ಬರನ್ನು ಆರಿಸಿ ಚೀಯೋನಿಗೆ ಕರೆದು ತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ಓ ಭ್ರಷ್ಟರಾದ ಜನರೇ, ತಿರುಗಿಕೊಳ್ಳಿರಿ,” ಎಂದು ಯೆಹೋವ ದೇವರು ನುಡಿಯುತ್ತಾರೆ. “ಏಕೆಂದರೆ, ನಾನು ನಿಮಗೆ ಪತಿ. ಪಟ್ಟಣದೊಳಗಿಂದ ಒಬ್ಬನನ್ನು, ಗೋತ್ರದೊಳಗಿಂದ ಇಬ್ಬರನ್ನು ತೆಗೆದುಕೊಂಡು, ಚೀಯೋನಿಗೆ ಕರೆದುಕೊಂಡು ಬರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 3:14
31 ತಿಳಿವುಗಳ ಹೋಲಿಕೆ  

ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವುವು. ನಿನಗೆ ನನ್ನ ಭಯವಿಲ್ಲದೆ ನಿನ್ನ ದೇವರಾದ ಸರ್ವೇಶ್ವರನಾದ ನನ್ನನ್ನು ತೊರೆದುಬಿಟ್ಟದ್ದು ನಿನಗೆ ಕೆಟ್ಟದ್ದಾಗಿಯೂ ಕಹಿಯಾಗಿಯೂ ಪರಿಣಮಿಸುವುದು. ಇದನ್ನು ಚೆನ್ನಾಗಿ ಗ್ರಹಿಸಿಕೊ, ಕಣ್ಣಾರೆ ನೋಡು. ಇದು ಸರ್ವಶಕ್ತನೂ, ಸ್ವಾಮಿ ಸರ್ವೇಶ್ವರನೂ ಆದ ನನ್ನ ನುಡಿ.”


ಈ ಒಡಂಬಡಿಕೆ, ನಾನು ಅವರ ಪೂರ್ವಜರನ್ನು ಕೈ ಹಿಡಿದು ಈಜಿಪ್ಟಿನಿಂದ ಕರೆದು ತಂದಾಗ ಅವರೊಡನೆ ಮಾಡಿಕೊಂಡ ಒಡಂಬಡಿಕೆ ಅಂಥದಾಗಿ ಇರುವುದಿಲ್ಲ. ನಾನು ಅವರಿಗೆ ಯಜಮಾನನಾಗಿ ಇದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿನಡೆದರು.


ನಿನ್ನ ಸೃಷ್ಟಿಕರ್ತನೆ ನಿನಗೆ ಪತಿಯು ‘ಸೇನಾಧೀಶ್ವರನಾದ ಸರ್ವೇಶ್ವರ’ ಆತನ ಹೆಸರು. ಇಸ್ರಯೇಲಿನ ಪರಮಪಾವನನೆ ನಿನ್ನ ಉದ್ಧಾರಕನು. ‘ಸರ್ವಲೋಕದ ದೇವ’ ಆತನ ನಾಮಧೇಯ.


ನನ್ನ ಮಂದೆಯನ್ನು ಯಾವ ಯಾವ ದೇಶಗಳಿಗೆ ಅಟ್ಟಲಾಗಿದೆಯೋ ಆ ಎಲ್ಲ ದೇಶಗಳಿಂದ ಅಳಿದುಳಿದ ಕುರಿಗಳನ್ನು ಒಟ್ಟುಗೂಡಿಸಿ ತಮ್ಮ ತಮ್ಮ ಹಟ್ಟಿಗಳಿಗೆ ಮರಳಿ ಬರಮಾಡುವೆನು. ಅವು ದೊಡ್ಡ ಪೀಳಿಗೆಯಾಗಿ ಬೆಳೆಯುವುವು.


ಭ್ರಷ್ಟಳಾದ ಇಸ್ರಯೇಲ್ ನನಗೆ ವಿಮುಖಳಾಗಿ ವ್ಯಭಿಚಾರಿಣಿಯಂತೆ ವರ್ತಿಸಿದ ಕಾರಣದಿಂದಲೆ, ನಾನು ಅವಳನ್ನು ನಿರಾಕರಿಸಿ ವಿವಾಹ ವಿಚ್ಛೇದನ ಪತ್ರಕೊಟ್ಟದ್ದನ್ನು ಜುದೇಯವೆಂಬ ದ್ರೋಹಿಯಾದ ಅವಳ ತಂಗಿ ನೋಡಿಯೂ ಅಂಜದೆಹೋದಳು. ತಾನೂ ಹೋಗಿ ವೇಶ್ಯೆಯಂತೆ ವರ್ತಿಸಿದಳು.


“ನೀನು ಹೋಗಿ ಜೆರುಸಲೇಮ್ ನಗರಕ್ಕೇ ಕೇಳಿಸುವಂತೆ ಈ ಸಂದೇಶವನ್ನು ಸಾರು : ನೀನು ಯೌವನದಲ್ಲಿ ನನ್ನ ಮೇಲಿಟ್ಟಿದ್ದ ಪ್ರೀತಿಯನ್ನು, ನವ ವಧುವಾಗಿ ನನಗೆ ತೋರಿಸಿದ ಪ್ರೇಮವನ್ನು, ಹಾಗು ಬಿತ್ತನೆಯಿಲ್ಲದ ಅರಣ್ಯಮಾರ್ಗವಾಗಿ ನನ್ನನ್ನು ಹಿಂಬಾಲಿಸಿದಾಗ ಅನುಸರಿಸುತ್ತಿದ್ದ ನಿನ್ನ ಪಾತಿವ್ರತ್ಯವನ್ನು ನನ್ನ ನೆನಪಿನಲ್ಲಿ ಇಟ್ಟುಕೊಂಡಿದ್ದೇನೆ; ಇದು ನಿನ್ನ ಹಿತಕ್ಕಾಗಿಯೇ.


ಇಸ್ರಯೇಲೇ, ನಿನ್ನ ಜನರು ಸಮುದ್ರದ ಮರಳಿನಂತೆ ಅಸಂಖ್ಯಾತರಾಗಿ ಇದ್ದರೂ ಅವರಲ್ಲಿ ಕೆಲವರು ಮಾತ್ರ ಉಳಿದು ಹಿಂದಿರುಗುವರು. ಅವರ ಅಳಿವು ಶಾಸನಬದ್ಧವಾದುದು ಹಾಗೂ ಸಂಪೂರ್ಣವಾಗಿ ನ್ಯಾಯಸಮ್ಮತವಾದುದು.


“ನಾಡಿನ ಹತ್ತನೇ ಒಂದು ಭಾಗ ಉಳಿದಿದ್ದರೂ ಅದು ಕೂಡ ನಾಶವಾಗುವುದು. ಏಲಾ ಮರವನ್ನಾಗಲೀ ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ ಉಳಿಯುವುದು ಬುಡ ಮಾತ್ರ” ಎಂದರು. ಹೀಗೆ ಉಳಿದ ಬುಡವು ಮುಂದೆ ದೇವಜನರಾಗಿ ಚಿಗುರುವುದು.


ಇಸ್ರಯೇಲಿನ ಬಗ್ಗೆ ಯೆಶಾಯನು ಹೀಗೆಂದು ಘೋಷಿಸಿದ್ದಾನೆ: “ಶೀಘ್ರದಲ್ಲೇ ಸರ್ವೇಶ್ವರ ವಿಶ್ವದ ಲೆಕ್ಕಾಚಾರವನ್ನು ಪೂರ್ತಿಯಾಗಿ ತೆಗೆದುಕೊಳ್ಳುವರು. ಇಸ್ರಯೇಲಿನ ಜನರು ಸಮುದ್ರ ತೀರದ ಮರಳಿನಷ್ಟು ಅಸಂಖ್ಯಾತರಾಗಿದ್ದರೂ ಅವರಲ್ಲಿ ಕೆಲವರೇ ಜೀವೋದ್ಧಾರವನ್ನು ಹೊಂದುವರು.”


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಗಂಡನು ತ್ಯಜಿಸಿದವಳು, ಅವನಿಂದ ಹೊರಟು ಮತ್ತೊಬ್ಬನವಳಾದ ಮೇಲೆ, ಅವಳನ್ನು ಆ ಗಂಡನು ಮತ್ತೆ ಸೇರಿಸಿಕೊಳ್ಳುತ್ತಾನೆಯೆ? ಸೇರಿಸಿಕೊಂಡರೆ ಆ ನಾಡು ಕೆಟ್ಟು ಅಪವಿತ್ರವಾಗಿ ಹೋಗುವುದಿಲ್ಲವೇ? ಹೀಗಿರಲು ಓ ಇಸ್ರಯೇಲ್, ಬಹುಮಂದಿ ಮಿಂಡರೊಡನೆ ವೇಶ್ಯವಾಟಿಕೆ ನಡೆಸಿದ ನೀನು ನನ್ನ ಬಳಿಗೆ ಬರುವೆಯಾ?


ಓಲಿವ್ ಮರದಲ್ಲಿ ಕಾಯಿಯನ್ನು ಉದುರಿಸಿದ ನಂತರ ಅದರ ತುತ್ತತುದಿಯಲ್ಲಿ ಎರಡು ಮೂರೇ ಕಾಯಿಗಳಿರುವುವು: ಅದರ ಫಲಭರಿತ ರೆಂಬೆಗಳಲ್ಲಿ ನಾಲ್ಕೈದೇ ಕಾಯಿಗಳಿರುವುವು. ಅಂತೆಯೇ ಇಸ್ರಯೇಲಿನಲ್ಲಿ ಅಳಿದುಳಿಯುವವರು ಕೆಲವರು ಮಾತ್ರ” ಎನ್ನುತ್ತಾರೆ ಇಸ್ರಯೇಲಿನ ದೇವರಾದ ಸರ್ವೇಶ್ವರ.


ಸೇನಾಧೀಶ್ವರ ಸರ್ವೇಶ್ವರ ಕೆಲವು ಜನರನ್ನಾದರೂ ಉಳಿಸದೆಹೋಗಿದ್ದರೆ, ಸೊದೋಮಿನ ಗತಿಯೇ, ಗೊಮೋರದ ದುರ್ದೆಶೆಯೇ ನಮಗೆ ಸಂಭವಿಸುತ್ತಿತ್ತು.


ಸರ್ವೇಶ್ವರ ಇಂತೆಂದರು : “ಇಸ್ರಯೇಲಿನ ಜನರೇ, ನೀವು ನನಗೆ ದೊಡ್ಡ ದ್ರೋಹಮಾಡಿದಿರಿ. ಈಗಲಾದರೂ ನನ್ನ ಕಡೆಗೆ ತಿರುಗಿಕೊಳ್ಳಿರಿ.


ನನ್ನ ಜನರ ದುರಾಶೆಯ ದೋಷದ ನಿಮಿತ್ತ ನಾನು ಕೋಪಗೊಂಡೆ, ದಂಡಿಸಿದೆ, ಮುಖ ಮರೆಸಿಕೊಂಡೆ, ರೋಷಭರಿತನಾದೆ. ಅವರಾದರೋ ಮೊಂಡುತನದಿಂದ ಮನಸ್ಸಿಗೆ ತೋಚಿದ ಹಾಗೆ ನಡೆಯುತ್ತಾ ಬಂದಿದ್ದಾರೆ.


ನೀನು ಉತ್ತರ ದಿಕ್ಕಿಗೆ ಹೋಗಿ ಆ ಇಸ್ರಯೇಲಿಗೆ ಈ ಸಂದೇಶವನ್ನು ಸಾರು - ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ; ಭ್ರಷ್ಟಳಾದ ಇಸ್ರಯೇಲೇ, ಹಿಂದಿರುಗು; ನಾನು ಅಷ್ಟು ಕೋಪಮುಖದಿಂದ ನಿನ್ನನ್ನು ನೋಡುವುದಿಲ್ಲ. ನಾನು ಕರುಣಾಮೂರ್ತಿ, ನಿತ್ಯಕೋಪಿಯಲ್ಲ.


ಹೌದು, ನಾನು ನಿಮಗೆ ದೊರೆಯುವೆನು. ನಿಮ್ಮನ್ನು ನಿಮ್ಮ ದುರವಸ್ಥೆಯಿಂದ ತಪ್ಪಿಸಿ, ನಿಮ್ಮನ್ನು ಅಟ್ಟಲಾಗಿದ್ದ ಸಮಸ್ತ ದೇಶಗಳಿಂದಲೂ ಸಕಲ ರಾಷ್ಟ್ರಗಳ ಮಧ್ಯೆಯಿಂದಲೂ ಒಟ್ಟುಗೂಡಿಸಿ, ನಿಮ್ಮನ್ನು ಯಾವ ಸ್ಥಳದಿಂದ ಸೆರೆಗೆ ಸಾಗಿಸಿದೆನೋ ಅಲ್ಲಿಗೆ ಮರಳಿ ಬರಮಾಡುವೆನು. ಇದು ಸರ್ವೇಶ್ವರನಾದ ನನ್ನ ನುಡಿ.’


ಹೌದು, ದಿನ ಬರುವುದು. ಆಗ ಕಾವಲುಗಾರರು ಎಫ್ರಯಿಮಿನ ಗುಡ್ಡಗಳ ಮೇಲೆ ನಿಂತು, ‘ಎದ್ದೇಳಿ, ಹೋಗೋಣ. ಬನ್ನಿ ಸಿಯೋನಿಗೆ, ನಮ್ಮ ದೇವರಾದ ಸರ್ವೇಶ್ವರನ ಸನ್ನಿಧಾನಕ್ಕೆ’ ಎಂದು ಕೂಗಿ ಕರೆ ನೀಡುವರು.”


ಅವರು ಬಂದು ಹಾಡುವರು ಸಿಯೋನ್ ಶಿಖರದಲ್ಲಿ ಬರುವರು ಪ್ರವಾಹ ಪ್ರವಾಹವಾಗಿ ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕುರಿ, ಕುರಿಮರಿ, ಸರ್ವೇಶ್ವರನ ಈ ವರದಾನಗಳನ್ನು ಅನುಭವಿಸಲಿಕ್ಕಾಗಿ. ಹದವಾಗಿ ನೀರುಹಾಯಿಸಿದ ಉದ್ಯಾನವನದಂತೆ ಅವರ ಜೀವನ ಇನ್ನು ಅವರಿಗಿರದು ವ್ಯಸನ.


“ನಾನು ನನ್ನ ನಿವಾಸಕ್ಕೆ ಹಿಂದಿರುಗುವೆನು. ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಸಾನಿಧ್ಯವನ್ನು ಹರಸುವ ತನಕ ಅಲ್ಲೇ ಇರುವೆನು. ಸಂಕಟದಲ್ಲಿ ಸಿಕ್ಕಿಕೊಂಡಾಗ, ಕೂಡಲೆ ಅವರು ನನ್ನನ್ನು ಆಶ್ರಯಿಸುವರು.”


ಅರಸನ ಮತ್ತು ಅವನ ಪದಾಧಿಕಾರಿಗಳ ಪತ್ರವನ್ನು ತೆಗೆದುಕೊಂಡುಹೋದ ದೂತರು ಇಸ್ರಯೇಲ್ ಹಾಗು ಜುದೇಯ ನಾಡುಗಳಲ್ಲೆಲ್ಲಾ ಸಂಚರಿಸಿ ರಾಜಾಜ್ಞೆಯಂತೆ ಹೀಗೆಂದು ಪ್ರಕಟಿಸಿದರು: “ಇಸ್ರಯೇಲರೇ, ಅಬ್ರಹಾಮ್, ಇಸಾಕ್, ಇಸ್ರಯೇಲರ ದೇವರಾದ ಸರ್ವೇಶ್ವರನಿಗೆ ಅಭಿಮುಖರಾಗಿರಿ. ಆಗ ಅವರೂ ನಿಮ್ಮಲ್ಲಿ ಅಸ್ಸೀರಿಯಾದ ಅರಸನ ಕೈಗೆ ಸಿಕ್ಕದೆ ತಪ್ಪಿಸಿಕೊಂಡ ಅಳಿದುಳಿದವರಿಗೆ ಅಭಿಮುಖರಾಗುವರು.


ಇಸ್ರಯೇಲಿನ ಜನರೇ, ದಿನವು ಬರಲಿದೆ. ಆಗ ಯೂಫ್ರೆಟಿಸ್ ನದಿಯಿಂದ ಈಜಿಪ್ಟ್ ದೇಶದ ನದಿಯವರೆಗೆ, ಸರ್ವೇಶ್ವರ ತೆನೆಗಳನ್ನು ಒಕ್ಕಣೆಮಾಡುವರು. ಆಗ ನಿಮ್ಮನ್ನು ಒಬ್ಬೊಬ್ಬರನ್ನಾಗಿ ಬೇರ್ಪಡಿಸಿ ಆಯ್ಕೆಮಾಡುವರು.


ಪರಿಹರಿಸಿದೆ ನಿನ್ನ ದ್ರೋಹಗಳನ್ನು ಮಂಜಿನಂತೆ ಚದರಿಸಿದ್ದೇನೆ ನಿನ್ನ ಪಾಪಗಳನು ಮೋಡದಂತೆ ವಿಮೋಚಿಸಿದ್ದೇನೆ ನೀ ನನಗೆ ಅಭಿಮುಖನಾಗಬೇಕೆಂದೆ.”


ಬಿಟ್ಟುಬಿಡಲಿ ದುಷ್ಟನು ತನ್ನ ದುರ್ಮಾರ್ಗವನು ತೊರೆದುಬಿಡಲಿ ದುರುಳನು ದುರಾಲೋಚನೆಗಳನು. ಹಿಂದಿರುಗಿ ಬರಲಿ ಸರ್ವೇಶ್ವರನ ಬಳಿಗೆ ಕರುಣೆ ತೋರುವನು ಆತನು ಅವನಿಗೆ. ಆಶ್ರಯಪಡೆಯಲಿ ಅವನು ನಮ್ಮ ದೇವರಿಂದ ಕ್ಷಮಿಸುವನಾತನು ಮಹಾಕೃಪೆಯಿಂದ.


ನಿಮ್ಮ ಪಿತೃಗಳಂತೆ ಆಗಬೇಡಿ. ಅವರಿಗೆ ಪೂರ್ವಕಾಲದ ಪ್ರವಾದಿಗಳು, ‘ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: ನಿಮ್ಮ ದುರ್ಮಾರ್ಗಗಳನ್ನೂ ದುಷ್ಕೃತ್ಯಗಳನ್ನೂ ಬಿಟ್ಟು ಹಿಂದಿರುಗಿ’ ಎಂದು ಸಾರಿದರು. ಆದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು