Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 3:6 - ಕನ್ನಡ ಸತ್ಯವೇದವು C.L. Bible (BSI)

6 ಅರಸ ಯೋಷೀಯನ ಕಾಲದಲ್ಲಿ ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದು ಹೇಳಿದರು - “ಭ್ರಷ್ಟಳಾದ ಇಸ್ರಯೇಲ್ ಮಾಡಿದ್ದನ್ನು ನೋಡಿದೆಯಾ? ಅವಳು ನನ್ನನ್ನು ತೊರೆದುಬಿಟ್ಟು ಎತ್ತರವಾದ ಗುಡ್ಡಗಳನ್ನೆಲ್ಲ ಹತ್ತಿ, ಹುಲುಸಾಗಿ ಬೆಳೆದ ಎಲ್ಲ ಮರಗಳ ಕೆಳಗೆ ಹೋಗಿ ವೇಶ್ಯೆಯಂತೆ ವರ್ತಿಸುತ್ತಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅರಸನಾದ ಯೋಷೀಯನ ಕಾಲದಲ್ಲಿ ಯೆಹೋವನು ನನಗೆ ಹೀಗೆ ಹೇಳಿದನು, “ಭ್ರಷ್ಟಳಾದ ಇಸ್ರಾಯೇಲ್ ಮಾಡಿದ್ದನ್ನು ನೋಡಿದೆಯಾ? ಅವಳು ಎತ್ತರವಾದ ಎಲ್ಲಾ ಗುಡ್ಡಗಳನ್ನು ಹತ್ತಿ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೆ ಹೋಗಿ ವ್ಯಭಿಚಾರಿಯಾಗಿ ನಡೆದಳಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮತ್ತೆ ಅರಸನಾದ ಯೋಷೀಯನ ಕಾಲದಲ್ಲಿ ಯೆಹೋವನು ನನಗೆ ಹೀಗೆ ಹೇಳಿದನು - ಭ್ರಷ್ಟಳಾದ ಇಸ್ರಾಯೇಲು ಮಾಡಿದ್ದನ್ನು ನೋಡಿದಿಯಾ? ಅವಳು ಎತ್ತರವಾದ ಎಲ್ಲಾ ಗುಡ್ಡಗಳನ್ನು ಹತ್ತಿ ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೆ ಹೋಗಿ ಸೂಳೆಯಾಗಿ ನಡೆದಳಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೂದ ಪ್ರದೇಶವನ್ನು ಯೋಷೀಯನು ಆಳುತ್ತಿದ್ದಾಗ ಯೆಹೋವನು ನನ್ನೊಂದಿಗೆ ಮಾತನಾಡಿ, “ಯೆರೆಮೀಯನೇ, ಇಸ್ರೇಲ್‌ ಎಂಬಾಕೆಯು ಮಾಡಿದ ದುಷ್ಕೃತ್ಯಗಳನ್ನು ನೀನು ನೋಡಿದಿಯಾ? ಅವಳು ನನಗೆ ಹೇಗೆ ವಂಚಿಸಿದಳು ನೋಡಿದಿಯಾ? ಅವಳು ಪ್ರತಿಯೊಂದು ಬೆಟ್ಟದ ಮೇಲೆಯೂ ಸೊಂಪಾಗಿ ಬೆಳೆದ ಪ್ರತಿಯೊಂದು ಮರದ ಕೆಳಗೂ ವಿಗ್ರಹಗಳ ಜೊತೆ ಜಾರತನ ಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆಹೋವ ದೇವರು ಅರಸನಾದ ಯೋಷೀಯನ ದಿವಸಗಳಲ್ಲಿ ನನಗೆ ಹೇಳಿದ್ದೇನೆಂದರೆ: “ಭ್ರಷ್ಟಳಾದ ಇಸ್ರಾಯೇಲು ಮಾಡಿದ್ದನ್ನು ನೀನು ನೋಡಿದೆಯೋ? ಅವಳು ಒಂದೊಂದು ಎತ್ತರವಾದ ಬೆಟ್ಟದ ಮೇಲೆಯೂ, ಒಂದೊಂದು ಹಸುರಾದ ಮರದ ಕೆಳಗೆಯೂ ಹೋಗಿ, ಅಲ್ಲಿ ವೇಶ್ಯೆತನ ಮಾಡಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 3:6
24 ತಿಳಿವುಗಳ ಹೋಲಿಕೆ  

“ಅವಳ ತಂಗಿಯಾದ ಒಹೊಲೀಬಳು ಇದನ್ನು ನೋಡಿಯೂ ಅವಳಿಗಿಂತ ಅಧಿಕವಾಗಿ ಮೋಹಗೊಂಡು, ಅಕ್ಕನ ಹಾದರಕ್ಕಿಂತ ಹೆಚ್ಚಾಗಿ ಹಾದರವನ್ನು ನಡೆಸಿ ಅವಳನ್ನು ಮೀರುವಷ್ಟು ಕೆಟ್ಟವಳಾದಳು.


ನಾನು ಪ್ರಮಾಣಪೂರ್ವಕವಾಗಿ ಅವರಿಗೆ ವಾಗ್ದಾನಮಾಡಿದ ನಾಡಿಗೆ ಅವರನ್ನು ಸೇರಿಸಿದ ಮೇಲೆ, ಅವರು ಎತ್ತರವಾದ ಎಲ್ಲ ಗುಡ್ಡಗಳನ್ನೂ ಸೊಂಪಾಗಿ ಬೆಳೆದಿರುವ ಎಲ್ಲ ಮರಗಳನ್ನೂ ನೋಡಿ, ಅಲ್ಲಿ ಯಜ್ಞಪಶುಗಳನ್ನು ವಧಿಸಿ, ನನ್ನನ್ನು ರೇಗಿಸುವ ನೈವೇದ್ಯವನ್ನರ್ಪಿಸಿ, ಸುಗಂಧಹೋಮಮಾಡಿ, ಪಾನದ್ರವ್ಯವನ್ನು ಸುರಿದು, ಬಲಿ ಒಪ್ಪಿಸುತ್ತಿದ್ದರು.


ಒಂದೊಂದು ಬೀದಿಯ ಕೊನೆಯಲ್ಲೂ ನೀನು ಮಂಟಪವನ್ನು ಕಟ್ಟಿ ಎಲ್ಲಾ ಚೌಕಗಳಲ್ಲಿ ಜಗಲಿಯನ್ನು ಸ್ಥಾಪಿಸಿಕೊಂಡಿರುವೆ; ದೊರೆತದ್ದನ್ನು ಇದು ಕಡಿಮೆಯೆಂದು ತಿರಸ್ಕರಿಸುವ ಸೂಳೆಯಂತೆ ನೀನು ನಡೆಯುವವಳಲ್ಲ.


ನಿಮ್ಮ ಮಕ್ಕಳು ಸೊಂಪಾಗಿ ಬೆಳೆದ ಮರಗಳನ್ನಾಗಲಿ ಎತ್ತರವಾದ ಗುಡ್ಡಗಳನ್ನಾಗಲಿ, ಬೈಲಿನ ಬೆಟ್ಟಗಳನ್ನಾಗಲಿ ಕಂಡಾಗಲೆಲ್ಲ ಅವರ ಬಲಿಪೀಠಗಳನ್ನು ಹಾಗು ಅಶೇರ ವಿಗ್ರಹಸ್ತಂಭಗಳನ್ನು ಜ್ಞಾಪಿಸಿಕೊಳ್ಳುತ್ತಾರೆ.


ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ. ತಮ್ಮ ಸ್ವಂತ ಆಲೋಚನೆಗಳನ್ನು ಅನುಸರಿಸಿದರು. ತಮ್ಮ ದುಷ್ಟಹೃದಯದ ನಿಮಿತ್ತ ಹಟಮಾರಿಗಳಂತೆ ನಡೆದುಕೊಂಡರು. ಮುಂದೆ ಸಾಗದೆ ಹಿಂದಿರುಗಿಯೇ ಹೋದರು.


ಭ್ರಷ್ಟಳಾದ ಇಸ್ರಯೇಲ್ ನನಗೆ ವಿಮುಖಳಾಗಿ ವ್ಯಭಿಚಾರಿಣಿಯಂತೆ ವರ್ತಿಸಿದ ಕಾರಣದಿಂದಲೆ, ನಾನು ಅವಳನ್ನು ನಿರಾಕರಿಸಿ ವಿವಾಹ ವಿಚ್ಛೇದನ ಪತ್ರಕೊಟ್ಟದ್ದನ್ನು ಜುದೇಯವೆಂಬ ದ್ರೋಹಿಯಾದ ಅವಳ ತಂಗಿ ನೋಡಿಯೂ ಅಂಜದೆಹೋದಳು. ತಾನೂ ಹೋಗಿ ವೇಶ್ಯೆಯಂತೆ ವರ್ತಿಸಿದಳು.


ಬಲಿಯರ್ಪಿಸಲು ಎತ್ತರವಾದ, ದೊಡ್ಡದಾದ ಬೆಟ್ಟವನ್ನು ಹತ್ತಿರುವೆ. ಆದರೆ ಅಲ್ಲಿ ಕಾಮಕೇಳಿಗಳಲ್ಲಿ ತೊಡಗಿರುವೆ.


ಪಿತೃಗಳಂತೆಯೇ ಅವರೂ ತಮಗಾಗಿ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡರು. ಪ್ರತಿಯೊಂದು ದಿಣ್ಣೆಯ ಮೇಲೆ ಹಾಗು ಚೆನ್ನಾಗಿ ಬೆಳೆದಿದ್ದ ಪ್ರತಿಯೊಂದು ಮರದ ಕೆಳಗೆ, ಕಲ್ಲಿನ ಕಂಬಗಳನ್ನೂ ಅಶೇರ ವಿಗ್ರಹಸ್ತಂಭಗಳನ್ನೂ ನಿಲ್ಲಿಸಿದರು.


ಯೋಷೀಯನು ಅರಸನಾದಾಗ ಅವನಿಗೆ ಎಂಟು ವರ್ಷ ಪ್ರಾಯ. ಅವನು ಜೆರುಸಲೇಮಿನಲ್ಲಿ ಮೂವತ್ತೊಂದು ವರ್ಷ ಆಳಿದನು.


ಜುದೇಯದ ಅರಸನೂ ಅಮೋನನ ಮಗನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರುಷದಲ್ಲಿ ಸರ್ವೇಶ್ವರ ಸ್ವಾಮಿಯ ವಾಣಿ ಇವನಿಗೆ ಕೇಳಿಬಂತು.


ಇಸ್ರಯೇಲ್ ವಂಶದವರೂ ಜುದೇಯ ವಂಶದವರೂ ನನಗೆ ಬಹಳವಾಗಿ ದ್ರೋಹವೆಸಗಿದ್ದಾರೆ. ಇದು ಸರ್ವೇಶ್ವರನಾದ ನನ್ನ ನುಡಿ.”


ನನ್ನ ಮಾತನ್ನು ಕೇಳದೆಹೋದ ತಮ್ಮ ಮೂಲಪಿತೃಗಳ ದುಷ್ಕೃತ್ಯಗಳ ಕಡೆ ಈ ಜನರು ತಿರುಗಿಕೊಂಡಿದ್ದಾರೆ. ಅನ್ಯದೇವತೆಗಳನ್ನು ಹಿಂಬಾಲಿಸುತ್ತಿದ್ದಾರೆ. ಅವುಗಳನ್ನು ಪೂಜಿಸುತ್ತಿದ್ದಾರೆ. ನಾನು ಅವರ ಪೂರ್ವಜರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಇಸ್ರಯೇಲ್ ವಂಶದವರೂ ಜುದೇಯ ವಂಶದವರೂ ಮೀರಿದ್ದಾರೆ.


“ನಂಬಿಕೆ ದ್ರೋಹಿಯಾದ ಕುವರಿಯೇ, ಎಂದಿನವರೆಗೆ ಅತ್ತಿತ್ತ ಅಲೆದಾಡುತ್ತಿರುವೆ? ಸರ್ವೇಶ್ವರನಾದ ನಾನು ಅಪೂರ್ವವಾದುದನ್ನು ಉಂಟಾಗಿಸಿರುವೆ: ಇಗೋ, ಸ್ತ್ರೀಯಾದವಳು ತನ್ನ ಪುರುಷನನ್ನು ಕಾಪಾಡುವಳು.”


ಹಿರಿಯಳ ಹೆಸರು ಒಹೊಲ, ಕಿರಿಯವಳ ಹೆಸರು ಒಹೊಲೀಬ. ಅವರು ನನ್ನವರಾಗಿ ಗಂಡು ಹೆಣ್ಣು ಮಕ್ಕಳನ್ನು ಹೆತ್ತರು. ಒಹೊಲ ಸಮಾರಿಯವನ್ನೂ, ಒಹೊಲೀಬ ಜೆರುಸಲೇಮನ್ನೂ ಸೂಚಿಸುವ ಹೆಸರುಗಳು.


ಅವರು ಗಿರಿಶಿಖರಗಳ ಮೇಲೆ ಬಲಿಯನರ್ಪಿಸುತ್ತಾರೆ. ಬೆಟ್ಟಗುಡ್ಡಗಳ ಮೇಲೆ ಧೂಪಹಾಕುತ್ತಾರೆ. ದಟ್ಟ ನೆರಳಿನ ಅಲ್ಲೋನ್, ಲಿಬ್ನೆ, ಏಲಾ ವೃಕ್ಷಗಳ ಅಡಿಯಲ್ಲಿ ಇಂತಹುದನ್ನೆಲ್ಲ ಮಾಡುತ್ತಾರೆ. ಹೀಗಿರಲು ನಿಮ್ಮ ಪುತ್ರಿಯರು ಸೂಳೆಯರಾಗುವರು. ನಿಮ್ಮ ಸೊಸೆಗಳು ವ್ಯಭಿಚಾರಿಣಿಗಳಾಗುವರು. ಇದರಲ್ಲಿ ಆಶ್ಚರ್ಯವೇನಿಲ್ಲ.


ಅವರು ನನ್ನ ಕಡೆಯಿಂದ ದೂರಹೋಗುವ ಹಠಹಿಡಿದಿದ್ದಾರೆ; ಅವರು ನೊಗದ ಭಾರವನ್ನು ತಾಳದೆ ಕೂಗಿಕೊಂಡರೂ ಅದನ್ನು ಬಿಚ್ಚುವವರು ಯಾರೂ ಇಲ್ಲ.


ಇಸ್ರಯೇಲರು ಇವರ ಮಾತನ್ನೂ ಕೇಳದೆ ಅನ್ಯದೇವತೆಗಳನ್ನು ಪೂಜಿಸಿ ಅವುಗಳಿಗೆ ಅಡ್ಡಬಿದ್ದು ದೇವದ್ರೋಹಿಗಳಾದರು. ಸರ್ವೇಶ್ವರನ ಆಜ್ಞೆಗಳನ್ನು ಪಾಲಿಸುತ್ತಿದ್ದ ತಮ್ಮ ಪೂರ್ವಜರ ಮಾರ್ಗವನ್ನು ಬೇಗನೆ ತ್ಯಜಿಸಿಬಿಟ್ಟರು. ಅವರಂತೆ ನಡೆಯಲೇ ಇಲ್ಲ.


ಅಶುದ್ಧರಾದರವರು ತಮ್ಮ ದುಷ್ಕೃತ್ಯಗಳಿಂದ I ದೇವದ್ರೋಹಿಗಳಾದರು ದುರಾಚಾರಗಳಿಂದ II


ಮಾಟಗಾತಿಯ ಮಕ್ಕಳೇ, ವೇಶ್ಯೆ ವ್ಯಭಿಚಾರಿಗಳ ಸಂತಾನದವರೇ, ಬನ್ನಿ ಇಲ್ಲಿಗೆ.


ಹೀಗಿರಲು ಎಲೌ ಜಾರಿಣಿಯೇ, ಸರ್ವೇಶ್ವರನ ಈ ವಾಕ್ಯವನ್ನು ಕೇಳು: ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು