Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 30:17 - ಕನ್ನಡ ಸತ್ಯವೇದವು C.L. Bible (BSI)

17 ‘ಇಗೋ, ಸಿಯೋನ್ ಯಾರಿಗೂ ಬೇಡವಾದವಳು, ಭ್ರಷ್ಟಳಾದಳು’ ಎಂದು ಜನರು ನಿನ್ನನ್ನು ಜರೆವುದು ನನಗೆ ಹಿಡಿಸದು ನಿನ್ನನ್ನು ಗುಣಪಡಿಸುವೆನು ನಿನ್ನ ಗಾಯಗಳನ್ನು ವಾಸಿಮಾಡುವೆನು - ಇದು ಸರ್ವೇಶ್ವರನಾದ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೆಹೋವನು ಇಂತೆನ್ನುತ್ತಾನೆ, “ಇಗೋ, ‘ಇದು ಚೀಯೋನ್, ಯಾರಿಗೂ ಬೇಡವಾಗಿರುವ ನಗರ’ ಎಂದು ಜನರು ಹೇಳಿ, ನಿನ್ನನ್ನು ಭ್ರಷ್ಟಳೆಂದದ್ದನ್ನು ನಾನು ಸಹಿಸಲಾರದೆ, ನಿನ್ನನ್ನು ಗುಣಪಡಿಸಿ ನಿನ್ನ ಬಾಸುಂಡೆಗಳನ್ನು ವಾಸಿಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೆಹೋವನು ಇಂತೆನ್ನುತ್ತಾನೆ - ಇಗೋ, ಇದು ಚೀಯೋನ್, ಯಾರಿಗೂ ಬೇಡವಾಗಿರುವ ನಗರಿ ಎಂದು ಜನರು ಹೇಳಿ ನಿನ್ನನ್ನು ಭ್ರಷ್ಟಳೆಂದದ್ದನ್ನು ನಾನು ಸಹಿಸಲಾರದೆ ನಿನಗೆ ಗುಣಪಡಿಸಿ ನಿನ್ನ ಬಾಸುಂಡೆಗಳನ್ನು ವಾಸಿಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಇದು ಯೆಹೋವನ ನುಡಿ: “ನಾನು ಪುನಃ ನಿಮಗೆ ಆರೋಗ್ಯವನ್ನು ಕೊಡುವೆನು; ನಿಮ್ಮ ಗಾಯಗಳನ್ನು ವಾಸಿಮಾಡುವೆನು. ಏಕೆಂದರೆ ಚೀಯೋನ್ ಭ್ರಷ್ಟಳಾದಳೆಂದೂ ‘ಯಾರಿಗೂ ಬೇಡವಾದ ನಗರ’ವೆಂದೂ ಬೇರೆಯವರು ಹೇಳಿದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಚೀಯೋನು ಬೇಡವಾದದ್ದು, ಅದನ್ನು ನೋಡಿಕೊಳ್ಳುವವರು ಯಾರೂ ಇಲ್ಲ, ಎಂದು ಅವರು ನಿನ್ನ ವಿಷಯ ಹೇಳುವುದನ್ನು ನಾನು ಸಹಿಸಲಾರದೆ, ನಿನಗೆ ಕ್ಷೇಮವನ್ನುಂಟು ಮಾಡಿ, ನಿನ್ನ ಗಾಯಗಳನ್ನು ಸ್ವಸ್ಥ ಮಾಡುವೆನು,’ ಎಂಬುದಾಗಿ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 30:17
36 ತಿಳಿವುಗಳ ಹೋಲಿಕೆ  

ಗುಣಪಡಿಸಿದನವರನು ತನ್ನ ವಾಣಿಯಿಂದ I ತಪ್ಪಿಸಿದನು ಅವರನು ವಿನಾಶಕೂಪದಿಂದ II


ಆದರೂ ಈ ನಗರವನ್ನು ಉದ್ಧಾರಮಾಡಿ, ಸುಧಾರಿಸಿ, ಇದರ ನಿವಾಸಿಗಳನ್ನು ಗುಣಪಡಿಸುವೆನು. ಸಮೃದ್ಧಿಯಾದ ಸೌಭಾಗ್ಯವನ್ನು ಹಾಗೂ ಶಾಂತಿಸಮಾಧಾನವನ್ನು ಇವರಿಗೆ ಅನುಗ್ರಹಿಸುವೆನು.


ನಾವು ಪಾಪದ ಪಾಲಿಗೆ ಸತ್ತು, ಸತ್ಯಕ್ಕೋಸ್ಕರ ಜೀವಿಸುವಂತೆ ಕ್ರಿಸ್ತಯೇಸು ತಮ್ಮ ದೇಹದಲ್ಲಿ ನಮ್ಮ ಪಾಪಗಳನ್ನು ಹೊತ್ತು ಶಿಲುಬೆಯ ಮರವನ್ನೇರಿದರು. ಅವರ ಗಾಯಗಳಿಂದ ನೀವು ಗುಣಹೊಂದಿದಿರಿ.


ಮನ್ನಿಸುವನಾತ ನನ್ನ ದೋಷಗಳನು I ವಾಸಿಮಾಡುವನು ನನ್ನ ರೋಗಗಳನು II


ಅಲ್ಲಿ ಸರ್ವೇಶ್ವರ ಇಸ್ರಯೇಲರಿಗೆ ಒಂದು ನಿಯಮವನ್ನು ಕೊಟ್ಟರು. ಅದು ಮಾತ್ರವಲ್ಲ, ಅವರನ್ನು ಪರೀಕ್ಷಿಸಿದರು. ಅವರಿಗೆ, “ನೀವು ನಿಮ್ಮ ದೇವರಾದ ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ, ನನ್ನ ದೃಷ್ಟಿಗೆ ಸರಿಬೀಳುವುದನ್ನೆ ಮಾಡಿ ನನ್ನ ಆಜ್ಞೆಗಳಿಗೆ ವಿಧೇಯರಾಗಿದ್ದು, ನನ್ನ ಕಟ್ಟಳೆಗಳನ್ನೆಲ್ಲ ಅನುಸರಿಸಿ ನಡೆದರೆ ನಾನು ಈಜಿಪ್ಟಿನವರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಮಾಡುವುದಿಲ್ಲ. ಸರ್ವೇಶ್ವರನೆಂಬ ನಾನೇ ನಿಮಗೆ ಆರೋಗ್ಯದಾಯಕ,” ಎಂದರು.


ಪುನಶ್ಚೇತನಗೊಳಿಸುವನು ನನ್ನ ಪ್ರಾಣವನಾತ I ಸನ್ಮಾರ್ಗದಲಿ ನಡೆಸುವನು ತನ್ನ ನಾಮನಿಮಿತ್ತ II


ನನ್ನನ್ನು ಜನರು ಮರೆಹೋಗುತ್ತಾ ಹೀಗೆನ್ನುವರು: “ಬನ್ನಿ, ಸರ್ವೇಶ್ವರಸ್ವಾಮಿಯ ಬಳಿಗೆ ಹಿಂದಿರುಗೋಣ. ಅವರು ನಮ್ಮನ್ನು ಛಿದ್ರಗೊಳಿಸಿದವರು. ಅವರು ನಮ್ಮನ್ನು ಗಾಯಗೊಳಿಸಿದ್ದಾರೆ; ಅವರೇ ನಮ್ಮ ಗಾಯಗಳನ್ನು ಕಟ್ಟಿ ಗುಣಪಡಿಸುವರು. ಒಂದೆರಡು ದಿನಗಳ ನಂತರ ಅವರು ನಮ್ಮನ್ನು ಬದುಕಿಸುವರು.


“ನನ್ನ ನಾಮದಲ್ಲಿ ಭಯಭಕ್ತಿಯಿಂದ ಇರುವ ನಿಮಗಾದರೋ ಜೀವೋದ್ಧಾರಕನೆಂಬ ಸೂರ್ಯನು ಉದಯಿಸಿ, ಸುಕ್ಷೇಮವನ್ನೀಯುವ ಕಿರಣಗಳನ್ನು ಬೀರುವನು. ಕೊಟ್ಟಿಗೆಯಿಂದ ಹೊರಬಂದ ಕರುಗಳಂತೆ ನೀವು ಕುಣಿದು ಕುಪ್ಪಳಿಸುವಿರಿ.


“ತಪ್ಪಿಸಿಕೊಂಡಿದ್ದನ್ನು ಹುಡುಕುವೆನು, ದಾರಿತಪ್ಪಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದುದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿನ ಕುರಿಗಳನ್ನಾದರೋ ಧ್ವಂಸಮಾಡುವೆನು; ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.”


ನಗರದ ಹೆದ್ದಾರಿಯ ಮಧ್ಯದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲೂ ಜೀವವೃಕ್ಷವಿತ್ತು. ಅದು ವರ್ಷದಲ್ಲಿ ಹನ್ನೆರಡು ಸಾರಿ ಫಲಕೊಡುವಂಥದ್ದು; ಪ್ರತೀ ತಿಂಗಳೂ ಫಸಲನ್ನೀಯುವಂಥದ್ದು. ಆ ವೃಕ್ಷದ ಎಲೆಗಳನ್ನು ರಾಷ್ಟ್ರಗಳಿಗೆ ಸಿದ್ದೌಷಧಿಯನ್ನಾಗಿ ಉಪಯೋಗಿಸಲಾಗುವುದು.


ಇದಲ್ಲದೆ ಚಂದ್ರನ ಬೆಳಕು ಸೂರ್ಯನ ಬೆಳಕಿನಂತಿರುವುದು. ಸೂರ್ಯನ ಬೆಳಕು ಏಳ್ಮಡಿ ಹೆಚ್ಚುವುದು. ಏಳು ದಿನಗಳ ಬೆಳಕು ಒಂದೇ ದಿನದ ಬೆಳಕಿನಂತಾಗುವುದು. ಅಂದು ಸರ್ವೇಶ್ವರ ತಮ್ಮ ಜನರ ಹುಣ್ಣುಗಳನ್ನು ಕಟ್ಟುವರು. ತಮ್ಮ ಪೆಟ್ಟಿನಿಂದ ಜನರಿಗಾದ ಗಾಯಗಳನ್ನು ಗುಣಪಡಿಸುವರು.


ನಿನ್ನ ಪರ ವಾದಿಸುವವರಿಲ್ಲ, ನಿನ್ನ ವ್ರಣಕ್ಕೆ ಔಷಧವಿಲ್ಲ ನಿನ್ನನ್ನು ಆರೈಕೆ ಮಾಡುವವರಿಲ್ಲ.


ಗಿಲ್ಯಾದಿನಲ್ಲಿ ಔಷಧವಿಲ್ಲವೆ? ಅಲ್ಲಿ ವೈದ್ಯನು ಸಿಕ್ಕನೆ? ಮತ್ತೇಕೆ ಗುಣವಾಗಲಿಲ್ಲ ನನ್ನ ಜನತೆಗೆ?


ಸರ್ವೇಶ್ವರ : “ಭ್ರಷ್ಟರಾದ ಜನರೇ, ಹಿಂದಿರುಗಿ ಬನ್ನಿ, ನಾನು ನಿಮ್ಮ ಭ್ರಷ್ಟತನವನ್ನು ಪರಿಹರಿಸುವೆನು.”


ಬಡವರ ಬವಣೆ ತಿಳಿಯಿತೆನಗೆ; ದಲಿತರ ನರಳಾಟ ಕೇಳಿಸಿತೆನಗೆ I ಎದ್ದು ಬರುವೆ, ಹಗೆಗಳಿಂದವರನು ಉದ್ಧರಿಸುವೆ” ಇದು ಪ್ರಭುವಿನ ಹೇಳಿಕೆ II


ಇಸ್ರಯೇಲರಲ್ಲಿ ಸೆರೆಹೋದವರನ್ನು, ಜುದೇಯದಿಂದ ಚದರಿಹೋದವರನ್ನು ಕರೆತರಲು, ಧರೆಯ ಚತುರ್ದಿಕ್ಕುಗಳಿಂದವರನ್ನು ಬರಮಾಡಲು, ರಾಷ್ಟ್ರಗಳಿಗೆ ಗುರುತಾಗಿ ಧ್ವಜವನ್ನು ಆತ ಏರಿಸುವನು.


“ಸರ್ವೇಶ್ವರನಾದ ನಾನು ಆರಿಸಿಕೊಂಡಿದ್ದ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದೇನೆ ಎಂದು ಜನರು ಆಡಿಕೊಳ್ಳುತ್ತಿದ್ದಾರೆ. ಈ ಮಾತನ್ನು ನೀನು ಗಮನಿಸಿರಬೇಕು. ನನ್ನ ಜನರು ಒಂದು ಜನಾಂಗವೇ ಅಲ್ಲ ಎನ್ನುವಷ್ಟರ ಮಟ್ಟಿಗೆ ಅವರು ಅಸಡ್ಡೆ ಮಾಡುತ್ತಿದ್ದಾರೆ ಅಲ್ಲವೆ?


ನೀನು ಇಸ್ರಯೇಲಿನ ಪರ್ವತಗಳನ್ನು ನೋಡಿ, - ‘ಆಹಾ, ಹಾಳಾದವು, ನಮಗೆ ತಿನ್ನುವ ತುತ್ತಾಗಿವೆ,’ ಎಂದು ಮಾಡಿದ ದೂಷಣೆಗಳು ಸರ್ವೇಶ್ವರನಾದ ನನ್ನ ಕಿವಿಗೆ ಬಿದ್ದಿವೆ ಎಂಬುದು ನಿನಗೆ ಗೊತ್ತಾಗುವುದು.


ಅವರು ಆ ಜನಾಂಗಗಳೊಳಗೆ ಸೇರಿಕೊಂಡ ಮೇಲೆ, ‘ಓಹೋ, ಇವರು ಸರ್ವೇಶ್ವರನ ಪ್ರಜೆಗಳು, ಆತನ ದೇಶದಿಂದ ಭ್ರಷ್ಟರಾಗಿ ಬಂದಿದ್ದಾರೆ’ ಎಂದೆನಿಸಿಕೊಂಡರು. ನನ್ನ ಪರಿಶುದ್ಧನಾಮಕ್ಕೆ ಅಪಕೀರ್ತಿಯನ್ನು ತಂದರು.


ಹಾದುಹೋಗುವವರೆಲ್ಲ ಕೈ ತಟ್ಟುತ್ತಾರಲ್ಲಾ ನಿನ್ನನ್ನು ನೋಡಿ ಜೆರುಸಲೇಮ್ ನಗರಿಯಾದ ನಿನ್ನನ್ನು ಗುರುತಿಸಿ ! “ಆಹಾ, ನೀನೇನೋ ಸರ್ವಾಂಗ ಸುಂದರಿ, ವಿಶ್ವಾನಂದದಾಯಕಿ !” ಎಂದು ಮೂದಲಿಸುತ್ತಾರಲ್ಲಾ ತಲೆಯಾಡಿಸಿ, ಸಿಳ್ಳುಹಾಕಿ !


ಅಕ್ಕಪಕ್ಕದಲಿ ಸಹಾಯಕರಾರೂ ಇಲ್ಲ I ಆಶ್ರಯರಹಿತ, ಹಿತಚಿಂತಕರಾರೂ ನನಗಿಲ್ಲ II


ಸಿಯೋನಿನ ಯಾವ ನಿವಾಸಿಯೂ, “ನಾನು ಅಸ್ವಸ್ಥನು” ಎಂದು ಹೇಳನು, ಅಲ್ಲಿಯ ಜನರ ಪಾಪವು ಪರಿಹಾರವಾಗುವುದು.


ಇಸ್ರಯೇಲಿನ ಸೆರೆಹೋದ ಜನರನ್ನು ಬರಮಾಡಿಕೊಳ್ಳುವ ದೇವರಾದ ಸರ್ವೇಶ್ವರ, “ನಾನು ಕೂಡಿಸಿಕೊಂಡ ಇಸ್ರಯೇಲ ಜನರೊಂದಿಗೆ ಇನ್ನೂ ಹಲವರನ್ನು ಕೂಡಿಸುವೆನು” ಎಂದಿದ್ದಾರೆ.


“ಇದನ್ನು ಆಚರಿಸುವಾಗ ನೀವು ಉದಯಕಾಲದ ಸೂರ್ಯನಂತೆ ಪ್ರಜ್ವಲಿಸುವಿರಿ. ಆರೋಗ್ಯಭಾಗ್ಯವು ನಿಮಗೆ ಬೇಗನೆ ದೊರಕುವುದು. ನಿಮ್ಮ ಸದಾಚಾರವೆ ನಿಮಗೆ ಮುಂಬಲವಾಗಿ ನಡೆಸುವುದು; ಸರ್ವೇಶ್ವರ ಸ್ವಾಮಿಯ ಮಹಿಮೆ ನಿಮಗೆ ಹಿಂಬಲವಾಗಿ ಇರುವುದು.


ಪರಿತ್ಯಕ್ತಳೂ ದ್ವೇಷಿತಳೂ ಆದ ನಿರ್ಜನ ನಗರಿಯೇ, ನಿತ್ಯಘನತೆಯನು, ಶಾಶ್ವತ ಸಂತೋಷವನು ನೀಡುವೆ ನಿನಗೆ.


ಹೇ ಸರ್ವೇಶ್ವರಾ, ನನ್ನನ್ನು ಸ್ವಸ್ಥಪಡಿಸಿರಿ, ನಾನು ಸ್ವಸ್ಥನಾಗುವೆನು. ನನ್ನನ್ನು ರಕ್ಷಿಸಿರಿ, ನಾನು ರಕ್ಷಿತನಾಗಿಯೆ ತೀರುವೆನು. ನೀವೇ ನನಗೆ ಸ್ತುತ್ಯಾರ್ಹರು !


ಎಫ್ರಯಿಮಿಗೆ ಅಂಬೆಗಾಲಿಡಲು ಕಲಿಸಿದವನು ನಾನೇ ಅದನ್ನು ಕೈಗಳಲ್ಲಿ ಎತ್ತಿಕೊಂಡು ಆಡಿಸಿದವನು ನಾನೇ ಆ ಜನರನ್ನು ಸ್ವಸ್ಥಮಾಡಿದವನೂ ನಾನೇ; ಆದರೆ ಅರಿತುಕೊಳ್ಳದೆಹೋದರು ಈ ವಿಷಯವನೇ.


ಗಾಯಮಾಡುವವನೂ ಗಾಯಕಟ್ಟುವವನೂ ದೇವರೇ ಹೊಡೆಯುವುದೂ, ಗುಣಪಡಿಸುವುದೂ ಆತನ ಕೈಯೇ.


ಗಂಡಬಿಟ್ಟು ಮನನೊಂದಿರುವ ಪತ್ನಿ ನೀನು ಹೌದು, ತ್ಯಜಿಸಲಾದ ಯೌವನದ ಪತ್ನಿ ನೀನು. ಸರ್ವೇಶ್ವರ ಕನಿಕರಿಸಿ ಕರೆದಿಹನು ನಿನ್ನನು. ಆ ನಿನ್ನ ದೇವರ ನುಡಿಯಿದು :


“ಅವರ ವರ್ತನೆಯನ್ನು ನೋಡಿದ್ದೇನೆ. ಆದರೂ ಅವರನ್ನು ಸ್ವಸ್ಥಪಡಿಸುತ್ತೇನೆ. ಅವರಿಗೆ ದಾರಿತೋರಿಸುತ್ತಾ, ಅವರಿಗೂ ಅವರಿಗಾಗಿ ದುಃಖಿಸುವವರಿಗೂ ಸಾಂತ್ವನ ಸಂಭಾವನೆಯನ್ನು ಕೊಡುತ್ತೇನೆ.


ಅವರ ಬಾಯಿಂದ ಸ್ತುತಿಸ್ತೋತ್ರ ಹೊರಬರುವಂತೆ ಮಾಡುತ್ತೇನೆ. ಶಾಂತಿ! ಹತ್ತಿರವಿರುವವರಿಗೂ ದೂರವಿರುವವರಿಗೂ ಶಾಂತಿಸಮಾಧಾನ ! ನಾನು ಅವರನ್ನು ಸ್ವಸ್ಥಪಡಿಸುತ್ತೇನೆ,” ಎನ್ನುತ್ತಾರೆ ಸರ್ವೇಶ್ವರ ಸ್ವಾಮಿ.


ನನ್ನ ಗುಡಾರ ಹಾಳಾಗಿದೆ, ಹಗ್ಗಗಳು ಕಿತ್ತುಹೋಗಿವೆ. ಮಕ್ಕಳು ನನ್ನನ್ನು ಬಿಟ್ಟು ಕಾಣದೆಹೋಗಿದ್ದಾರೆ ಗುಡಾರ ಹಾಕಲು, ಪರದೆ ಬಿಗಿಯಲು, ಯಾರೂ ಇಲ್ಲವಾಗಿದ್ದಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು