Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 30:7 - ಕನ್ನಡ ಸತ್ಯವೇದವು C.L. Bible (BSI)

7 ಹೌದು, ಭಯಂಕರವಾದ ದಿನ ಬರಲಿದೆ, ಅದಕ್ಕಿರದು ಎಣೆ! ಅದು ಇಕ್ಕಟ್ಟಿನ ದಿನ, ಆದರೂ ಅದರಿಂದ ಯಕೋಬ್ಯರಿಗಿದೆ ಬಿಡುಗಡೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅಯ್ಯೋ, ಆ ದಿನವು ಘೋರವಾದದ್ದು, ಅಂಥ ದಿನ ಮತ್ತೊಂದಿಲ್ಲ, ಅದು ಯಾಕೋಬರಿಗೆ ಇಕ್ಕಟ್ಟಿನ ದಿನ; ಆದರೂ ಅವರು ಅದರಿಂದ ಪಾರಾಗುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅಯ್ಯೋ, ಆ ದಿನವು ಘೋರವಾದದ್ದು, ಅದಕ್ಕೆ ಎಣೆಯಿಲ್ಲ; ಅದು ಯಾಕೋಬ್ಯರಿಗೆ ಇಕ್ಕಟ್ಟಿನ ದಿನ; ಆದರೂ ಅದರಿಂದ ಪಾರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ಇದು ಯಾಕೋಬ್ಯರಿಗೆ ಬಹು ಮುಖ್ಯವಾದ ಸಮಯ. ಇದು ಬಹಳ ಕಷ್ಟದ ಸಮಯ. ಎಂದೂ ಇಂಥ ಕಷ್ಟದ ಸಮಯ ಬರುವದಿಲ್ಲ. ಆದರೆ ಯಾಕೋಬ್ ಇದರಿಂದ ಪಾರಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅಯ್ಯೋ, ಈ ದಿನವು ಘೋರವಾದದ್ದು, ಅದಕ್ಕೆ ಎಣೆ ಇಲ್ಲ; ಅದು ಯಾಕೋಬ್ಯರಿಗೆ ಇಕ್ಕಟ್ಟಿನ ದಿನ; ಆದರೂ ಅವರು ಅದರಿಂದ ಪಾರಾಗುವರು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 30:7
37 ತಿಳಿವುಗಳ ಹೋಲಿಕೆ  

“ಆ ಕಾಲದಲ್ಲಿ ನಿನ್ನ ಜನರ ಪಕ್ಷ ವಹಿಸುವ ಮಹಾದೂತನಾದ ಮಿಕಾಯೇಲನು ಕಾಣಿಸಿಕೊಳ್ಳುವನು. ಮೊತ್ತಮೊದಲು, ಮಾನವ ಜನಾಂಗ ಉಂಟಾದಂದಿನಿಂದ ಅಂದಿನವರೆಗೆ ಸಂಭವಿಸದ ಘೋರ ಸಂಕಟ ಉಂಟಾಗುವುದು. ಆಗ ನಿನ್ನ ಜನರಲ್ಲಿ ಯಾರ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಇರುವುದೋ ಅವರೆಲ್ಲರು ಜೀವೋದ್ಧಾರವನ್ನು ಪಡೆಯುವರು.


“ಇಗೋ, ಆ ದಿನ ಬರುತ್ತಿದೆ. ಒಲೆಯಂತೆ ಉರಿಯುತ್ತಿದೆ. ಎಲ್ಲ ಅಹಂಕಾರಿಗಳು, ದುಷ್ಕರ್ಮಿಗಳು, ಒಣಹುಲ್ಲಿನಂತೆ ಆಗಿಹೋಗಿದ್ದಾರೆ. ಆದ್ದರಿಂದ ಬರಲಿರುವ ಆ ದಿನದಂದು ಸುಟ್ಟು ಭಸ್ಮವಾಗುತ್ತಾರೆ. ಬುಡ ರೆಂಬೆಸಹಿತ ಬೂದಿಯಾಗುತ್ತದೆ,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ನಮ್ಮ ದೇವರು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿದ್ದಾರೆ. ನಮ್ಮನ್ನೂ ನಮ್ಮನ್ನಾಳುವ ಅಧಿಪತಿಗಳನ್ನೂ ಖಂಡಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾರೆ. ಜೆರುಸಲೇಮಿಗೆ ಆದಂಥ ಕೇಡು ವಿಶ್ವದಲ್ಲಿ ಎಂದೂ ಆಗಲಿಲ್ಲ.


ಸರ್ವೇಶ್ವರ ಗರ್ಜಿಸಿ ತಮ್ಮ ಸೈನ್ಯಕ್ಕೆ ಆಜ್ಞಾಪಿಸುತ್ತಾರೆ. ಅವರ ಸೈನ್ಯ ದೊಡ್ಡದು. ಅವರ ಆಜ್ಞೆಯನ್ನು ಪಾಲಿಸುವವನು ಬಲಾಢ್ಯನು. ಸರ್ವೇಶ್ವರಸ್ವಾಮಿಯ ದಿನ ಮಹತ್ತರ; ಅತಿ ಭಯಂಕರ; ಅದರೆದುರಿಗೆ ನಿಲ್ಲಲು ಯಾರಿಗಿದೆ ಧೈರ್ಯ?


ಅನಂತರ ಇಸ್ರಯೇಲ್ ಜನಾಂಗವೆಲ್ಲವೂ ಜೀವೋದ್ಧಾರವನ್ನು ಹೊಂದುವುದು. ಇದಕ್ಕೆ ಆಧಾರವಾಗಿ ಪವಿತ್ರಗ್ರಂಥದಲ್ಲಿ ಹೀಗೆ ಬರೆಯಲಾಗಿದೆ: “ಲೋಕೋದ್ಧಾರಕನು ಬರುವನು ಸಿಯೋನಿನಿಂದ; ಅಧರ್ಮತೆಯನು ನೀಗಿಸುವನು ಯಕೋಬವಂಶದಿಂದ.


ಆಗ ಬರಲಿರುವ ಸಂಕಷ್ಟಗಳು ದೈವಸೃಷ್ಟಿಯ ಆದಿಯಿಂದ ಇರಲಿಲ್ಲ. ಇನ್ನು ಮುಂದಕ್ಕೂ ಇರುವುದಿಲ್ಲ.


ಯೆಹೂದ್ಯಜನರೂ ಇಸ್ರಯೇಲಿನ ಜನರೂ ಪುನಃ ಒಂದುಗೂಡುವರು. ಒಬ್ಬನೇ ಅಧಿಪತಿಯನ್ನು ಆರಿಸಿಕೊಳ್ಳುವರು. ಅವರೆಲ್ಲರೂ ನಾನಾ ದೇಶಗಳಿಂದ ಹೊರಟುಬರುವರು. ಜೆಸ್ರೀಲಿನ ಆ ದಿನವು ಮಹತ್ತಾದುದು.


ಹಾದುಹೋಗುವವರೇ, ನಿಮಗಿಲ್ಲವೆ ನನ್ನ ಚಿಂತೆ? ಸರ್ವೇಶ್ವರ ಸಿಟ್ಟುಗೊಂಡು ನನಗಿತ್ತಿರುವನು ಈ ವ್ಯಥೆ ! ಈ ಪರಿ ಸಂಕಟವನ್ನು ನೀವೆಲ್ಲಾದರು ನೋಡಿದ್ದುಂಟೆ?”


“ನನ್ನ ದಾಸ ಯಕೋಬನೇ, ಅಂಜಬೇಡ! ಇಸ್ರಯೇಲೇ, ಭಯಪಡಬೇಡ” ಎನ್ನುತ್ತಾರೆ ಸರ್ವೇಶ್ವರ. “ದೂರ ನಾಡಿನಿಂದ ನಿನ್ನನ್ನು ಮುಕ್ತನನ್ನಾಗಿಸುವೆನು ನಿನ್ನ ಸಂತಾನ ಸೆರೆಹೋದ ಸೀಮೆಯಿಂದ ನಿನ್ನನ್ನು ಉದ್ಧರಿಸುವೆನು. ಹಿಂದಿರುಗಿ, ಹಾಯಾಗಿ ನೆಮ್ಮದಿಯಿಂದಿರುವುದು ಯಕೋಬು ಯಾರಿಂದಲೂ ಅದನ್ನು ಹೆದರಿಸಲಾಗದು.


ಸಜ್ಜನನಿಗೊದಗುವ ಸಂಕಟಗಳು ವಿಪರೀತ I ಪ್ರಭುವೆಲ್ಲವನು ನಿವಾರಿಸುವುದು ನಿಶ್ಚಿತ II


ಏಕೆಂದರೆ, ಅವರ ಕೋಪಾಗ್ನಿಯ ಘೋರ ದಿನವು ಬಂದಿದೆ. ಅದರ ಮುಂದೆ ನಿಲ್ಲುವುದಕ್ಕೆ ಯಾರು ತಾನೇ ಶಕ್ತರು?” ಎಂದು ಹಲುಬಿದರು.


ರವಿ ಕಪ್ಪಾಗುವನು, ಶಶಿ ಕಡುಗೆಂಪಾಗುವನು, ಪ್ರಭುವಿನ ಮಹಿಮಾದಿನಕ್ಕೆ ಮುನ್ನ ಸಂಭವಿಸುವುವು ಇವೆಲ್ಲಾ.


ಸರ್ವೇಶ್ವರಸ್ವಾಮಿಯ ಭಯಂಕರ ಮಹಾದಿನದ ಮುಂಚೆ ಸೂರ್ಯನು ಅಂಧಕಾರಮಯನಾಗುವನು; ಚಂದ್ರನು ರಕ್ತಗೆಂಪಾಗುವನು.


‘ಸೊದೋಮ್’ ಊರು ಹಾಳಾಯಿತು ಕ್ಷಣಮಾತ್ರದಲ್ಲೆ ಅದರ ಮೇಲೆ ಯಾರೂ ಕೈಮಾಡದೆಯೇ. ಅದಕ್ಕಿಂತಲೂ ಹೆಚ್ಚಾಯಿತಲ್ಲಾ ನನ್ನ ಜನರ ಅಧರ್ಮ!


ಎಲೌ ಜೆರುಸಲೇಮ್ ಯುವತಿಯೇ, ನಿನಗೆ ಏನು ಹೇಳಲಿ? ನಿನ್ನನ್ನು ಯಾವುದಕ್ಕೆ ಹೋಲಿಸಲಿ? ಸಿಯೋನ್ ಕನ್ಯೆಯೇ, ನಿನ್ನನ್ನು ಹೇಗೆ ಸಂತೈಸಲಿ? ಸಂತೈಸುವ ಸಾಮತಿಯನ್ನು ಎಲ್ಲಿಂದ ತರಲಿ? ನಿನಗೊದಗಿರುವ ನಾಶ ಸಾಗರದಂತೆ ಅಪಾರ ನಿನ್ನನ್ನು ಸ್ವಸ್ಥಗೊಳಿಸಲು ಯಾರಿಂದ ತಾನೆ ಸಾಧ್ಯ?


ಉದ್ಧರಿಸು ದೇವಾ, ಇಸ್ರಯೇಲರನು I ಸಮಸ್ತ ಬೇನೆ ಬವಣೆಗಳಿಂದವರನು II


ಆಗ ಯಕೋಬನು ಬಹಳ ದಿಗಿಲುಗೊಂಡನು, ಕಳವಳಗೊಂಡನು; ತನ್ನ ಜನರನ್ನೂ ಕುರಿ, ದನ, ಒಂಟೆಗಳನ್ನೂ ಎರಡು ಪರಿವಾರಗಳಾಗಿ ವಿಂಗಡಿಸಿದನು.


ಆ ದಿನದಂದು (ಫಿಲಿಷ್ಟಿಯದ) ಕರಾವಳಿಯಲ್ಲಿ ವಾಸಿಸುವರು. ‘ಅಯ್ಯೋ ಅಸ್ಸೀರಿಯರ ಅರಸನಿಂದ ನಾವು ಬಿಡುಗಡೆಯಾಗಬೇಕೆಂದು ಯಾರ ಆಶ್ರಯವನ್ನು ನಿರೀಕ್ಷಿಸಿಕೊಂಡಿದ್ದೇವೋ ಅವರಿಗೇ ಈ ಗತಿ ಬಂತಲ್ಲಾ; ಇನ್ನು ನಮ್ಮಂಥವರು ಉದ್ಧಾರವಾಗುವುದು ಹೇಗೆ?’ ಎಂದುಕೊಳ್ಳುವರು.”


ನನಗೆ ಅಭಿಮುಖರಾಗದೆ ಬೆನ್ನುಮಾಡಿದ್ದೀರಿ. ಕೇಡು ಸಂಭವಿಸಿದಾಗ ಮಾತ್ರ, ‘ಎದ್ದು ಬಂದು ನಮ್ಮನ್ನು ಉದ್ಧರಿಸು’ ಎಂದು ಮೊರೆಯಿಡುತ್ತೀರಿ.


“ಎಲೈ ಯೆಹೂದ ಜನರೇ, ನೀವು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿಮಗೆ ಕೇಡು ಸಂಭವಿಸಿದಾಗ ನಿಮ್ನನ್ನು ಉದ್ಧರಿಸಲು ಅವರು ಶಕ್ತರಾಗಿದ್ದರೆ ಎದ್ದುಬರಲಿ ! ನಿಮಗೆ ನಗರಗಳು ಎಷ್ಟಿವೆಯೋ ಅಷ್ಟೂ ದೇವರುಗಳು ಇದ್ದಾರೆ!


ಸರ್ವೇಶ್ವರಾ, ಇಸ್ರಯೇಲರಿಗೆ ನೀವೇ ನಿರೀಕ್ಷೆ ಇಕ್ಕಟ್ಟಿನಲ್ಲಿ ಅವರಿಗೆ ನೀವೇ ರಕ್ಷೆ. ನಾಡಿನಲ್ಲಿ ಅನ್ಯದೇಶೀಯನಂತಿರುವಿರಿ, ಏಕೆ? ರಾತ್ರಿ ಕಳೆಯಲು ಗುಡಾರಹಾಕಿದ ಪ್ರಯಾಣಿಕನಂತಿರುವಿರಿ, ಏಕೆ?


ವೃದ್ಧರೇ ಕೇಳಿ: ನಾಡಿನ ನಿವಾಸಿಗಳೇ ಕಿವಿಗೊಡಿ. ನಿಮ್ಮ ಕಾಲದಲ್ಲಾಗಲೀ ನಿಮ್ಮ ಪೂರ್ವಿಕರ ಕಾಲದಲ್ಲಾಗಲೀ, ಇಂಥ ದುರ್ಘಟನೆ ಸಂಭವಿಸಿದ್ದುಂಟೇ?


ಸರ್ವೇಶ್ವರಸ್ವಾಮಿಯ ದಿನ ಸಮೀಪಿಸಿದೆ. ಆ ದಿನ ಸರ್ವಶಕ್ತನಿಂದ ವಿನಾಶವನ್ನು ತರಲಿದೆ; ಎಂಥಾ ಭಯಂಕರ ದಿನವದು!


ಹಗಲಿರುಳು ಎನ್ನದೆ ನಿರಂತರವೂ ಬೆಳಕಾಗುವುದು. ಸಂಜೆಯು ಸಹ ಪ್ರಾಕಾಶಮಯವಾಗಿರುವುದು. ಆದರೆ ಇದು ಯಾವಾಗ ಸಂಭವಿಸುವುದೆಂಬುದು ಸರ್ವೇಶ್ವರಸ್ವಾಮಿಗೆ ಮಾತ್ರ ತಿಳಿದಿರುವುದು.


ನೀನೀಗ ರೋದಿಸುವುದೇಕೆ? ಪ್ರಸವವೇದನೆ ಪಡುವವಳಂತೆ ನರಳುವುದೇಕೆ? ನಿನಗೆ ರಾಜನಿಲ್ಲವೇ? ನಿನ್ನ ಸಲಹೆಗಾರ ಸತ್ತುಹೋದನೇ?


ಇದಕೇಳಿ ನಡುನಡುಗಿತು ನನ್ನ ಒಡಲು ಅದುರಿದವು ಆ ಶಬ್ದಕ್ಕೆ ನನ್ನ ತುಟಿಗಳು ಕೊಳೆತಂತಾದವು ನನ್ನೆಲುಬುಗಳು ನಿಂತಲ್ಲೇ ತತ್ತರಿಸಿದವು ನನ್ನ ಕಾಲುಗಳು ಆಪತ್ತು ಬಂದೊದಗುವುದು ನಮ್ಮನ್ನು ಆಕ್ರಮಿಸುವವರಿಗೆ ಕಾದಿರುವೆ ನಾನು ಸಹನಶೀಲನಾಗಿ ಅಂದಿನವರೆಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು