Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:15 - ಕನ್ನಡ ಸತ್ಯವೇದವು C.L. Bible (BSI)

15 ಸರ್ವೇಶ್ವರ ಹೀಗೆನ್ನುತ್ತಾರೆ: “ಕೇಳಿಬರುತ್ತಿದೆ ರಾಮಾ ಊರಿನೊಳು ರೋದನ ಗೋಳಾಟ, ಅಘೋರ ಆಕ್ರಂದನ. ಕಳೆದುಕೊಂಡ ಮಕ್ಕಳಿಗಾಗಿ ಗೋಳಾಡುತ್ತಿಹಳು ರಾಖೇಲಳು ಇನ್ನಿಲ್ಲದ ಅವುಗಳಿಗಾಗಿ ಉಪಶಮನ ಒಲ್ಲೆನೆನುತಿಹಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೆಹೋವನು ಇಂತೆನ್ನುತ್ತಾನೆ, “ರಾಮಾದಲ್ಲಿ ಬೊಬ್ಬೆಯು ಕೇಳಿಸುತ್ತದೆ, ಗೋಳಾಟವೂ ಮತ್ತು ಘೋರ ರೋದನವೂ ಉಂಟಾಗಿವೆ; ರಾಹೇಲಳು ತನ್ನ ಮಕ್ಕಳಿಗೋಸ್ಕರ ಅತ್ತತ್ತು ಅವರು ಇಲ್ಲದೆ ಹೋದದ್ದಕ್ಕಾಗಿ ಸಮಾಧಾನ ಹೊಂದದೆ ಇದ್ದಾಳೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೆಹೋವನು ಇಂತೆನ್ನುತ್ತಾನೆ - ರಾಮದಲ್ಲಿ ಬೊಬ್ಬೆಯು ಕೇಳಿಸುತ್ತದೆ, ಗೋಳಾಟವೂ ಘೋರರೋದನವೂ ಉಂಟಾಗಿವೆ; ರಾಹೇಲಳು ತನ್ನ ಮಕ್ಕಳಿಗೋಸ್ಕರ ಅತ್ತತ್ತು ಅವರು ಇಲ್ಲದೆಹೋದದ್ದಕ್ಕಾಗಿ ಸಮಾಧಾನಹೊಂದಲೊಲ್ಲದೆ ಇದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೆಹೋವನು ಹೀಗೆನ್ನುತ್ತಾನೆ: “ರಾಮದಲ್ಲಿ ಅತಿ ದುಃಖದಿಂದ ಗೋಳಾಡುವ ಒಂದು ಧ್ವನಿಯು ಕೇಳಿಬರುತ್ತದೆ. ರಾಹೇಲಳು ತನ್ನ ಮಕ್ಕಳಿಗಾಗಿ ಗೋಳಾಡುವಳು. ಅವಳ ಮಕ್ಕಳು ಸತ್ತುಹೋದುದರಿಂದ ರಾಹೇಲಳು ಸಮಾಧಾನ ಹೊಂದುವದಕ್ಕೆ ಒಪ್ಪಲಾರಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೆಹೋವ ದೇವರು ಮತ್ತೆ ಹೀಗೆ ಹೇಳುತ್ತಾರೆ: “ರಾಮದಲ್ಲಿ ರೋದನೆಯೂ, ಗೋಳಾಟವೂ ಅಘೋರವಾದ ಅಳುವಿಕೆಯೂ ಕೇಳಿಸುತ್ತಿದೆ. ರಾಹೇಲಳು ತನ್ನ ಮಕ್ಕಳಿಗಾಗಿ ಗೋಳಾಡುತ್ತಾ, ಆದರಣೆ ಹೊಂದದೆ ಹೋಗಿದ್ದಾಳೆ. ಏಕೆಂದರೆ ಅವಳ ಮಕ್ಕಳು ಇನ್ನಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:15
18 ತಿಳಿವುಗಳ ಹೋಲಿಕೆ  

ಸರ್ವೇಶ್ವರನ ವಾಣಿ ಮತ್ತೊಮ್ಮೆ ಯೆರೆಮೀಯನಿಗೆ ಕೇಳಿಸಿತು. ಇಷ್ಟರೊಳಗೆ ರಕ್ಷಾದಳದ ನಾಯಕ ನೆಬೂಜರದಾನನು ಜೆರುಸಲೇಮಿನವರ ಮತ್ತು ಜುದೇಯರ ಗುಂಪನ್ನು ಬಾಬಿಲೋನಿಗೆ ಸೆರೆಯೊಯ್ಯುತ್ತಿದ್ದಾಗ ಅವರಲ್ಲಿ ಯೆರೆಮೀಯನು ಕೂಡ ಸಂಕೋಲೆಗಳಿಂದ ಬಂಧಿತನಾಗಿರುವುದನ್ನು ಕಂಡು ಅವನನ್ನು ರಾಮದ ಬಳಿ ಬಿಡುಗಡೆ ಮಾಡಿದನು.


ಸಂಕಟದ ವೇಳೆಯೊಳು ಸ್ವಾಮಿಯನು ನಾ ಕರೆದೆ I ಇರುಳೆಲ್ಲ ಆಯಾಸವರಿಯದೆ ಕೈಚಾಚಿದೆ I ಎನ್ನ ಮನಸ್ಸಿತ್ತು ದುಃಖಶಮನಗೊಳ್ಳದೆ II


ಅನಂತರ ರಾಖೇಲಳು ಸತ್ತುಹೋದಳು, ಆಕೆಯನ್ನು ಬೆತ್ಲೆಹೇಮೆಂಬ ಎಫ್ರಾತಿಗೆ ಹೋಗುವ ದಾರಿಪಕ್ಕದಲ್ಲಿ ಸಮಾಧಿ ಮಾಡಿದರು.


ನನ್ನ ಗುಡಾರ ಹಾಳಾಗಿದೆ, ಹಗ್ಗಗಳು ಕಿತ್ತುಹೋಗಿವೆ. ಮಕ್ಕಳು ನನ್ನನ್ನು ಬಿಟ್ಟು ಕಾಣದೆಹೋಗಿದ್ದಾರೆ ಗುಡಾರ ಹಾಕಲು, ಪರದೆ ಬಿಗಿಯಲು, ಯಾರೂ ಇಲ್ಲವಾಗಿದ್ದಾರೆ.”


“ಆದ್ದರಿಂದ ನನ್ನ ಕಡೆ ನೋಡಬೇಡಿ. ನನ್ನನ್ನು ಸಂತೈಸಲು ಪ್ರಯತ್ನಿಸಬೇಡಿ. ಸತ್ತುಹೋದ ನನ್ನ ಜನರಿಗಾಗಿ ಕಣ್ಣೀರು ಸುರಿಸುತ್ತಿರುವೆನು” ಎಂದೆ ನಾನು.


ಅದಕ್ಕೆ ಅವರು, “ತಮ್ಮ ಸೇವಕರಾದ ನಾವು ಹನ್ನೆರಡು ಮಂದಿ ಅಣ್ಣತಮ್ಮಂದಿರು; ಕಾನಾನ್ ನಾಡಿನವರು, ಒಬ್ಬ ತಂದೆಯ ಮಕ್ಕಳು; ನಮ್ಮಲ್ಲಿ ಚಿಕ್ಕವನು ತಂದೆಯ ಬಳಿಯಲ್ಲೇ ಇದ್ದಾನೆ; ಒಬ್ಬನು ಇಲ್ಲವಾದನು,” ಎಂದರು.


ದುಃಖಶಮನಮಾಡಲು ಪುತ್ರಪುತ್ರಿಯರೆಲ್ಲರು ಎಷ್ಟು ಪ್ರಯತ್ನಿಸಿದರೂ ಅವನು ಸಾಂತ್ವನಗೊಳ್ಳಲಿಲ್ಲ; "ನಾನು ಹೀಗೆಯೇ ಹಂಬಲಿಸುತ್ತಾ ನನ್ನ ಮಗನಿರುವ ಮೃತ್ಯುಲೋಕವನ್ನು ಸೇರುತ್ತೇನೆ,” ಎಂದು ಮಗನಿಗಾಗಿ ದುಃಖಿಸುತ್ತಲೇ ಇದ್ದ.


ನಮ್ಮ ಪಿತೃಗಳು ಪಾಪಮಾಡಿ ಗತಿಸಿಹೋದರು ಅವರ ದೋಷಫಲವನ್ನು ನಾವು ಸವಿಯಬೇಕಾಗಿ ಬಂದಿತು.


ಆಗ ಅವರ ತಂದೆ ಯಕೋಬನು ಅವರಿಗೆ, “ನನ್ನನ್ನು ಮಕ್ಕಳಿಲ್ಲದವನಂತೆ ಮಾಡಿದ್ದೀರಿ; ಜೋಸೆಫನು ಇಲ್ಲ, ಸಿಮೆಯೋನನೂ ಇಲ್ಲ, ಬೆನ್ಯಾಮೀನನನ್ನೂ ಕರೆದುಕೊಂಡು ಹೋಗಬೇಕೆಂದಿದ್ದೀರಿ. ಈ ಕಷ್ಟದುಃಖವೆಲ್ಲ ನನ್ನ ತಲೆಯ ಮೇಲೆ ಬಂದೆರಗಿದೆ!” ಎಂದನು.


ಆ ಸುರುಳಿಯನ್ನು ನನ್ನೆದುರಿನಲ್ಲೆ ಬಿಚ್ಚಿದರು. ಅದರ ಎರಡು ಬದಿಗಳಲ್ಲಿಯೂ ಬರೆದಿತ್ತು: ಅದು ಪ್ರಲಾಪ, ಶೋಕ, ಶಾಪ ಇವುಗಳ ಬರಹದಿಂದ ಕೂಡಿತ್ತು.


ಕ್ರಮೇಣ ನಾನು ಆ ಮಾರ್ಗವಾಗಿ ನಡೆಯಲು I ಕಾಣಲಿಲ್ಲ, ಗುರುತೂ ಇರಲಿಲ್ಲ ಹುಡುಕಲು II


ನನ್ನ ಅಪರಾದವನ್ನು ನೀನು ಕ್ಷಮಿಸಬಾರದೆ? ನನ್ನ ದೋಷವನ್ನು ನೀನು ಪರಿಹರಿಸಬಾರದೆ? ಮಣ್ಣಿನೊಳಗೆ ಬಿದ್ದಿರುವೆ ನಾನು ಈಗ ನಾನು ಇಲ್ಲವಾಗಿರುವೆ ನೀ ಹುಡುಕುವಾಗ.


ಅಲ್ಲಿ ಅವನ ಸ್ವಂತ ಮನೆ ಇದ್ದುದರಿಂದ ಅಲ್ಲಿಯೇ ಸರ್ವೇಶ್ವರನಿಗೆ ಒಂದು ಬಲಿಪೀಠವನ್ನು ಕಟ್ಟಿಸಿ ಇಸ್ರಯೇಲರನ್ನು ಪಾಲಿಸುತ್ತಿದ್ದನು.


ಗಿಬ್ಯೋನ್, ರಾಮಾ, ಬೇರೋತ್,


ಹನೋಕ ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಇದ್ದಾಗ ದೇವರು ಅವನನ್ನು ಕರೆದುಕೊಂಡ ಕಾರಣ ಕಣ್ಮರೆಯಾದನು.


ಆಕೆ ಎಫ್ರಯಿಮ್ ಬೆಟ್ಟದ ಸೀಮೆಯಲ್ಲಿ ರಾಮಕ್ಕೂ ಬೇತೇಲಿಗೂ ಮಧ್ಯದಲ್ಲಿರುವ ‘ದೆಬೋರಳ ಖರ್ಜೂರ ವೃಕ್ಷ’ವೆಂದು ಹೆಸರುಗೊಂಡ ಮರದ ಕೆಳಗೆ ಆಸೀನಳಾಗಿರುತ್ತಿದ್ದಳು. ಇಸ್ರಯೇಲರು ನ್ಯಾಯತೀರ್ಪಿಗಾಗಿ ಆಕೆಯ ಬಳಿಗೆ ಬರುತ್ತಿದ್ದರು.


ಕಣಿವೆಯನ್ನು ದಾಟಿದೆ; ‘ಗೆಬಾದಲ್ಲಿ ದಂಡಿಳಿಸೋಣ’ ಎಂದು ಹೇಳುತ್ತಿದೆ. ರಾಮಾ ಜನತೆ ನಡುಗುತ್ತಿದೆ, ಸೌಲನ ಗಿಬೆಯದ ಜನ ಪಲಾಯನ ಗೈದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು