Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:19 - ಕನ್ನಡ ಸತ್ಯವೇದವು C.L. Bible (BSI)

19 ತಿರುಗಿಸಲ್ಪಟ್ಟ ಮೇಲೆಯೆ ನಾನು ಪಶ್ಚಾತ್ತಾಪ ಪಟ್ಟೆ ತಿಳುವಳಿಕೆ ಹೊಂದಿದ ಮೇಲೆಯೆ ಕೆನ್ನೆಗೆ ಹಾಕಿಕೊಂಡೆ ನನ್ನ ಯೌವನ ನಡತೆ ನನಗೆ ಅವಮಾನದ ಹೊರೆ ಈ ಕಾರಣ ಲಜ್ಜೆಗೊಂಡೆ. ಹೌದು, ನಾಚಿಕೆಯಿಂದ ತಲೆತಗ್ಗಿಸಿದೆ’.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ತಿರುಗಿಸಲ್ಪಟ್ಟ ಮೇಲೆಯೇ ಪಶ್ಚಾತ್ತಾಪ ಪಟ್ಟೆನು; ತಿಳಿವಳಿಕೆಯನ್ನು ಹೊಂದಿದ ಮೇಲೆಯೇ ತೊಡೆಯನ್ನು ಬಡಿದುಕೊಂಡೆನು. ನನ್ನ ಯೌವನದ ಅವಮಾನವನ್ನು ನನ್ನ ಮೇಲೆ ಹೊತ್ತುಕೊಂಡ ಕಾರಣ ಲಜ್ಜೆಗೊಂಡೆನು, ಹೌದು, ತುಂಬಾ ನಾಚಿಕೆಪಟ್ಟೆನು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ತಿರುಗಿಸಲ್ಪಟ್ಟ ಮೇಲೆಯೇ ಪಶ್ಚಾತ್ತಾಪಪಟ್ಟೆನು; ತಿಳುವಳಿಕೆಯನ್ನು ಹೊಂದಿದ ಮೇಲೆಯೇ ತೊಡೆಯನ್ನು ಬಡಿದುಕೊಂಡೆನು; ನನ್ನ ಯೌವನದ ಅವಮಾನವು ನನ್ನ ಮೇಲೆ ಹೊತ್ತ ಕಾರಣ ಲಜ್ಜೆಗೊಂಡೆನು, ಹೌದು, ತುಂಬಾ ನಾಚಿಕೆಪಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯೆಹೋವನೇ, ನಾನು ನಿನಗೆ ದೂರವಾಗಿ ಅಲೆದಾಡಿದೆನು. ಆದರೆ ನಾನು ಮಾಡಿದ ದುಷ್ಕೃತ್ಯಗಳ ಬಗ್ಗೆ ತಿಳಿದುಕೊಂಡೆನು. ಆದ್ದರಿಂದ ನಾನು ನನ್ನ ಮನಸ್ಸನ್ನೂ ಜೀವನವನ್ನೂ ಪರಿವರ್ತಿಸಿಕೊಂಡೆ. ತಾರುಣ್ಯಾವಸ್ಥೆಯಲ್ಲಿ ನಾನು ಮಾಡಿದ ಮೂರ್ಖತನಕ್ಕಾಗಿ ಲಜ್ಜೆಗೊಂಡೆನು; ನಾಚಿಕೆಪಟ್ಟೆನು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಾನು ನಿಮ್ಮಿಂದ ದೂರವಾದ ಮೇಲೆಯೇ ಪಶ್ಚಾತ್ತಾಪ ಪಟ್ಟೆನು; ತಿಳುವಳಿಕೆ ಹೊಂದಿದ ಮೇಲೆಯೇ ದುಃಖದಿಂದ ನನ್ನ ಎದೆಯನ್ನು ಬಡಿದುಕೊಂಡೆನು. ನನ್ನ ಯೌವನದ ಅವಮಾನವನ್ನು ನನ್ನ ಮೇಲೆ ಹೊತ್ತುಕೊಂಡ ಕಾರಣ ನಾನು ಲಜ್ಜೆಗೊಂಡೆನು, ಹೌದು, ತುಂಬಾ ನಾಚಿಕೆಪಟ್ಟೆನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:19
30 ತಿಳಿವುಗಳ ಹೋಲಿಕೆ  

ಆಗ ನೀವು ನಿಮ್ಮ ದುರ್ಮಾರ್ಗ, ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು, ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿಮಿತ್ತ, ನಿಮಗೆ ನೀವೇ ಹೇಸಿಕೊಳ್ಳುವಿರಿ.”


ನಾವೇ ತಂದುಕೊಂಡ ಅವಮಾನವೆಂಬ ಹಾಸಿಗೆಯಲ್ಲಿ ಬಿದ್ದಿರೋಣ. ನಾಚಿಕೆಯೆಂಬ ಹೊದಿಕೆ ನಮ್ಮನ್ನು ಮುಚ್ಚಿಬಿಡಲಿ. ಚಿಕ್ಕತನದಿಂದ ಈವರೆಗು ನಾವೂ ನಮ್ಮ ಪೂರ್ವಜರೂ ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಗೆ ಇದಿರಾಗಿ ಪಾಪಮಾಡುತ್ತಾ ಬಂದಿರುವುದು ನಿಶ್ಚಯ. ಆ ಸ್ವಾಮಿಯ ಮಾತನ್ನು ಕೇಳದೆಹೋದೆವಲ್ಲಾ!” ಎಂದು ಮೊರೆಯಿಡುತ್ತಿದ್ದಾರೆ.


ನರಪುತ್ರನೇ, ಕೂಗು, ಗೋಳಾಡು, ಬಡಿದುಕೋ ಎದೆ! ಎರಗಿದೆ ಆ ಖಡ್ಗ ನನ್ನ ಜನರ ಮೇಲೆ ಇಸ್ರಯೇಲಿನ ಅರಸರೆಲ್ಲರ ಮೇಲೆ ತುತ್ತಾಗುವರು ಅದಕ್ಕೆ ಜನನಾಯಕರು ಜನರೊಂದಿಗೆ.


ಸುಂಕವಸೂಲಿಯವನಾದರೋ ದೂರದಲ್ಲೇ ನಿಂತು, ತಲೆಯನ್ನೂ ಮೇಲಕ್ಕೆ ಎತ್ತದೆ, ‘ಓ ದೇವರೇ, ನಾನು ಪಾಪಿ; ನನಗೆ ದಯೆತೋರಿ,’ ಎನ್ನುತ್ತಾ ಎದೆಬಡಿದುಕೊಂಡ.


ನಿಮ್ಮ ಮಕ್ಕಳು ಸಹಿತವಾಗಿ ನಿಮ್ಮ ದೇವರಾದ ಸರ್ವೇಶ್ವರನ ಆಶ್ರಯಕ್ಕೆ ಮರಳಿಬಂದು ನಾನು ಈಗ ನಿಮಗೆ ಬೋಧಿಸುವ ಅವರ ಮಾತುಗಳಿಗೆ ಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ವಿಧೇಯರಾಗಬೇಕು;


“ದಾವೀದನ ವಂಶಜರಲ್ಲೂ ಜೆರುಸಲೇಮಿನ ನಿವಾಸಿಗಳ ಮನದಲ್ಲೂ ಕರುಣಿಸುವ ಹಾಗೂ ಪ್ರಾರ್ಥಿಸುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನೇ ಅವರು ಆಗ ದಿಟ್ಟಿಸಿ ನೋಡುವರು. ಏಕೈಕ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಕಾಲವಾದ ಜ್ಯೇಷ್ಠ ಪುತ್ರನಿಗಾಗಿ ಎಂಬಂತೆ ಅತ್ತು ಪ್ರಲಾಪಿಸುವರು.


ಯೌವನದೆನ್ನ ಪಾಪಪ್ರವೃತ್ತಿಗಳ ಮನದಲ್ಲಿಟ್ಟುಕೊಳ್ಳಬೇಡ I ನಿನ್ನೊಲುಮೆ ನಲ್ಮೆಗಳ ನಿಮಿತ್ತ ಪ್ರಭು, ನನ್ನ ನೆನೆಯದಿರಬೇಡ II


“ನನ್ನ ದೇವರೇ, ನಾನು ಮನಗುಂದಿದವನು ಆಗಿದ್ದೇನೆ; ನಿಮ್ಮ ಕಡೆಗೆ ಮುಖವನ್ನು ಎತ್ತುವುದಕ್ಕೆ ನಾಚಿಕೊಳ್ಳುತ್ತೇನೆ. ನನ್ನ ದೇವರೇ, ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದಿವೆ; ನಮ್ಮ ಅಪರಾಧ ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿದೆ!


ಬೋಧನೆಯಲ್ಲಿ ಪ್ರವೀಣನೂ ಕೇಡನ್ನು ಸಹಿಸದವನೂ ವಿರೋಧಿಗಳನ್ನು ತಾಳ್ಮೆಯಿಂದ ತಿದ್ದುವವನೂ ಆಗಿರಬೇಕು. ಆ ವಿರೋಧಿಗಳು ಪಶ್ಚಾತ್ತಾಪಪಟ್ಟು ಸನ್ಮಾರ್ಗವನ್ನು ಹಿಡಿಯುವಂತೆ ದೇವರು ಅವರಿಗೆ ಅನುಗ್ರಹಿಸಬಹುದು.


ಯಾವ ಕೃತ್ಯಗಳ ವಿಷಯದಲ್ಲಿ ಈಗ ನೀವು ನಾಚಿಕೆಪಡುತ್ತೀರೋ ಅವುಗಳನ್ನು ನೀವು ಹಿಂದೆ ಮಾಡುತ್ತಾ ಬಂದಿರಿ. ಅವುಗಳಿಂದ ನಿಮಗೆ ದೊರೆತ ಪ್ರತಿಫಲವಾದರೂ ಏನು? ಮೃತ್ಯುವೇ ಅವುಗಳ ಅಂತ್ಯಫಲ.


ಆದರೆ ನಿಮ್ಮ ಆಸ್ತಿಪಾಸ್ತಿಯನ್ನೆಲ್ಲಾ ವೇಶ್ಯೆಯರಿಗೆ ಸುರಿದ ಈ ನಿಮ್ಮ ಮಗ ಬಂದದ್ದೇ ಕೊಬ್ಬಿಸಿದ ಪ್ರಾಣಿಯನ್ನು ಕೊಯ್ಯಿಸಿದ್ದೀರಿ!’ ಎಂದು ವಾದಿಸಿದ.


ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನನ್ನ ಸ್ವಭಾವವನ್ನು ಹುಟ್ಟಿಸುವೆನು. ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು, ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.


ಅವರು ಈಜಿಪ್ಟಿನಲ್ಲಿ ಸೂಳೆತನ ಮಾಡುತ್ತಿದ್ದರು. ಬಾಲ್ಯದಲ್ಲಿ ವೇಶ್ಯೆಯರಾಗಿ ನಡೆಯುತ್ತಿದ್ದರು. ಅಲ್ಲಿನ ಪುರುಷರು ಅವರ ಸ್ತನಗಳನ್ನು ಹಿಸುಕಿದರು, ಎಳೆಯ ತೊಟ್ಟುಗಳನ್ನು ಸವರಿಸಿದರು.


ಹೀಗೆ ಅಳಿದುಳಿದು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ನನ್ನನ್ನು ಸ್ಮರಿಸಿಕೊಳ್ಳುವರು. ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದು ತಮ್ಮ ಹೃದಯವನ್ನು ಹಾಗು ತಮ್ಮ ವಿಗ್ರಹಗಳ ಮೇಲಣ ಕಾಮದಿಂದ ದೇವದ್ರೋಹ ಮಾಡಿದ ತಮ್ಮ ಕಣ್ಣುಗಳನ್ನು ಭಂಗಪಡಿಸಿದವನು ನಾನೇ ಎಂಬುದಾಗಿ ನನ್ನನ್ನು ಜ್ಞಾಪಕಮಾಡಿಕೊಳ್ಳುವರು. ತಾವು ಬಹಳ ಅಸಹ್ಯಕಾರ್ಯಗಳನ್ನು ನಡೆಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮನ್ನು ತಾವೇ ಹೇಸಿಕೊಳ್ಳುವರು.


ಇಸ್ರಯೇಲ್ ವಂಶವೂ ಯೆಹೂದ ವಂಶವೂ ಚಿಕ್ಕಂದಿನಿಂದ ನನ್ನ ಚಿತ್ತಕ್ಕೆ ವಿರುದ್ಧವಾಗಿಯೇ ನಡೆಯುತ್ತಾ ಬಂದಿದೆ. ಹೌದು, ಇಸ್ರಯೇಲ್ ವಂಶದವರು ತಮ್ಮ ಕೈಕೆಲಸದ ವಿಗ್ರಹಗಳಿಂದ ನನ್ನನ್ನು ರೇಗಿಸುತ್ತಲೇ ಬಂದಿದ್ದಾರೆ. ಇದು ಸರ್ವೇಶ್ವರನಾದ ನನ್ನ ನುಡಿ.


ನೀನು ನೆಮ್ಮದಿಯಾಗಿದ್ದ ಕಾಲದಲ್ಲಿ ನಿನ್ನೊಡನೆ ಮಾತಾಡಿದೆ ಆದರೆ ನೀನು, “ಕೇಳಲೊಲ್ಲೆ” ಎಂದು ಹೇಳಿಬಿಟ್ಟೆ. ನನ್ನ ಮಾತಿಗೆ ಕಿವಿಗೊಡದಿರುವುದು ನಿನಗೆ ಬಾಲ್ಯದಿಂದಲೆ ವಾಡಿಕೆ !


ಅಂಜಬೇಡ, ನಿನಗಾಗುವುದಿಲ್ಲ ಅವಮಾನ ನಾಚಬೇಡ, ನಿನಗಾಗದು ಆಶಾಭಂಗ. ಮರೆವೆ ಯೌವನದಲ್ಲಿ ನಿನಗಾದ ಅವಮಾನವನು ವೈಧವ್ಯದಲ್ಲಾದ ನಿಂದೆ ನೆನಪಿಗೆ ಬಾರದಿನ್ನು.


ಯೌವನ ಅವನ ದೇಹದಲ್ಲಿ ತುಂಬಿತ್ತು ಅದು ಕೂಡ ಅವನ ಸಮೇತ ಧೂಳಿನಲಿ ಮಲಗುವುದು.


ನನ್ನ ವಿಷಯವಾಗಿ ಕಹಿಯಾದ ತೀರ್ಪನು ಬರೆದಿರುವೆ ಯೌವನದ ಪಾಪಪರಿಣಾಮಗಳನು ನನ್ನ ಮೇಲೆ ಹೊರಿಸಿರುವೆ.


ಕಷ್ಟಾನುಭವಕೆ ಮುಂಚೆ ದಾರಿತಪ್ಪಿ ನಡೆದೆ I ಆದರೀಗ ನಡೆಯುತ್ತಿರುವೆ ನಿನ್ನ ನುಡಿಯಂತೆ II


ನಾನೂ ರೋಷ ತೀರಿಸಿಕೊಳ್ವೆ ಚಪ್ಪಾಳೆ ತಟ್ಟಿ ಇದು ಸರ್ವೇಶ್ವರನಾದ ನನ್ನ ನುಡಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು