Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:20 - ಕನ್ನಡ ಸತ್ಯವೇದವು C.L. Bible (BSI)

20 ಸರ್ವೇಶ್ವರ ಹೀಗೆನ್ನುತ್ತಾರೆ: “ಎಫ್ರಯಿಮ್, ನನಗೆ ಪ್ರಿಯ ಪುತ್ರನಲ್ಲವೆ? ನನ್ನ ಮುದ್ದು ಮಗನಲ್ಲವೆ? ಅವನ ವಿರುದ್ಧ ನಾನು ಪದೇ ಪದೇ ಮಾತಾಡಿದ್ದರೂ ನನ್ನ ಜ್ಞಾಪಕಕ್ಕೆ ಬರುತ್ತಲೇ ಇರುತ್ತಾನೆ. ಅವನಿಗಾಗಿ ನನ್ನ ಕರುಳು ಮರುಗುತ್ತದೆ. ಅವನನ್ನು ನಿಶ್ಚಯವಾಗಿ ಕರುಣಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೆಹೋವನು ಇಂತೆನ್ನುತ್ತಾನೆ, “ಎಫ್ರಾಯೀಮು ನನಗೆ ಪ್ರಿಯಪುತ್ರ, ಮುದ್ದುಮಗುವಲ್ಲವೇ? ಅವನ ಹೆಸರೆತ್ತಿದಾಗೆಲ್ಲಾ ಅವನನ್ನು ಜ್ಞಾಪಿಸಿಕೊಳ್ಳುತ್ತಲೇ ಬರುತ್ತೇನೆ; ಇದರಿಂದ ನನ್ನ ಕರುಳು ಅವನಿಗಾಗಿ ಮರುಗುತ್ತದಲ್ಲಾ, ಅವನನ್ನು ಕರುಣಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯೆಹೋವನು ಇಂತೆನ್ನುತ್ತಾನೆ - ಎಫ್ರಾಯೀಮು ನನಗೆ ಪ್ರಿಯಪುತ್ರನೋ, ಮುದ್ದುಮಗುವೋ, ಏನೋ? ಅವನ ಹೆಸರೆತ್ತಿದಾಗೆಲ್ಲಾ ಅವನನ್ನು ಜ್ಞಾಪಿಸಿಕೊಳ್ಳುತ್ತಲೇ ಬರುತ್ತೇನೆ; ಇದರಿಂದ ನನ್ನ ಕರುಳು ಅವನಿಗಾಗಿ ಮರುಗುತ್ತದಲ್ಲಾ; ಅವನನ್ನು ಕರುಣಿಸೇ ಕರುಣಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೆಹೋವನು ಹೀಗೆನ್ನುತ್ತಾನೆ: “ಎಫ್ರಾಯೀಮ್ ನನ್ನ ಪ್ರೀತಿಯ ಮಗನೆಂಬುದು ನೀನು ಬಲ್ಲೆ. ನಾನು ಆ ಮಗುವನ್ನು ಪ್ರೀತಿಸುತ್ತೇನೆ. ಹೌದು, ನಾನು ಹಲವು ಸಲ ಎಫ್ರಾಯೀಮನ ವಿರುದ್ಧವಾಗಿ ಮಾತನಾಡುತ್ತೇನೆ. ಆದಾಗ್ಯೂ ನಾನು ಅವನನ್ನು ಜ್ಞಾಪಿಸಿಕೊಳ್ಳುತ್ತೇನೆ. ನಾನು ಅವನನ್ನು ತುಂಬಾ ಪ್ರೀತಿಸುತ್ತೇನೆ. ನಾನು ನಿಜವಾಗಿಯೂ ಅವನನ್ನು ಸಂತೈಸಬಯಸುತ್ತೇನೆ.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಯೆಹೋವ ದೇವರು ಮುಂದುವರೆಸಿ, ‘ಎಫ್ರಾಯೀಮನು ನನಗೆ ಪ್ರಿಯ ಪುತ್ರನಲ್ಲವೇ? ಅವನು ನನಗೆ ಹರ್ಷಗೊಂಡಿರುವ ನನ್ನ ಮಗುವಲ್ಲವೋ? ನಾನು ಅವನಿಗೆ ವಿರೋಧವಾಗಿ ಆಗಾಗ ಮಾತಾಡಿದ್ದರೂ, ಅವನನ್ನು ಇನ್ನು ಬಹಳವಾಗಿ ಜ್ಞಾಪಕ ಮಾಡುತ್ತೇನೆ. ಆದ್ದರಿಂದ ಅವನಿಗೋಸ್ಕರ ನನ್ನ ಹೃದಯ ಮರುಗುತ್ತದಲ್ಲಾ ಅವನನ್ನು ಕನಿಕರಿಸುವೆನು,’ ” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:20
27 ತಿಳಿವುಗಳ ಹೋಲಿಕೆ  

ಬಿಟ್ಟುಬಿಡಲಿ ದುಷ್ಟನು ತನ್ನ ದುರ್ಮಾರ್ಗವನು ತೊರೆದುಬಿಡಲಿ ದುರುಳನು ದುರಾಲೋಚನೆಗಳನು. ಹಿಂದಿರುಗಿ ಬರಲಿ ಸರ್ವೇಶ್ವರನ ಬಳಿಗೆ ಕರುಣೆ ತೋರುವನು ಆತನು ಅವನಿಗೆ. ಆಶ್ರಯಪಡೆಯಲಿ ಅವನು ನಮ್ಮ ದೇವರಿಂದ ಕ್ಷಮಿಸುವನಾತನು ಮಹಾಕೃಪೆಯಿಂದ.


ಸ್ವಾಮಿ ಸರ್ವೇಶ್ವರಾ, ಆಕಾಶದಿಂದ ನಮ್ಮನು ಈಕ್ಷಿಸಿನೋಡಿ; ಪರಿಶುದ್ಧವೂ ಪೂಜ್ಯವೂ ಆದ ನಿಮ್ಮ ನಿವಾಸದಿಂದ ವೀಕ್ಷಿಸಿನೋಡಿ. ನಿಮ್ಮ ಹುರುಪು ಉತ್ಸಾಹವೆಲ್ಲಿ? ನಿಮ್ಮ ಸಾಹಸಕಾರ್ಯಗಳು ಏನಾದುವು? ನಮ್ಮಿಂದ ಬಿಗಿಹಿಡಿದಿರುವಿರಾ ನಿಮ್ಮ ಕನಿಕರವನು? ನಿಮ್ಮ ಕರುಳ ಕರೆಯನು?


ತಂದೆ ಕರುಣೆ ತೋರಿಸುವಂತೆ ಮಕ್ಕಳಿಗೆ I ಕನಿಕರಿಸುವನಾತ ತನಗೆ ಅಂಜುವವರಿಗೆ II


ಸರ್ವೇಶ್ವರ ಇಂತೆನ್ನುತ್ತಾರೆ: ಪರಿಹರಿಸುವೆನು ಜನರ ಭ್ರಷ್ಟತನವನು ಪ್ರೀತಿಸುವೆನು ಮನಃಪೂರ್ವಕವಾಗಿ ಅವರನು ತ್ಯಜಿಸಿಬಿಡುವೆನು ಅವರ ಮೇಲಿದ್ದ ಕೋಪವನು.


ಆಗ ಇಸ್ರಯೇಲರ ಸಂಕಟದ ನಿಮಿತ್ತ ಸರ್ವೇಶ್ವರ ಬಹಳವಾಗಿ ನೊಂದುಕೊಂಡರು.


ಕ್ರಿಸ್ತಯೇಸುವಿನಲ್ಲಿರುವ ಉತ್ಕಟ ಪ್ರೀತಿಯಿಂದಲೇ ನಾನು ನಿಮ್ಮೆಲ್ಲರಿಗಾಗಿ ಹಂಬಲಿಸುತ್ತಿದ್ದೇನೆ; ಇದಕ್ಕೆ ದೇವರೇ ಸಾಕ್ಷಿ.


ಏಕೆಂದರೆ, ಈ ನನ್ನ ಮಗ ಸತ್ತುಹೋಗಿದ್ದ, ಈಗ ಬದುಕಿ ಬಂದಿದ್ದಾನೆ. ತಪ್ಪಿಹೋಗಿದ್ದ, ಈಗ ಸಿಕ್ಕಿದ್ದಾನೆ,’ ಎಂದು ಹೇಳಿದ. ಒಡನೆಯೇ ಹಬ್ಬದ ಸಡಗರ ತೊಡಗಿತು.


“ಆದುದರಿಂದ ಮೋವಾಬಿನ ಮತ್ತು ಕೀರ್ ಹೆರೆಸಿನವರ ನಿಮಿತ್ತ ನನ್ನ ಹೃದಯ ಕೊಳಲಿನಂತೆ ಮೊರೆಯಿಡುತ್ತದೆ. ಮೋವಾಬ್ಯರು ಕೂಡಿಸಿಟ್ಟ ಹೇರಳವಾದ ಆಸ್ತಿ ಮಾಯವಾಯಿತು.


ಮೋವಾಬಿನ ನಿಮಿತ್ತ ಮಿಡಿಯುತಿದೆಯೆನ್ನ ಮನ ದುಃಖದಿಂದ, ವೀಣೆಯ ತಂತಿಯಂತೆ ತುಡಿಯುತಿದೆಯೆನ್ನ ಅಂತರಂಗ ಕೀರ್ ಹೆರೆಷಿನ ನಿಮಿತ್ತ.


ಕಣ್ಣೀರಿಡುತ್ತಾ ಹೋದವರು ಹಿಂದಿರುಗಿ ಬರುವರು. ಪ್ರಾರ್ಥಿಸುತ್ತಾ ಅವರು ಮುನ್ನಡೆಯುವಂತೆ ಮಾಡುವೆನು ಎಡವಲಾಗದ ಸಮಮಾರ್ಗದಲ್ಲಿ ಅವರನ್ನು ನಡೆಸುವೆನು ತುಂಬಿದ ತೊರೆಯ ಬಳಿಗೆ ಬರಮಾಡುವೆನು.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಎಲೈ ಇಸ್ರಯೇಲ್, ನಾನು ಎಷ್ಟೋ ಆದರದಿಂದ ನಿನ್ನನ್ನು ನನ್ನ ಪುತ್ರನೆಂದು ಭಾವಿಸಿ, ನಿನಗೆ ಮನೋಹರವಾದ ನಾಡನ್ನು, ಅಂದರೆ, ಸಮಸ್ತ ರಾಷ್ಟ್ರಗಳಲ್ಲಿ ರಮಣೀಯವಾದ ಸೊತ್ತನ್ನು ಕೊಡಬೇಕು ಎಂದುಕೊಂಡಿದ್ದೆ. ನೀನು ನನ್ನನ್ನು ‘ತಂದೆ’ ಎಂದು ಸನ್ಮಾನಿಸಿ, ನನ್ನನ್ನು ತಪ್ಪದೆ ಹಿಂಬಾಲಿಸಿ ಬರುವೆಯೆಂದಿದ್ದೆ.


ನನ್ನ ಕಾಂತನು ಕೈಯೊಡ್ಡಿಹನು ಬಾಗಿಲ ಸಂದಿನಲಿ ನನ್ನ ಮನ ಮಿಡಿಯಿತು ನನ್ನಂತರಂಗದಲಿ.


ತನ್ನ ಮುದ್ದು ಮಗನನ್ನು ತಂದೆ ಗದರಿಸುವಂತೆ, ಸರ್ವೇಶ್ವರ ತಾನು ಪ್ರೀತಿಸುವವರನ್ನು ಗದರಿಸುತ್ತಾನೆ.


ಆಗ, ಜೀವದಿಂದಿದ್ದ ಕೂಸಿನ ನಿಜವಾದ ತಾಯಿಗೆ ಕೂಸಿನ ವಿಷಯದಲ್ಲಿ ಕರುಳುಕರಗಿತು; “ನನ್ನೊಡೆಯಾ, ಬೇಡಿ; ಬದುಕಿರುವ ಕೂಸನ್ನು ಅವಳಿಗೇ ಕೊಟ್ಟುಬಿಡಿ; ಅದನ್ನು ಕೊಲ್ಲಿಸಬೇಡಿ,” ಎಂದು ಬೇಡಿಕೊಂಡಳು; ಎರಡನೆಯವಳು, “ಅದು ನನಗೂ ಬೇಡ, ನಿನಗೂ ಬೇಡ, ಕಡಿಯಲಿ,” ಎಂದು ಕೂಗಿದಳು.


ಸ್ವತಂತ್ರರು, ಪರತಂತ್ರರು ನಿರಾಶ್ರಯರಾದಾಗ ಅವರೆಲ್ಲರು ನಿಶ್ಯೇಷರಾದವರು ಎಂದು ತಿಳಿದುಬಂದಾಗ ದೊರಕಿಸುವನು ಸರ್ವೇಶ್ವರನು ನ್ಯಾಯವನು ತನ್ನ ಪ್ರಜೆಗೆ ತೋರುವನು ಅನುಕಂಪವನು ತನ್ನ ಭಕ್ತಾದಿಗಳಿಗೆ.


ಜೋಸೆಫನಿಗೆ ತಮ್ಮನನ್ನು ನೋಡಿದ ಮೇಲೆ ಕರುಳು ಕರಗಿತು. ಕಣ್ಣೀರನ್ನು ತಡೆಯಲಾಗದೆ ಒಳ ಅರಮನೆಗೆ ತ್ವರೆಯಾಗಿ ಹೋಗಿ ಅಲ್ಲಿ ಅತ್ತನು.


ಈ ನಿನ್ನ ತಮ್ಮ ನಮ್ಮ ಪಾಲಿಗೆ ಸತ್ತುಹೋಗಿದ್ದ. ಈಗ ಬದುಕಿಬಂದಿದ್ದಾನೆ. ತಪ್ಪಿಹೋಗಿದ್ದ; ಈಗ ಸಿಕ್ಕಿದ್ದಾನೆ. ಆದುದರಿಂದ ನಾವು ಹಬ್ಬಮಾಡಿ ಆನಂದಿಸುವುದು ಸಹಜವಲ್ಲವೆ?’ ಎಂದನು.”


ನೀನು ಉತ್ತರ ದಿಕ್ಕಿಗೆ ಹೋಗಿ ಆ ಇಸ್ರಯೇಲಿಗೆ ಈ ಸಂದೇಶವನ್ನು ಸಾರು - ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ; ಭ್ರಷ್ಟಳಾದ ಇಸ್ರಯೇಲೇ, ಹಿಂದಿರುಗು; ನಾನು ಅಷ್ಟು ಕೋಪಮುಖದಿಂದ ನಿನ್ನನ್ನು ನೋಡುವುದಿಲ್ಲ. ನಾನು ಕರುಣಾಮೂರ್ತಿ, ನಿತ್ಯಕೋಪಿಯಲ್ಲ.


ಅಬ್ರಹಾಮ, ಇಸಾಕ, ಯಕೋಬ ಇವರ ಸಂತತಿಯನ್ನು ಆಳತಕ್ಕ ಒಡೆಯನನ್ನು ದಾಸ ದಾವೀದನ ವಂಶದಿಂದ ಆರಿಸದೆ ಆ ವಂಶವನ್ನು ನಿರಾಕರಿಸುತ್ತಿದ್ದೆ. ಆದರೆ ಈಗ ಗುಲಾಮಗಿರಿಯಿಂದ ಅವರನ್ನು ಬಿಡುಗಡೆಮಾಡುವೆನು. ಅವರಿಗೆ ಕರುಣೆಯನ್ನು ತೋರಿಸಿಯೇ ತೋರಿಸುವೆನು.”


ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಲವಲೇಶವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ. ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ. ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಡಿ, ಬಿಟ್ಟುಬಿಡಿ; ನೀವು ಏಕೆ ಸಾಯಬೇಕು?” ಇದು ಸರ್ವೇಶ್ವರನಾದ ದೇವರ ನುಡಿ.


ಅವರು ಶತ್ರುಗಳ ದೇಶದಲ್ಲಿರುವಾಗಲೂ ನಾನು ಅವರನ್ನು ಬೇಡವೆನ್ನುವುದಿಲ್ಲ. ತಾತ್ಸಾರ ಮಾಡುವುದಿಲ್ಲ, ನಾನು ಅವರಿಗೆ ಮಾಡಿದ ವಾಗ್ದಾನವನ್ನು ಮೀರುವುದಿಲ್ಲ. ನಾನು ಅವರ ದೇವರಾದ ಸರ್ವೇಶ್ವರನಲ್ಲವೆ?


ಆದರೆ ಸರ್ವೇಶ್ವರ ನಿಮಗೆ ಕೃಪೆತೋರಬೇಕೆಂದು ಕಾದಿರುತ್ತಾರೆ. ನಿಮ್ಮನ್ನು ಕರುಣಿಸಲು ಎದ್ದುನಿಂತಿದ್ದಾರೆ. ಅವರು ನ್ಯಾಯಪರರಾದ ದೇವರು, ಅವರಿಗಾಗಿ ಕಾದಿರುವವರೆಲ್ಲರೂ ಧನ್ಯರು.


ನಾವು ಉಳಿದಿರುವುದು ಸರ್ವೇಶ್ವರನ ಕರುಣೆಯಿಂದ ಆತನ ಕೃಪಾವರಗಳಿಗೆ ಕೊನೆಯೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು