Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:27 - ಕನ್ನಡ ಸತ್ಯವೇದವು C.L. Bible (BSI)

27 “ನೋಡು, ನಾನು ಸರ್ವೇಶ್ವರ, ನರಪ್ರಾಣಿಗಳಿಗೆ ದೇವರು. ನನಗೆ ಅಸಾಧ್ಯವಾದುದು ಯಾವುದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 “ಇಗೋ, ನಾನು ಯೆಹೋವನು, ನರಪ್ರಾಣಿಗೆಲ್ಲಾ ದೇವರು; ನನಗೆ ಅಸಾಧ್ಯವಾದದ್ದುಂಟೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಇಗೋ, ನಾನು ಯೆಹೋವನು, ನರಪ್ರಾಣಿಗೆಲ್ಲಾ ದೇವರು; ನನಗೆ ಅಸಾಧ್ಯವಾದದ್ದುಂಟೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 “ಯೆರೆಮೀಯನೇ, ನಾನೇ ಯೆಹೋವನು, ನಾನು ಈ ಭೂಮಂಡಲದ ಪ್ರತಿಯೊಬ್ಬನ ದೇವರು. ಯೆರೆಮೀಯನೆ, ನನಗೆ ಯಾವುದೂ ಅಸಾಧ್ಯವಲ್ಲವೆಂಬುದನ್ನು ನೀನು ಬಲ್ಲೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 “ಇಗೋ, ನಾನೇ ಯೆಹೋವ ದೇವರು, ಸಮಸ್ತ ಜನರ ದೇವರು, ನನಗೆ ಯಾವುದಾದರೂ ಅಸಾಧ್ಯವಾದ ಕಾರ್ಯ ಉಂಟೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:27
15 ತಿಳಿವುಗಳ ಹೋಲಿಕೆ  

ಯೇಸು ಅವರನ್ನು ನಿಟ್ಟಿಸಿ ನೋಡುತ್ತಾ, “ಮನುಷ್ಯರಿಗಿದು ಅಸಾಧ್ಯ; ಆದರೆ ದೇವರಿಗೆ ಎಲ್ಲವೂ ಸಾಧ್ಯ,” ಎಂದರು.


“ಸ್ವಾಮಿ ಸರ್ವೇಶ್ವರಾ, ನೀವು ನಿಮ್ಮ ಭುಜಬಲದಿಂದಲೂ ಮಹಾಶಕ್ತಿಯಿಂದಲೂ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದೀರಿ. ನಿಮಗೆ ಅಸಾಧ್ಯವಾದ ಕಾರ್ಯ ಯಾವುದೂ ಇಲ್ಲ.


ಆದರೂ ಸ್ವಾಮಿ ಸರ್ವೇಶ್ವರಾ, ನೀವು ನಮ್ಮ ತಂದೇ. ನಾವು ಜೇಡಿಮಣ್ಣು, ನೀವೇ ಕುಂಬಾರ; ನಾವೆಲ್ಲರು ನಿಮ್ಮ ಕೈಯ ಕೃತಿಗಳು.


ನರಮಾನವರೆಲ್ಲರ ಮೇಲೆ ನೀವು ಆತನಿಗೆ ಅಧಿಕಾರವನ್ನು ಕೊಟ್ಟಿರುವಿರಿ. ಇದರಿಂದಾಗಿ ನೀವು ಆತನಿಗೆ ಒಪ್ಪಿಸಿರುವ ಎಲ್ಲರಿಗೆ ನಿತ್ಯಜೀವವನ್ನು ಆತನು ನೀಡುವನು.


ದೇವಾ, ನೀ ನಮ್ಮೆಲ್ಲರ ಪ್ರಾರ್ಥನೆಗೆ ಕಿವಿಗೊಡುವಾತ I ನರರೆಲ್ಲರು ಬರುವರು ನಿನ್ನ ಬಳಿಗೆ ಪಾಪದ ಪ್ರಯುಕ್ತ II


ಆಗ ದೇವರು ದಯಪಾಲಿಸುವ ಜೀವೋದ್ಧಾರವನ್ನು ಮಾನವರೆಲ್ಲರು ಕಾಣುವರು.”


“ಸರ್ವೇಶ್ವರಾ, ಎಲ್ಲ ಪ್ರಾಣಿಗಳಿಗೆ ಜೀವದಾತ ದೇವರೇ, ನಿಮ್ಮವರಾದ ಈ ಸಮಾಜದವರು ಕುರುಬನಿಲ್ಲದ ಕುರಿಗಳಾಗಬಾರದು.


ಮೋಶೆ ಮತ್ತು ಆರೋನರು ಅಡ್ಡಬಿದ್ದು, “ದೇವರೇ, ಸರ್ವ ದೇಹಾತ್ಮಗಳಿಗೆ ದೇವರಾಗಿರುವವರೇ, ಒಬ್ಬನೇ ಒಬ್ಬನು ಪಾಪ ಮಾಡಿರುವಲ್ಲಿ ನೀವು ಸಮುದಾಯದ ಎಲ್ಲರ ಮೇಲೆ ಕೋಪಗೊಳ್ಳಬಹುದೆ?” ಎಂದು ಭಿನ್ನವಿಸಿದರು.


ಸರ್ವೇಶ್ವರನಿಗೆ ಅಸಾಧ್ಯವಾದುದು ಯಾವುದು? ನಾನು ಹೇಳಿದಂತೆಯೇ ಬರುವ ವರ್ಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುತ್ತಾನೆ” ಎಂದು ಹೇಳಿದರು.


ಅವರು ತಮ್ಮ ದೃಷ್ಟಿಯಲ್ಲಿ ಅಲ್ಪವಾಗಿರುವ ಈ ಕಾರ್ಯ ಮಾತ್ರವಲ್ಲ, ಮೋವಾಬ್ಯರನ್ನೂ ನಿಮ್ಮ ಕೈಗೆ ಒಪ್ಪಿಸುವರು.


ಆಗ ಸರ್ವೇಶ್ವರ ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದರು:


“ನನ್ನನ್ನು ಬೇಡಿಕೊ, ನಾನು ನಿನಗೆ ಸದುತ್ತರವನ್ನು ದಯಪಾಲಿಸುವೆನು. ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.


ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: “ಅಳಿದುಳಿದಿರುವ ಜನರಿಗೆ ಇಂಥ ಪರಿಸ್ಥಿತಿ ಅತಿಶಯವಾಗಿ ಕಾಣಬಹುದು. ಆದರೆ ನನಗೆ ಅದೇನೂ ಅತಿಶಯವಲ್ಲ.” ಇದು ಸರ್ವೇಶ್ವರನ ನುಡಿ.


ಸರ್ವೇಶ್ವರ ಅವನಿಗೆ, “ಸರ್ವೇಶ್ವರನ ಕೈ ಮೋಟುಗೈಯೋ? ನನ್ನ ಮಾತು ನೆರವೇರುತ್ತದೋ ಇಲ್ಲವೋ ನೀನೇ ನೋಡುವೆ” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು