Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:28 - ಕನ್ನಡ ಸತ್ಯವೇದವು C.L. Bible (BSI)

28 ಆದಕಾರಣ, ಸರ್ವೇಶ್ವರನಾದ ನಾನು ಹೇಳುತ್ತೇನೆ, ಕೇಳು: ಈ ನಗರವನ್ನು ಕಸ್ದೀಯರ ವಶಕ್ಕೆ, ಅಂದರೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಕೈಗೆ ಸಿಕ್ಕಿಸಲಿದ್ದೇನೆ. ಅವನು ಇದನ್ನು ಆಕ್ರಮಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆದಕಾರಣ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ಈ ಪಟ್ಟಣವನ್ನು ಕಸ್ದೀಯರ ವಶಕ್ಕೆ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಸಿಕ್ಕಿಸುವೆನು, ಅವನು ಇದನ್ನು ಆಕ್ರಮಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆದಕಾರಣ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಈ ಪಟ್ಟಣವನ್ನು ಕಸ್ದೀಯರ ವಶಕ್ಕೆ, ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಸಿಕ್ಕಿಸುವೆನು, ಅವನು ಇದನ್ನು ಆಕ್ರವಿುಸುವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಯೆಹೋವನು ಹೀಗೆಂದನು: “ಜೆರುಸಲೇಮ್ ನಗರವನ್ನು ನಾನು ಕೂಡಲೇ ಬಾಬಿಲೋನಿನ ಸೈನ್ಯಕ್ಕೂ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೂ ಒಪ್ಪಿಸುವೆನು. ಸೈನ್ಯವು ಈ ನಗರವನ್ನು ವಶಪಡಿಸಿಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ಈ ಪಟ್ಟಣವನ್ನು ಬಾಬಿಲೋನಿಯರ ಕೈಯಲ್ಲಿಯೂ, ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿಯೂ ಒಪ್ಪಿಸುತ್ತೇನೆ. ಅವನು ಅದನ್ನು ವಶಪಡಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:28
11 ತಿಳಿವುಗಳ ಹೋಲಿಕೆ  

ಜುದೇಯದ ಅರಸ ಚಿದ್ಕೀಯನು ಯೆರೆಮೀಯನಿಗೆ, “ನೀನು ಪ್ರವಾದನೆ ಮಾಡುತ್ತಾ, ‘ಸರ್ವೇಶ್ವರನೇ ಹೀಗೆಂದಿದ್ದಾರೆ: ನಾನು ಈ ನಗರವನ್ನು ಬಾಬಿಲೋನಿಯದ ಅರಸನ ಕೈಗೆ ಸಿಕ್ಕಿಸುವೆನು. ಅವನು ಇದನ್ನು ಆಕ್ರಮಿಸುವನು.


“ಖಡ್ಗ-ಕ್ಷಾಮ-ವ್ಯಾಧಿ ಇವುಗಳಿಂದ ಈ ನಗರವು ಬಾಬಿಲೋನಿನ ಅರಸನ ಕೈ ಹಿಡಿತಕ್ಕೆ ಸಿಕ್ಕಲಿದೆ ಎಂದು ನೀವು ಹೇಳುವ ವಿಷಯದಲ್ಲಿ ಇಸ್ರಯೇಲರ ದೇವರಾದ ಸರ್ವೇಶ್ವರ ಈಗ ಇಂತೆನ್ನುತ್ತಾರೆ:


“ಇಗೋ, ಮುತ್ತಿಗೆಯ ದಿಬ್ಬಗಳು! ನಗರವನ್ನು ಆಕ್ರಮಿಸಲು ಬಂದುಬಿಟ್ಟಿದ್ದಾರೆ. ಖಡ್ಗ-ಕ್ಷಾಮ-ವ್ಯಾಧಿಗಳಿಂದ ನಗರವು ವಿರೋಧಿಗಳಾದ ಬಾಬಿಲೋನಿಯರ ಕೈ ಹಿಡಿತಕ್ಕೆ ಸಿಕ್ಕಿಹೋಗಿದೆ. ನೀವು ನುಡಿದಂತೆ ನೆರವೇರಿದೆ. ನಿಮ್ಮ ಕಣ್ಣಿಗೆ ಎಲ್ಲ ಬಟ್ಟಬಯಲಾಗಿದೆ.


ಅಷ್ಟು ಮಾತ್ರವಲ್ಲ, ಈ ನಗರದ ಎಲ್ಲ ಆಸ್ತಿಯನ್ನೂ ಆದಾಯವನ್ನೂ ಸಂಪತ್ತನ್ನೂ ಹಾಗು ಜುದೇಯದ ಅರಸರ ಸಕಲ ನಿಧಿನಿಕ್ಷೇಪಗಳನ್ನೂ ಇವರ ಶತ್ರುಗಳ ಕೈವಶಮಾಡುವೆನು. ಅವರು ಅವುಗಳನ್ನು ಕೊಳ್ಳೆಹೊಡೆದು ಬಾಬಿಲೋನಿಗೆ ತೆಗೆದುಕೊಂಡು ಹೋಗುವರು.


ಸರ್ವೇಶ್ವರಸ್ವಾಮಿ ಬಾಬಿಲೋನಿಯದ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೊಪ್ಪಿಸಿದರು. ಅವನು ಅವರ ಯುವ ಯೋಧರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿದನು. ಯುವಕರನ್ನು, ಕನ್ಯೆಯರನ್ನು, ವೃದ್ಧರನ್ನು ಹಾಗು ಅತಿವೃದ್ಧರನ್ನು ಕನಿಕರಿಸದೆ ಎಲ್ಲರನ್ನು ಕೊಲ್ಲಿಸಿದನು.


ರಕ್ಷಾದಳದ ಅಧಿಪತಿಯಾದ ನೆಬೂಜರದಾನನು ನಗರದಲ್ಲಿ ಉಳಿದವರನ್ನು, ಮೊದಲೇ ಬಾಬಿಲೋನಿನ ಅರಸನಿಗೆ ಮರೆಹೊಕ್ಕವರನ್ನು ಹಾಗು ಬೇರೆ ಜನರೆಲ್ಲರನ್ನು ಸೆರೆಗೆ ಒಯ್ದನು.


ಈ ನಗರಕ್ಕೆ ಒಳಿತನ್ನು ಅಲ್ಲ, ಕೆಡುಕನ್ನು ಮಾಡಲೆಂದೆ ಇದರ ಮೇಲೆ ಕಣ್ಣಿಟ್ಟಿದ್ದೇನೆ. ಇದು ಬಾಬಿಲೋನಿಯಾದ ಅರಸನ ಕೈವಶವಾಗುವುದು. ಅವನು ಇದನ್ನು ಸುಟ್ಟು ಭಸ್ಮಮಾಡುವನು. ಇದು ಸರ್ವೇಶ್ವರನಾದ ನನ್ನ ನುಡಿ.’


“ಇಸ್ರಯೇಲರ ದೇವರಾದ ಸರ್ವೇಶ್ವರನಾದ ನನ್ನ ನುಡಿ ಇದು: ನೀನು ಜುದೇಯದ ಅರಸ ಚಿದ್ಕೀಯನ ಬಳಿಗೆ ಹೋಗಿ ಅವನಿಗೆ ಹೀಗೆಂದು ಹೇಳು - ‘ಸರ್ವೇಶ್ವರನ ಮಾತನ್ನು ಆಲಿಸು: ಇಗೋ, ನಾನು ಈ ನಗರವನ್ನು ಬಾಬಿಲೋನಿನ ಅರಸನ ಕೈವಶಮಾಡುವೆನು. ಅವನು ಇದನ್ನು ಬೆಂಕಿಯಿಂದ ಸುಟ್ಟುಹಾಕುವನು.


ನೀನು ಅವನ ಕೈಯಿಂದ ತಪ್ಪಿಸಿಕೊಳ್ಳಲಾರದೆ ಬಂಧಿತನಾಗಿ ಅವನ ವಶವಾಗುವೆ. ಬಾಬಿಲೋನಿನ ಅರಸನ ಸಮಕ್ಷಮದಲ್ಲಿ ನಿಲ್ಲುವೆ. ಅವನು ನಿನ್ನೊಡನೆ ಮುಖಾಮುಖಿಯಾಗಿ ಮಾತಾಡುವನು. ನೀನು ಬಾಬಿಲೋನಿಗೆ ಗಡಿಪಾರಾಗುವೆ.


ಅನಂತರ ನಾನು ಅರೀಯೇಲನ್ನು ಬಾಧಿಸುವೆನು. ಅಲ್ಲಿ ಅರಚಾಟ ಕಿರಿಚಾಟ ಇರುವುದು. ಆ ಪಟ್ಟಣವು ವಾಸ್ತವವಾಗಿ ನನಗೆ ಅರೀಯೇಲಾಗಿಯೇ ಪರಿಣಮಿಸುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು