Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:3 - ಕನ್ನಡ ಸತ್ಯವೇದವು C.L. Bible (BSI)

3 ಜುದೇಯದ ಅರಸ ಚಿದ್ಕೀಯನು ಯೆರೆಮೀಯನಿಗೆ, “ನೀನು ಪ್ರವಾದನೆ ಮಾಡುತ್ತಾ, ‘ಸರ್ವೇಶ್ವರನೇ ಹೀಗೆಂದಿದ್ದಾರೆ: ನಾನು ಈ ನಗರವನ್ನು ಬಾಬಿಲೋನಿಯದ ಅರಸನ ಕೈಗೆ ಸಿಕ್ಕಿಸುವೆನು. ಅವನು ಇದನ್ನು ಆಕ್ರಮಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೂದದ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, “ನೀನು ಪ್ರವಾದನೆ ಮಾಡುತ್ತಾ, ‘ಯೆಹೋವನು ಇಂತೆನ್ನುತ್ತಾನೆ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಗೆ ಸಿಕ್ಕಿಸುವೆನು, ಅವನು ಇದನ್ನು ಆಕ್ರಮಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೂದದ ಅರಸನಾದ ಚಿದ್ಕೀಯನು ಯೆರೆಮೀಯನಿಗೆ - ನೀನು ಪ್ರವಾದನೆ ಮಾಡುತ್ತಾ - ಯೆಹೋವನು ಇಂತೆನ್ನುತ್ತಾನೆ - ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಗೆ ಸಿಕ್ಕಿಸುವೆನು, ಅವನು ಇದನ್ನು ಆಕ್ರವಿುಸುವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೂದದ ರಾಜನಾದ ಚಿದ್ಕೀಯನು ಯೆರೆಮೀಯನನ್ನು ಆ ಕಾರಾಗೃಹದಲ್ಲಿಟ್ಟಿದ್ದನು. ಯೆರೆಮೀಯನು ಪ್ರವಾದಿಸಿದ ವಿಷಯಗಳನ್ನು ಚಿದ್ಕೀಯನು ಮೆಚ್ಚಿಕೊಂಡಿರಲಿಲ್ಲ. ಯೆರೆಮೀಯನು ಹೇಳಿದ್ದೇನೆಂದರೆ: “ಯೆಹೋವನು ಹೀಗೆನ್ನುತ್ತಾನೆ: ‘ನಾನು ತಕ್ಷಣವೇ ಜೆರುಸಲೇಮ್ ನಗರವನ್ನು ಬಾಬಿಲೋನಿನ ರಾಜನಿಗೆ ಒಪ್ಪಿಸುತ್ತೇನೆ. ನೆಬೂಕದ್ನೆಚ್ಚರನು ಈ ನಗರವನ್ನು ಸ್ವಾಧೀನಪಡಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೂದದ ಅರಸ ಚಿದ್ಕೀಯನು ಯೆರೆಮೀಯನಿಗೆ, “ನೀನು ಪ್ರವಾದನೆ ಮಾಡುತ್ತಾ, ‘ಯೆಹೋವ ದೇವರೇ ಹೀಗೆಂದಿದ್ದಾರೆ: ನಾನು ಈ ನಗರವನ್ನು ಬಾಬಿಲೋನಿಯದ ಅರಸನ ಕೈಗೆ ಸಿಕ್ಕಿಸುವೆನು. ಅವನು ಇದನ್ನು ವಶಪಡಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:3
23 ತಿಳಿವುಗಳ ಹೋಲಿಕೆ  

“ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತಿರುವೆ? ನಿನಗೆ ಈ ಅಧಿಕಾರವನ್ನು ಕೊಟ್ಟವರು ಯಾರು? ನಮಗೆ ತಿಳಿಸು,” ಎಂದು ಕೇಳಿದರು.


ಬೇತೇಲಿನಲ್ಲಿ ಇನ್ನು ಪ್ರವಾದನೆ ಮಾಡಬೇಡ. ಇದು ರಾಜನ ಗರ್ಭಗುಡಿ, ರಾಜ್ಯದ ಪವಿತ್ರಾಲಯ,” ಎಂದನು.


ಅವನು ಅರಮನೆಯಿಂದ ಹೊರಟು, ಬೆನ್ಯಾಮೀನಿನ ಬಾಗಿಲಿನಲ್ಲಿ ಕುಳಿತುಕೊಂಡಿದ್ದ ಅರಸನ ಬಳಿಗೆ ಬಂದು,


ಈ ಪದಾಧಿಕಾರಿಗಳು ಅರಸನ ಬಳಿಗೆ ಬಂದು, “ಒಡೆಯಾ, ಈ ಯೆರೆಮೀಯನಿಗೆ ಮರಣದಂಡನೆಯಾಗಬೇಕು. ಇವನು ನಗರದಲ್ಲಿರುವ ಸೈನಿಕರಿಗೂ ಜನರೆಲ್ಲರಿಗೂ ಇಂಥ ಭವಿಷ್ಯವನ್ನು ನುಡಿಯುತ್ತಾ ಅವರು ಎದೆಗುಂದುವಂತೆ ಮಾಡುತ್ತಿದ್ದಾನೆ. ಅವನು ಹಾರೈಸುವುದು ಜನರ ಕ್ಷೇಮವನ್ನಲ್ಲ ಹಾನಿಯನ್ನೇ,” ಎಂದು ದೂರಿತ್ತರು.


“ಆದರೆ ಯಾವುದಾದರು ರಾಷ್ಟ್ರ ಅಥವಾ ರಾಜ್ಯ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಅಡಿಯಾಳಾಗಲು, ಅದರ ಅರಸನ ನೊಗಕ್ಕೆ ಹೆಗಲುಕೊಡಲು ಒಪ್ಪದೆಹೋದರೆ, ಆ ರಾಷ್ಟ್ರವನ್ನು ನಾನು ಖಡ್ಗ-ಕ್ಷಾಮ-ವ್ಯಾಧಿಗಳಿಂದ ದಂಡಿಸುತ್ತಾ ಬರುವೆನು. ಕೊನೆಗೆ ಆ ಅರಸನ ಕೈಯಿಂದಲೆ ಅದನ್ನು ನಿರ್ಮೂಲಮಾಡಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.


ಸ್ವಾಮಿ ಸರ್ವೇಶ್ವರನ ಕಣ್ಣು ನಾಟಿಸುವುದು ಸತ್ಯದ ಮೇಲೆ. ಅವರು ದಂಡಿಸಿದರೂ ನೀವು ಪಶ್ಚಾತ್ತಾಪಪಡಲಿಲ್ಲ. ಅವರು ನಸುಕಿದರೂ ನೀವು ತಿದ್ದುಕೊಳ್ಳಲು ಒಪ್ಪಲಿಲ್ಲ. ನಿಮ್ಮ ಮುಖವನ್ನು ಕಲ್ಲಿಗಿಂತ ಕಠಿಣ ಮಾಡಿಕೊಂಡಿರಿ. ಅವರಿಗೆ ಅಭಿಮುಖರಾಗಲು ಸಮ್ಮತಿಸದೆಹೋದಿರಿ.


ನಾನು ನಿಮ್ಮನ್ನು ದಂಡಿಸಿದ್ದು ವ್ಯರ್ಥವಾಯಿತು, ನೀವು ತಿದ್ದುಕೊಳ್ಳಲಿಲ್ಲ. ಸಂಹರಿಸುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ಕತ್ತಿಗೆ ತುತ್ತಾಗಿಸಿದ್ದೀರಿ.


ಕಷ್ಟಬಂದಾಗ ಅರಸ ಅಹಾಜನು ಸರ್ವೇಶ್ವರನಿಗೆ ಮತ್ತಷ್ಟು ದ್ರೋಹಮಾಡಿದನು.


ಅವರಿಗೆ ಆ ಈಜಿಪ್ಟರ ಅರಸನು, “ಎಲೈ ಮೋಶೆ - ಆರೋನರೇ, ನೀವು ಮಾಡುತ್ತಾ ಇರುವುದೇನು? ಈ ಜನರು ತಮ್ಮ ಕೆಲಸವನ್ನು ಬಿಡುವಂತೆ ಮಾಡುತ್ತಿದ್ದೀರಿ. ನಡೆಯಿರಿ ಗುಲಾಮಗಿರಿಗೆ” ಎಂದುಬಿಟ್ಟನು.


ಆಗ ಯೆರೆಮೀಯನಿಗೆ ಸರ್ವೇಶ್ವರನ ವಾಣಿ ಉಂಟಾಗಿ, ಆ ದೂತರಿಗೆ, “ನೀವು ಹೋಗಿ ಚಿದ್ಕೀಯನಿಗೆ ಈ ಉತ್ತರವನ್ನು ತಿಳಿಸಿರಿ:


ಜುದೇಯದ ಅರಸ ಚಿದ್ಕೀಯನನ್ನೂ ಅವನ ಮಂತ್ರಿಗಳನ್ನೂ ಅವರ ಶತ್ರುಗಳಿಗೆ ಅಂದರೆ, ಅವರ ಪ್ರಾಣಹತ್ಯಕ್ಕಾಗಿ ಕಾದಿರುವ, ತಕ್ಷಣಕ್ಕೆ ಹಿಂದಿರುಗಿಹೋಗಿರುವ, ಬಾಬಿಲೋನಿಯದ ಅರಸನ ಕೈಗೆ ಕೊಡುವೆನು.


ಅದೂ ಅಲ್ಲದೆ ಜುದೇಯದ ಅರಸ ಯೆಹೋಯಾಕೀಮನ ವಿಷಯದಲ್ಲಿ ಹೀಗೆ ಬರೆಯಿಸು: ‘ಸರ್ವೇಶ್ವರ ಹೀಗೆಂದಿದ್ದಾರೆ - ಬಾಬಿಲೋನಿನ ಅರಸನು ಬಂದು ಈ ನಾಡನ್ನು ಜನ ಅಥವಾ ಜಾನುವಾರುಗಳಿಲ್ಲದಂತೆ ಹಾಳುಮಾಡುವುದು ಖಂಡಿತ ಎಂದು ಈ ಸುರುಳಿಯಲ್ಲಿ ಬರೆಸಿದ್ದು ಏಕೆ ಎಂದು ಪ್ರಶ್ನಿಸಿ, ಆಕ್ಷೇಪಿಸಿ ಅದನ್ನು ನೀನು ಸುಟ್ಟುಬಿಟ್ಟಿಯಲ್ಲವೆ?


ಆಗ ಯೆರೆಮೀಯನು ಇನ್ನೂ ಸೆರೆಯಾಗಿರಲಿಲ್ಲ. ಜನರಲ್ಲಿಗೆ ಹೋಗುತ್ತಾ ಬರುತ್ತಿದ್ದನು.


ಮತ್ತಾನನ ಮಗ ಶೆಫತ್ಯ, ಪಷ್ಹೂರನ ಮಗ ಗೆದಲ್ಯ, ಸೆಲೆಮ್ಯನ ಮಗ ಯೂಕಲ, ಹಾಗೂ ಮಲ್ಕೀಯನ ಮಗ ಪಷ್ಹೂರ ಇವರು ಮೇಲೆ ಹೇಳಿದ ಮಾತುಗಳನ್ನು ಕೇಳಿದರು.


ತಾವು ಬಾಬಿಲೋನಿಯದ ಅರಸನ ಪದಾಧಿಕಾರಿಗಳಿಗೆ ಮೊರೆಹೋಗದಿದ್ದರೆ ಈ ನಗರವು ಬಾಬಿಲೋನಿನವರ ಕೈವಶವಾಗುವುದು. ಅವರು ಇದನ್ನು ಬೆಂಕಿ ಇಂದ ಸುಟ್ಟುಬಿಡುವರು. ತಾವು ಅವರ ಕೈಯಿಂದ ತಪ್ಪಿಸಿಕೊಳ್ಳಲಾರಿರಿ,” ಎಂದು ಹೇಳಿದನು.


“ನನ್ನ ದ್ರೋಹಗಳನ್ನು ನನಗೆ ಬಿಗಿದಿದ್ದಾನೆ ನೊಗದ ಕಣ್ಣುಗಳಂತೆ. ಅವು ಹುರಿಗೊಂಡು, ಸುತ್ತಿಕೊಂಡು ಕುತ್ತಿಗೆಗೆ, ನನ್ನ ಶಕ್ತಿಯನ್ನು ಹೀರುತ್ತಿವೆ. ಸಿಕ್ಕಿಸಿದನಲ್ಲಾ ಸ್ವಾಮಿ, ನನ್ನಿಂದ ಎದುರಿಸಲಾಗದಂಥವರ ಕೈಗೆ !


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು