Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:44 - ಕನ್ನಡ ಸತ್ಯವೇದವು C.L. Bible (BSI)

44 ಬೆನ್ಯಾಮಿನ್ ನಾಡು, ಜೆರುಸಲೇಮಿನ ಸುತ್ತಮುತ್ತಣ ಪ್ರದೇಶ, ಜುದೇಯದ ಊರುಗಳು, ಮಲೆನಾಡಿನ, ಕೆಳನಾಡಿನ, ದಕ್ಷಿಣ ಪ್ರಾಂತ್ಯದ ಊರುಗಳು ಈ ಎಲ್ಲ ಸ್ಥಳಗಳಲ್ಲಿ ಜನರು ಹೊಲಗದ್ದೆಗಳಿಗೆ ಕ್ರಯಕೊಟ್ಟು, ಪತ್ರಕ್ಕೆ ರುಜುಹಾಕಿ, ಮುದ್ರೆ ಒತ್ತಿ, ಸಾಕ್ಷಿ ಹಾಕಿಸಿ ಕೊಂಡುಕೊಳ್ಳುವರು. ನಾನು ನನ್ನ ಜನರನ್ನು ಗುಲಾಮಗಿರಿಯಿಂದ ಬಿಡಿಸಿ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಬೆನ್ಯಾಮೀನ್ ಸೀಮೆ, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಯೆಹೂದದ ಊರುಗಳು, ಬೆಟ್ಟದ ಊರುಗಳು, ಇಳಕಲಿನ ಊರುಗಳು, ದಕ್ಷಿಣಪ್ರಾಂತ್ಯದ ಊರುಗಳು, ಈ ಎಲ್ಲಾ ಸ್ಥಳಗಳಲ್ಲಿ ಜನರು ಹೊಲ ಗದ್ದೆಗಳಿಗೆ ಕ್ರಯಕೊಟ್ಟು, ಪತ್ರಕ್ಕೆ ಸಹಿಹಾಕಿ ಮುಚ್ಚಿ, ಸಾಕ್ಷಿಗಳನ್ನು ಹಾಕಿಸಿ ಕೊಂಡುಕೊಳ್ಳುವರು; ನಾನು ನನ್ನ ಜನರ ಗುಲಾಮಗಿರಿಯ ದುರವಸ್ಥೆಯನ್ನು ತಪ್ಪಿಸಿ ಬರಮಾಡುವೆನು.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಬೆನ್ಯಮೀನ್ ಸೀಮೆ, ಯೆರೂಸಲೇವಿುನ ಸುತ್ತಣ ಪ್ರದೇಶಗಳು, ಯೆಹೂದದ ಊರುಗಳು, ಬೆಟ್ಟದ ಊರುಗಳು, ಇಳಕಲಿನ ಊರುಗಳು, ದಕ್ಷಿಣಪ್ರಾಂತದ ಊರುಗಳು, ಈ ಎಲ್ಲಾ ಸ್ಥಳಗಳಲ್ಲಿ ಜನರು ಹೊಲಗದ್ದೆಗಳಿಗೆ ಕ್ರಯಕೊಟ್ಟು ಪತ್ರಕ್ಕೆ ರುಜುಹಾಕಿ ಮುಚ್ಚಿ ಸಾಕ್ಷಿಗಳನ್ನು ಹಾಕಿಸಿ ಕೊಂಡುಕೊಳ್ಳುವರು; ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸುವೆನಷ್ಟೆ. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಜನರು ಹಣ ಕೊಟ್ಟು ಭೂಮಿಯನ್ನು ಕೊಂಡುಕೊಳ್ಳುವರು. ಅವರು ಕರಾರುಪತ್ರಗಳಿಗೆ ಸಹಿಹಾಕುವರು. ಜನರು ಕ್ರಯಪತ್ರಗಳಿಗೆ ಸಹಿ ಹಾಕುವದನ್ನು ಬೇರೆಯವರು ನೋಡುವರು. ಬೆನ್ಯಾಮೀನ್ ಕುಲದವರು ವಾಸಿಸುವ ಪ್ರದೇಶದಲ್ಲಿ ಜನರು ಪುನಃ ಹೊಲಗಳನ್ನು ಕೊಂಡುಕೊಳ್ಳುವರು. ಜೆರುಸಲೇಮಿನ ಸುತ್ತಲಿನ ಪ್ರದೇಶದಲ್ಲಿ ಅವರು ಹೊಲಗಳನ್ನು ಕೊಂಡುಕೊಳ್ಳುವರು. ಅವರು ಯೆಹೂದ ಪ್ರದೇಶದ ಊರುಗಳಲ್ಲಿಯೂ ಬೆಟ್ಟಪ್ರದೇಶದಲ್ಲಿಯೂ ಪಶ್ಚಿಮದ ಇಳಿಜಾರು ಪ್ರದೇಶದಲ್ಲಿಯೂ ದಕ್ಷಿಣದ ಮರಳುಗಾಡಿನಲ್ಲಿಯೂ ಹೊಲಗಳನ್ನು ಕೊಂಡುಕೊಳ್ಳುವರು. ನಾನು ನಿಮ್ಮ ಜನರನ್ನು ನಿಮ್ಮ ಪ್ರದೇಶಕ್ಕೆ ಪುನಃ ಕರೆದುಕೊಂಡು ಬರುವದರಿಂದ ಹೀಗಾಗುವುದು.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಬೆನ್ಯಾಮೀನನ ದೇಶದಲ್ಲಿಯೂ, ಯೆರೂಸಲೇಮಿನ ಪ್ರದೇಶಗಳಲ್ಲಿಯೂ, ಯೆಹೂದದ ಪಟ್ಟಣಗಳಲ್ಲಿಯೂ, ದಕ್ಷಿಣ ಪಟ್ಟಣಗಳಲ್ಲಿಯೂ ಹೊಲಗಳನ್ನು ಹಣಕ್ಕೆ ಕೊಂಡುಕೊಂಡು, ಪತ್ರಗಳನ್ನು ಬರೆದು ಮುದ್ರೆಹಾಕಿ, ಸಾಕ್ಷಿಗಳನ್ನು ಇಟ್ಟುಕೊಳ್ಳುವರು. ಏಕೆಂದರೆ ನಾನು ಅವರ ಸೆರೆಯಿಂದ ಹಿಂದಿರುಗುವಂತೆ ಮಾಡುವೆನು,” ಎಂದು ಯೆಹೋವ ದೇವರು ನುಡಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:44
17 ತಿಳಿವುಗಳ ಹೋಲಿಕೆ  

ಜುದೇಯದ ನಗರಗಳು, ಜೆರುಸಲೇಮಿನ ಸುತ್ತಮುತ್ತಲಿನ ಪ್ರದೇಶಗಳು, ಬೆನ್ಯಾಮಿನ್ ಪ್ರಾಂತ್ಯ, ಇಳಕಲಿನ ಪ್ರದೇಶ, ಬೆಟ್ಟದ ಮೇಲಣ ಪ್ರದೇಶ, ದಕ್ಷಿಣ ಪ್ರಾಂತ್ಯ, ಈ ಎಲ್ಲ ಸ್ಥಳಗಳಿಂದ ಸರ್ವಾಂಗಹೋಮಪಶು, ಯಜ್ಞಪಶು, ಧಾನ್ಯನೈವೇದ್ಯ, ಧೂಪ ಮತ್ತು ಕೃತಜ್ಞತಾರ್ಪಣೆ ಇವುಗಳನ್ನು ಜನರು ನನ್ನ ಆಲಯಕ್ಕೆ ತೆಗೆದುಕೊಂಡು ಬರುವರು.


ಅಬ್ರಹಾಮ, ಇಸಾಕ, ಯಕೋಬ ಇವರ ಸಂತತಿಯನ್ನು ಆಳತಕ್ಕ ಒಡೆಯನನ್ನು ದಾಸ ದಾವೀದನ ವಂಶದಿಂದ ಆರಿಸದೆ ಆ ವಂಶವನ್ನು ನಿರಾಕರಿಸುತ್ತಿದ್ದೆ. ಆದರೆ ಈಗ ಗುಲಾಮಗಿರಿಯಿಂದ ಅವರನ್ನು ಬಿಡುಗಡೆಮಾಡುವೆನು. ಅವರಿಗೆ ಕರುಣೆಯನ್ನು ತೋರಿಸಿಯೇ ತೋರಿಸುವೆನು.”


ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ, ಇವು ಮತ್ತೆ ಕೇಳಿಬರುವುವು. ‘ಸೇನಾಧೀಶ್ವರ ಸರ್ವೇಶ್ವರನಿಗೆ ಕೃತಜ್ಞತಾಸ್ತೋತ್ರ ಮಾಡಿ; ಆತ ಒಳ್ಳೆಯವನು, ಆತನ ಪ್ರೀತಿ ಶಾಶ್ವತ’ ಎಂದು ಹಾಡುತ್ತಾ ಕೃತಜ್ಞತಾಬಲಿಯನ್ನು ದೇವಾಲಯಕ್ಕೆ ತರುವರು. ಅವರ ಗಾನ ನಿಮ್ಮ ಕಿವಿಗೆ ಬೀಳುವುದು. ನಾಡನ್ನು ಬಿಡುಗಡೆಮಾಡಿ ಹಿಂದಿನ ಸುಸ್ಥಿತಿಗೆ ಏರಿಸುವೆನು.


ಜುದೇಯದ ಹಾಗೂ ಇಸ್ರಯೇಲಿನ ಗುಲಾಮಗಿರಿಯನ್ನು ಬಿಡಿಸಿ ಮೊದಲಿನಂತೆಯೆ ಅವುಗಳನ್ನು ಪುನರ್‍ ನಿರ್ಮಿಸುವೆನು.


ಪತ್ರಕ್ಕೆ ರುಜುಹಾಕಿ, ಮುದ್ರೆ ಒತ್ತಿ, ಸಾಕ್ಷಿಗಳನ್ನು ಹಾಕಿಸಿ, ತಕ್ಕಡಿಯಲ್ಲಿ ಆ ಬೆಳ್ಳಿಯನ್ನು ತೂಗಿ ಅವನಿಗೆ ಕೊಟ್ಟೆ.


‘ಇಗೋ, ನಾನು ಕಡುಕೋಪದಿಂದಲೂ ರೋಷಾವೇಶದಿಂದಲೂ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಎಲ್ಲ ದೇಶಗಳಿಂದ ಈ ಸ್ಥಳಕ್ಕೆ ಮರಳಿ ಕರೆತಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.


ನನ್ನ ದಾಸನ ಮಾತನ್ನಾದರೋ ದೃಢೀಕರಿಸುವವನು ನಾನೆ ನನ್ನ ದೂತರ ಯೋಜನೆಯನ್ನು ಸಫಲಗೊಳಿಸುವವನು ನಾನೆ ಜನನಿವಾಸವಾಗುವುದು ಜೆರುಸಲೇಮ್ ನಗರವು ಪುನಃ ಕಟ್ಟಲ್ಪಡುವುವು ಜುದೇಯ ಪಟ್ಟಣಗಳು. ಅಲ್ಲಿ ಹಾಳುಬಿದ್ದವುಗಳು ಮರಳಿ ಎದ್ದು ನಿಲ್ಲುವುವು.


ದಕ್ಷಿಣ ನಾಡಿನ ನಗರಗಳು ಮುತ್ತಿಗೆಗೆ ತುತ್ತಾಗಿವೆ. ಅವುಗಳನ್ನು ಬಿಡಿಸಲು ಯಾರೂ ಇಲ್ಲ. ಜುದೇಯವೆಲ್ಲ ಸೆರೆಹೋಗಿದೆ; ಸಂಪೂರ್ಣವಾಗಿ ಸೆರೆಯಾಗಿದೆ’.”


ಇಗೋ, ನಾನು ನನ್ನ ಪ್ರಜೆಯಾದ ಇಸ್ರಯೇಲರನ್ನೂ ಯೆಹೂದ್ಯರನ್ನೂ ಅವರ ದುರವಸ್ಥೆಯಿಂದ ಬಿಡುಗಡೆಮಾಡುವ ದಿನಗಳು ಬರುವುವು. ಆಗ ನಾನು ಅವರನ್ನು ಅವರ ಪೂರ್ವಜರಿಗೆ ಅನುಗ್ರಹಿಸಿದ ನಾಡಿಗೆ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಸರ್ವೇಶ್ವರನಾದ ನನ್ನ ನುಡಿ’.”


ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರನ ನುಡಿ ಹೀಗಿದೆ: “ನಾನು ನನ್ನ ಜನರ ಗುಲಾಮಗಿರಿಯನ್ನು ನೀಗಿಸುವೆನು. ಆಗ, ‘ನ್ಯಾಯದ ನಿವಾಸವೇ, ಪರಿಶುದ್ಧ ಪರ್ವತವೇ, ಸರ್ವೇಶ್ವರ ನಿನ್ನನ್ನು ಆಶೀರ್ವದಿಸಲಿ’ ಎಂಬ ಮಾತು ಜುದೇಯ ನಾಡಿನಲ್ಲೂ ಅದರ ನಗರಗಳಲ್ಲೂ ಮತ್ತೆ ಕೇಳಿಬರುವುದು.


ಮಲೆನಾಡಿನ, ಕೆಳನಾಡಿನ ಹಾಗೂ ದಕ್ಷಿಣ ಪ್ರಾಂತ್ಯದ ಊರುಗಳು, ಬೆನ್ಯಾಮಿನ್ ನಾಡು, ಜೆರುಸಲೇಮಿನ ಸುತ್ತಮುತ್ತಲ ಪ್ರದೇಶಗಳು, ಜುದೇಯದ ಊರುಗಳು, ಈಎಲ್ಲ ಸ್ಥಳಗಳಲ್ಲಿ ಮಂದೆಗಳು ಲೆಕ್ಕಿಸುವವನ ಕಣ್ಮುಂದೆ ಮತ್ತೆ ಹಾದುಹೋಗುವುವು. ಇದು ಸರ್ವೇಶ್ವರನಾದ ನನ್ನ ನುಡಿ.”


ಆಗ ದಕ್ಷಿಣವಲಯದವರು ಏಸಾವಿನ ಪರ್ವತವನ್ನು ಸ್ವಾಧೀನಪಡಿಸಿಕೊಳ್ಳುವರು. ಪಶ್ಚಿಮದ‌ ಬಯಲು ಸೀಮೆಯವರು ಫಿಲಿಷ್ಟಿಯವನ್ನೂ ಎಫ್ರಯಿಮ್ ಮತ್ತು ಸಮಾರ್ಯದ ಭೂಮಿಯನ್ನೂ ವಶಪಡಿಸಿಕೊಳ್ಳುವರು. ಬೆನ್ಯಾಮಿನ ವಂಶಜರು ಗಿಲ್ಯಾದನ್ನು ಸ್ವತಂತ್ರಿಸಿಕೊಳ್ಳುವರು.


ಸೆರೆಹೋಗಿರುವ ಇಸ್ರಯೇಲಿನ ಸೈನಿಕರು ಕಾನಾನ್ ನಾಡನ್ನು ಚಾರೆಪತಿನವರೆಗೆ ವಶಪಡಿಸಿಕೊಳ್ಳುವರು. ಸೆಪಾರದ ಎಂಬಲ್ಲಿ ಸೆರೆಯಾಗಿರುವ ಜೆರುಸಲೇಮಿನವರು ದಕ್ಷಿಣ ಪ್ರಾಂತ್ಯದ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.


ಆ ಕರಾವಳಿಯು ಅಳಿದುಳಿದ ಯೆಹೂದ್ಯರ ಪಾಲಾಗುವುದು; ಅವರ ದನಕುರಿಗಳಿಗೆ ಹುಲ್ಲುಗಾವಲಾಗುವುದು; ಅಷ್ಕೆಲೋನಿನ ಮನೆಗಳು ಅವರಿಗೆ ವಿಶ್ರಾಂತಿ ನಿಲಯಗಳಾಗುವುವು. ದೇವರಾದ ಸರ್ವೇಶ್ವರ ಅವರನ್ನು ಪರಿಪಾಲಿಸುವರು ಮತ್ತು ಅವರನ್ನು ಮರಳಿ ಏಳಿಗೆಗೆ ತರುವರು.


“ಜೆರುಸಲೇಮ್ ಮತ್ತು ಅದರ ಸುತ್ತಮುತ್ತಲಿನ ಪಟ್ಟಣಗಳು ಜನಭರಿತವಾಗಿ ನೆಮ್ಮದಿಯಿಂದಿದ್ದಾಗ ಹಾಗೂ ದಕ್ಷಿಣ ಪ್ರಾಂತ್ಯದಲ್ಲೂ ಬಯಲು ಪ್ರದೇಶದಲ್ಲೂ ಪ್ರಜೆಯು ತುಂಬಿದ್ದಾಗ ಪ್ರವಾದಿಗಳ ಮುಖಾಂತರ ಪ್ರಕಟಿಸಿದ ಸಂದೇಶ ಇದೇ ಅಲ್ಲವೆ?”


ಯಕೋಬನ ಮನೆಗಳ ದುರವಸ್ಥೆಯನ್ನು ತಪ್ಪಿಸುವೆನು ಜೆರುಸಲೇಮಿನ ನಿವಾಸಗಳನ್ನು ನಿಶ್ಚಯವಾಗಿ ಕರುಣಿಸುವೆನು. ಅದರ ಹಾಳುದಿಬ್ಬಗಳ ಮೇಲೆ ಹೊಸನಗರ ಕಟ್ಟುವೆನು ಅದರ ಅರಮನೆ ಮೊದಲಿದ್ದ ಸ್ಥಳದಲ್ಲೆ ನೆಲೆಯಾಗಿ ನಿಲ್ಲುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು