Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 33:15 - ಕನ್ನಡ ಸತ್ಯವೇದವು C.L. Bible (BSI)

15 ಆ ಕಾಲದಲ್ಲಿ, ಆ ದಿನಗಳಲ್ಲಿ, ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯೊಂದನ್ನು ಚಿಗುರಿಸುವೆನು. ಆತನು ನಾಡಿನಲ್ಲಿ ನ್ಯಾಯನೀತಿಯನ್ನು ನಿರ್ವಹಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆ ದಿನಗಳಲ್ಲಿ, ಆ ಕಾಲದಲ್ಲಿ, ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯನ್ನು ಚಿಗುರಿಸುವೆನು; ಅವನು ದೇಶದಲ್ಲಿ ನೀತಿ ಮತ್ತು ನ್ಯಾಯಗಳನ್ನು ನಿರ್ವಹಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆ ದಿನಗಳಲ್ಲಿ, ಆ ಕಾಲದಲ್ಲಿ, ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಿಕೆಯನ್ನು ಚಿಗುರಿಸುವೆನು; ಅವನು ದೇಶದಲ್ಲಿ ನೀತಿನ್ಯಾಯಗಳನ್ನು ನಿರ್ವಹಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆಗ ನಾನು ದಾವೀದನ ವಂಶದಿಂದ ಒಳ್ಳೆಯದಾದ ‘ಮೊಳಕೆಯೊಂದನ್ನು’ ಚಿಗುರಿಸುವೆನು. ಆ ಮೊಳಕೆಯು ದೇಶಕ್ಕೆ ಒಳ್ಳೆಯದನ್ನೂ ನೀತಿಯುತವಾದುದನ್ನೂ ಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ ‘ಆ ದಿನಗಳಲ್ಲಿಯೂ ಆ ಕಾಲದಲ್ಲಿಯೂ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಚಿಗುರ ಮಾಡುವೆನು. ಆತನು ದೇಶದಲ್ಲಿ ನ್ಯಾಯವನ್ನೂ, ನೀತಿಯನ್ನೂ ನಡೆಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 33:15
21 ತಿಳಿವುಗಳ ಹೋಲಿಕೆ  

ಆ ದಿನದಂದು ಸರ್ವೇಶ್ವರಸ್ವಾಮಿ ಅನುಗ್ರಹಿಸುವ ಗಿಡಮರಗಳು ಸುಂದರವಾಗಿರುವುವು, ಸಮೃದ್ಧಿಯಾಗಿ ಬೆಳೆದಿರುವುವು. ಭೂಮಿಯ ಸಿರಿಸುಗ್ಗಿ ಅಳಿದುಳಿದ ಇಸ್ರಯೇಲರಿಗೆ ಹಿಗ್ಗನ್ನೂ ಹೆಮ್ಮೆಯನ್ನೂ ತರುವುದು.


ಪ್ರಧಾನ ಯಾಜಕನಾದ ಯೆಹೋಶುವನೇ, ನೀನೂ ಮತ್ತು ನಿನ್ನ ಜೊತೆಯಲ್ಲಿ ಉಪಸ್ಥಿತರಾದ ಸಹಯಾಜಕರೂ, ಕೇಳಲಿ: ನೀವು ಶುಭದಿನಗಳ ಮುಂಗುರುತು. ‘ಮೊಳಕೆ’ ಎಂಬಸೇವಕನೊಬ್ಬನು ಕಾಣಿಸಿಕೊಳ್ಳುವಂತೆ ಮಾಡುವೆನು.


ನಾನು ಈ ದೃಶ್ಯವನ್ನೂ ಕಂಡೆ: ಸ್ವರ್ಗವು ತೆರೆದಿತ್ತು. ಬಿಳಿಯ ಕುದುರೆಯೊಂದು ಕಾಣಿಸಿತು. ಅದರ ಮೇಲೆ ಒಬ್ಬನು ಕುಳಿತಿದ್ದನು. ನಂಬಿಕಸ್ಥನೆಂದೂ ಸತ್ಯವಂತನೆಂದೂ ಆತನ ಹೆಸರು; ಆತನು ನಿಷ್ಪಕ್ಷಪಾತದಿಂದ ನ್ಯಾಯತೀರ್ಪು ಕೊಡುವವನು; ನ್ಯಾಯಬದ್ಧವಾಗಿ ಯುದ್ಧಮಾಡುವವನು.


ಸರ್ವೇಶ್ವರನ ಮುಂದೆ ಬೆಳೆದನಾತ ಸಸಿಯಂತೆ ಒಣನೆಲದೊಳಗೆ ಇಳಿಯುವ ಬೇರಿನಂತೆ. ಆತನಲಿ ಅಂದಚಂದಗಳಾವುವೂ ಇರಲಿಲ್ಲ, ನೋಡಲು ಲಕ್ಷಣವಾದುವು ಏನೂ ಕಾಣಲಿಲ್ಲ.


ಸರ್ವೇಶ್ವರ ಮುಕ್ತಿದಾತನಾದುದರಿಂದ ಧರ್ಮಶಾಸ್ತ್ರಕ್ಕೆ ಮಹಿಮೆಯಿತ್ತು ಅದನ್ನು ಮಹತ್ತಾಗಿಸಿದ.


ಅಂತ್ಯವಿರದಾತನ ರಾಜ್ಯಾಭಿವೃದ್ಧಿಗೆ ಕೊನೆಯಿರದಾ ರಾಜ್ಯದ ಶಾಂತಿಗೆ. ಆಸೀನನಾಗುವನಾತ ದಾವೀದನ ಸಿಂಹಾಸನದ ಮೇಲೆ ಅಧಿಕಾರ ನಡೆಸುವನು ಆ ಸಾಮ್ರಾಜ್ಯದ ಮೇಲೆ. ಬಲಪಡಿಸುವನು ನ್ಯಾಯನೀತಿಯಿಂದದನು ಇಂದಿಗೂ ಎಂದೆಂದಿಗೂ ಸ್ಥಿರಪಡಿಸುವನದನು. ಸರ್ವಶಕ್ತಸ್ವಾಮಿಯ ಆಗ್ರಹವೆ ಸಾಧಿಸುವುದದನು.


ಪ್ರೀತಿಸಿದೆ ನೀನು ಧರ್ಮವನು ದ್ವೇಷಿಸಿದೆ ಅಧರ್ಮವನು I ಆನಂದ ತೈಲದಿಂದಭಿಷೇಕಿಸಿಹನು ನಿನ್ನ, ದೇವನು I ಮಿತ್ರರಿಗಿಂತ ಮಿಗಿಲಾಗಿ ಅಭಿಷೇಕಿಸಿಹನು ಆತನು ನಿನ್ನನು II


ಹೊರಡು ಒಡ್ಡೋಲಗದಿಂದ ವಾಹನಾರೂಢನಾಗಿ I ತೆರಳು ಭುಜಬಲದಿ ಮಹತ್ಕಾರ್ಯವೆಸಗುವವನಾಗಿ I ಹೆಣಗು ಸತ್ಯಕ್ಕಾಗಿ, ನ್ಯಾಯನೀತಿಪರನಾಗಿ II


ಆಗ ದಾವೀದನ ಸಿಂಹಾಸನಾರೂಢರಾದ ಅರಸರೂ ಹಾಗು ಪ್ರಭುಗಳೂ ರಥಾಶ್ವಗಳನ್ನು ಏರಿದವರಾಗಿ ಈ ನಗರದ ಬಾಗಿಲುಗಳನ್ನು ಪ್ರವೇಶಿಸುವರು. ಇವರು ಮಾತ್ರವಲ್ಲ, ಇವರ ಪ್ರಧಾನರು, ಜುದೇಯದ ಜನರು, ಜೆರುಸಲೇಮಿನ ನಿವಾಸಿಗಳು ಎಲ್ಲರೂ ಇಲ್ಲಿ ಸೇರುವರು. ಈ ನಗರದಲ್ಲಿ ಜನರು ಯಾವಾಗಲು ತುಂಬಿರುವರು.


ಅವರು ತಮ್ಮ ದೇವರಾದ ಸರ್ವೇಶ್ವರನೆಂಬ ನನಗೆ ಮತ್ತು ಅವರಿಗಾಗಿ ನಾನು ಏರ್ಪಡಿಸಲಿರುವ ರಾಜ ದಾವೀದನಿಗೆ ಸೇವೆಸಲ್ಲಿಸುವರು.)


ಕಂಡಕಂಡವರೆಲ್ಲರು ಅವರನ್ನು ಕಬಳಿಸಿದ್ದಾರೆ. ಅವರ ವಿರೋಧಿಗಳು, ‘ನಾವು ಅವರನ್ನು ಕಬಳಿಸಿದ್ದು ದೋಷವಲ್ಲ, ಏಕೆಂದರೆ, ಸತ್ಯಸ್ವರೂಪರಾದ ಸರ್ವೇಶ್ವರನಿಗೆ, ತಮ್ಮ ಪೂರ್ವಜರ ನಂಬಿಕೆ ನಿರೀಕ್ಷೆಯಾದ ಸರ್ವೇಶ್ವರನಿಗೆ ವಿರುದ್ಧ ಅವರು ಪಾಪಮಾಡಿದ್ದಾರೆ,’ ಎಂದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು