Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 33:17 - ಕನ್ನಡ ಸತ್ಯವೇದವು C.L. Bible (BSI)

17 ಸರ್ವೇಶ್ವರನಾದ ನಾನು ಹೇಳುವುದೇನೆಂದರೆ: ದಾವೀದ ವಂಶವು ನಿಂತುಹೋಗದು. ಇಸ್ರಯೇಲರ ವಂಶದವರು ಆ ಸಿಂಹಾಸನದಲ್ಲಿ ಆಸೀನರಾಗುತ್ತಾ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೆಹೋವನು ಇಂತೆನ್ನುತ್ತಾನೆ, “ದಾವೀದನ ವಂಶವು ನಿಂತು ಹೋಗದೆ ಆ ಸಂತಾನದವರು ಇಸ್ರಾಯೇಲರ ಸಿಂಹಾಸನದಲ್ಲಿ ತಪ್ಪದೆ ಆಸೀನರಾಗುತ್ತಾ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೆಹೋವನು ಇಂತೆನ್ನುತ್ತಾನೆ - ದಾವೀದನ ವಂಶವು ನಿಂತುಹೋಗದೆ ಆ ಸಂತಾನದವರು ಇಸ್ರಾಯೇಲ್ಯರ ಸಿಂಹಾಸನದಲ್ಲಿ ತಪ್ಪದೆ ಆಸೀನರಾಗುತ್ತಾ ಬರುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೆಹೋವನು ಹೀಗೆನ್ನುತ್ತಾನೆ: “ಯಾವಾಗಲೂ ದಾವೀದನ ವಂಶದವನೊಬ್ಬನು ಸಿಂಹಾಸನಾರೂಢನಾಗಿದ್ದುಕೊಂಡು ಇಸ್ರೇಲರನ್ನು ಆಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೆಹೋವ ದೇವರಾದ ನಾನು ಹೇಳುವುದೇನೆಂದರೆ: ‘ದಾವೀದನು ಎಂದಿಗೂ ಇಸ್ರಾಯೇಲ್ ಸಿಂಹಾಸನದಲ್ಲಿ ಕುಳಿತುಕೊಳ್ಳಲು ಒಬ್ಬ ವ್ಯಕ್ತಿಯನ್ನು ಹೊಂದಲು ವಿಫಲನಾಗುವುದಿಲ್ಲ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 33:17
15 ತಿಳಿವುಗಳ ಹೋಲಿಕೆ  

ಇದಲ್ಲದೆ ಸರ್ವೇಶ್ವರ, ‘ನಿನ್ನ ಸಂತಾನದವರು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನನಗೆ ನಂಬಿಗಸ್ತರಾಗಿ ನಡೆದುಕೊಳ್ಳುವುದರಲ್ಲಿ ಜಾಗರೂಕರಾಗಿದ್ದರೆ ಅವರು ಇಸ್ರಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವುದು ತಪ್ಪದು,’ ಎಂದು ನನಗೆ ಮಾಡಿದ ವಾಗ್ದಾನವನ್ನು ಅವರು ಸ್ಥಿರಪಡಿಸುವರು.


ಅಂತ್ಯವಿರದಾತನ ರಾಜ್ಯಾಭಿವೃದ್ಧಿಗೆ ಕೊನೆಯಿರದಾ ರಾಜ್ಯದ ಶಾಂತಿಗೆ. ಆಸೀನನಾಗುವನಾತ ದಾವೀದನ ಸಿಂಹಾಸನದ ಮೇಲೆ ಅಧಿಕಾರ ನಡೆಸುವನು ಆ ಸಾಮ್ರಾಜ್ಯದ ಮೇಲೆ. ಬಲಪಡಿಸುವನು ನ್ಯಾಯನೀತಿಯಿಂದದನು ಇಂದಿಗೂ ಎಂದೆಂದಿಗೂ ಸ್ಥಿರಪಡಿಸುವನದನು. ಸರ್ವಶಕ್ತಸ್ವಾಮಿಯ ಆಗ್ರಹವೆ ಸಾಧಿಸುವುದದನು.


ಇಸ್ರಯೇಲ್ ದೇವರಾದ ಸರ್ವೇಶ್ವರಾ, ನೀವು ನನ್ನ ತಂದೆ ದಾವೀದನಿಗೆ, ನಿನ್ನ ಸಂತಾನದವರು ನಿನ್ನಂತೆ ಜಾಗರೂಕತೆಯಿಂದ ನನ್ನ ಮಾರ್ಗದಲ್ಲೇ ನಡೆದುಕೊಳ್ಳುವುದಾದರೆ, ಅವರು ಇಸ್ರಯೇಲ್ ಸಿಂಹಾಸನದ ಮೇಲೆ ಕೂತುಕೊಳ್ಳುವುದು ತಪ್ಪದು; ಎಂಬುದಾಗಿ ವಾಗ್ದಾನಮಾಡಿದ್ದೀರಿ; ಅದನ್ನು ನೆರವೇರಿಸಿರಿ.


ರೇಕಾಬನ ಮಗ ಯೋನಾದಾಬನ ಸಂತಾನದವರಲ್ಲಿ ನನ್ನ ಸಮ್ಮುಖ ಸೇವೆಮಾಡತಕ್ಕವರು ತಲತಲಾಂತರಕ್ಕೂ ಇದ್ದೇ ಇರುವರು’ ಎಂದನು.”


ಈಗ ನಿಮ್ಮ ದಾಸನ ಮನೆತನವನ್ನು ಆಶೀರ್ವದಿಸಿರಿ; ಅದನ್ನು ಸದಾಕಾಲ ನಿಮ್ಮ ಆಶ್ರಯದಲ್ಲಿ ಇಟ್ಟುಕೊಳ್ಳಬೇಕೆಂದು ಮನಸ್ಸು ಮಾಡಿದ್ದೀರಿ; ಸರ್ವೇಶ್ವರಾ, ನೀವು ಅದನ್ನು ಆಶೀರ್ವದಿಸಿದ್ದೀರಿ; ಅದು ನಿತ್ಯವು ಸೌಭಾಗ್ಯದಿಂದ ಇರುವುದು,” ಎಂದು ಪ್ರಾರ್ಥಿಸಿದನು.


ಈ ಅಪರಾಧ ಯೋವಾಬನ ಮೇಲೂ ಅವನ ಸಂತಾನದವರೆಲ್ಲರ ಮೇಲೂ ಇರಲಿ ಅವನ ಮನೆಯಲ್ಲಿ ಮೇಹಸ್ರಾವವುಳ್ಳವರು, ಕುಷ್ಠರೋಗಿಗಳು, ಕುಂಟರು, ಕತ್ತಿಯಿಂದ ಹತರಾಗುವವರು ಹಾಗು ಭಿಕ್ಷೆಬೇಡುವವರು ಇದ್ದೇ ಇರಲಿ,” ಎಂದನು


ಆಗ ದಾವೀದನ ಸಿಂಹಾಸನಾರೂಢರಾದ ಅರಸರೂ ಹಾಗು ಪ್ರಭುಗಳೂ ರಥಾಶ್ವಗಳನ್ನು ಏರಿದವರಾಗಿ ಈ ನಗರದ ಬಾಗಿಲುಗಳನ್ನು ಪ್ರವೇಶಿಸುವರು. ಇವರು ಮಾತ್ರವಲ್ಲ, ಇವರ ಪ್ರಧಾನರು, ಜುದೇಯದ ಜನರು, ಜೆರುಸಲೇಮಿನ ನಿವಾಸಿಗಳು ಎಲ್ಲರೂ ಇಲ್ಲಿ ಸೇರುವರು. ಈ ನಗರದಲ್ಲಿ ಜನರು ಯಾವಾಗಲು ತುಂಬಿರುವರು.


ನಿನ್ನ ಆಯುಷ್ಕಾಲ ಮುಗಿದು ನೀನು ನಿನ್ನ ಪೂರ್ವಜರನ್ನು ಸೇರಿ ವಿಶ್ರಮಿಸುವಾಗ ನಿನ್ನ ಮಕ್ಕಳಲ್ಲಿ ಒಬ್ಬನನ್ನು ನಿನಗೆ ಉತ್ತರಾಧಿಕಾರಿಯನ್ನಾಗಿ ನೇಮಿಸಿ ಅವನ ರಾಜ್ಯವನ್ನು ಸ್ಥಿರಪಡಿಸುವೆನು.


ಅವನು ನನ್ನ ಹೆಸರಿನಲ್ಲಿ ಒಂದು ದೇವಾಲಯವನ್ನು ಕಟ್ಟುವನು. ನಾನು ಅವನ ಸಿಂಹಾಸನವನ್ನು ಸ್ಥಿರಪಡಿಸುವೆನು.


ಆದರೆ ಅರಸ ಯೆಹೋರಾಮನ ಮಗಳೂ ಅಹಜ್ಯನ ತಂಗಿಯೂ ಆದ ಯೆಹೋಷೆಬ ಎಂಬಾಕೆ, ಯಾರಿಗೂ ತಿಳಿಯದಂತೆ ತನ್ನ ಅಣ್ಣನ ಮಗ ಯೆಹೋವಾಷನನ್ನು, ಹತವಾಗುವುದಕ್ಕಿದ್ದ ರಾಜಪುತ್ರರ ಮಧ್ಯೆಯಿಂದ, ಅವನ ದಾದಿಯೊಡನೆ ತೆಗೆದುಕೊಂಡು ಹೋಗಿ, ಮಲಗುವ ಕೋಣೆಯಲ್ಲಿ ಅಡಗಿಸಿಬಿಟ್ಟಳು.


“ನನ್ನ ನೇಮನಿಯಮಗಳನು ನಿನ್ನ ಮಕ್ಕಳು ಅನುಸರಿಸುವರಾದರೆ I ಕೂರುವರು ಸದಾಕಾಲ ಅವರ ಮಕ್ಕಳ ನಿನ್ನಾ ಸಿಂಹಾಸನದ ಮೇಲೆ” II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು