Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 34:19 - ಕನ್ನಡ ಸತ್ಯವೇದವು C.L. Bible (BSI)

19 ಜುದೇಯದ ಹಾಗು ಜೆರುಸಲೇಮಿನ ರಾಜ್ಯಾಧಿಕಾರಿಗಳು, ಕಂಚುಕಿಗಳು, ಯಾಜಕರು, ಸೀಳಿದ ಕರುವಿನ ಹೋಳುಗ಼ಳ ನಡುವೆ ಹಾದು ನನ್ನ ಮುಂದೆ ಒಪ್ಪಂದಮಾಡಿದರು. ಆದರೆ ಆ ಒಪ್ಪಂದಕ್ಕೆ ತದ್ವಿರುದ್ಧವಾಗಿ ನಡೆದಿದ್ದಾರೆ ನಾಡಿನ ಎಲ್ಲ ಜನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನನ್ನ ಒಡಂಬಡಿಕೆಯನ್ನು ಮೀರಿದ ಯೆಹೂದದ ಪ್ರಧಾನರು, ಯೆರೂಸಲೇಮಿನ ಪ್ರಧಾನರು, ಕಂಚುಕಿಗಳು, ಯಾಜಕರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನನ್ನ ಒಡಂಬಡಿಕೆಯನ್ನು ಮೀರಿದ ಯೆಹೂದದ ಪ್ರಧಾನರು, ಯೆರೂಸಲೇವಿುನ ಪ್ರಧಾನರು, ಕಂಚುಕಿಗಳು, ಯಾಜಕರು, ಕರುವಿನ ಹೋಳುಗಳ ನಡುವೆ ಹಾದುಹೋದ ದೇಶದ ಸಕಲ ಜನರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯೆಹೂದದ ಮತ್ತು ಜೆರುಸಲೇಮಿನ ನಾಯಕರು, ಪ್ರಮುಖ ಅಧಿಕಾರಿಗಳು, ಯಾಜಕರು ಮತ್ತು ದೇಶದ ಸಕಲ ಜನರು ಇವರೆಲ್ಲ ನನ್ನ ಮುಂದೆ ಒಡಂಬಡಿಕೆಯನ್ನು ಮಾಡಿದಾಗ ಕರುವಿನ ಶರೀರದ ಎರಡು ತುಂಡುಗಳ ಮಧ್ಯದಿಂದ ಹಾದುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯೆಹೂದದ ಪ್ರಧಾನರನ್ನೂ, ಯೆರೂಸಲೇಮಿನ ಪ್ರಧಾನರನ್ನೂ, ಕಂಚುಕಿಯರನ್ನೂ, ಯಾಜಕರನ್ನೂ, ಕರುವಿನ ತುಂಡುಗಳ ನಡುವೆ ದಾಟಿಹೋದ ದೇಶದ ಜನರೆಲ್ಲರನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 34:19
14 ತಿಳಿವುಗಳ ಹೋಲಿಕೆ  

ತಮ್ಮ ತಮ್ಮ ಹೆಣ್ಣುಗಂಡು ಜೀತದಾರರನ್ನು ಬಿಡುಗಡೆಮಾಡಿ ಅವರಿಂದ ಇನ್ನು ಜೀತಮಾಡಿಸಿಕೊಳ್ಳುವುದಿಲ್ಲ ಎಂಬ ಈ ಒಪ್ಪಂದಕ್ಕೆ ಸಮ್ಮತಿಸಿದ್ದ ಎಲ್ಲ ಅಧಿಕಾರಿಗಳೂ ಸಮಸ್ತ ಪ್ರಜೆಗಳೂ ಅದರಂತೆ ನಡೆದು ಜೀತದಾರರನ್ನು ಬಿಡುಗಡೆಮಾಡಿದ್ದರು.


ನಮ್ಮ ದೇವರು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿದ್ದಾರೆ. ನಮ್ಮನ್ನೂ ನಮ್ಮನ್ನಾಳುವ ಅಧಿಪತಿಗಳನ್ನೂ ಖಂಡಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾರೆ. ಜೆರುಸಲೇಮಿಗೆ ಆದಂಥ ಕೇಡು ವಿಶ್ವದಲ್ಲಿ ಎಂದೂ ಆಗಲಿಲ್ಲ.


ಅರಸರಿಗೆ, ಒಡೆಯರಿಗೆ, ಹಿರಿಯರಿಗೆ ಹಾಗು ಜನಸಾಮಾನ್ಯರಿಗೆ ನಿಮ್ಮ ದಾಸರಾದ ಪ್ರವಾದಿಗಳು ನಿಮ್ಮ ಹೆಸರಿನಲ್ಲಿ ನುಡಿದ ಮಾತುಗಳಿಗೆ ನಾವು ಕಿವಿಗೊಡಲೇ ಇಲ್ಲ.


ಅರಮನೆಯ ಕಂಚುಕಿಯಾದ ಎಬೆದ್ಮೆಲೆಕನೆಂಬ ಸುಡಾನಿನವನು ಯೆರೆಮೀಯನನ್ನು ಬಾವಿಯಲ್ಲಿ ಹಾಕಿದ್ದಾರೆಂದು ತಿಳಿದುಕೊಂಡನು.


ಅರಸ ಯೆಕೋನ್ಯನು, ರಾಜಮಾತೆಯು, ಕಂಚುಕಿಗಳು, ಜುದೇಯದ ಮತ್ತು ಜೆರುಸಲೇಮಿನ ಪದಾಧಿಕಾರಿಗಳು, ಶಿಲ್ಪಿಗಳು, ಕಮ್ಮಾರರು, ಇವರೆಲ್ಲರು ಜೆರುಸಲೇಮನ್ನು ಬಿಟ್ಟುಹೋದ ಮೇಲೆ ಈ ಪತ್ರವನ್ನು ಬರೆದನು.


ಅವನು ಯೆಹೋಯಾಖೀನನ್ನೂ ಅವನ ತಾಯಿ, ಹೆಂಡತಿಯರು, ಕಂಚುಕಿಗಳನ್ನೂ ನಾಡಿನ ಪ್ರಧಾನ ಪುರುಷರು ಇವರನ್ನೂ,


ಆಗ ಜುದೇಯದ ಅರಸ ಯೆಹೋಯಾಖೀನನು, ತನ್ನ ತಾಯಿ, ಪರಿವಾರದವರು, ಸೇನಾಪತಿಗಳು, ಕಂಚುಕಿಗಳು ಇವರೊಡನೆ ಅವನ ಬಳಿಗೆ ಹೋದನು. ಅವನು ಇವನನ್ನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಸೆರೆಹಿಡಿದನು.


ಸ್ವಾಮೀ, ನಿಮಗೆ ವಿರುದ್ಧ ಪಾಪಮಾಡಿದ್ದರಿಂದ ನಾವೂ ನಮ್ಮ ಅರಸರೂ ಒಡೆಯರೂ ಹಿರಿಯರೂ ನಾಚಿಕೆಗೆ ಗುರಿಯಾಗಿದ್ದೇವೆ.


ಹೊತ್ತು ಮುಳುಗಿ ಕಾರ್ಗತ್ತಲಾದಾಗ ಇಗೋ, ಹೊಗೆಯಾಡುವ ಒಲೆಯೊಂದು ಹಾಗು ಉರಿಯುವ ದೀವಿಟಿಗೆಯೊಂದು ಕಾಣಿಸಿಕೊಂಡು ಆ ತುಂಡುಗಳ ನಡುವೆ ಹಾದುಹೋದವು.


ಆ ಬಾಬಿಲೋನಿಯದ ಅರಸನು ಅಲ್ಲೆ ಚಿದ್ಕೀಯನಿಗೆ ಶಿಕ್ಷೆಯನ್ನು ವಿಧಿಸಿದನು. ಅವನ ಮಕ್ಕಳನ್ನು ಅವನ ಕಣ್ಣೆದುರಿಗೇ ವಧಿಸಿದನು. ಜುದೇಯದ ಸಮಸ್ತ ಶ್ರೀಮಂತರನ್ನೂ ಕೊಲ್ಲಿಸಿದನು.


ಅದಕ್ಕೆ ಅಬ್ರಾಮನು, “ಸರ್ವೇಶ್ವರಾ, ಇದು ನನ್ನ ಸೊತ್ತು ಎಂದು ತಿಳಿದುಕೊಳ್ಳುವುದು ಹೇಗೆ?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು