Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 34:20 - ಕನ್ನಡ ಸತ್ಯವೇದವು C.L. Bible (BSI)

20 ಇವರೆಲ್ಲರನ್ನು ಶತ್ರುಗಳ ವಶಕ್ಕೆ ಒಪ್ಪಿಸುವೆನು. ಇವರ ಪ್ರಾಣವನ್ನು ಹುಡುಕುವ ಶತ್ರುಗಳ ಕೈಗೆ ಕೊಡುವೆನು. ಇವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಜಂತುಗಳಿಗೂ ಆಹಾರವಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಕರುವಿನ ಹೋಳುಗಳ ನಡುವೆ ಹಾದುಹೋದ ದೇಶದ ಸಕಲ ಜನರು, ಇವರೆಲ್ಲರನ್ನೂ ಇವರ ಪ್ರಾಣವನ್ನು ಹುಡುಕುವ ಶತ್ರುಗಳ ಕೈಗೆ ಕೊಡುವೆನು; ಇವರ ಹೆಣಗಳು ಆಕಾಶ ಪಕ್ಷಿಗಳಿಗೂ, ಭೂಜಂತುಗಳಿಗೂ ಆಹಾರವಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇವರೆಲ್ಲರನ್ನೂ ಇವರ ಪ್ರಾಣವನ್ನು ಹುಡುಕುವ ಶತ್ರುಗಳ ಕೈಗೆ ಕೊಡುವೆನು; ಇವರ ಹೆಣಗಳು ಆಕಾಶಪಕ್ಷಿಗಳಿಗೂ ಭೂಜಂತುಗಳಿಗೂ ಆಹಾರವಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದ್ದರಿಂದ ನಾನು ಆ ಜನರನ್ನು ಅವರ ವೈರಿಗಳಿಗೆ ಮತ್ತು ಅವರನ್ನು ಕೊಲ್ಲಲು ಇಚ್ಛಿಸುವ ಪ್ರತಿಯೊಬ್ಬರಿಗೆ ಕೊಡುತ್ತೇನೆ. ಆ ಜನರ ದೇಹಗಳು ಗಾಳಿಯಲ್ಲಿ ಹಾರಾಡುವ ಪಕ್ಷಿಗಳಿಗೂ ಭೂಮಿಯ ಮೇಲಿನ ಕಾಡುಪ್ರಾಣಿಗಳಿಗೂ ಆಹಾರವಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವರ ಶತ್ರುಗಳ ಕೈಯಲ್ಲಿಯೂ, ಅವರ ಪ್ರಾಣವನ್ನು ಹುಡುಕುವವರ ಕೈಯಲ್ಲಿಯೂ ಒಪ್ಪಿಸುವೆನು. ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಆಹಾರವಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 34:20
25 ತಿಳಿವುಗಳ ಹೋಲಿಕೆ  

ಈ ಜನರ ಹೆಣಗಳು ಆಕಾಶಪಕ್ಷಿಗಳಿಗೂ ಭೂಜಂತುಗಳಿಗೂ ಆಹಾರವಾಗುವುವು. ಅವುಗಳನ್ನು ಬೆದರಿಸಿ ಓಡಿಸಲು ಯಾರೂ ಇರುವುದಿಲ್ಲ.


ಈ ಸ್ಥಳದಲ್ಲಿ ಯೆಹೂದ್ಯರ ಮತ್ತು ಜೆರುಸಲೇಮಿನವರ ಯೋಜನೆಗಳನ್ನು ಮಣ್ಣುಪಾಲಾಗಿಸುವೆನು. ಅವರ ಶತ್ರುಗಳ ಹಾಗು ಕೊಲೆಗಡುಕರ ಕತ್ತಿಗೆ ಅವರನ್ನು ತುತ್ತಾಗಿಸುವೆನು. ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಭೂಜಂತುಗಳಿಗೂ ಆಹಾರವಾಗಿಸುವೆನು.


ಅವರು ಘೋರ ಮರಣಕ್ಕೆ ಗುರಿಯಾಗುವರು. ಅವರಿಗಾಗಿ ಯಾರೂ ದುಃಖಿಸುವುದಿಲ್ಲ. ಅವರನ್ನು ಯಾರೂ ಹೂಣುವುದಿಲ್ಲ. ಅವರು ಗೊಬ್ಬರವಾಗಿ ಭೂಮಿಯ ಮೇಲೆ ಬಿದ್ದಿರುವರು. ಖಡ್ಗದಿಂದ ಹಾಗು ಕ್ಷಾಮದಿಂದ ಅವರು ನಾಶವಾಗುವರು. ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಜಂತುಗಳಿಗೂ ಆಹಾರವಾಗುವುವು.”


ಹೀಗಿರಲು, “ಸರ್ವೇಶ್ವರನ ಹೆಸರೆತ್ತಿ ಪ್ರವಾದನೆ ಮಾಡಬೇಡ, ಮಾಡಿದರೆ ನಮ್ಮ ಕೈಯಿಂದಲೆ ನೀನು ಸಾಯುವೆ,” ಎಂದು ಅನಾತೋತಿನವರು ನನ್ನ ಪ್ರಾಣಕ್ಕೆ ಹೊಂಚುಹಾಕುತ್ತಿದ್ದರು.


ನಿನ್ನ ಕುಟುಂಬದವರಲ್ಲಿ ಪಟ್ಟಣದೊಳಗೆ ಸಾಯುವವರನ್ನು ನಾಯಿಗಳು ಹಾಗು ಅಡವಿಯಲ್ಲಿ ಸಾಯುವವರನ್ನು ಪಕ್ಷಿಗಳು ತಿಂದುಬಿಡುವುವು".


ನಿನ್ನ ಪ್ರಾಣ ಹುಡುಕುತ್ತಿರುವವರ ಕೈಗೆ, ನಿನ್ನಲ್ಲಿ ಭಯಹುಟ್ಟಿಸುವವರ ಕೈಗೆ, ಅಂದರೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಮತ್ತು ಬಾಬಿಲೋನಿನ ಜನರ ಕೈಗೆ ನಿನ್ನನ್ನು ಕೊಟ್ಟುಬಿಡುವೆನು.


ಬಳಿಕ ನಾನು ಜುದೇಯದ ಅರಸ ಚಿದ್ಕೀಯನನ್ನೂ ಅವನ ಸೇವಕರನ್ನೂ ಹಾಗೂ ವ್ಯಾಧಿ, ಖಡ್ಗ, ಕ್ಷಾಮಗಳಿಂದ ಅಳಿಯದೆ ಉಳಿದ ಪ್ರಜೆಗಳನ್ನೂ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಕೈಗೂ ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಬಿಟ್ಟುಬಿಡುವೆನು. ಅವನು ಅವರನ್ನು ಕತ್ತಿಯಿಂದ ಕೊಂದುಹಾಕುವನು. ಅವರನ್ನು ಕರುಣಿಸನು, ಕನಿಕರಿಸನು, ಉಳಿಯಗೊಳಿಸನು.”


ಅವರಲ್ಲಿ ಪಟ್ಟಣದೊಳಗೆ ಸಾಯುವಂಥವರನ್ನು ನಾಯಿಗಳೂ, ಅಡವಿಯಲ್ಲಿ ಸಾಯುವಂಥವರನ್ನು ಪಕ್ಷಿಗಳೂ, ತಿಂದುಬಿಡುವವು,’ ಎಂದು ಹೇಳುತ್ತಾರೆ. ಇದು ಸರ್ವೇಶ್ವರನ ಮಾತು.


ಅವರು ಈ ದಿನ ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಡುವರು. ನಾನು ನಿನ್ನನ್ನು ಕೊಂದು, ನಿನ್ನ ತಲೆಯನ್ನು ಕಡಿದು, ಫಿಲಿಷ್ಟಿಯ ಸೈನ್ಯದ ಶವಗಳನ್ನು ಆಕಾಶದ ಪಕ್ಷಿಗಳಿಗೂ ವನ್ಯಮೃಗಗಳಿಗೂ ಹಂಚಿಕೊಡುವೆನು. ಇದರಿಂದ ಇಸ್ರಯೇಲರ ಸಂಗಡ ದೇವರಿದ್ದಾರೆಂಬುದು ಜಗತ್ತಿಗೆಲ್ಲಾ ತಿಳಿದುಬರುವುದು.


“ಇಲ್ಲಿ ಬಾ; ನಿನ್ನ ಮಾಂಸವನ್ನು ಆಕಾಶದ ಪಕ್ಷಿಗಳಿಗೆ, ಕಾಡಿನ ಮೃಗಗಳಿಗೆ ಹಂಚಿಕೊಡುತ್ತೇನೆ,” ಎಂದನು.


ಆಕಾಶದ ಪಕ್ಷಿಗಳು ನಿನ್ನ ಮೇಲೆರಗುವಂತೆ, ಸಮಸ್ತ ಭೂಜಂತುಗಳು ನಿನ್ನಿಂದ ತೃಪ್ತಿಗೊಳ್ಳುವಂತೆ, ನಿನ್ನನೆಸೆದುಬಿಡುವೆ ನೆಲದ ಮೇಲೆ ಬಯಲಿಗೆ.


ನಿನ್ನನ್ನೂ ನಿನ್ನ ಎಲ್ಲ ಮೀನುಗಳನ್ನೂ ಕಾಡುಪಾಲು ಮಾಡುವೆನು; ನೀನು ಬಯಲಿನಲ್ಲಿ ಬಿದ್ದಿರುವೆ; ನಿನ್ನನ್ನು ಯಾರೂ ಹೊರರು, ಹೂಣಿಡರು; ನಿನ್ನನ್ನು ಭೂಜಂತುಗಳಿಗೂ ಆಕಾಶದ ಪಕ್ಷಿಗಳಿಗೂ ಆಹಾರ ಮಾಡಿದ್ದೇನೆ.


ತಮ್ಮ ಪ್ರಾಣ ಹುಡುಕುವ ಶತ್ರುಗಳ ಮುಂದೆ ಆ ಏಲಾಮ್ಯರು ನಡುಗುವಂತೆ ಮಾಡುವೆನು. ನನ್ನ ಕೋಪಾಗ್ನಿಯ ಬಿಸಿ ಅವರಿಗೆ ತಟ್ಟುವಂತೆ ಮಾಡುವೆನು. ಇದು ಸರ್ವೇಶ್ವರನಾದ ನನ್ನ ನುಡಿ. ಅವರು ನಿರ್ಮೂಲವಾಗುವ ತನಕ ಅವರ ಹಿಂದೆಯೇ ಖಡ್ಗವನ್ನು ಕಳುಹಿಸುವೆನು.


ಆ ಗುರುತು ಯಾವುದೆಂದರೆ: ಇಗೋ ಜುದೇಯದ ಅರಸ ಚಿದ್ಕೀಯನನ್ನು ಅವನ ಪ್ರಾಣ ಶತ್ರುವಾದ ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನ ಕೈ಼ಗೆ ಒಪ್ಪಿಸಿದಂತೆ ಈಜಿಪ್ಟಿನ ಅರಸನಾದ ಫರೋಹ ಹೊಫ್ರನನ್ನು ಅವನ ಪ್ರಾಣ ಹುಡುಕುವ ಶತ್ರುಗಳ ಕೈಗೆ ಒಪ್ಪಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ’.”


ಅದಕ್ಕೆ ಅರಸ ಚಿದ್ಕೀಯನು, “ನಮಗೆ ಈ ಪ್ರಾಣವನ್ನು ದಯಪಾಲಿಸಿದ ಸರ್ವೇಶ್ವರನ ಜೀವದಾಣೆ, ನಾನು ನಿನ್ನನ್ನು ಕೊಂದುಹಾಕುವುದಿಲ್ಲ. ನಿನ್ನ ಪ್ರಾಣವನ್ನು ಹುಡುಕುವ ಈ ಜನರ ಕೈಗೂ ನಿನ್ನನ್ನು ಸಿಕ್ಕಿಸುವುದಿಲ್ಲ,” ಎಂದು ಗುಟ್ಟಾಗಿ ಪ್ರಮಾಣಮಾಡಿ ಹೇಳಿದನು.


ಎಲೈ ಜೆರುಸಲೇಮ್, ಸೂರೆಯಾಗುವಾಗ ಏನು ಮಾಡುವೆ? ಪಟ್ಟದ ಬಟ್ಟೆಗಳನ್ನು ಉಟ್ಟುಕೊಂಡು ಚಿನ್ನದ ಒಡವೆಗಳನ್ನು ತೊಟ್ಟುಕೊಂಡು ಕಾಡಿಗೆಯಿಂದ ಕಣ್ಣುಗಳನ್ನು ಅಗಲಿಸಿಕೊಂಡು ಶೃಂಗರಿಸಿಕೊಂಡರೆ ಏನು ಪ್ರಯೋಜನ? ಎಲ್ಲವೂ ವ್ಯರ್ಥ ! ನಿನ್ನ ಮಿಂಡರೇ ನಿನ್ನನ್ನು ತಿರಸ್ಕರಿಸಿ ನಿನ್ನ ಪ್ರಾಣಹುಡುಕುವರು.


ನಿಮ್ಮ ಹೆಣಗಳು ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗುವುವು; ಅವುಗಳನ್ನು ಬೆದರಿಸಿ ಓಡಿಸುವುದಕ್ಕೂ ಯಾರೂ ಇರುವುದಿಲ್ಲ.


ಅರ್ಪಿಸಿದರು ನಿನ್ನ ದಾಸರಾ ಶವಗಳನು ಗಗನ ಪಕ್ಷಿಗಳಿಗೆ I ಹಾಕಿದರು ನಿನ್ನ ಭಕ್ತರ ಮಾಂಸವನು ಕಾಡುಮೃಗಗಳಿಗೆ II


ನನ್ನ ಸೊತ್ತಾದ ಜನತೆ ನನ್ನ ದೃಷ್ಟಿಗೆ ಚಿತ್ರವರ್ಣದ ಪಕ್ಷಿಯಂತೆ ಅದರ ಸುತ್ತ ರಣಹದ್ದುಗಳ ಕೂಟ ಸೇರಿದೆ ಕಾಡುಮೃಗಗಳನ್ನೆಲ್ಲ ಕರೆದುತನ್ನಿ ಅದನ್ನು ತಿಂದುಬಿಡಲಿಕ್ಕೆ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಇಗೋ, ನೀನು ಯಾರನ್ನು ಹಗೆಮಾಡುತ್ತೀಯೋ ಯಾರ ಬಗ್ಗೆ ಅಸಹ್ಯಪಡುತ್ತಿಯೋ


ಆ ಬಾಬಿಲೋನಿಯದ ಅರಸನು ಅಲ್ಲೆ ಚಿದ್ಕೀಯನಿಗೆ ಶಿಕ್ಷೆಯನ್ನು ವಿಧಿಸಿದನು. ಅವನ ಮಕ್ಕಳನ್ನು ಅವನ ಕಣ್ಣೆದುರಿಗೇ ವಧಿಸಿದನು. ಜುದೇಯದ ಸಮಸ್ತ ಶ್ರೀಮಂತರನ್ನೂ ಕೊಲ್ಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು