Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 34:9 - ಕನ್ನಡ ಸತ್ಯವೇದವು C.L. Bible (BSI)

9 ಅದರ ಪ್ರಕಾರ ಅವರಲ್ಲಿ ಪ್ರತಿ ಒಬ್ಬನು ತನ್ನ ಜೀತದಾರರಲ್ಲಿ ಹಿಬ್ರಿಯರಾದವರನ್ನು ಬಿಡುಗಡೆಮಾಡಬೇಕಿತ್ತು. ಯೆಹೂದ್ಯರಾದ ಸಹೋದರ ಸಹೋದರಿಯರನ್ನು ಯಾರೂ ಇನ್ನು ಮುಂದೆ ಜೀತದಾರರನ್ನಾಗಿ ಇರಿಸಿಕೊಳ್ಳದೆ ಅವರಿಗೆ ವಿಮೋಚನೆಯನ್ನು ಪ್ರಕಟಿಸಬೇಕೆಂಬುದು ಆ ಒಪ್ಪಂದವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ನಮ್ಮಲ್ಲಿ ಪ್ರತಿಯೊಬ್ಬನು ತನ್ನ ದಾಸ ದಾಸಿಯರೊಳಗೆ ಇಬ್ರಿಯರನ್ನು ಬಿಡುಗಡೆಮಾಡುವನು; ಯಾರೂ ತನ್ನ ಸಹೋದರನಾದ ಯೆಹೂದ್ಯನಿಂದ ಇನ್ನು ಗುಲಾಮತನ ಮಾಡಿಸಿಕೊಳ್ಳುವುದಿಲ್ಲ” ಎಂದು ಅವರಿಗೆ ವಿಮೋಚನೆಯನ್ನು ಪ್ರಕಟಿಸುವ ಒಡಂಬಡಿಕೆಯನ್ನು ಮಾಡಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಮ್ಮಲ್ಲಿ ಪ್ರತಿಯೊಬ್ಬನು ತನ್ನ ದಾಸದಾಸಿಯರೊಳಗೆ ಇಬ್ರಿಯರನ್ನು ಬಿಡುಗಡೆಮಾಡುವನು; ಯಾರೂ ತನ್ನ ಸಹೋದರನಾದ ಯೆಹೂದ್ಯನಿಂದ ಇನ್ನು ಗುಲಾಮತನ ಮಾಡಿಸಿಕೊಳ್ಳುವದಿಲ್ಲ ಎಂದು ಅವರಿಗೆ ವಿಮೋಚನೆಯನ್ನು ಪ್ರಕಟಿಸುವ ಒಡಂಬಡಿಕೆಯನ್ನು ಮಾಡಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಪ್ರತಿಯೊಬ್ಬ ವ್ಯಕ್ತಿಯು ತನ್ನ ಇಬ್ರಿಯ ದಾಸದಾಸಿಯರನ್ನು ಬಿಡುಗಡೆ ಮಾಡಬೇಕಾಗಿತ್ತು. ಯೆಹೂದದ ಕುಲದ ಯಾರನ್ನೂ ಗುಲಾಮರನ್ನಾಗಿ ಇಟ್ಟುಕೊಳ್ಳುವಂತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಪ್ರತಿಯೊಬ್ಬರೂ ತಮ್ಮ ಗಂಡು ಮತ್ತು ಹೆಣ್ಣು ಹಿಬ್ರಿಯ ಗುಲಾಮರನ್ನು ಇಬ್ಬರನ್ನೂ ಮುಕ್ತಗೊಳಿಸಬೇಕು. ಯೆಹೂದ್ಯರಾದ ಸಹೋದರ ಸಹೋದರಿಯರನ್ನು ಯಾರೂ ಬಂಧನದಲ್ಲಿ ಇಟ್ಟುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 34:9
16 ತಿಳಿವುಗಳ ಹೋಲಿಕೆ  

ಹುಟ್ಟಿದ ಎಂಟನೆಯ ದಿನ ನನಗೆ ಸುನ್ನತಿಯಾಯಿತು; ಹುಟ್ಟಿನಿಂದ ನಾನು ಇಸ್ರಯೇಲನು, ಬೆನ್ಯಮೀನ ಕುಲದವನು; ಅಪ್ಪಟ ಹಿಬ್ರಿಯನು,


ಅವರು ಹಿಬ್ರಿಯರೋ? ನಾನೂ ಹಿಬ್ರಿಯನೇ. ಅವರು ಇಸ್ರಯೇಲರೋ? ನಾನೂ ಇಸ್ರಯೇಲನೇ. ಅವರು ಅಬ್ರಹಾಮನ ವಂಶದವರೋ? ನಾನೂ ಅದೆ ವಂಶದವನೇ.


ಅದಕ್ಕೆ ಬದಲು ನೀವೇ ಅನ್ಯಾಯಮಾಡುತ್ತೀರಿ; ನೀವೇ ಸುಲಿಗೆಮಾಡುತ್ತೀರಿ; ಅದೂ ಸಹೋದರರಿಗೆ ಹೀಗೆ ಮಾಡುತ್ತೀರಿ;


ತಮ್ಮ ತಮ್ಮ ಹೆಣ್ಣುಗಂಡು ಜೀತದಾರರನ್ನು ಬಿಡುಗಡೆಮಾಡಿ ಅವರಿಂದ ಇನ್ನು ಜೀತಮಾಡಿಸಿಕೊಳ್ಳುವುದಿಲ್ಲ ಎಂಬ ಈ ಒಪ್ಪಂದಕ್ಕೆ ಸಮ್ಮತಿಸಿದ್ದ ಎಲ್ಲ ಅಧಿಕಾರಿಗಳೂ ಸಮಸ್ತ ಪ್ರಜೆಗಳೂ ಅದರಂತೆ ನಡೆದು ಜೀತದಾರರನ್ನು ಬಿಡುಗಡೆಮಾಡಿದ್ದರು.


(ಸೇನಾಧೀಶ್ವರರಾದ ಸರ್ವೇಶ್ವರ ಹೇಳುವುದನ್ನು ಕೇಳು: “ಅವರ ಮೇಲೆ ಹೇರಲಾಗಿರುವ ನೊಗವನ್ನು ನಾನು ಆ ದಿನದಂದು ಮುರಿದುಬಿಡುವೆನು. ಕಣ್ಣಿಗಳನ್ನು ಕಿತ್ತುಹಾಕುವೆನು. ಅನ್ಯಕುಲದವರು ಇನ್ನು ಅವರನ್ನು ಗುಲಾಮರನ್ನಾಗಿ ಮಾಡಿಕೊಳ್ಳಲಾರರು.


ಅವನ ದೇಶಕ್ಕೆ ನಿಯಮಿತ ಕಾಲ ಬರುವತನಕ ಎಲ್ಲ ರಾಷ್ಟ್ರಗಳು ಅವನಿಗೂ ಅವನ ಮಗನಿಗೂ ಮೊಮ್ಮಗನಿಗೂ ಅಡಿಯಾಳಾಗಿ ಇರಬೇಕು. ಆಮೇಲೆ ಅನೇಕ ರಾಷ್ಟ್ರಗಳೂ ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು.”


ಅನೇಕ ರಾಷ್ಟ್ರಗಳೂ ಮಹಾರಾಜರೂ ಅವರನ್ನು ಗುಲಾಮರನ್ನಾಗಿಸಿಕೊಳ್ಳುವರು. ಅವರ ಕೃತ್ಯಗಳಿಗೂ ಕೈಕೆಲಸಗಳಿಗೂ ತಕ್ಕಂತೆ ಅವರಿಗೆ ಮುಯ್ಯಿ ತೀರಿಸುವೆನು.”


ಇವರಿಬ್ಬರೂ ಫಿಲಿಷ್ಟಿಯರ ಕಾವಲುದಂಡಿನವರಿಗೆ ಕಾಣಿಸಿಕೊಂಡಾಗ ಅವರು, “ಇಗೋ, ಹಿಬ್ರಿಯರು ತಾವು ಅಡಗಿಕೊಂಡಿದ್ದ ಕಿಂಡಿಗಳಿಂದ ಹೊರಗೆ ಬರುತ್ತಲಿದ್ದಾರೆ,” ಎಂದು ತಮ್ಮೊಳಗೆ ಮಾತಾಡಿಕೊಂಡರು.


ಫಿಲಿಷ್ಟಿಯರೇ, ಧೈರ್ಯಗೊಳ್ಳಿ; ಶೂರರಾಗಿರಿ! ಇಲ್ಲವಾದರೆ ನಿಮಗೆ ಗುಲಾಮರಾಗಿದ್ದ ಹಿಬ್ರಿಯರಿಗೆ ನೀವೇ ಗುಲಾಮರಾದೀರಿ; ಆದಕಾರಣ ಶೌರ್ಯದಿಂದ ಯುದ್ಧಮಾಡಿ!” ಎಂದು ಹೇಳಿಕೊಂಡು ಯುದ್ಧಮಾಡಿದರು.


ಫಿಲಿಷ್ಟಿಯರು ಇದನ್ನು ಕೇಳಿ, “ಹಿಬ್ರಿಯರ ಪಾಳೆಯದಲ್ಲಿ ಇಂಥ ಆರ್ಭಟಕ್ಕೆ ಏನು ಕಾರಣ?” ಎಂದು ವಿಚಾರಿಸಿದರು. ಸರ್ವೇಶ್ವರನ ಮಂಜೂಷವು ಪಾಳೆಯಕ್ಕೆ ಬಂದದ್ದೇ ಕಾರಣವೆಂದು ಗೊತ್ತಾಯಿತು.


“ಸ್ವದೇಶದವರಲ್ಲಿ ಯಾವ ಹಿಬ್ರಿಯ ಪುರುಷನಾಗಲಿ, ಸ್ತ್ರೀಯಾಗಲಿ ನಿಮಗೆ ಗುಲಾಮರಾಗಿ ಮಾರಲ್ಪಟ್ಟಿದ್ದರೆ ಅಂಥವರು ಆರು ವರ್ಷಗಳವರೆಗೂ ನಿಮ್ಮ ಸೇವೆ ಮಾಡಲಿ, ಏಳನೆಯ ವರ್ಷದಲ್ಲಿ ನೀವು ಅವರನ್ನು ಬಿಟ್ಟುಬಿಡಬೇಕು.


“ಅವರು ನಿನ್ನ ಮಾತಿಗೆ ಕಿವಿಗೊಡುವರು. ನೀನು ಮತ್ತು ಇಸ್ರಯೇಲಿನ ಹಿರಿಯರು ಈಜಿಪ್ಟ್ ದೇಶದ ಅರಸನ ಬಳಿಗೆ ಹೋಗಿ ಅವನಿಗೆ, “ಹಿಬ್ರಿಯರ ದೇವರಾಗಿರುವ ಸರ್ವೇಶ್ವರ ನಮಗೆ ಪ್ರತ್ಯಕ್ಷರಾದರು. ಆದುದರಿಂದ ನಾವು ಮರುಭೂಮಿಯಲ್ಲಿ ಮೂರು ದಿನದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾದ ಸರ್ವೇಶ್ವರನಿಗೆ ಬಲಿಯೊಪ್ಪಿಸಬೇಕಾಗಿದೆ, ಅಪ್ಪಣೆಯಾಗಬೇಕು’ ಎಂದು ಕೇಳಿಕೊಳ್ಳಿ.


ಪೆಟ್ಟಿಗೆಯನ್ನು ತೆರೆದು ನೋಡುವಾಗ ಏನಾಶ್ಚರ್ಯ! ಅದರಲ್ಲಿ ಅಳುವ ಕೂಸು! ಆಕೆಗೆ ಅದರ ಮೇಲೆ ಕನಿಕರ ಹುಟ್ಟಿತು. “ಇದು ಹಿಬ್ರಿಯರ ಮಕ್ಕಳಲ್ಲಿ ಒಂದಾಗಿರಬೇಕು,” ಎಂದುಕೊಂಡಳು.


ನಾನು ಹಿಬ್ರಿಯ ದೇಶದವನು. ಕೆಲವರು ನನ್ನನ್ನು ಗುಲಾಮನನ್ನಾಗಿ ಈ ದೇಶಕ್ಕೆ ಹಿಡಿದುತಂದರು. ಇಲ್ಲಿಯೂ ಸೆರೆಗೆ ಗುರಿಯಾಗಿಸುವಂಥ ದ್ರೋಹವನ್ನು ನಾನೇನು ಮಾಡಿಲ್ಲ,” ಎಂದನು.


ತಪ್ಪಿಸಿಕೊಂಡು ಓಡಿಹೋದವರಲ್ಲಿ ಒಬ್ಬ ವ್ಯಕ್ತಿ ಹಿಬ್ರಿಯನಾದ ಅಬ್ರಾಮನ ಬಳಿಗೆ ಬಂದು ನಡೆದುದನ್ನು ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ತೋಪಿನ ಬಳಿ ವಾಸವಾಗಿದ್ದನು. ಮಮ್ರೆಯನಿಗೆ ಎಷ್ಕೋಲ ಮತ್ತು ಆನೇರ ಎಂಬ ಸಹೋದರರಿದ್ದರು. ಇವರಿಗೂ ಅಬ್ರಾಮನಿಗೂ ಒಪ್ಪಂದವಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು