Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 35:14 - ಕನ್ನಡ ಸತ್ಯವೇದವು C.L. Bible (BSI)

14 ‘ರೇಕಾಬನ ಮಗ ಯೋನಾದಾಬನು ತನ್ನ ಸಂತಾನದವರಿಗೆ ದ್ರಾಕ್ಷಾರಸವನ್ನು ಕುಡಿಯಬಾರದೆಂದು ಕೊಟ್ಟ ಅಪ್ಪಣೆ ನೆರವೇರಿದೆ. ಅವರು ಇಂದಿನವರೆಗೂ ಕುಡಿಯಲಿಲ್ಲ. ತಮ್ಮ ಪೂರ್ವಜನ ಆಜ್ಞೆಯನ್ನು ಕೈಗೊಂಡಿದ್ದಾರೆ. ನೀವೋ, ನಾನು ನಿಮಗೆ ಪದೇ ಪದೇ ಹೇಳುತ್ತಾ ಬಂದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ರೇಕಾಬನ ಮಗನಾದ ಯೋನಾದಾಬನು ತನ್ನ ಸಂತಾನದವರಿಗೆ ದ್ರಾಕ್ಷಾರಸವನ್ನು ಕುಡಿಯಬಾರದೆಂದು ಕೊಟ್ಟ ಅಪ್ಪಣೆ ನೆರವೇರಿದೆ; ಅವರು ಇಂದಿನ ವರೆಗೂ ಕುಡಿಯಲಿಲ್ಲ, ತಮ್ಮ ಪಿತೃವಿನ ಆಜ್ಞೆಯನ್ನು ಕೈಕೊಂಡಿದ್ದಾರೆ; ನೀವೋ, ನಾನು ನಿಮಗೆ ಎಡೆಬಿಡದೆ ಹೇಳುತ್ತಾ ಬಂದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ರೇಕಾಬನ ಮಗನಾದ ಯೋನಾದಾಬನು ತನ್ನ ಸಂತಾನದವರಿಗೆ ದ್ರಾಕ್ಷಾರಸವನ್ನು ಕುಡಿಯಬಾರದೆಂದು ಕೊಟ್ಟ ಅಪ್ಪಣೆ ನೆರವೇರಿದೆ; ಅವರು ಇಂದಿನವರೆಗೂ ಕುಡಿಯಲಿಲ್ಲ, ತಮ್ಮ ಪಿತೃವಿನ ಆಜ್ಞೆಯನ್ನು ಕೈಕೊಂಡಿದ್ದಾರೆ; ನೀವೋ ನಾನು ನಿಮಗೆ ಎಡೆಬಿಡದೆ ಹೇಳುತ್ತಾ ಬಂದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ‘ರೇಕಾಬನ ಮಗನಾದ ಯೋನಾದಾಬನು ತನ್ನ ಮಕ್ಕಳಿಗೆ ದ್ರಾಕ್ಷಾರಸವನ್ನು ಕುಡಿಯಬೇಡಿರೆಂದು ಹೇಳಿದನು. ಅವನ ಆಜ್ಞೆಯನ್ನು ಪಾಲಿಸಲಾಗಿದೆ. ಇಂದಿನವರೆಗೂ ಯೋನಾದಾಬನ ಸಂತಾನದವರು ತಮ್ಮ ಪೂರ್ವಿಕರ ಆಜ್ಞೆಯನ್ನು ಪಾಲಿಸಿದ್ದಾರೆ. ಅವರು ದ್ರಾಕ್ಷಾರಸವನ್ನು ಕುಡಿಯುವುದಿಲ್ಲ. ನಾನೇ ನಿಮ್ಮ ದೇವರಾದ ಯೆಹೋವನು. ನಾನು ಯೆಹೂದದ ಜನರಾದ ನಿಮಗೆ ಮತ್ತೆಮತ್ತೆ ಸಂದೇಶಗಳನ್ನು ಕೊಟ್ಟಿದ್ದೇನೆ. ಆದರೆ ನೀವು ನನ್ನ ಆಜ್ಞೆಗಳನ್ನು ಪಾಲಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ರೇಕಾಬನ ಮಗ ಯೆಹೋನಾದಾಬನು ತನ್ನ ಸಂತಾನದವರಿಗೆ ದ್ರಾಕ್ಷಾರಸವನ್ನು ಕುಡಿಯಬಾರದೆಂದು ಕೊಟ್ಟ ಅಪ್ಪಣೆ ನೆರವೇರಿದೆ. ಅವರು ಇಂದಿನವರೆಗೂ ಕುಡಿಯಲಿಲ್ಲ. ತಮ್ಮ ಪೂರ್ವಜನ ಆಜ್ಞೆಯನ್ನು ಕೈಗೊಂಡಿದ್ದಾರೆ. ನೀವೋ, ನಾನು ನಿಮಗೆ ಪದೇಪದೇ ಹೇಳುತ್ತಾ ಬಂದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 35:14
15 ತಿಳಿವುಗಳ ಹೋಲಿಕೆ  

ನಿಮ್ಮ ಪೂರ್ವಜರನ್ನು ಈಜಿಪ್ಟ್ ದೇಶದಿಂದ ಬರಮಾಡಿದ ದಿನದಿಂದ ಇಂದಿನವರೆಗೂ ನಾನು ಅವರಿಗೆ ನನ್ನ ಮಾತನ್ನು ಕೇಳಿರೆಂದು ತಡಮಾಡದೆ ಖಂಡಿತವಾಗಿ ಆಜ್ಞಾಪಿಸುತ್ತಾ ಬಂದಿದ್ದೇನೆ.


ನಾನು ತಡಮಾಡದೆ ನುಡಿದ ಮಾತುಗಳನ್ನು ನೀವು ಕೇಳದೆ, ನಿಮ್ಮನ್ನು ಕರೆದ ನನಗೆ ಓಗೊಡದೆ, ಈ ಕೃತ್ಯಗಳನ್ನೆಲ್ಲ ಮಾಡಿದ್ದೀರಿ.


ನಾನು ರಕ್ಷಿಸಲು ಬಂದಾಗ ಯಾರೂ ಕಾದಿರಲಿಲ್ಲ, ಏಕೆ? ನಾನು ಕೂಗಿಕರೆದಾಗ ಯಾರೂ ಉತ್ತರಕೊಡಲಿಲ್ಲ, ಏಕೆ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿ ನನ್ನಲ್ಲಿ ಇಲ್ಲವೋ? ಬರಿ ಗರ್ಜನೆಯಿಂದ ಬತ್ತಿಸಬಲ್ಲೆ ಸಮುದ್ರವನು ಬೆಂಗಾಡಾಗಿಸಬಲ್ಲೆ ನಾ ನದಿಸರೋವರಗಳನು ಬಾಯಾರಿ ಸತ್ತು ನಾರುವಂತೆ ಮಾಡಬಲ್ಲೆ ಅಲ್ಲಿಯ ಮೀನುಗಳನು.


ಇವರು ದಂಗೆ ಏಳುವ ಜನರು. ಸುಳ್ಳಾಡುವ ಪೀಳಿಗೆ, ಸರ್ವೇಶ್ವರನ ಉಪದೇಶಕ್ಕೆ ಕಿವಿಗೊಡದ ಸಂತಾನ,


ಅವರು ನನಗೆ ಅಭಿಮುಖರಾಗದೆ ಬೆನ್ನುಮಾಡಿದ್ದಾರೆ. ನಾನು ಅವರಿಗೆ ಎಡೆಬಿಡದೆ ಬೋಧಿಸುತ್ತಾ ಬಂದರೂ ನನ್ನ ಉಪದೇಶವನ್ನು ಅಂಗೀಕರಿಸಲಿಲ್ಲ, ನನಗೆ ಕಿವಿಗೊಡಲೂ ಇಲ್ಲ.


ಏಕೆಂದರೆ ಅವರು ನನ್ನ ಮಾತುಗಳನ್ನು ಕೇಳದೆಹೋದರು. ನನ್ನ ದಾಸರಾದ ಪ್ರವಾದಿಗಳನ್ನು ಪದೇಪದೇ ಅವರ ಬಳಿಗೆ ಕಳಿಸಿದರೂ ಕೇಳಲೊಲ್ಲದೆ ಹೋದರು. ಇದು ಸರ್ವೇಶ್ವರನಾದ ನನ್ನ ನುಡಿ.


ತಾಳಿಕೊಂಡಿರಿ ಅವರನು ನೀವೆಷ್ಟೋ ವರ್ಷಗಳ ತನಕ ಎಚ್ಚರಿಸಿದಿರಿ ನಿಮ್ಮಾತ್ಮ ಪ್ರೇರಣೆಯಿಂದ, ಪ್ರವಾದಿಗಳ ಮೂಲಕ ಕಿವಿಗೊಡದಾ ಜನರನು ಹೊರದೂಡಿದಿರಿ ಅನ್ಯದೇಶದ ಪರಿಯಂತ.


ಬಳಿಕ ಅವಿಧೇಯರಾದರು, ನಿಮಗೆ ವಿರುದ್ಧ ದಂಗೆ ಎದ್ದರು; ನಿಮ್ಮ ಉಪದೇಶವನು ಉಲ್ಲಂಘಿಸಿದರು, ನಿಮ್ಮ ಪ್ರವಾದಿಗಳನು ಕೊಂದರು; ಹೌದು, ನಿಮಗೆ ಅಭಿಮುಖರಾಗಲು ಎಚ್ಚರಿಸಿದವರನೆ ಕೊಂದರು. ಕಡೆಗೆ ನಿಮ್ಮನ್ನೇ ಅಸಡ್ಡೆಮಾಡಿ, ಘೋರ ಅಪರಾಧಿಗಳಾದರು.


ಹಾಗು ನೀವು ಕೇಳದಿದ್ದರೂ ನಿಮ್ಮ ಬಳಿಗೆ ನಾನು ಪದೇಪದೇ ಕಳಿಸುತ್ತಾ ಬಂದಿರುವ ನನ್ನ ದಾಸರಾದ ಪ್ರವಾದಿಗಳ ಮಾತುಗಳನ್ನೂ ಆಲಿಸದೆಹೋದರೆ,


ಅದಕ್ಕೆ ಅವರು, “ನಾವು ದ್ರಾಕ್ಷಾರಸವನ್ನು ಕುಡಿಯುವುದಿಲ್ಲ. ನಮ್ಮ ಪೂರ್ವಜನಾದ ರೇಕಾಬನ ಮಗ ಯೋನಾದಾಬನು ನಮಗೆ, ‘ನೀವಾಗಲಿ ನಿಮ್ಮ ಸಂತಾನದವರಾಗಲಿ ಯುಗಯುಗಾಂತರಕ್ಕೂ ದ್ರಾಕ್ಷಾರಸವನ್ನು ಕುಡಿಯಲೇಬಾರದು.


ರೇಕಾಬನ ಮಗ ಯೋನಾದಾಬನ ಸಂತಾನದವರು ತಮ್ಮ ಪೂರ್ವಜರು ತಮಗೆ ವಿಧಿಸಿದ್ದನ್ನು ಕೇಳಿ ಅನುಸರಿಸಿದರು. ಆದರೆ ಈ ಜನರು ನನ್ನ ಮಾತನ್ನು ಕೇಳದೆಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು