Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 35:2 - ಕನ್ನಡ ಸತ್ಯವೇದವು C.L. Bible (BSI)

2 “ನೀನು ರೇಕಾಬನ ಮನೆತನದವರ ಬಳಿಗೆ ಹೋಗಿ, ಅವರ ಸಂಗಡ ಮಾತಾಡು. ಅವರನ್ನು ಸರ್ವೇಶ್ವರನಾಲಯದ ಒಂದು ಕೋಣೆಯೊಳಕ್ಕೆ ಕರೆದು ದ್ರಾಕ್ಷಾರಸವನ್ನು ಕುಡಿಯುವುದಕ್ಕೆ ಕೊಡು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀನು ರೇಕಾಬನ ಮನೆತನದವರ ಬಳಿಗೆ ಹೋಗಿ ಅವರ ಸಂಗಡ ಮಾತನಾಡಿ ಅವರನ್ನು ಯೆಹೋವನ ಆಲಯದ ಒಂದು ಕೋಣೆಯೊಳಕ್ಕೆ ಕರೆದು ದ್ರಾಕ್ಷಾರಸವನ್ನು ಕುಡಿಯುವುದಕ್ಕೆ ಕೊಡು” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀನು ರೇಕಾಬನ ಮನೆತನದವರ ಬಳಿಗೆ ಹೋಗಿ ಅವರ ಸಂಗಡ ಮಾತಾಡಿ ಅವರನ್ನು ಯೆಹೋವನ ಆಲಯದ ಒಂದು ಕೋಣೆಯೊಳಕ್ಕೆ ಕರೆದು ದ್ರಾಕ್ಷಾರಸವನ್ನು ಕುಡಿಯುವದಕ್ಕೆ ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಯೆರೆಮೀಯನೇ, ರೇಕಾಬನ ಕುಟುಂಬದವರಲ್ಲಿಗೆ ಹೋಗು. ಅವರನ್ನು ಯೆಹೋವನ ಆಲಯದ ಒಂದು ಪಕ್ಕದ ಕೋಣೆಗೆ ಕರೆದು, ಕುಡಿಯುವದಕ್ಕೆ ದ್ರಾಕ್ಷಾರಸವನ್ನು ಕೊಡು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನೀನು ರೇಕಾಬನ ಮನೆತನದವರ ಬಳಿಗೆ ಹೋಗಿ, ಅವರ ಸಂಗಡ ಮಾತನಾಡು. ಅವರನ್ನು ಯೆಹೋವ ದೇವರ ಆಲಯದ ಒಂದು ಕೋಣೆಯೊಳಕ್ಕೆ ಕರೆದು, ದ್ರಾಕ್ಷಾರಸವನ್ನು ಕುಡಿಯುವುದಕ್ಕೆ ಕೊಡು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 35:2
21 ತಿಳಿವುಗಳ ಹೋಲಿಕೆ  

ಬರವಣಿಗೆಯಲ್ಲಿ ಮತ್ತು ದಾಖಲೆಗಳನ್ನು ನಕಲು ಮಾಡುವುದರಲ್ಲಿ ಪ್ರವೀಣರಾದ ತಿರ್ರಾತ್ಯರು, ಶಿಮ್ಗಾತ್ಯರು, ಸುಕಾತ್ಯರು ಯಾಬೇಚಿನಲ್ಲಿ ವಾಸಿಸಿದ್ದರು. ರೇಕಾಬ್ಬರೊಂದಿಗೆ ಅಂತರ್ ವಿವಾಹ ಮಾಡಿಕೊಂಡ ಕೇನ್ಯರು ಇವರೇ.


ನಾಲ್ಕು ಜನ ಮುಖ್ಯ ದ್ವಾರಪಾಲಕರು ಲೇವಿಯರಾಗಿದ್ದು ಅವರಿಗೆ ಅಂತಿಮ ಜವಾಬ್ದಾರಿ ಕೊಡಲಾಗಿತ್ತು. ದೇವಾಲಯದ ಕೋಣೆಗಳನ್ನು ಹಾಗೂ ಭಂಡಾರಗಳನ್ನು ಅವರು ನೋಡಿಕೊಳ್ಳಬೇಕಾಗಿತ್ತು.


ಗೋಡೇಕೋಣೆಗಳಲ್ಲೂ ಒಳಗಣ ಎರಡು ಕಡೆಯ ನಿಲುವುಕಂಬಗಳಲ್ಲೂ ಕೈಸಾಲೆಗಳಲ್ಲೂ ತೆರೆಯಲಾಗದ ಕಿಟಕಿಗಳು ಹೆಬ್ಬಾಗಿಲೊಳಗೆ ಸುತ್ತಮುತ್ತಲು ಇದ್ದವು; ಹೊರಗಣ ನಿಲವುಕಂಬಗಳಲ್ಲಿ ಖರ್ಜೂರ ವೃಕ್ಷಗಳು ಚಿತ್ರಿತವಾಗಿದ್ದವು.


ನಮ್ಮ ಪೂರ್ವಜನಾದ ರೇಕಾಬನ ಮಗ ಯೋನಾದಾಬನು ನಮಗೆ ಕೊಟ್ಟ ಈ ಅಪ್ಪಣೆಯನ್ನು ಎಲ್ಲ ವಿಷಯದಲ್ಲೂ ಕೈಗೊಂಡು ಬರುತ್ತಿದ್ದೇವೆ. ನಾವಾಗಲಿ, ನಮ್ಮ ಮಡದಿ ಮಕ್ಕಳಾಗಲಿ, ಜೀವಮಾನದಲ್ಲೆಲ್ಲಾ ‘ದ್ರಾಕ್ಷಾರಸ ಕುಡಿಯುವುದಿಲ್ಲ.


ಇಗ್ದಲ್ಯನ ಮಗನೂ ದೇವರ ಮನುಷ್ಯನೂ ಆದ ಹಾನಾನನ ಮಕ್ಕಳ ಕೋಣೆಯೊಳಕ್ಕೆ, ಅಂದರೆ ಪದಾಧಿಕಾರಿಗಳ ಕೋಣೆಯ ಪಕ್ಕದಲ್ಲಿ, ಶಲ್ಲೂಮನ ಮಗನೂ ದ್ವಾರಪಾಲಕನೂ ಆದ ಮಾಸೇಯನ ಕೋಣೆಯ ಮೇಲ್ಗಡೆಯಿರುವ ಕೋಣೆಯೊಳಕ್ಕೆ ಅವರೆಲ್ಲರನ್ನು ಬರಮಾಡಿದೆನು.


ನೈವೇದ್ಯದ್ರವ್ಯ, ಧೂಪಪಾತ್ರೆ ಇವುಗಳನ್ನೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳ ದಶಮಾಂಶವನ್ನೂ ಲೇವಿಯರಿಗೆ, ಗಾಯಕರಿಗೆ ಹಾಗು ದ್ವಾರಪಾಲಕರಿಗೆ ಸಲ್ಲತಕ್ಕ ಪದಾರ್ಥಗಳನ್ನೂ ಯಾಜಕರಿಗಾಗಿ ಪ್ರತ್ಯೇಕಿಸತಕ್ಕ ಪದಾರ್ಥಗಳನ್ನೂ ಇಡುವುದಕ್ಕಾಗಿ ಉಪಯೋಗಿಸುತ್ತಿದ್ದ ಕೊಠಡಿಯನ್ನು ಅವನಿಗಾಗಿ ಸಿದ್ಧಮಾಡಿಸಿಕೊಟ್ಟಿದ್ದನು.


ಆದುದರಿಂದ ನೀವು ಜಾಗರೂಕರಾಗಿ ಇದ್ದು ಜೆರುಸಲೇಮಿನಲ್ಲಿರುವ ಯಾಜಕರ ಮತ್ತು ಲೇವಿಯರ ಮುಖ್ಯಸ್ಥರ ಮುಂದೆ ಹಾಗು ಇಸ್ರಯೇಲ್ ಗೋತ್ರಪ್ರಧಾನರ ಮುಂದೆ ಇವುಗಳನ್ನು ತೂಕಮಾಡಿ ಸರ್ವೇಶ್ವರನ ಆಲಯದ ಕೊಠಡಿಗಳಲ್ಲಿಡುವವರೆಗೂ ಎಚ್ಚರಿಕೆಯಿಂದ ನೋಡಿಕೊಳ್ಳಿ’ ಎಂದು ಹೇಳಿದೆ.


ಬಳಿಕ ಹಿಜ್ಕೀಯನು ಸರ್ವೇಶ್ವರನ ಆಲಯದಲ್ಲಿ ಕೊಠಡಿಗಳನ್ನು ಸಿದ್ಧಮಾಡಲು ಆಜ್ಞಾಪಿಸಿದನು.


ಬಂಗಾರದ ಮೊಳೆಗಳ ತೂಕ 570 ಕಿಲೋಗ್ರಾಂ. ಮೇಲುಪ್ಪರಿಗೆಗಳನ್ನು ಬಂಗಾರದ ತಗಡಿನಿಂದ ಹೊದಿಸಿದನು.


ಅವರು ಆರೋನ್ಯರ ಕೈಕೆಳಗಿದ್ದುಕೊಂಡು ಸರ್ವೇಶ್ವರನ ಆಲಯದ ಪರಿಚರ್ಯೆಯನ್ನು ನಡೆಸಬೇಕಾಗಿತ್ತು. ಅವರ ಕೆಲಸ ಕಾರ್ಯ ಇವು: ಅಂಗಳವನ್ನೂ ಅಲ್ಲಿಯ ಕೋಣೆಗಳನ್ನು ನೋಡಿಕೊಳ್ಳುವುದು, ದೇವಾಲಯಕ್ಕೆ ಸಂಬಂಧಪಟ್ಟವುಗಳನ್ನೆಲ್ಲಾ ಶುದ್ಧಮಾಡುವುದು, ದೇವಾಲಯದಲ್ಲಿ ಸೇವೆಮಾಡುವುದು;


ಇನ್ನು ಕೆಲವು ಲೇವಿಯ ಕುಟುಂಬಗಳ ಮೇಲೆ ದೇವಾಲಯದ ಸಂಗೀತದ ಹೊಣೆಯಿತ್ತು. ಈ ಕುಟುಂಬಗಳ ಮುಖ್ಯಸ್ಥರು ದೇವಾಲಯದ ಕಟ್ಟಡಗಳಲ್ಲಿ ವಾಸಿಸುತ್ತಾ, ಹಗಲಿರುಳೂ ಕೆಲಸ ಮಾಡಬೇಕಾಗಿದ್ದರಿಂದ ಬೇರೆ ಕೆಲಸಗಳ ಜವಾಬ್ದಾರಿ ಅವರಿಗಿರಲಿಲ್ಲ.


ಅವನು ದೇವಾಲಯದ ಸುತ್ತಲೂ ಒಂದರ ಮೇಲೊಂದು 2:2 ಮೀಟರುಗಳಂತೆ ಎತ್ತರವಾದ ಕೊಠಡಿಗಳನ್ನು ಕಟ್ಟಿಸಿದನು. ಇವು ದೇವದಾರಿನ ತೊಲೆಗಳಿಂದ ದೇವಾಲಯಕ್ಕೆ ಹೊಂದಿಕೊಂಡಿದ್ದವು.


ಕೆಳಗಿನ ಕೊಠಡಿಗಳಿಗೆ ಹೋಗುವ ಬಾಗಿಲು ಆಲಯದ ಬಲಪಾರ್ಶ್ವದಲ್ಲಿತ್ತು. ಅಲ್ಲಿಂದ ಮೊದಲನೆಯ ಅಂತಸ್ತಿಗೂ ಎರಡನೆಯ ಅಂತಸ್ತಿಗೂ ಹೋಗಬೇಕಾದರೆ ವಕ್ರಸೋಪಾನಗಳಿದ್ದವು.


ಅಂತೆಯೆ ನಾನು (ಮತ್ತೊಬ್ಬ) ಯೆರೆಮೀಯನ ಮಗನೂ ಹಬಚ್ಚಿನ್ಯನ ಮೊಮ್ಮಗನೂ ಆದ ಯಾಜನ್ಯನನ್ನು, ಅವನ ಅಣ್ಣತಮ್ಮಂದಿರನ್ನು, ಅವನ ಎಲ್ಲ ಮಕ್ಕಳನ್ನು, ಅಂತು ರೇಕಾಬನ ಮನೆತನದವರೆಲ್ಲರನ್ನೂ ಸರ್ವೇಶ್ವರನಾಲಯಕ್ಕೆ ಕರೆದೊಯ್ದೆನು.


ಸುತ್ತಣ ಕೋಣೆಗಳು, ದೇವಾಲಯದ ಭಂಡಾರಗಳು, ಪ್ರತಿಷ್ಠಿತ ವಸ್ತುಗಳ ಭಂಡಾರಗಳು ಇವುಗಳ ವಿಷಯವಾಗಿ ವಿವರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು