Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 37:19 - ಕನ್ನಡ ಸತ್ಯವೇದವು C.L. Bible (BSI)

19 ‘ಬಾಬಿಲೋನಿನ ಅರಸನು ನಿಮಗೂ ಈ ನಾಡಿಗೂ ವಿರುದ್ಧವಾಗಿ ಆಕ್ರಮಣ ನಡೆಸನು’ ಎಂದು ಸಾರಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಬಾಬೆಲಿನ ಅರಸನು ನಿಮಗೂ ಈ ದೇಶಕ್ಕೂ ವಿರುದ್ಧವಾಗಿ ಬರುವುದಿಲ್ಲ ಎಂದು ನಿಮಗೆ ಸಾರಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಬಾಬೆಲಿನ ಅರಸನು ನಿಮಗೂ ಈ ದೇಶಕ್ಕೂ ವಿರುದ್ಧವಾಗಿ ಬಾರನು ಎಂದು ನಿಮಗೆ ಸಾರಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ರಾಜನಾದ ಚಿದ್ಕೀಯನೇ, ನಿನ್ನ ಪ್ರವಾದಿಗಳು ಈಗ ಎಲ್ಲಿದ್ದಾರೆ? ಆ ಪ್ರವಾದಿಗಳು ನಿನಗೆ ಸುಳ್ಳುಪ್ರವಾದನೆಯನ್ನು ಮಾಡಿದರು. ‘ಬಾಬಿಲೋನಿನ ರಾಜನು ನಿನ್ನ ಮೇಲಾಗಲಿ ಅಥವಾ ಈ ಯೆಹೂದ ಪ್ರದೇಶದ ಮೇಲಾಗಲಿ ಧಾಳಿ ಮಾಡುವದಿಲ್ಲ’ ಎಂದು ಅವರು ಹೇಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಬಾಬಿಲೋನಿನ ಅರಸನು ನಿಮ್ಮ ಮೇಲೆಯೂ, ಈ ದೇಶದ ಮೇಲೆಯೂ ಬರುವುದಿಲ್ಲವೆಂದು ನಿಮಗೆ ಪ್ರವಾದಿಸಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 37:19
16 ತಿಳಿವುಗಳ ಹೋಲಿಕೆ  

“ಎಲೈ ಯೆಹೂದ ಜನರೇ, ನೀವು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿಮಗೆ ಕೇಡು ಸಂಭವಿಸಿದಾಗ ನಿಮ್ನನ್ನು ಉದ್ಧರಿಸಲು ಅವರು ಶಕ್ತರಾಗಿದ್ದರೆ ಎದ್ದುಬರಲಿ ! ನಿಮಗೆ ನಗರಗಳು ಎಷ್ಟಿವೆಯೋ ಅಷ್ಟೂ ದೇವರುಗಳು ಇದ್ದಾರೆ!


‘ಸೆರೆಯಲ್ಲಿ ಇರುವ ಎಲ್ಲರಿಗೆ ಹೀಗೆಂದು ಹೇಳಿಕಳಿಸು - ನೆಹೆಲಾಮ್ಯನಾದ ಶೆಮಾಯನ ವಿಷಯದಲ್ಲಿ ಸರ್ವೇಶ್ವರ ಇಂತೆನ್ನುತ್ತಾರೆ: ನಾನು ಕಳಿಸದೆ ಇದ್ದರೂ ಶೆಮಾಯನು ನಿಮಗೆ ಪ್ರವಾದನೆಮಾಡಿ ಸುಳ್ಳನ್ನು ನಂಬುವಂತೆ ಮಾಡಿದ್ದಾನೆ.


ನನ್ನನ್ನು ಅಸಡ್ಡೆಮಾಡುವವರಿಗೆ, ‘ನಿಮಗೆ ಶುಭವಾಗುವುದು ಎಂದು ಸರ್ವೇಶ್ವರನೇ ನುಡಿದಿದ್ದಾರೆ’ ಎಂದು ಹೇಳುತ್ತಲೇ ಇದ್ದಾರೆ. ಹಟಮಾರಿ ಹೃದಯಿಗಳೆಲ್ಲರಿಗೆ, ‘ನಿಮಗೆ ಯಾವ ಕೇಡೂ ಸಂಭವಿಸದು’ ಎಂದು ನುಡಿಯುತ್ತಾರೆ.”


ನನ್ನ ಜನರ ಗಾಯಗಳು ಗುಣವಾಗದಿದ್ದರೂ ಅವು ಮಚ್ಚೆಗಳೋ ಎಂಬಂತೆ ‘ಎಲ್ಲ ಚೆನ್ನಾಗಿದೆ’ ಎಂದು ಸಮಾಧಾನ ಹೇಳಿ ವಂಚಿಸುತ್ತಿದ್ದಾರೆ.


ಅವರು, ನನ್ನ ಜನರ ಗಾಯಗಳು ಗುಣವಾಗದಿದ್ದರೂ ಅವು ಕೇವಲ ಮಚ್ಚೆಗಳೋ ಎಂಬಂತೆ ‘ಎಲ್ಲ ಚೆನ್ನಾಗಿದೆ’ ಎಂದು ಸಮಾಧಾನ ಹೇಳಿ ವಂಚಿಸುತ್ತಿದ್ದಾರೆ.


ಎಲೀಷನು ಇಸ್ರಯೇಲರ ಅರಸನಿಗೆ, “ನನಗೂ ನಿನಗೂ ಏನು ಸಂಬಂಧ? ನಿನ್ನ ತಂದೆತಾಯಿಗಳ ಪ್ರವಾದಿಗಳ ಬಳಿಗೆ ಹೋಗು,” ಎಂದು ಹೇಳಿದನು. ಅದಕ್ಕೆ ಇಸ್ರಯೇಲರ ಅರಸನು, “ಹಾಗೆನ್ನಬೇಡಿ; ಸರ್ವೇಶ್ವರ ಈ ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕಾಗಿ ಇಲ್ಲಿಗೆ ಬರಮಾಡಿದ್ದಾರೆ ಅಲ್ಲವೇ?’ ಎಂದನು.


ನಿನ್ನ ಪ್ರವಾದಿಗಳು ಕಂಡ ದರ್ಶನದಲ್ಲಿ ಸಾರವಿಲ್ಲ, ಅರ್ಥವಿಲ್ಲ. ನಿನ್ನ ದೋಷಗಳನ್ನು ಬೈಲಿಗೆಳೆಯಲು ಅವರಿಂದಾಗಲಿಲ್ಲ. ಈ ಕಾರಣ, ನಿನ್ನ ದುರವಸ್ಥೆಯನ್ನು ತಡೆಗಟ್ಟಲಾಗಲಿಲ್ಲ. ನಿನ್ನ ಬಗ್ಗೆ ಅವರು ನುಡಿದ ದೈವೋಕ್ತಿಗಳು ವ್ಯರ್ಥವಾದುವು, ನೀನು ಗಡಿಪಾರಾಗಿ ಹೋಗಲು ಅವು ಆಸ್ಪದವಾದುವು.


ಅವರು ಬಲಿಕೊಟ್ಟ ಕೊಬ್ಬು ಮಾಂಸವನು ತಿಂದವರೆಲ್ಲಿ? ಸಮರ್ಪಿಸಿದ ಪಾನಗಳನು ಕುಡಿದ ದೇವತೆಗಳೆಲ್ಲಿ? ಅವರೇ ನಿಮಗೆ ನೆರವಾಗಲಿ, ನಿಮ್ಮನೀಗ ಕಾಯಲಿ!


“ನರಪುತ್ರನೇ, ಪ್ರವಾದನೆ ಮಾಡಿ ಸ್ವಕಲ್ಪಿತವಾದುದನ್ನೇ ಸಾರುತ್ತಲಿರುವ ಇಸ್ರಯೇಲಿನ ಪ್ರವಾದಿಗಳಿಗೆ ಖಂಡನೆಯಾಗಿ ನೀನು ಪ್ರವಾದಿಸುತ್ತ ಹೀಗೆ ಹೇಳು: “ಸರ್ವೇಶ್ವರನ ವಾಕ್ಯವನ್ನು ಕೇಳಿರಿ, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ:


ಸರ್ವೇಶ್ವರ ಇಂತೆನ್ನುತ್ತಾರೆಂದು ನುಡಿ: ಅಂಥವರಿಗೆ ಆದ ದರ್ಶನ ಮಿಥ್ಯ; ಕೇಳಿಸಿದ ವಾಣಿ ಸುಳ್ಳು; ಸರ್ವೇಶ್ವರ ಅವರನ್ನು ಕಳುಹಿಸಲಿಲ್ಲ. ತಾವು ನುಡಿದ ಮಾತು ನೆರವೇರುವುದೆಂದು ಸುಮ್ಮಸುಮ್ಮನೆ ನಿರೀಕ್ಷಿಸಿಕೊಂಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು