Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 37:3 - ಕನ್ನಡ ಸತ್ಯವೇದವು C.L. Bible (BSI)

3 ಹೀಗಿರುವಲ್ಲಿ ಅರಸ ಚಿದ್ಕೀಯನು ಶೆಲೆಮ್ಯನ ಮಗ ಯೆಹೂಕಲನನ್ನು ಮತ್ತು ಯಾಜಕ ಮಾಸೇಯನ ಮಗ ಚೆಫನ್ಯನನ್ನು ಯೆರೆಮೀಯನ ಬಳಿಗೆ ಕಳಿಸಿ, “ನಮಗಾಗಿ ನಮ್ಮ ದೇವರಾದ ಸರ್ವೇಶ್ವರನನ್ನು ಪ್ರಾರ್ಥಿಸು” ಎಂದು ವಿನಂತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹೀಗಿರುವಲ್ಲಿ ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲ, ಯಾಜಕ ಮಾಸೇಯನ ಮಗನಾದ ಚೆಫನ್ಯ ಇವರ ಮೂಲಕ, “ದಯಮಾಡಿ ನಮಗಾಗಿ ನಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸು” ಎಂದು ಪ್ರವಾದಿಯಾದ ಯೆರೆಮೀಯನಿಗೆ ಹೇಳಿಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಹೀಗಿರುವಲ್ಲಿ ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲ, ಯಾಜಕ ಮಾಸೇಯನ ಮಗನಾದ ಚೆಫನ್ಯ, ಇವರ ಮೂಲಕ - ದಯಮಾಡಿ ನಮಗಾಗಿ ನಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸು ಎಂದು ಪ್ರವಾದಿಯಾದ ಯೆರೆಮೀಯನಿಗೆ ಹೇಳಿಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ರಾಜನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲನನ್ನು ಮತ್ತು ಮಾಸೇಯನ ಮಗನಾದ ಯಾಜಕ ಚೆಫನನನ್ನು ಒಂದು ಸಂದೇಶದೊಂದಿಗೆ ಯೆರೆಮೀಯನಲ್ಲಿಗೆ ಕಳುಹಿಸಿದನು. ಯೆರೆಮೀಯನಿಗೆ ಅವರು ತಂದ ಸಂದೇಶ ಹೀಗಿತ್ತು: “ಯೆರೆಮೀಯನೇ, ನಮ್ಮ ದೇವರಾದ ಯೆಹೋವನನ್ನು ನಮಗಾಗಿ ಪ್ರಾರ್ಥಿಸು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲನನ್ನೂ, ಯಾಜಕನಾದ ಮಾಸೇಯನ ಮಗನಾದ ಚೆಫನ್ಯನನ್ನೂ, ಪ್ರವಾದಿಯಾದ ಯೆರೆಮೀಯನ ಬಳಿಗೆ ಕಳುಹಿಸಿ, “ನಮಗೋಸ್ಕರ ನಮ್ಮ ದೇವರಾದ ಯೆಹೋವ ದೇವರನ್ನು ಪ್ರಾರ್ಥಿಸು,” ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 37:3
20 ತಿಳಿವುಗಳ ಹೋಲಿಕೆ  

ರಕ್ಷಾದಳದ ನಾಯಕ ನೆಬೂಜರದಾನನು ಹಿಡಿದುಕೊಂಡು ಹೋದ ಜನರಲ್ಲಿ ಮಹಾಯಾಜಕ ಸೆರಾಯನು, ಎರಡನೇ ದರ್ಜೆಯ ಯಾಜಕ ಜೆಫನ್ಯನು, ಮೂರು ಮಂದಿ ದ್ವಾರಪಾಲಕರು ಸೇರಿದ್ದರು.


ನಿಮ್ಮನ್ನು ನೀವೇ ಮೋಸಮಾಡಿಕೊಳ್ಳುತ್ತಿದ್ದೀರಿ. ನೀವೇ ನನ್ನ ಬಳಿಗೆ ಬಂದು ‘ನಮ್ಮ ದೇವರಾದ ಸರ್ವೇಶ್ವರನನ್ನು ನಮಗಾಗಿ ಪ್ರಾರ್ಥಿಸು. ನಮ್ಮ ದೇವರಾದ ಸರ್ವೇಶ್ವರ ಯಾವ ಅಪ್ಪಣೆ ಕೊಡುತ್ತಾರೋ ಅದನ್ನು ನಮಗೆ ತಿಳಿಸು. ಅದರಂತೆ ನಾವು ನಡೆಯುತ್ತೇವೆ,’ ಎಂಬುದಾಗಿ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನನ್ನನ್ನು ನೀವೇ ಕಳುಹಿಸಿದಿರಿ.


“ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಇಂತೆನ್ನುತ್ತಾರೆ - ‘ನೀನು ಜೆರುಸಲೇಮಿನಲ್ಲಿರುವ ಜನರೆಲ್ಲರಿಗೂ ಯಾಜಕನಾದ ಮಾಸೇಯನ ಮಗ ಚೆಫನ್ಯನಿಗೂ ಸಮಸ್ತ ಯಾಜಕರಿಗೂ ನಿನ್ನ ಹೆಸರಿನಲ್ಲೆ ಪತ್ರ ಬರೆದು ಕಳಿಸಿರುವೆ. ಚೆಫನ್ಯನಿಗೆ ನೀನು ಹೀಗೆಂದು ಬರೆದಿರುವೆ:


ನನಗೆ ಅಭಿಮುಖರಾಗದೆ ಬೆನ್ನುಮಾಡಿದ್ದೀರಿ. ಕೇಡು ಸಂಭವಿಸಿದಾಗ ಮಾತ್ರ, ‘ಎದ್ದು ಬಂದು ನಮ್ಮನ್ನು ಉದ್ಧರಿಸು’ ಎಂದು ಮೊರೆಯಿಡುತ್ತೀರಿ.


ಅರಸನು ಆ ಭಕ್ತನಿಗೆ, “ನಿನ್ನ ದೇವರಾದ ಸರ್ವೇಶ್ವರನು ಪ್ರಸನ್ನನಾಗುವಂತೆ ಬೇಡಿಕೊ; ನಾನು ನನ್ನ ಕೈಯನ್ನು ಹಿಂತೆಗೆಯುವುದಕ್ಕಾಗುವ ಹಾಗೆ ಅವರನ್ನು ನನ್ನ ಪರವಾಗಿ ಪ್ರಾರ್ಥಿಸು,” ಎಂದು ಕೇಳಿದನು. ಅಂತೆಯೇ ಆ ದೈವಭಕ್ತನು ಸರ್ವೇಶ್ವರನನ್ನು ಬೇಡಿಕೊಂಡನು; ಅರಸನ ಕೈ ವಾಸಿಯಾಗಿ ಮೊದಲಿನಂತೆ ಆಯಿತು.


ಆಗ ಸಿಮೋನನು, “ನೀವು ಹೇಳಿದ ಯಾವ ಕೇಡೂ ನನಗೆ ತಗಲದಂತೆ ನನಗಾಗಿ ನೀವೇ ಪ್ರಭುವಿನಲ್ಲಿ ಪ್ರಾರ್ಥನೆಮಾಡಿ,” ಎಂದು ಬೇಡಿಕೊಂಡನು.


ಯೆರೆಮೀಯನು ಜನರೆಲ್ಲರಿಗೆ, “ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ: ನಗರದಲ್ಲಿ ನಿಲ್ಲುವವನು ಖಡ್ಗ-ಕ್ಷಾಮ-ವ್ಯಾಧಿಗಳಿಂದ ಸಾಯುವನು. ನಗರವನ್ನು ಬಿಟ್ಟುಹೋಗಿ ಬಾಬಿಲೋನಿಯರನ್ನು ಮರೆಹೋಗುವವನು ಬದುಕುವನು. ತನ್ನ ಪ್ರಾಣವೊಂದನ್ನಾದರೂ ಬಾಚಿಕೊಂಡು ಹೋಗಿ ಬದುಕುವನು.


“ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ತಮ್ಮ ಹೆಸರೆತ್ತಿ ಸುಳ್ಳನ್ನು ಸಾರುವ ಕೊಲಾಯನ ಮಗ ಅಹಾಬ ಮತ್ತು ಮಾಸೇಯನ ಮಗ ಚಿದ್ಕೀಯ ಇವರ ವಿಷಯವಾಗಿ ಹೀಗೆನ್ನುತ್ತಾರೆ: ‘ಇಗೋ ನಾನು ಇವರನ್ನು ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನ ಕೈಗೆ ಬಿಡುವೆನು. ಅವನು ನಿಮ್ಮ ಕಣ್ಣೆದುರಿಗೆ ಇವರನ್ನು ಕೊಲ್ಲಿಸುವನು.


ಸಮುವೇಲನನ್ನು, “ನಮಗೊಬ್ಬ ಅರಸನು ಬೇಕೆಂದು ನಾವು ಬೇಡಿಕೊಂಡದ್ದರಿಂದ ನಮ್ಮ ಪಾಪಗಳಿಗೆ ಮತ್ತೊಂದು ಪಾಪ ಕೂಡಿತು; ಆದುದರಿಂದ ನಿಮ್ಮ ಸೇವಕರಾದ ನಾವು ಸಾಯದಂತೆ ನಿಮ್ಮ ದೇವರಾದ ಸರ್ವೇಶ್ವರನನ್ನು ಬೇಡಿಕೊಳ್ಳಿ,” ಎಂದು ಸಮುವೇಲನನ್ನು ವಿಜ್ಞಾಪಿಸಿದರು.


ಆಗ ಜನರು ಮೋಶೆಯ ಬಳಿಗೆ ಬಂದು, “ನಾವು ನಿಮಗೂ ಸರ್ವೇಶ್ವರನಿಗೂ ವಿರುದ್ಧ ಮಾತಾಡಿ ದೋಷಿಗಳಾದೆವು. ಈ ಸರ್ಪಗಳು ನಮ್ಮನ್ನು ಬಿಟ್ಟು ತೊಲಗುವಂತೆ ಸರ್ವೇಶ್ವರನನ್ನು ಪ್ರಾರ್ಥಿಸಿ,” ಎಂದು ಬೇಡಿಕೊಂಡರು.


ಈ ಒಂದು ಸಾರಿ ನನ್ನನ್ನು ಕ್ಷಮಿಸಬೇಕು. ನಿಮ್ಮ ದೇವರಾದ ಸರ್ವೇಶ್ವರ ಈ ಮಾರಕ ವಿಪತ್ತನ್ನು ನನ್ನಿಂದ ತೊಲಗಿಸುವಂತೆ ಆತನನ್ನು ಪ್ರಾರ್ಥಿಸಬೇಕು,” ಎಂದು ವಿನಂತಿಸಿದನು.


ಈ ಭಯಂಕರವಾದ ಗುಡುಗು ಮತ್ತು ಆನೆಕಲ್ಲು ಮಳೆ ಇನ್ನು ಸಾಕೇ ಸಾಕು. ಇವುಗಳನ್ನು ನಿಲ್ಲಿಸುವಂತೆ ಸರ್ವೇಶ್ವರನನ್ನು ಪ್ರಾರ್ಥಿಸಿರಿ. ಈ ದೇಶವನ್ನು ಬಿಟ್ಟು ಹೋಗುವುದಕ್ಕೆ ನಿಮಗೆ ಅಪ್ಪಣೆಕೊಡುತ್ತೇನೆ. ಇನ್ನು ನಿಮ್ಮನ್ನು ತಡೆಯುವುದಿಲ್ಲ,” ಎಂದು ಹೇಳಿದನು.


ಅದಕ್ಕೆ ಫರೋಹನು, “ಒಳ್ಳೆಯದು, ಮರುಭೂಮಿಯಲ್ಲಿ ನಿಮ್ಮ ದೇವರಾದ ಸರ್ವೇಶ್ವರನಿಗೆ ಬಲಿ ಒಪ್ಪಿಸಲು ನಿಮಗೆ ಅಪ್ಪಣೆಕೊಡುತ್ತೇನೆ. ಆದರೆ ದೂರ ಹೋಗಕೂಡದು. ನನಗಾಗಿ ಪ್ರಾರ್ಥನೆ ಮಾಡಬೇಕು,” ಎಂದನು.


ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ, “ನೀವು ಸರ್ವೇಶ್ವರನನ್ನು ಪ್ರಾರ್ಥನೆಮಾಡಿ ಈ ಕಪ್ಪೆಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿಯಿಂದಲೂ ತೊಲಗಿಸಿರಿ. ಹಾಗೆ ಮಾಡಿದರೆ ಸರ್ವೇಶ್ವರನಿಗೆ ಬಲಿ ಒಪ್ಪಿಸುವಂತೆ ನಿಮ್ಮ ಜನರಿಗೆ ನಾನು ಹೋಗಲು ಅಪ್ಪಣೆ ಕೊಡುತ್ತೇನೆ,” ಎಂದನು.


ಸರ್ವೇಶ್ವರಾ, ನಾನು ನಿಮಗೆ ಶ್ರೇಷ್ಠವಾದ ಸೇವೆಸಲ್ಲಿಸದೆ ಹೋಗಿದ್ದರೆ, ನನ್ನ ಶತ್ರುಗಳು ಕಷ್ಟಸಂಕಟಗಳಲ್ಲಿ ಸಿಕ್ಕಿಬಿದ್ದ ಕಾಲದಲ್ಲಿ ಅವರ ಪರವಾಗಿ ನಿನಗೆ ಮೊರೆಯಿಡದೆ ಇದ್ದಿದ್ದರೆ ನನಗೆ ಶಾಪ ತಗುಲಲಿ!


“ಇಸ್ರಯೇಲರ ದೇವರಾದ ಸರ್ವೇಶ್ವರ ಹೀಗೆ ಎನ್ನುತ್ತಾರೆ - ನನ್ನ ಅಭಿಪ್ರಾಯವನ್ನು ವಿಚಾರಿಸಲು ನಿಮ್ಮನ್ನು ನನ್ನ ಬಳಿಗೆ ಕಳಿಸಿದ ಜುದೇಯದ ಅರಸನಿಗೆ ಹೀಗೆಂದು ಹೇಳಿರಿ: ‘ಇಗೋ, ನಿಮ್ಮ ಸಹಾಯಕ್ಕೆ ಹೊರಟಿರುವ ಫರೋಹನ ಸೈನ್ಯವು ಸ್ವದೇಶಕ್ಕೆ ಹಿಂದಿರುಗುವುದು.


ಬಳಿಕ ಅರಸ ಚಿದ್ಕೀಯನು ಅವನನ್ನು ಕರೆಯಿಸಿ, “ದೇವರಿಂದ ಯಾವುದಾದರು ಸಂದೇಶ ದೊರೆಯಿತೊ?” ಎಂದು ಮನೆಯಲ್ಲಿ ಗುಟ್ಟಾಗಿ ವಿಚಾರಿಸಿದನು. ಯೆರೆಮೀಯನು, “ಹೌದು, ದೊರೆಯಿತು. ತಾವು ಬಾಬಿಲೋನಿನ ಅರಸನ ಕೈಗೆ ಸಿಕ್ಕಿಬೀಳುವಿರಿ,” ಎಂದನು.


ಇದಾದ ಬಳಿಕ ಎಲ್ಲ ಸೇನಾಪತಿಗಳು, ಕಾರೇಹನ ಮಗ ಯೋಹಾನಾನನು, ರೋಷಾಯನ ಮಗ ಯೆಜನ್ಯನು, ಹಾಗು ಚಿಕ್ಕವರು ಮೊದಲ್ಗೊಂಡು ದೊಡ್ಡವರ ತನಕ ಎಲ್ಲ ಜನರು ಪ್ರವಾದಿ ಯೆರೆಮೀಯನ ಬಳಿಗೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು