Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 38:6 - ಕನ್ನಡ ಸತ್ಯವೇದವು C.L. Bible (BSI)

6 ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿದ್ದ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದ ಇಳಿಸಿ ಅಲ್ಲೇ ಬಿಟ್ಟುಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು. ಯೆರೆಮೀಯನು ಅದರೊಳಗೆ ಹೂತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದಿಳಿಸಿ ಹಾಕಿಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು; ಅದರೊಳಗೆ ಯೆರೆಮೀಯನು ಸಿಕ್ಕಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದಿಳಿಸಿ ಹಾಕಿಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು; ಅದರೊಳಗೆ ಯೆರೆಮೀಯನು ದೊಸಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆಗ ಆ ಅಧಿಕಾರಿಗಳು ಯೆರೆಮೀಯನನ್ನು ಹಿಡಿದು ಮಲ್ಕೀಯನ ಬಾವಿಯೊಳಗೆ ಹಾಕಿದರು. (ಮಲ್ಕೀಯನು ರಾಜವಂಶದವನಾಗಿದ್ದನು.) ಆ ಬಾವಿಯು ಕಾರಾಗೃಹದ ಅಂಗಳದಲ್ಲಿತ್ತು. ಆ ಅಧಿಕಾರಿಗಳು ಹಗ್ಗಗಳನ್ನು ಕಟ್ಟಿ ಯೆರೆಮೀಯನನ್ನು ಬಾವಿಯಲ್ಲಿ ಇಳಿಬಿಟ್ಟರು. ಆ ಬಾವಿಯಲ್ಲಿ ಸ್ವಲ್ಪವೂ ನೀರಿರಲಿಲ್ಲ. ಕೇವಲ ಕೇಸರಿತ್ತು. ಯೆರೆಮೀಯನು ಕೆಸರಿನಲ್ಲಿ ಮುಳುಗಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಅವರು ಯೆರೆಮೀಯನನ್ನು ತಮ್ಮ ವಶಕ್ಕೆ ತೆಗೆದುಕೊಂಡರು. ಸೆರೆಮನೆಯ ಅಂಗಳದಲ್ಲಿದ್ದ ರಾಜವಂಶೀಯನಾದ ಮಲ್ಕೀಯನ ಬಾವಿಯಲ್ಲಿ ನೀರು ಇರಲಿಲ್ಲ. ಕೆಸರು ಮಾತ್ರ ಇತ್ತು. ಯೆರೆಮೀಯನನ್ನು ಕೆಸರಿನಲ್ಲಿ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 38:6
19 ತಿಳಿವುಗಳ ಹೋಲಿಕೆ  

ಆಗ ಅರಸ ಚಿದ್ಕೀಯನು ಅಂತೆಯೆ ಅಪ್ಪಣೆಕೊಡಲು, ಯೆರೆಮೀಯನನ್ನು ರಾಜ್ಯದ ಕಾರಾಗೃಹದ ಅಂಗಳಕ್ಕೆ ಸ್ಥಳಾಂತರಿಸಲಾಯಿತು. ರೊಟ್ಟಿ ಮಾರುಕಟ್ಟೆಯಿಂದ ಪ್ರತಿದಿನ ಒಂದೊಂದು ರೊಟ್ಟಿಯನ್ನು ಅವನಿಗೆ ತಂದುಕೊಡುತ್ತಿದ್ದರು. ನಗರದ ರೊಟ್ಟಿಯೆಲ್ಲ ತೀರುವ ತನಕ ಹಾಗೆ ಮಾಡುತ್ತಿದ್ದರು. ಯೆರೆಮೀಯನು ರಾಜ್ಯದ ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.


ಜುದೇಯದ ಅರಸನ ಮನೆಯಲ್ಲಿ ಉಳಿದಿರುವ ಎಲ್ಲ ಮಹಿಳೆಯರನ್ನು ಬಾಬಿಲೋನಿಯದ ಅರಸನ ದಳಪತಿಗಳ ಬಳಿಗೆ ತರಲಾಗುವುದು. ಆ ಮಹಿಳೆಯರೇ: ‘ಆಪ್ತ ಮಿತ್ರರು ನಿನ್ನನ್ನು ವಂಚಿಸಿ ಒಳಪಡಿಸಿಕೊಂಡರು; ನಿನ್ನ ಕಾಲುಗಳು ಬದಿಯಲ್ಲಿ ಹೂತಿರುವುದನ್ನು ನೋಡಿಯೂ ನಿನ್ನಿಂದ ದೂರವಾದರು’ ಎಂದು ತಮ್ಮನ್ನು ನಿಂದಿಸುವರು.


ಯೆರೆಮೀಯನು ಆ ಬಂದಿಖಾನೆಯ ನೆಲಮನೆಗಳಲ್ಲಿ ಕೆಲವು ದಿವಸ ಇದ್ದನು.


ಮುಳುಗುತಿಹೆನು ಕಳ್ಳುಸುಬಿನಲಿ; ಕಾಲೂರಲೆನಗೆ ನೆಲವಿಲ್ಲ I ಸಿಕ್ಕಿಹೆನು ಆಳ ಮಡುವಿನಲ್ಲಿ, ಹುಚ್ಚುಹೊಳೆ ಕೊಚ್ಚುತ್ತಿದೆಯಲ್ಲಾ II


ಅಂತೆಯೇ, ಆ ಅಧಿಕಾರಿ ಅವರನ್ನು ಸೆರೆಮನೆಯ ಒಳಕೋಣೆಗೆ ತಳ್ಳಿ ಅವರ ಕಾಲುಗಳನ್ನು ಮರದ ದಿಮ್ಮಿಗಳಿಗೆ ಬಿಗಿಸಿದನು.


ರಕ್ತ ಸುರಿಸಿ ನೀವು ನನ್ನೊಡನೆ ಮಾಡಿಕೊಂಡ ಒಡಂಬಡಿಕೆಯ ನಿಮಿತ್ತ ಕರೆತರುವೆನು ನಿಮ್ಮವರನು ಸೆರೆಯಾಳತ್ವದಿಂದ ಮೇಲೆತ್ತುವೆನು ನಿಮ್ಮವರನು ಆ ಸೆರೆಬಾವಿಯಿಂದ.


ಉಪಕಾರಕ್ಕೆ ಅಪಕಾರವನ್ನೆಸಗಿಹರು I ಗೆಳೆತನಕ್ಕೆ ಹಗೆತನವನ್ನೇ ತೋರಿಹರು II


ಮೇಲೆತ್ತಿದನು ವಿನಾಶದ ಕೆಸರಿಂದ, ಕರಾಳ ಕೂಪದಿಂದ I ಗೋರ್ಕಲ್ಲ ಮೇಲಿರಿಸಿ ಹೆಜ್ಜೆಯಿಡಿಸಿದನು ಅತಿ ಧೈರ್ಯದಿಂದ II


ಅವನನ್ನು ಹಿಡಿದು ಬಾವಿಯೊಳಗೆ ಹಾಕಿದರು. ಆ ಬಾವಿ ನೀರಿಲ್ಲದೆ ಬರಿದಾಗಿತ್ತು.


ದೇವರ ಚಿತ್ತವನ್ನು ನೆರವೇರಿಸಿ, ಅವರು ವಾಗ್ದಾನಮಾಡಿರುವುದನ್ನು ಪಡೆದುಕೊಳ್ಳುವಂತೆ, ನೀವೂ ದೃಢಮನಸ್ಕರಾಗಿರಬೇಕು.


ಬದಲಿಗೆ ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗ ಸೆರಾಯ, ಅಬ್ದೆಯೇಲನ ಮಗ ಶಲೆಮ್ಯ, ಇವರಿಗೆ ಲೇಖಕನಾದ ಬಾರೂಕನನ್ನು ಮತ್ತು ಪ್ರವಾದಿ ಯೆರೆಮೀಯನನ್ನು ಸೆರೆಹಿಡಿಯಬೇಕೆಂದು ಆಜ್ಞಾಪಿಸಿದನು. ಆದರೆ ಸರ್ವೇಶ್ವರ ಅವರನ್ನು ಮರೆಯಲ್ಲಿಟ್ಟಿದ್ದರು.


ಆ ಸಮಯದಲ್ಲಿ ಬಾಬಿಲೋನಿಯದ ಅರಸನ ಸೈನ್ಯ ಜೆರುಸಲೇಮನ್ನು ಮುತ್ತಿತ್ತು. ಪ್ರವಾದಿ ಯೆರೆಮೀಯನು ಜುದೇಯದ ರಾಜನ ಮನೆಗೆ ಸೇರಿದ ಕಾರಾಗೃಹದಲ್ಲಿ ಸೆರೆಯಾಗಿದ್ದನು.


ಈ ಪ್ರಕಾರ ಯೆರೆಮೀಯನನ್ನು ಹಗ್ಗಗಳ ಮೂಲಕ ಸೇದಿಕೊಂಡು ಬಾವಿಯಿಂದ ಮೇಲಕ್ಕೆ ಎತ್ತಿದರು. ಬಳಿಕ ಯೆರೆಮೀಯನು ಹಿಂದಿನಂತೆ ಕಾರಾಗೃಹದ ಅಂಗಳದಲ್ಲಿ ವಾಸಿಸುತ್ತಿದ್ದನು.


ಈ ಕಾರಣ ರಾಜನು ಅಪ್ಪಣೆ ಕೊಡಲೇಬೇಕಾಯಿತು. ಕೂಡಲೆ ಅವರು ದಾನಿಯೇಲನನ್ನು ತಂದು ಸಿಂಹಗಳ ಗವಿಯಲ್ಲಿ ಹಾಕಿಯೇಬಿಟ್ಟರು. ಆಗ ರಾಜನು ದಾನಿಯೇಲನಿಗೆ, “ನೀನು ದಿನನಿತ್ಯವೂ ಆರಾಧಿಸುವ ದೇವರು ನಿನ್ನನ್ನು ಉದ್ಧರಿಸಲಿ!” ಎಂದು ಹರಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು