Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 39:1 - ಕನ್ನಡ ಸತ್ಯವೇದವು C.L. Bible (BSI)

1 ಜುದೇಯದ ಅರಸ ಚಿದ್ಕೀಯನ ಆಳ್ವಿಕೆಯ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಲ್ಲಿ ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನು ಸಕಲ ಸೈನ್ಯಸಮೇತ ಬಂದು ಜೆರುಸಲೇಮನ್ನು ಮುತ್ತಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸಕಲ ಸೈನ್ಯಸಹಿತ ಬಂದು ಯೆರೂಸಲೇಮನ್ನು ಮುತ್ತಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಒಂಭತ್ತನೆಯ ವರುಷದ ಹತ್ತನೆಯ ತಿಂಗಳಿನಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸಕಲ ಸೈನ್ಯಸಹಿತ ಬಂದು ಯೆರೂಸಲೇಮನ್ನು ಮುತ್ತಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಜೆರುಸಲೇಮನ್ನು ಹೀಗೆ ವಶಪಡಿಸಿಕೊಳ್ಳಲಾಯಿತು: ಚಿದ್ಕೀಯನು ಯೆಹೂದದ ರಾಜನಾಗಿ ಆಳುತ್ತಿದ್ದ ಒಂಭತ್ತನೇ ವರ್ಷದ ಹತ್ತನೆಯ ತಿಂಗಳಿನಲ್ಲಿ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ತನ್ನ ಇಡೀ ಸೈನ್ಯದೊಂದಿಗೆ ಜೆರುಸಲೇಮಿನ ಮೇಲೆ ಧಾಳಿ ಮಾಡಿದನು. ಅದನ್ನು ವಶಪಡಿಸಿಕೊಳ್ಳುವದಕ್ಕಾಗಿ ಅವನು ಆ ನಗರವನ್ನು ಮುತ್ತಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೂದದ ಅರಸನಾದ ಚಿದ್ಕೀಯನ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ತನ್ನ ಸಮಸ್ತ ಸೈನ್ಯದೊಂದಿಗೆ ಯೆರೂಸಲೇಮಿಗೆ ವಿರೋಧವಾಗಿ ಬಂದು, ಅದನ್ನು ಮುತ್ತಿಗೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 39:1
16 ತಿಳಿವುಗಳ ಹೋಲಿಕೆ  

“ನಾಲ್ಕನೇ, ಐದನೇ, ಏಳನೇ ಮತ್ತು ಹತ್ತನೇ ತಿಂಗಳುಗಳ ಉಪವಾಸ ಇವು ಯೆಹೂದ್ಯ ವಂಶಕ್ಕೆ ವಿಶೇಷ ಹಬ್ಬದ ದಿನಗಳಾಗಿ ಮಾರ್ಪಟ್ಟು, ಜನರು ಹರ್ಷಿಸಿ ಆನಂದಿಸುವರು. ಇಂತಿರಲು ಸತ್ಯವನ್ನೂ ಸಮಾಧಾನವನ್ನೂ ಪ್ರೀತಿಸಿರಿ.”


ನಿಮಗೂ ನಿಮ್ಮ ಪಿತೃಗಳಿಗೂ ಗೊತ್ತಿಲ್ಲದ ಜನಾಂಗದವರ ದೇಶಕ್ಕೆ ನಿಮ್ಮನ್ನೂ ನೀವು ನೇಮಿಸಿಕೊಳ್ಳುವ ಅರಸರನ್ನೂ ಒಯ್ಯಿಸುವರು; ಅಲ್ಲಿ ನೀವು ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.


ಜುದೇಯದ ಅರಸನಾದ ಚಿದ್ಕೀಯನ ಆಳ್ವಿಕೆಯ ಹತ್ತನೇ ವರ್ಷದಲ್ಲಿ, ಅಂದರೆ ನೆಬೂಕದ್ನೆಚ್ಚರನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಸರ್ವೇಶ್ವರ ಸ್ವಾಮಿ ಯೆರೆಮೀಯನಿಗೆ ತಮ್ಮ ವಾಕ್ಯವನ್ನು ದಯಪಾಲಿಸಿದರು.


ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು, ಅವನ ಸಮಸ್ತ ಸೈನ್ಯವು, ಅವನ ಕೈಕೆಳಗಿನ ಭೂರಾಜರೆಲ್ಲರು ಹಾಗೂ ಸಕಲ ಪ್ರಜೆಗಳು ಜೆರುಸಲೇಮಿಗೂ ಅದಕ್ಕೆ ಸೇರಿದ ಎಲ್ಲ ಊರುಗಳಿಗೂ ವಿರುದ್ಧ ಯುದ್ಧಮಾಡುತ್ತಿದ್ದಾಗ ಸರ್ವೇಶ್ವರ ಯೆರೆಮೀಯನಿಗೆ ಈ ವಿಷಯವನ್ನು ತಿಳಿಸಿದರು:


ಸರ್ವೇಶ್ವರನಾದ ನನ್ನ ಗುರಿಯನ್ನು ಗಮನಿಸಿರಿ - ನಾನು ಅಪ್ಪಣೆಕೊಟ್ಟು, ಶತ್ರುಗಳು ಈ ನಗರಕ್ಕೆ ಮತ್ತೆ ಬರುವಂತೆ ಮಾಡುವೆನು. ಅವರು ಇದರ ವಿರುದ್ಧ ಯುದ್ಧಮಾಡಿ, ಇದನ್ನು ಆಕ್ರಮಿಸಿಕೊಂಡು, ಬೆಂಕಿಯಿಂದ ಸುಟ್ಟುಹಾಕುವರು. ನಾನು ಜುದೇಯದ ನಗರಗಳನ್ನು ನಿರ್ಜನವಾದ ಪಾಳುಭೂಮಿಯನ್ನಾಗಿಸುವೆನು.


“ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಇಂತೆನ್ನುತ್ತಾರೆ: ‘ನನ್ನ ರೌದ್ರ ಕೋಪಾಗ್ನಿಯು ಜೆರುಸಲೇಮಿನ ಮೇಲೆ ಹೇಗೆ ಸುರಿಯಿತೋ ಹಾಗೆಯೆ ನೀವು ಈಜಿಪ್ಟಿನಲ್ಲಿ ಕಾಲಿಟ್ಟ ಕೂಡಲೆ ನನ್ನ ಕೋಪಾಗ್ನಿ ನಿಮ್ಮ ಮೇಲೆಯೂ ಸುರಿಯುವುದು. ನೀವು ಅಪವಾದ, ಅಪಹಾಸ್ಯಕ್ಕೂ, ಶಾಪ, ನಿಂದೆ, ದೂಷಣೆಗಳಿಗೂ ಗುರಿಯಾಗುವಿರಿ. ಈ ನಾಡನ್ನು ನೀವು ಮತ್ತೆ ನೋಡಲಾರಿರಿ.’


ಆಮೇಲೆ ಕಬ್ಬಿಣದ ಹೆಂಚನ್ನು ತೆಗೆದುಕೊಂಡು ಅದನ್ನು ನಿನಗೂ ಆ ಪಟ್ಟಣಕ್ಕೂ ಮಧ್ಯೆ ಕಬ್ಬಿಣದ ಗೋಡೆಯನ್ನಾಗಿ ನಿಲ್ಲಿಸಿ ಆ ಪಟ್ಟಣದ ಮೇಲೆ ದೃಷ್ಟಿಯಿಡು; ಅದು ಮುತ್ತಲ್ಪಡುವುದು. ನೀನು ಅದನ್ನು ಮುತ್ತಿದಂತಾಗುವುದು. ಇದು ಇಸ್ರಯೇಲ್ ವಂಶದವರಿಗೆ ಒಂದು ಸಂಕೇತ.


ಮುತ್ತಿಗೆಯ ದಿನಗಳು ಮುಗಿದ ಕೂಡಲೆ ಕೂದಲಿನ ಒಂದು ಭಾಗವನ್ನು ಪಟ್ಟಣದ ಮಧ್ಯೆ ಬೆಂಕಿಯಲ್ಲಿ ಸುಡು; ಇನ್ನೊಂದು ಭಾಗವನ್ನು ತೆಗೆದುಕೊಂಡು ಪಟ್ಟಣದ ಸುತ್ತಲು ಖಡ್ಗದಿಂದ ಕಡಿ; ಮತ್ತೊಂದು ಭಾಗವನ್ನು ಗಾಳಿಗೆ ತೂರಿಬಿಡು; (ಈ ಪ್ರಕಾರ ನಾನು ನನ್ನ ಜನರ ಹಿಂದೆ ಕತ್ತಿಯನ್ನು ಬೀಸುವೆನು).


ನಾವು ಸೆರೆಯಾಗಿ ಹನ್ನೆರಡನೆಯ ವರ್ಷದ ಹತ್ತನೆಯ ತಿಂಗಳಿನ ಐದನೆಯ ದಿನದಲ್ಲಿ ಜೆರುಸಲೇಮಿನಿಂದ ಪಲಾಯನ ಮಾಡಿದವನೊಬ್ಬನು ನನ್ನ ಬಳಿಗೆ ಬಂದು, - ‘ಪಟ್ಟಣವು ಶತ್ರು ವಶವಾಯಿತು’ ಎಂದು ಹೇಳಿದನು.


ನಾವು ಸೆರೆಯಾದ ಇಪ್ಪತ್ತೈದನೆಯ ವರ್ಷದ ಅಂದರೆ, ಪಟ್ಟಣವು ಹಾಳಾದ ಹದಿನಾಲ್ಕನೆಯ ವರ್ಷದ ಮೊದಲನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಹೌದು, ಆ ದಿನದಲ್ಲೇ ನಾನು ಸರ್ವೇಶ್ವರಸ್ವಾಮಿಯ ಹಸ್ತಸ್ಪರ್ಶದಿಂದ ಪರವಶನಾದೆ. ಆಗ ಅವರು ನನ್ನನ್ನು ಅಲ್ಲಿಗೆ ಒಯ್ದರು.


ಸರ್ವೇಶ್ವರಸ್ವಾಮಿ ಬಾಬಿಲೋನಿಯದ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೊಪ್ಪಿಸಿದರು. ಅವನು ಅವರ ಯುವ ಯೋಧರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿದನು. ಯುವಕರನ್ನು, ಕನ್ಯೆಯರನ್ನು, ವೃದ್ಧರನ್ನು ಹಾಗು ಅತಿವೃದ್ಧರನ್ನು ಕನಿಕರಿಸದೆ ಎಲ್ಲರನ್ನು ಕೊಲ್ಲಿಸಿದನು.


ಸರ್ವಶಕ್ತನಾದ ಸರ್ವೇಶ್ವರ ಸ್ವಾಮಿ ಹೀಗೆ ಎನ್ನುತ್ತಾರೆ : “ಸಿಯೋನ್ ಸುತ್ತಣ ಮರಗಳನ್ನು ಕಡಿದುಬಿಡಿ. ಜೆರುಸಲೇಮ್ ಎದುರಿಗೆ ದಿಬ್ಬಗಳನ್ನು ಎಬ್ಬಿಸಿರಿ. ನೀವು ದಂಡಿಸಬೇಕಾದ ನಗರ ಇದುವೆ. ದರೋಡೆ ದಬ್ಬಾಳಿಕೆಗಳಿಂದ ಅದು ತುಂಬಿದೆ.


ಚಿದ್ಕೀಯನು ಅರಸನಾದಾಗ ಅವನಿಗೆ ಇಪ್ಪತ್ತೊಂದು ವರ್ಷ. ಅವನು ಜೆರುಸಲೇಮನ್ನು ಹನ್ನೊಂದು ವರ್ಷ ಆಳಿದ. ಅವನ ತಾಯಿ ಲಿಬ್ನದ ಯೆರೆಮೀಯನ ಮಗಳಾದ ಹಮೂಟಲ್ ಎಂಬಾಕೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು