Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 39:10 - ಕನ್ನಡ ಸತ್ಯವೇದವು C.L. Bible (BSI)

10 ಆದರೆ ಏನೂ ಇಲ್ಲದ ಬಡಜನರನ್ನು ಜುದೇಯದ ನಾಡಿನಲ್ಲೆ ಬಿಟ್ಟು ಅವರಿಗೆ ಹೊಲತೋಟಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದರೆ ಏನೂ ಇಲ್ಲದ ಕೆಲವು ಬಡ ಜನರನ್ನು ಯೆಹೂದ ದೇಶದಲ್ಲಿ ಬಿಟ್ಟು ಆಗಲೇ ಅವರಿಗೆ ಹೊಲ ಮತ್ತು ದ್ರಾಕ್ಷಿತೋಟಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದರೆ ಏನೂ ಇಲ್ಲದ ಕೆಲವು ಬಡ ಜನರನ್ನು ಯೆಹೂದ ದೇಶದಲ್ಲಿ ಬಿಟ್ಟು ಆಗಲೇ ಅವರಿಗೆ ಹೊಲತೋಟಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದರೆ ಬಾಬಿಲೋನ್ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾದ ನೆಬೂಜರದಾನನು ಯೆಹೂದದ ಕೆಲ ಬಡಜನರನ್ನು ಅಲ್ಲಿಯೇ ಬಿಟ್ಟನು. ಆ ಜನಗಳಿಗೆ ಯಾವ ಆಸ್ತಿಪಾಸ್ತಿ ಇದ್ದಿರಲಿಲ್ಲ. ಆದ್ದರಿಂದ ಅಂದು ನೆಬೂಜರದಾನನು ಯೆಹೂದದ ಆ ಬಡಜನರಿಗೆ ದ್ರಾಕ್ಷಿತೋಟಗಳನ್ನು ಮತ್ತು ಹೊಲಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ ಜನರೊಳಗೆ ಏನಿಲ್ಲದವರಾದ ಬಡವರಲ್ಲಿ ಕೆಲವರನ್ನು ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆಹೂದ ದೇಶದಲ್ಲಿ ಬಿಟ್ಟು, ಅವರಿಗೆ ಆಗಲೇ ದ್ರಾಕ್ಷಿತೋಟಗಳನ್ನೂ, ಹೊಲಗಳನ್ನೂ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 39:10
8 ತಿಳಿವುಗಳ ಹೋಲಿಕೆ  

ಹೊಲಗಳನ್ನು ಮತ್ತು ದ್ರಾಕ್ಷೀತೋಟಗಳನ್ನು ಮಾಡುವುದಕ್ಕಾಗಿ ನಾಡಿನ ಜನರಲ್ಲಿ ಕೇವಲ ದರಿದ್ರರನ್ನು ಮಾತ್ರ ಬಿಟ್ಟುಹೋದನು.


ಹೊಲಗಳನ್ನು ಮತ್ತು ದ್ರಾಕ್ಷಿಯ ತೋಟಗಳನ್ನು ವ್ಯವಸಾಯ ಮಾಡುವುದಕ್ಕಾಗಿ ನಾಡಿನ ಜನರಲ್ಲಿ ಕೇವಲ ದರಿದ್ರರನ್ನು ಮಾತ್ರ ಬಿಟ್ಟುಹೋದರು.


ಬಾಬಿಲೋನಿಯದ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ನಾಡಿನ ರಾಜ್ಯಪಾಲನನ್ನಾಗಿ ನೇಮಿಸಿದ್ದಾನೆಂಬ ಸುದ್ದಿ ಹಾಗು ಬಾಬಿಲೋನಿಗೆ ಸೆರೆಹೋಗದ ನಾಡಿಗರಲ್ಲಿ ಬಡವರಾದ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಅವನ ಅಧಿಕಾರಕ್ಕೆ ಒಪ್ಪಿಸಿದ್ದಾನೆಂಬ ಸುದ್ದಿ ಹರಡಿತು. ಕಾಡುಮೇಡುಗಳಲ್ಲಿದ್ದ ಎಲ್ಲ ಯಹೂದ್ಯ ಸೈನಿಕರೂ ಸೇನಾಪತಿಗಳೂ ಇದನ್ನು ಕೇಳಿ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಹೋದರು.


“ನರಪುತ್ರನೇ, ಇಸ್ರಯೇಲ್ ನಾಡಿನ ಹಾಳುಪ್ರದೇಶಗಳಲ್ಲಿ ವಾಸಿಸುವರು, ‘ಅಬ್ರಹಾಮನು ಒಂಟಿಗನಾಗಿದ್ದರೂ ಈ ನಾಡು ಅವನಿಗೆ ಸೊತ್ತಾಗಿ ಸಿಕ್ಕಿತು; ಅದು ಬಹುಜನರಾದ ನಮಗೆ ಸೊತ್ತಾಗಿ ಸಿಕ್ಕಿದ್ದು ಏನು ದೊಡ್ಡದು! ಎಂದುಕೊಳ್ಳುತ್ತಿದ್ದಾರೆ.


ಅಂದು ಒಬ್ಬ ರೈತನು ಒಂದು ಕಡಸನ್ನು ಎರಡು ಮೇಕೆಗಳನ್ನು ಮಾತ್ರ ಉಳಿಸಿಕೊಳ್ಳಬಲ್ಲವನಾದರೂ ಬಾಯಿ ಮೊಸರಾಗುವಷ್ಟು ಅಧಿಕವಾದ ಹಾಲನ್ನು ಕರೆಯುವನು.


ನಾನಂತು ಮಿಚ್ಪದಲ್ಲಿ ವಾಸವಾಗಿರುವೆನು. ನಮ್ಮ ಬಳಿಗೆ ಬರುವ ಬಾಬಿಲೋನಿಯರ ಮುಂದೆ ನಿಮ್ಮ ಪ್ರತಿನಿಧಿಯಾಗಿರುವೆನು. ನೀವು ಹೋಗಿ ದ್ರಾಕ್ಷಾರಸ, ಹಣ್ಣು, ಎಣ್ಣೆ ಮುಂತಾದವುಗಳನ್ನು ಸಂಗ್ರಹಿಸಿ ನಿಮ್ಮ ಉಗ್ರಾಣಗಳಲ್ಲಿ ತುಂಬಿಸಿಡಿ. ನೀವು ಹಿಡಿದಿರುವ ಪಟ್ಟಣಗಳಲ್ಲೆ ವಾಸವಾಗಿರಿ,” ಎಂದು ಶಪಥಮಾಡಿ ಹೇಳಿದನು.


ನೇರೀಯನ ಮಗ ಬಾರೂಕನನ್ನು, ರಾಜಕುವರಿಯರನ್ನು, ಅಂತು ಗಂಡಸರು, ಹೆಂಗಸರು, ಮಕ್ಕಳು,


ಆಗ ನಾನು ಕೊಯ್ಗುರಿಗಳನ್ನು ವ್ಯಾಪಾರ ಮಾಡುವವರಿಗೋಸ್ಕರ ಆ ಮಂದೆಗೆ ಕುರಿಗಾಹಿ ಆದೆ. ಎರಡು ಕುರಿಗೋಲುಗಳನ್ನು ಕೈಗೆ ತೆಗೆದುಕೊಂಡು ಒಂದಕ್ಕೆ ‘ಕೃಪೆ’ ಎಂದೂ ಮತ್ತೊಂದಕ್ಕೆ ‘ಐಕ್ಯ’ ಎಂದೂ ಹೆಸರಿಟ್ಟು ಆ ಮಂದೆಯನ್ನು ಮೇಯಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು