Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 39:12 - ಕನ್ನಡ ಸತ್ಯವೇದವು C.L. Bible (BSI)

12 “ಇವನನ್ನು ಕರೆದುಕೊಂಡುಹೋಗಿ ಚೆನ್ನಾಗಿ ನೋಡಿಕೊ. ಯಾವ ಹಾನಿಯನ್ನು ಮಾಡಕೂಡದು. ಬೇಡುವುದನ್ನೆಲ್ಲ ಕೊಡು,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ಅವನನ್ನು ಕರೆಯಿಸಿಕೊಂಡು ಏನೂ ಕೇಡುಮಾಡದೆ ಅವನು ಬೇಡುವುದನ್ನೆಲ್ಲಾ ನೆರವೇರಿಸಿ ಕಟಾಕ್ಷಿಸು” ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವನನ್ನು ಕರೆಸಿಕೊಂಡು ಏನೂ ಕೇಡುಮಾಡದೆ ಅವನು ಬೇಡುವದನ್ನೆಲ್ಲಾ ನೆರವೇರಿಸಿ ಕಟಾಕ್ಷಿಸು ಎಂದು ಅಪ್ಪಣೆಕೊಡಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಯೆರೆಮೀಯನನ್ನು ಪತ್ತೆಹಚ್ಚಿ ಅವನ ಕ್ಷೇಮದ ಬಗ್ಗೆ ಎಚ್ಚರಿಕೆವಹಿಸಿರಿ, ಅವನಿಗೆ ನೋವಾಗದಂತೆ ನೋಡಿಕೊಳ್ಳಿ. ಅವನು ಕೇಳಿದ್ದನ್ನೆಲ್ಲ ಕೊಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಅವನನ್ನು ಚೆನ್ನಾಗಿ ನೋಡಿಕೋ, ಅವನಿಗೆ ಕೆಟ್ಟದ್ದೇನೂ ಮಾಡಬೇಡ; ಆದರೆ ಅವನು ನಿನಗೆ ಹೇಗೆ ಹೇಳುವನೋ, ಹಾಗೆಯೇ ಅವನಿಗೆ ಮಾಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 39:12
12 ತಿಳಿವುಗಳ ಹೋಲಿಕೆ  

ಒಬ್ಬನ ನಡತೆಯನ್ನುಸರ್ವೇಶ್ವರ ಮೆಚ್ಚಿದರೆ, ಅವನ ಶತ್ರುಗಳನ್ನು ಆತ ಮಿತ್ರರನ್ನಾಗಿಸುತ್ತಾನೆ.


ನೋಡು, ನಿನ್ನ ಕೈಗೆ ಹಾಕಿದ್ದ ಬೇಡಿಗಳನ್ನು ಈ ದಿನ ತೆಗೆಸಿದ್ದೇನೆ. ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ಮನಸಿದ್ದರೆ ಬಾ. ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆ. ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ಮನಸ್ಸಿಲ್ಲದಿದ್ದರೆ ಬರಬೇಕಾಗಿಲ್ಲ. ಇಗೋ ದೇಶವೆಲ್ಲ ನಿನ್ನ ಕಣ್ಣೆದುರಿಗಿದೆ. ನಿನಗೆ ಯಾವ ಕಡೆಗೆ ಹೋಗುವುದು ಸರಿಯೆಂದು, ಒಳ್ಳೆಯದೆಂದು ತೋರುತ್ತದೋ ಆ ಕಡೆಗೆ ಹೋಗು,” ಎಂದು ಹೇಳಿದನು.


ರಾಜನ ಹೃದಯ ಸರ್ವೇಶ್ವರನ ಕೈಯಲ್ಲಿ; ತಿರುಗಿಸಬಲ್ಲ ಆತ ಅದನ್ನು ನೀರಿನ ಕಾಲುವೆಯ ಪರಿ.


ಎಲ್ಲಾ ಆಪತ್ತು ವಿಪತ್ತುಗಳಿಂದ ಅವನನ್ನು ಪಾರುಮಾಡಿದರು. ಅವನು ಈಜಿಪ್ಟಿನ ಅರಸ ಫರೋಹನ ಆಸ್ಥಾನಕ್ಕೆ ಬಂದಾಗ ದೇವರು ಅವನಿಗೆ ಜ್ಞಾನಸಂಪನ್ನತೆಯನ್ನಿತ್ತು ಅರಸನ ಮೆಚ್ಚುಗೆಗೆ ಪಾತ್ರನಾಗುವಂತೆ ಅನುಗ್ರಹಿಸಿದರು. ಫರೋಹನು ಅವನನ್ನು ರಾಜ್ಯಪಾಲನನ್ನಾಗಿಯೂ ಅರಮನೆಯ ಮೇಲ್ವಿಚಾರಕನನ್ನಾಗಿಯೂ ನೇಮಿಸಿದನು.


ಶತ್ರುವಶವಾಗಿ ಸೆರೆಗೆ ಹೋಗಿದ್ದರೂ ಅಲ್ಲಿಯೂ ಖಡ್ಗವು ನನ್ನ ಆಜ್ಞಾನುಸಾರ ಅವರನ್ನು ಕೊಲ್ಲುವುದು; ಅವರ ಮೇಲಿಗಾಗಿ ಅಲ್ಲ, ಕೇಡಿಗಾಗಿಯೇ ಅವರ ಮೇಲೆ ಕಣ್ಣಿಡುವೆನು.


ಅವರ ಮೇಲೆ ಕನಿಕರ ತೋರಿ ಕಟಾಕ್ಷಿಸಿ ಈ ನಾಡಿಗೆ ಮರಳಿ ಬರಮಾಡುವೆನು. ಅವರನ್ನು ಕಟ್ಟುವೆನು, ಕೆಡುವುದಿಲ್ಲ; ನೆಡುವೆನು, ಕೀಳುವುದಿಲ್ಲ.


ನಿನ್ನ ದೃಷ್ಟಿ ಅದರ ಮೇಲೆ ಬೀಳುವಷ್ಟರಲ್ಲೆ ಅದು ಮಾಯ, ರೆಕ್ಕೆ ಕಟ್ಟಿಕೊಂಡ ಗರುಡನಂತೆ ಆಗಸದತ್ತ ಅದರ ಓಟ.


ಇದು ಸರ್ವೇಶ್ವರನಾದ ನನ್ನ ಮಾತು. ನಿನ್ನನ್ನು ದುಷ್ಟರ ಕೈಯಿಂದ ಉದ್ಧರಿಸುವೆನು, ಕ್ರೂರಿಗಳ ಕೈಯಿಂದ ರಕ್ಷಿಸುವೆನು.”


ಅಂತೆಯೇ ನೆಬೂಜರದಾನನು ಹಾಗು ಕಂಚುಕಿಯರ ಮುಖ್ಯಸ್ಥ ನೆಬೂಷಜ್ಬಾನ್, ಜೋಯಿಸರ ಮುಖ್ಯಸ್ಥ ನೇರ್ಗಲ್‍ಸರೆಚರ್ ಮತ್ತು ಬಾಬಿಲೋನಿಯರ ಅರಸನ ಎಲ್ಲ ಪದಾಧಿಕಾರಿಗಳು ಸೇರಿ ಯೆರೆಮೀಯನನ್ನು ಕಾರಾಗೃಹದಿಂದ ಕರೆತರಿಸಿದರು.


ಸರ್ವೇಶ್ವರಾ, ನಾನು ನಿಮಗೆ ಶ್ರೇಷ್ಠವಾದ ಸೇವೆಸಲ್ಲಿಸದೆ ಹೋಗಿದ್ದರೆ, ನನ್ನ ಶತ್ರುಗಳು ಕಷ್ಟಸಂಕಟಗಳಲ್ಲಿ ಸಿಕ್ಕಿಬಿದ್ದ ಕಾಲದಲ್ಲಿ ಅವರ ಪರವಾಗಿ ನಿನಗೆ ಮೊರೆಯಿಡದೆ ಇದ್ದಿದ್ದರೆ ನನಗೆ ಶಾಪ ತಗುಲಲಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು