Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 39:4 - ಕನ್ನಡ ಸತ್ಯವೇದವು C.L. Bible (BSI)

4 ಇವರನ್ನು ನೋಡಿ, ಜುದೇಯದ ಅರಸ ಚಿದ್ಕೀಯನು ಮತ್ತು ಸಮಸ್ತ ಸೈನಿಕರು ಅದೇ ರಾತ್ರಿಯಲ್ಲಿ ಹೊರಟು, ಅರಸನ ಉದ್ಯಾನ ಮಾರ್ಗವಾಗಿ ಎರಡು ಗೋಡೆಗಳ ನಡುವಣ ಬಾಗಿಲಿನಿಂದ ನಗರವನ್ನು ಬಿಟ್ಟು, ಅರಾಬಾ ಎಂಬ ಕಣಿವೆ ಪ್ರದೇಶದ ಕಡೆಗೆ ಪಲಾಯನ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೂದದ ಅರಸನಾದ ಚಿದ್ಕೀಯನೂ ಮತ್ತು ಸಮಸ್ತ ಸೈನಿಕರೂ ಇವರನ್ನು ನೋಡಿ ಅದೇ ರಾತ್ರಿಯಲ್ಲಿ ಹೊರಟು ಅರಸನ ಉದ್ಯಾನದ ಮಾರ್ಗವಾಗಿ ಎರಡು ಗೋಡೆಗಳ ನಡುವಣ ಬಾಗಿಲಿನಿಂದ ಪಟ್ಟಣವನ್ನು ಬಿಟ್ಟು ಅರಾಬಾ ಎಂಬ ತಗ್ಗಾದ ಪ್ರದೇಶದ ಕಡೆಗೆ ಪಲಾಯನ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೂದದ ಅರಸನಾದ ಚಿದ್ಕೀಯನೂ ಸಮಸ್ತ ಸೈನಿಕರೂ ಇವರನ್ನು ನೋಡಿ ಅದೇ ರಾತ್ರಿಯಲ್ಲಿ ಹೊರಟು ಅರಸನ ಉದ್ಯಾನಮಾರ್ಗವಾಗಿ ಎರಡು ಗೋಡೆಗಳ ನಡುವಣ ಬಾಗಿಲಿಂದ ಪಟ್ಟಣವನ್ನು ಬಿಟ್ಟು ಅರಾಬಾ ಎಂಬ ತಗ್ಗಾದ ಪ್ರದೇಶದ ಕಡೆಗೆ ಪಲಾಯನಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೂದದ ರಾಜನಾದ ಚಿದ್ಕೀಯನು ಬಾಬಿಲೋನಿನ ಆ ಅಧಿಕಾರಿಗಳನ್ನು ನೋಡಿದನು. ಅವನು ಮತ್ತು ಅವನ ಜೊತೆಗಿದ್ದ ಸೈನಿಕರು ಓಡಿಹೋದರು. ಅವರು ರಾತ್ರಿಯಲ್ಲಿ ಜೆರುಸಲೇಮ್ ನಗರವನ್ನು ಬಿಟ್ಟು ರಾಜನ ಉದ್ಯಾನದ ಮಾರ್ಗವಾಗಿ ಹೊರಗೆ ಹೋದರು. ಅವರು ಎರಡು ಗೋಡೆಗಳ ಮಧ್ಯದಲ್ಲಿದ್ದ ಬಾಗಿಲಿನಿಂದ ಹೊರಗೆ ಬಂದು ಮರುಭೂಮಿಯ ಕಡೆಗೆ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇವರನ್ನು ನೋಡಿ ಯೆಹೂದದ ಅರಸನಾದ ಚಿದ್ಕೀಯನು ಮತ್ತು ಸಮಸ್ತ ಸೈನಿಕರು ಅದೇ ರಾತ್ರಿಯಲ್ಲಿ ಹೊರಟು, ಅರಸನ ಉದ್ಯಾನ ಮಾರ್ಗವಾಗಿ ಎರಡು ಗೋಡೆಗಳ ಮಧ್ಯದಲ್ಲಿ ಇದ್ದ ಬಾಗಿಲಿನಿಂದ ನಗರವನ್ನು ಬಿಟ್ಟು, ಅರಾಬಾ ಎಂಬ ಕಣಿವೆ ಪ್ರದೇಶದ ಕಡೆಗೆ ಪಲಾಯನ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 39:4
17 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ದೌಡೋಡುವವನು ಕೂಡ ತಲೆತಪ್ಪಿಸಿಕೊಳ್ಳಲಾರನು. ಬಲಿಷ್ಠನೂ ಬಲಹೀನನಾಗುವನು. ಪರಾಕ್ರಮಿಯೂ ಪ್ರಾಣ ಉಳಿಸಿಕೊಳ್ಳಲಾರನು.


ಇದರಿಂದ ಅರಸನು ಧೈರ್ಯಗೊಂಡು, ಅಲ್ಲಲ್ಲಿ ಬಿದ್ದುಹೋಗಿದ್ದ ಪೌಳಿಗೋಡೆಯನ್ನು ದುರಸ್ತಿಮಾಡಿಸಿ, ಅದರ ಮೇಲೆ ಬುರುಜುಗಳನ್ನೂ ಹೊರಗೆ ಇನ್ನೊಂದು ಗೋಡೆಯನ್ನೂ ಕಟ್ಟಿಸಿದನು. ದಾವೀದ ನಗರದ ಮಿಲ್ಲೋ ಕೋಟೆಯನ್ನು ಭದ್ರಪಡಿಸಿದನು. ಅನೇಕ ಆಯುಧಗಳನ್ನೂ ಗುರಾಣಿಗಳನ್ನೂ ಮಾಡಿಸಿದನು.


ಅವರಲ್ಲಿನ ರಾಜನು ಹೆಗಲ ಮೇಲೆ ಹೊರೆಯನ್ನು ಹೊತ್ತುಕೊಂಡು ಕತ್ತಲಲ್ಲಿ ಹೊರಟುಹೋಗುವನು: ಅವನು ಗೋಡೆಯನ್ನು ತೋಡಿ, ಕಂಡಿಯ ಮೂಲಕ ಸಾಮಗ್ರಿಗಳನ್ನು ಆಚೆಗೆ ಸಾಗಿಸುವನು; ಅವನು ಮೋರೆಯನ್ನು ಮುಚ್ಚಿಕೊಳ್ಳುವನು, ಭೂಮಿಯು ಅವನ ಕಣ್ಣಿಗೆ ಕಾಣಿಸದು.


ಶತ್ರುಗಳಿಂದ ನೀವುಪರಾಜಯವನ್ನು ಹೊಂದುವಂತೆ ಸರ್ವೇಶ್ವರ ಮಾಡುವರು; ನೀವು ಒಂದೇ ದಾರಿಯಿಂದ ಅವರ ಮೇಲೆ ದಾಳಿಮಾಡಲು ಹೋಗಿ ಏಳು ದಾರಿ ಹಿಡಿದು ಓಡಿಹೋಗುವಿರಿ. ಜಗದ ರಾಜ್ಯಗಳೆಲ್ಲವೂ ಇದನ್ನು ಕಂಡು ಬೆರಗಾಗುವುವು.


“ನಿಮ್ಮಲ್ಲಿ ಯಾರ್ಯಾರು ಶತ್ರುದೇಶಗಳಲ್ಲಿ ಅಳಿದುಳಿದಿರುವಿರೋ ಅವರ ಅಂತರಾಳದಲ್ಲಿ ಭಯಭೀತಿಯನ್ನು ಹುಟ್ಟಿಸುವೆನು. ಗಾಳಿಗೆ ತೂರಾಡುವ ತರಗೆಲೆಯ ಸಪ್ಪಳವೂ ಅವರಲ್ಲಿ ದಿಗಿಲು ಹುಟ್ಟಿಸುವುದು.ಆ ಸಪ್ಪಳ ಕೇಳಿ, ಖಡ್ಗಕ್ಕೆ ಹೆದರಿ ಓಡಿಹೋಗುವವರಂತೆ ಫೇರಿಕೀಳುವರು. ಯಾರೂ ಬೆನ್ನಟ್ಟಿಬಾರದಿದ್ದರೂ ಅವರು ಎದ್ದುಬಿದ್ದು ಓಡುವರು.


ನಾನು ನಿಮ್ಮ ಮೇಲೆ ಕಡುಕೋಪಗೊಳ್ಳುವೆನು; ನೀವು ನಿಮ್ಮ ಶತ್ರುಗಳ ಮುಂದೆಯೇ ಸೋತುಬೀಳುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು. ಯಾರೂ ಬೆನ್ನಟ್ಟಿ ಬರದಿದ್ದರೂ ನೀವು ಹೆದರಿ ಓಡುವಿರಿ.


ಎರಡು ಗೋಡೆಗಳ ನಡುವೆ ಹಳೆಯ ಕೊಳದಿಂದ ಹರಿಯುವ ನೀರಿಗಾಗಿ ಜಲಾಶಯವನ್ನು ಕಟ್ಟಿದಿರಿ. ಆದರೆ ಪುರಾತನ ಕಾಲದಿಂದ ನಿಯೋಜಿಸಿ ಇದನ್ನೆಲ್ಲಾ ನಡೆಸಿದಾತನ ಕಡೆಗೆ ಗಮನ ಕೊಡದೆಹೋದಿರಿ.


ಈ ಜುದೇಯದ ಅರಸ ಚಿದ್ಕೀಯನು ಬಾಬಿಲೋನಿಯರ ಕೈಯಿಂದ ತಪ್ಪಿಸಿಕೊಳ್ಳಲಾಗದೆ ಅದರ ಅರಸನ ವಶವಾಗುವುದು ಖಂಡಿತ. ಅವನ ಮುಂದೆ ಸಾಕ್ಷಾತ್ತಾಗಿ ನಿಂತು ಮುಖಾಮುಖಿಯಾಗಿ ಮಾತಾಡುವನು.


ನೀನು ನಿನ್ನ ಸಾಮಗ್ರಿಗಳನ್ನು ವಲಸೆಯ ಸಾಮಗ್ರಿಗಳನ್ನೊ ಎಂಬಂತೆ ಹಗಲಿನಲ್ಲಿ ಅವರ ಕಣ್ಣೆದುರಿಗೆ ಮನೆಯೊಳಗಿಂದ ಆಚೆಗೆ ಹಾಕಿ ವಲಸೆ ಹೋಗುವವನಂತೆ ಸಾಯಂಕಾಲ ಅವರ ಸಮಕ್ಷಮ ಹೊರಟುಹೋಗು.


ನಿಮ್ಮ ಮುಖಂಡರೆಲ್ಲ ಒಟ್ಟಿಗೆ ಪಲಾಯನಗೈದರು; ಒಂದೇ ಒಂದು ಬಾಣವನ್ನು ಬಿಡುವುದಕ್ಕೆ ಮುಂಚೆ ಸೆರೆಹೋದರು. ದೂರಕ್ಕೆ ಪಲಾಯನಗೈದಿದ್ದರೂ ಅವರೆಲ್ಲರೂ ಶತ್ರುವಿನ ಕೈಗೆ ಸಿಕ್ಕಿಬಿದ್ದಿದ್ದಾರೆ.


ಅನಂತರ ನಾನು ಅರೀಯೇಲನ್ನು ಬಾಧಿಸುವೆನು. ಅಲ್ಲಿ ಅರಚಾಟ ಕಿರಿಚಾಟ ಇರುವುದು. ಆ ಪಟ್ಟಣವು ವಾಸ್ತವವಾಗಿ ನನಗೆ ಅರೀಯೇಲಾಗಿಯೇ ಪರಿಣಮಿಸುವುದು.


ಆ ಅರಸನು ಚಿದ್ಕೀಯನನ್ನು ಬಾಬಿಲೋನಿಗೆ ಕೊಂಡು ಒಯ್ಯುವನು. ನಾನು ಅವನಿಗೆ ದಯೆತೋರುವ ತನಕ ಅಲ್ಲೇ ಇರುವನು. ನೀವು ಬಾಬಿಲೋನಿಯರೊಡನೆ ಯುದ್ಧಮಾಡಿದರೂ ಜಯವಾಗದು. ಇದು ಸರ್ವೇಶ್ವರನ ನುಡಿ’ ಎಂದು ಹೇಳುತ್ತಿರುವೆ, ಏಕೆ?” ಎಂದು ಆಪಾದಿಸಿ ಸೆರೆಯಲ್ಲಿ ಇಟ್ಟಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು