Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 4:12 - ಕನ್ನಡ ಸತ್ಯವೇದವು C.L. Bible (BSI)

12 ಸರ್ವೇಶ್ವರನ ಆಜ್ಞೆಯ ಮೇರೆಗೆ ಬರುವ ಆ ಗಾಳಿ ಬಿರುಸಾಗಿ ಬಡಿಯುವುದು. ತಮ್ಮ ಜನರಿಗೆ ನ್ಯಾಯ ದಂಡನೆಯನ್ನು ಸ್ವಾಮಿ ಸರ್ವೇಶ್ವರನೇ ವಿಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇಂಥಾ ಕೆಲಸಗಳಿಗೆ ಅನುಕೂಲಿಸದಂತೆ ನನ್ನ ಅಪ್ಪಣೆಯ ಮೇರೆಗೆ ಬಿರುಸಾಗಿ ಹೊಡೆಯುತ್ತದೆ; ಈಗ ನನ್ನ ಜನರಿಗೆ ನ್ಯಾಯದಂಡನೆಗಳನ್ನು ವಿಧಿಸುವೆನು” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇಂಥಾ ಕೆಲಸಗಳಿಗೆ ಅನುಕೂಲಿಸದಂತೆ ನನ್ನ ಅಪ್ಪಣೆಯ ಮೇರೆಗೆ ಬಿರುಸಾಗಿ ಹೊಡೆಯುತ್ತದೆ; ಈಗ ನನ್ನ ಜನರಿಗೆ ನ್ಯಾಯದಂಡನೆಗಳನ್ನು ವಿಧಿಸುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಇದು ಅದಕ್ಕಿಂತಲೂ ಬಹು ಬಿರುಸಾಗಿ ಬೀಸುತ್ತದೆ. ಅದು ನನ್ನಿಂದ ಬರುತ್ತದೆ. ಈಗ ಯೆಹೂದದ ಜನರಿಗೆ ನ್ಯಾಯವಾದ ದಂಡನೆಗಳನ್ನು ವಿಧಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅದಕ್ಕಿಂತ ಬಿರುಸಾದ ಗಾಳಿ ಆ ಸ್ಥಳಗಳಿಂದ ನನ್ನ ಬಳಿಗೆ ಬರುವುದು. ಈಗಲೂ ನಾನು ಅವರಿಗೆ ವಿರೋಧವಾಗಿ ನ್ಯಾಯತೀರ್ಪುಗಳನ್ನು ಕೊಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 4:12
10 ತಿಳಿವುಗಳ ಹೋಲಿಕೆ  

ನನ್ನ ಸ್ವಜನರು ನನ್ನನ್ನೆ ತೊರೆದುಬಿಟ್ಟು, ಅನ್ಯದೇವತೆಗಳಿಗೆ ಬಲಿಯರ್ಪಿಸಿ, ತಮ್ಮ ಕೈಯಿಂದ ನಿರ್ಮಿಸಿದ ಮೂರ್ತಿಗಳಿಗೆ ಆರಾಧನೆ ಮಾಡುತ್ತಿದ್ದಾರೆ; ಇಂಥ ಅಧರ್ಮಕ್ಕೆಲ್ಲ ನಾನು ಅವರಿಗೆ ವಿಧಿಸುವ ದಂಡನೆಗಳನ್ನು ತಿಳಿಸುವೆನು, ಕೇಳು :


ಆದುದರಿಂದ ಜೆರುಸಲೇಮೇ, ಇಗೋ, ನಾನೇ ನಿನಗೆ ವಿರುದ್ಧವಾಗಿದ್ದೇನೆ. ಜನಾಂಗಗಳ ಕಣ್ಣೆದುರಿಗೆ ನಿನ್ನ ಜನರನ್ನು ದಂಡಿಸುವೆನು; ಇದು ಸರ್ವೇಶ್ವರನಾದ ನನ್ನ ನುಡಿ.


ಅಗ್ನಿಗಂಧಕಗಳನು ದುರುಳರ ಮೇಲೆ ಮಳೆಗರೆಯಲಿ I ಉರಿಗಾಳಿಯೆ ಅವರ ಪಾಲಿನ ಧೂಮಪಾನವಾಗಲಿ II


ಆ ದಿನ ಬಂದಾಗ ಈ ಜನರಿಗೂ ಜೆರುಸಲೇಮಿಗೂ ಈ ಮಾತುಗಳನ್ನು ತಿಳಿಸಲಾಗುವುದು; ಬಿಸಿಗಾಳಿ ಒಣಗಾಡಿನ ಗುಡ್ಡಗಳಿಂದ ಬೀಸಿ ದೇವಪ್ರಜೆಯೆಂಬ ಯುವತಿಯ ಮೇಲೆ ಬೀಸುವುದು. ಅದು ಹೊಟ್ಟನ್ನು ತೂರುವುದಕ್ಕೆ ಅಲ್ಲ, ಕಾಳನ್ನು ಶೋಧಿಸುವುದಕ್ಕೆ ಅಲ್ಲ.


ಮೇಘಗಳೋಪಾದಿಯಲ್ಲಿ ಶತ್ರು ಬರುತ್ತಿರುವುದನ್ನು ನೋಡು. ಅವನ ರಥಗಳು ಬಿರುಗಾಳಿಯಂತೆ ! ಅವನ ಕುದುರೆಗಳು ರಣಹದ್ದುಗಳಂತೆ ! ಅಯ್ಯೋ ನಮಗೆ ಕೇಡು, ಇನ್ನು ನಮ್ಮ ಗತಿ ಮುಗಿಯಿತು !


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ: “ಇಗೋ, ನಾನು ಬಾಬಿಲೋನಿನ ಮೇಲೂ ಅದರ ಲೇಬ್‍ಕಾಮೈ ಪ್ರಜೆಗಳ ಮೇಲೂ ವಿನಾಶಕಾರಿಯಾದ ಗಾಳಿಬೀಸುವಂತೆ ಮಾಡುವೆನು.


ಎಫ್ರಯಿಮ್ ಕಳೆಗಳ ನಡುವೆ ಸೊಂಪಾಗಿ ಬೆಳೆದ ಜೊಂಡಿನಂತಿದೆ. ಆದರೆ ಸರ್ವೇಶ್ವರ ಮರುಭೂಮಿಯಿಂದ ಮೂಡಣಗಾಳಿ ಬೀಸುವಂತೆ ಮಾಡುವರು. ಅದರ ಬುಗ್ಗೆ ಬತ್ತಿಹೋಗುವುದು. ಅದರ ಒರತೆ ಒಣಗಿಹೋಗುವುದು. ಅದರ ಸಿರಿಸಂಪತ್ತಿನ ನಿಧಿಯನ್ನು ಶತ್ರುಗಳು ಸೂರೆಮಾಡುವರು.


ಬಿರುಗಾಳಿಯಂತೆ ಬಂದು ಮಾಯವಾಗುವವರು ಅವರು; ಸ್ವಂತ ಶಕ್ತಿಯೇ ದೈವ ಎಂದೆಣಿಸುವಂಥ ಅಪರಾಧಿಗಳು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು