Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 4:24 - ಕನ್ನಡ ಸತ್ಯವೇದವು C.L. Bible (BSI)

24 ಬೆಟ್ಟಗಳನ್ನು ನೋಡಿದೆ, ಅವು ನಡುನಡುಗುತ್ತಿದ್ದವು. ಗುಡ್ಡ ದಿಣ್ಣೆಗಳೂ ಅಲ್ಲೋಲಕಲ್ಲೋಲವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಪರ್ವತಗಳನ್ನು ನೋಡಿದೆನು, ಆಹಾ, ನಡುಗುತ್ತಿದ್ದವು, ಎಲ್ಲಾ ಗುಡ್ಡಗಳೂ ಅಲ್ಲಕಲ್ಲೋಲವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಪರ್ವತಗಳನ್ನು ನೋಡಿದೆನು, ಆಹಾ, ನಡುಗುತ್ತಿದ್ದವು, ಎಲ್ಲಾ ಗುಡ್ಡಗಳೂ ಅಲ್ಲಕಲ್ಲೋಲವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನಾನು ಪರ್ವತಗಳ ಕಡೆಗೆ ನೋಡಿದೆ, ಅವುಗಳು ನಡುಗುತ್ತಿದ್ದವು. ಎಲ್ಲಾ ಬೆಟ್ಟಗಳು ಅದರುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಬೆಟ್ಟಗಳನ್ನು ನೋಡಿದೆನು, ಇಗೋ, ಅವು ನಡುಗಿದವು; ಗುಡ್ಡಗಳು ಹಗುರವಾಗಿ ಅದುರಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 4:24
19 ತಿಳಿವುಗಳ ಹೋಲಿಕೆ  

ಸಮುದ್ರದ ಮೀನುಗಳು, ಆಕಾಶದ ಪಕ್ಷಿಗಳು, ಭೂಜಂತುಗಳು, ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು ಹಾಗು ಜಗದ ಸಕಲ ಮಾನವರು ನನ್ನೆದುರಿಗೆ ನಡುಗುವರು; ಪರ್ವತಗಳು ಉರುಳಿಹೋಗುವುವು, ಝರಿಗಳು ಕವಚಿಕೊಳ್ಳುವುವು, ಎಲ್ಲ ಗೋಡೆಗಳು ನೆಲಸಮವಾಗುವುವು.


ಹೇ ಸರ್ವೇಶ್ವರಾ, ನೀವಾದರೋ ಸತ್ಯದೇವರು, ಜೀವಸ್ವರೂಪ ದೇವರು, ಶಾಶ್ವತ ರಾಜರು ನಿಮ್ಮ ಕೋಪಕ್ಕೆ ನಡುಗುತ್ತದೆ ಭೂಲೋಕ ನಿಮ್ಮ ರೋಷವನ್ನು ತಾಳಲಾರದು ಜನಾಂಗ.


ಎಂದೇ ತಮ್ಮ ಜನರ ವಿರುದ್ಧ ಸ್ವಾಮಿಯ ಕೋಪ ಭುಗಿಲೆದ್ದಿದೆ. ಹೊಡೆಯುವುದಕ್ಕೆ ಅವರ ಕೈ ಮೇಲಕ್ಕೆತ್ತಿದೆ. ಬೆಟ್ಟಗುಡ್ಡಗಳು ನಡುಗುವುವು. ಸತ್ತ ಹೆಣಗಳು ಕಸದಂತೆ ಬೀದಿಯಲ್ಲಿ ಬಿದ್ದಿರುವುವು. ಇಷ್ಟೆಲ್ಲ ನಡೆದರೂ ಸ್ವಾಮಿಯ ಕೋಪ ತಣಿಯದು, ಎತ್ತಿದ ಕೈ ಇಳಿಯದು.


ಬೆಂಕಿಗೆ ಕರಗುವ ಮೇಣದಂತೆ ಇಳಿಜಾರು ಪ್ರದೇಶದ ನೀರು ನೆಲವನ್ನು ಕೊರೆವಂತೆ ಕರಗಿಹೋಗುವುವು ಆತನ ಪಾದದಡಿ ಪರ್ವತಗಳು; ಸೀಳಿಹೋಗುವುವು ಕೊಲ್ಲಿಗಳು.


ಇಳೆಯನು ಬೆಳಗಿಸುತ್ತದೆ ಆತನ ಮಿಂಚು I ನಡುಗುತ್ತದೆ ಭೂಮಿ ಅದಕೆ ಬೆಚ್ಚುಬಿದ್ದು II


ಆಗ ಕಂಪಿಸಿತು ಭೂಮಿ ಗಡಗಡನೆ I ಕದಲಿದವು ಬೆಟ್ಟದ ಬುಡಗಳು ಮಿಲಮಿಲನೆ I ಏಕೆನೆ, ಸಿಟ್ಟೇರಿತ್ತು ಆತನಿಗೆ II


ಆಗ ಇನ್ನೊಮ್ಮೆ, “ನೀನು ಹೊರಗೆ ಬಂದು ಬೆಟ್ಟದ ಮೇಲೆ ಸರ್ವೇಶ್ವರನ ಮುಂದೆ ನಿಲ್ಲು,” ಎಂದು ವಾಣಿಯಾಯಿತು; ಆಹಾ! ಸರ್ವೇಶ್ವರ ಅಲ್ಲೇ ಹಾದುಹೋದರು, ಅವರ ಮುಂದೆ ಪರ್ವತಗಳನ್ನು ಭೇದಿಸಿ ಬಂಡೆಗಳನ್ನು ಪುಡಿಪುಡಿಮಾಡುವಂಥ ದೊಡ್ಡ ಬಿರುಗಾಳಿ ಬೀಸಿತು; ಸರ್ವೇಶ್ವರ ಅದರಲ್ಲಿ ಇರಲಿಲ್ಲ. ತರುವಾಯ ಭೂಕಂಪವುಂಟಾಯಿತು; ಅದರಲ್ಲೂ ಅವರಿರಲಿಲ್ಲ.


ನಿನ್ನ ನೋಡಿ ತಳಮಳಗೊಳ್ಳುತ್ತವೆ ಬೆಟ್ಟಗಳು ಹರಿಯುತ್ತವೆ ಆಗಸದಿಂದ ಪ್ರವಾಹಗಳು ಕೈಯೆತ್ತಿ ಭೋರ್ಗರೆಯುತ್ತವೆ ಸಾಗರಗಳು.


ಕಂಪಿಸುತ್ತದೆ ಭೂಮಿ ಆತ ನಿಂತಾಗ ಅದರುತ್ತದೆ ಲೋಕ ಆತ ದಿಟ್ಟಿಸಿದಾಗ ಸೀಳಿಹೋಗುತ್ತವೆ ಪುರಾತನಪರ್ವತಗಳು ಕುಸಿದುಬೀಳುತ್ತವೆ ಸನಾತನ ಗಿರಿಗಳು ಅನಾದಿಯಿಂದ ಹಾಗೆಯೆ ಆತನ ಆಗಮನಗಳು.


ವೈರಿ ಕುದುರೆಗಳ ಬುಸುಗುಟ್ಟುವಿಕೆ ಏಕೆ ಕೇಳಿಬರುತ್ತಿದೆ ದಾನಿನಿಂದ? ನಾಡನ್ನೆ ಕಂಪಿಸುತ್ತಿದೆ ಅವುಗಳ ಕೆನೆತದ ನಾದ. ಶತ್ರುಗಳು ಬಂದೇಬಿಟ್ಟರು ! ನಾಡನ್ನೂ ಅದರಲ್ಲಿ ಇರುವುದೆಲ್ಲವನ್ನೂ, ನಗರವನ್ನೂ ಅದರ ನಿವಾಸಿಗಳನ್ನೂ ನುಂಗಿಯೇ ಬಿಟ್ಟರು !”


ಮೊಳಗಿತು ನಿನ್ನ ಗುಡುಗು ಬಿರುಗಾಳಿಯಲಿ I ಹೊಳೆಯಿತು ನಿನ್ನ ಮಿಂಚು ಇಡೀ ಲೋಕದಲಿ I ಕಂಪಿಸಿತೀ ಭೂಮಂಡಲ ನಡುನಡುಗಿ II


ಆಕಾಶವು ಸುರುಳಿಯಂತೆ ಸುತ್ತಿಕೊಂಡು ಕಣ್ಮರೆಯಾಯಿತು. ಎಲ್ಲಾ ಪರ್ವತಗಳೂ ದ್ವೀಪಗಳೂ ತಮ್ಮ ತಮ್ಮ ಸ್ಥಳಗಳಿಂದ ಚಲಿಸಿದವು.


ಸೀನಾಯಿ ಬೆಟ್ಟವೆಲ್ಲಾ ಹೊಗೆಯಿಂದ ಆವರಿಸಿಕೊಂಡಿತ್ತು. ಏಕೆಂದರೆ ಸರ್ವೇಶ್ವರ ಸ್ವಾಮಿ ಬೆಂಕಿಯ ರೂಪದಲ್ಲಿ ಆ ಬೆಟ್ಟದ ಮೇಲೆ ಇಳಿದುಬಂದಿದ್ದರು. ಆ ಹೊಗೆ ಆವಿಗೆಯ ಹೊಗೆಯಂತೆ ಏರಿತು. ಅದೂ ಅಲ್ಲದೆ ಬೆಟ್ಟವೆಲ್ಲ ಬಹಳವಾಗಿ ಕಂಪಿಸಿತು.


ನಾನು : ಪರ್ವತಗಳಿಗಾಗಿ ಅತ್ತು ಗೋಳಾಡುವೆನು ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು ಅವು ಸುಟ್ಟುಹೋಗಿವೆ, ಯಾರೂ ಅಲ್ಲಿ ಹಾದುಹೋಗರು. ದನಕರುಗಳ ಸದ್ದೂ ಕಿವಿಗೆ ಬೀಳದು ತೊಲಗಿಹೋಗಿವೆ ಮೃಗಪಕ್ಷಿಗಳೂ !


ಸೇನಾಧೀಶ್ವರ ಸರ್ವೇಶ್ವರನು ಕೋಪೋದ್ರೇಕದಿಂದ ರೋಷಾವೇಶದಿಂದ ಕೆರಳುವ ದಿನದಂದು ಆಕಾಶಮಂಡಲ ನಡುಗುವುದು, ಭೂಮಂಡಲ ಸ್ಥಳಪಲ್ಲಟಗೊಳ್ಳುವುದು.


ಓಲಾಡುವುದು ಭೂಮಿ ಅಮಲೇರಿದವನಂತೆ, ತೂಗಾಡುವುದು ಬಿರುಗಾಳಿಗೆ ಸಿಕ್ಕಿದ ಗುಡಿಸಲಂತೆ, ಕುಸಿದು ಬೀಳುವುದು ದ್ರೋಹದ ಭಾರಕೆ, ಮರಳಿ ಏಳದಂತೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು