Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 4:26 - ಕನ್ನಡ ಸತ್ಯವೇದವು C.L. Bible (BSI)

26 ಇನ್ನೂ ನೋಡಿದೆ - ಸೊಂಪಾದ ನಾಡು ಈಗ ಸುಡುಗಾಡು ಅಕಟಾ ! ಸರ್ವೇಶ್ವರನ ಮುಂದೆ, ಅವರ ಕೋಪಾಗ್ನಿಯ ಮುಂದೆ ಊರುಗಳೆಲ್ಲವು ಪಾಳುಬಿದ್ದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನಾನು ನೋಡಲಾಗಿ ಫಲವತ್ತಾದ ಭೂಮಿಯು ಕಾಡಾಗಿತ್ತು, ಅಯ್ಯೋ! ಅಲ್ಲಿನ ಊರುಗಳೆಲ್ಲಾ ರೋಷಾಗ್ನಿಯುಕ್ತನಾದ ಯೆಹೋವನ ಪ್ರತ್ಯಕ್ಷತೆಯಿಂದ ಬಿದ್ದುಹೋಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ನಾನು ನೋಡಲಾಗಿ ಫಲವತ್ತಾದ ಭೂವಿುಯು ಕಾಡಾಗಿತ್ತು. ಅಕಟಾ! ಅಲ್ಲಿನ ಊರುಗಳೆಲ್ಲಾ ರೋಷಾಗ್ನಿಯುಕ್ತನಾದ ಯೆಹೋವನ ಪ್ರತ್ಯಕ್ಷತೆಯಿಂದ ಬಿದ್ದು ಹೋಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನಾನು ನೋಡಿದಾಗ ಫಲವತ್ತಾದ ಭೂಮಿಯು ಮರಳುಗಾಡಾಗಿತ್ತು. ಆ ಪ್ರದೇಶದ ಎಲ್ಲಾ ನಗರಗಳು ಹಾಳಾಗಿ ಹೋಗಿದ್ದವು. ಯೆಹೋವನು ತನ್ನ ಭಯಂಕರವಾದ ಕೋಪದಿಂದ ಇದನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನಾನು ನೋಡಿದೆನು, ಇಗೋ, ಫಲವುಳ್ಳ ಸ್ಥಳವು ಮರುಭೂಮಿಯಾಯಿತು; ಅದರ ಪಟ್ಟಣಗಳೆಲ್ಲಾ ಯೆಹೋವ ದೇವರ ಮುಂದೆಯೂ, ಅವರ ಉಗ್ರಕೋಪದ ಉರಿಯ ಮುಂದೆಯೂ ಬಿದ್ದು ಹೋಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 4:26
15 ತಿಳಿವುಗಳ ಹೋಲಿಕೆ  

ಒಣನೆಲವಾಗಿಸಿದನಾತ ಬುಗ್ಗೆಗಳನು I ಉಪ್ಪುನೆಲವಾಗಿಸಿದ ಫಲಭೂಮಿಯನು II


ಆದುದರಿಂದ ನಿಮ್ಮ ದೆಸೆಯಿಂದಲೇ ಸಿಯೋನ್ ಪಟ್ಟಣವನ್ನು ಹೊಲದಂತೆ ಉಳಲಾಗುವುದು. ಜೆರುಸಲೇಮ್ ನಗರ ಹಾಳುದಿಬ್ಬವಾಗುವುದು. ದೇವಾಲಯದ ಪರ್ವತ ಕಾಡುಗುಡ್ಡದಂತಾಗುವುದು.


ಇನ್ನೆಷ್ಟರವರೆಗೆ ನಾಡು ದುಃಖಿಸುತ್ತಿರಬೇಕು? ಅದರ ಎಲ್ಲೆಎಲ್ಲೆಗಳಲ್ಲಿ ಹುಲ್ಲು ಸೊಪ್ಪು ಒಣಗಿರಬೇಕು? ನಾಡಜನರ ನೀಚತನದ ನಿಮಿತ್ತ ಮಾಯವಾಗಿವೆ ಪ್ರಾಣಪಕ್ಷಿಗಳು ಕೂಡ. ‘ನಮ್ಮ ನಡತೆಯನ್ನು ಗಮನಿಸರು ದೇವರು’ ಎಂದುಕೊಳ್ಳುತ್ತಿರುವರು ಆ ಜನರು.


ನೀನಾದರೋ ದೇವಾ, ಮಹಾಭಯಂಕರನು I ಸಿಟ್ಟೇರಿದ ನಿನ್ನ ಮುಂದೆ ಯಾವನು ನಿಂತಾನು? II


ನಾನು : ಪರ್ವತಗಳಿಗಾಗಿ ಅತ್ತು ಗೋಳಾಡುವೆನು ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು ಅವು ಸುಟ್ಟುಹೋಗಿವೆ, ಯಾರೂ ಅಲ್ಲಿ ಹಾದುಹೋಗರು. ದನಕರುಗಳ ಸದ್ದೂ ಕಿವಿಗೆ ಬೀಳದು ತೊಲಗಿಹೋಗಿವೆ ಮೃಗಪಕ್ಷಿಗಳೂ !


ಜನರು ಗೋದಿಯನ್ನು ಬಿತ್ತಿದರು ಆದರೆ ಮುಳ್ಳುಗಿಡವನ್ನು ಕೊಯ್ದರು ! ಕ್ಷೇಮ ಕೆಡುವಷ್ಟು ಪ್ರಯಾಸಪಟ್ಟರು ಆದರೆ ಯಾವ ಲಾಭವೂ ಗಿಟ್ಟದೆಹೋಯಿತು. ತಮ್ಮ ಬೆಳೆಯ ವಿಷಯವಾಗಿ ಹೇಸಬೇಕಾಯಿತು ನನ್ನ ಕೋಪಾಗ್ನಿಯೆ ಇದಕ್ಕೆ ಕಾರಣವಾಯಿತು.”


ನಿಮ್ಮ ಪಟ್ಟಣಗಳನ್ನು ಹಾಳುಮಾಡುವೆನು; ನಿಮ್ಮ ದೇವಸ್ಥಾನಗಳನ್ನು ನೆಲಸಮ ಮಾಡುವೆನು; ನೀವು ಸಮರ್ಪಿಸುವ ಸುಗಂಧದ್ರವ್ಯಗಳ ಸುವಾಸನೆಯನ್ನು ನಾನು ಮೂಸಿಯೂ ನೋಡುವುದಿಲ್ಲ.


ಜುದೇಯದ ಪಟ್ಟಣಗಳಲ್ಲಿಯೂ ಜೆರುಸಲೇಮಿನ ಬೀದಿಗಳಲ್ಲಿಯೂ ಹರ್ಷಾಡಂಬರಗಳು ಕೇಳಿಬರುವುದಿಲ್ಲ. ವಧೂವರರ ಸೊಲ್ಲನ್ನು ನಿಲ್ಲಿಸಿಬಿಡುವೆನು, ನಾಡಿಗೆ ನಾಡೇ ಹಾಳಾಗುವುದು. ಇದು ಸರ್ವೇಶ್ವರನಾದ ನನ್ನ ನುಡಿ.”


ಈ ನಾಡೆಲ್ಲ ಹಾಳಾಗಿ ಇದನ್ನು ನೋಡುವವರು ನಿಬ್ಬೆರಗಾಗುವರು. ಇದರ ಜನರು ಎಪ್ಪತ್ತು ವರ್ಷ ಕಾಲ ಬಾಬಿಲೋನಿನ ಅರಸನಿಗೆ ಗುಲಾಮರಾಗಿ ಇರುವರು.


ಸ್ವಾಮಿ ತಿರಸ್ಕರಿಸಿಬಿಟ್ಟಿದ್ದಾನೆ ತನ್ನ ಬಲಿಪೀಠವನ್ನೇ ಅಸಹ್ಯಗೊಂಡು ತೊರೆದುಬಿಟ್ಟಿದ್ದಾನೆ ತನ್ನ ಪವಿತ್ರಸ್ಥಾನವನ್ನೇ ಸಿಯೋನ್ ಅರಮನೆಯ ಗೋಡೆಗಳನ್ನು ಕೆಡವಲು ಬಿಟ್ಟಿದ್ದಾನೆ ಹಗೆಗಳನ್ನೇ. ಹಬ್ಬಹರಿದಿನಗಳ ಜಯಘೋಷವೋ ಎಂಬಂತೆ ಘೋಷಣೆ ಹಾಕುತ್ತಿದ್ದಾರಲ್ಲಾ ಶತ್ರುಗಳು ಸರ್ವೇಶ್ವರನ ಮಂದಿರದಲ್ಲೆ !


ಸ್ವಾಮಿಯ ಆ ರೌದ್ರದಿನದಂದು, ಅವರ ಬೆಳ್ಳಿಯಾಗಲೀ ಬಂಗಾರವಾಗಲೀ ಅವರನ್ನು ರಕ್ಷಿಸಲಾರದು. ಸ್ವಾಮಿಯ ರೋಷಾಗ್ನಿ ಧರೆಯನ್ನೆಲ್ಲಾ ದಹಿಸಿಬಿಡುವುದು; ಹೌದು, ಭೂನಿವಾಸಿಗಳೆಲ್ಲರನ್ನೂ ತಟ್ಟನೆ ಕೊನೆಗಾಣಿಸುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು