Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 4:28 - ಕನ್ನಡ ಸತ್ಯವೇದವು C.L. Bible (BSI)

28 ಲೋಕ ದುಃಖಿಸುವುದು ಆಕಾಶ ಕಪ್ಪಗಾಗುವುದು ಇದು ಸರ್ವೇಶ್ವರ ಆಡಿದ ಮಾತು. ಇದನ್ನು ಬದಲಾಯಿಸುವಂತಿಲ್ಲ. ಇದು ಅವರ ತೀರ್ಮಾನ; ಇದನ್ನು ರದ್ದುಗೊಳಿಸುವಂತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಇದಕ್ಕಾಗಿ ಭೂಲೋಕವು ಪ್ರಲಾಪಿಸುವುದು, ಮೇಲೆ ಆಕಾಶವು ಕಪ್ಪಾಗುವುದು; ನಾನು ನುಡಿದಿದ್ದೇನೆ, ಪಶ್ಚಾತ್ತಾಪಪಡೆನು; ಇದರಿಂದ, ಹಿಂದೆಗೆಯನು” ಎಂದು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಇದಕ್ಕಾಗಿ ಭೂಲೋಕವು ಪ್ರಲಾಪಿಸುವದು, ಮೇಲೆ ಆಕಾಶವು ಕಪ್ಪಾಗುವದು; ನಾನು ನುಡಿದಿದ್ದೇನೆ, ಪಶ್ಚಾತ್ತಾಪಪಡೆನು; ಉದ್ದೇಶಿಸಿದ್ದೇನೆ, ಹಿಂದೆಗೆಯೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಈ ಪ್ರದೇಶದ ಜನರು ಸತ್ತವರಿಗಾಗಿ ಅಳುವರು. ಆಕಾಶವು ಕಪ್ಪಾಗುವುದು. ನಾನು ಹೇಳಿದ್ದೇನೆ, ಅದು ಬದಲಾಗುವುದಿಲ್ಲ. ನಾನು ಒಂದು ನಿರ್ಣಯ ತೆಗೆದುಕೊಂಡಿದ್ದೇನೆ, ನಾನು ನನ್ನ ಮನಸ್ಸನ್ನು ಬದಲಾಯಿಸುವದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಇದರ ನಿಮಿತ್ತ ಭೂಮಿಯು ದುಃಖಿಸುವುದು. ಮೇಲಿರುವ ಆಕಾಶವು ಕಪ್ಪಾಗುವುದು. ಏಕೆಂದರೆ ನಾನು ಅದನ್ನು ಹೇಳಿದ್ದರಿಂದ ನಿಶ್ಚಯಿಸಿದ್ದೇನೆ. ಮಾನಸಾಂತರ ಪಡುವುದಿಲ್ಲ. ಇಲ್ಲವೆ ಅದರಿಂದ ಹಿಂದಿರುಗುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 4:28
34 ತಿಳಿವುಗಳ ಹೋಲಿಕೆ  

ನರಮಾನವರಂತೆ ದೇವರು ಎರಡು ಮಾತಿನವರಲ್ಲ ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಆತ ನುಡಿದಂತೆ ನಡೆಯದಿರುತ್ತಾನೋ?


ಇದರಿಂದ ನಾಡು ಶೋಕಸಾಗರದಲ್ಲಿ ಮುಳುಗಿದೆ. ಅದರ ನಿವಾಸಿಗಳೆಲ್ಲ ನರಳುತ್ತಿದ್ದಾರೆ. ನೆಲದ ಮೇಲಿನ ಜಂತುಗಳು, ಆಕಾಶದ ಪಕ್ಷಿಗಳು ಬಳಲುತ್ತಿವೆ. ಜಲಜಂತುಗಳು ಸಹ ನಶಿಸಿಹೋಗುತ್ತಿವೆ.


ಇನ್ನೆಷ್ಟರವರೆಗೆ ನಾಡು ದುಃಖಿಸುತ್ತಿರಬೇಕು? ಅದರ ಎಲ್ಲೆಎಲ್ಲೆಗಳಲ್ಲಿ ಹುಲ್ಲು ಸೊಪ್ಪು ಒಣಗಿರಬೇಕು? ನಾಡಜನರ ನೀಚತನದ ನಿಮಿತ್ತ ಮಾಯವಾಗಿವೆ ಪ್ರಾಣಪಕ್ಷಿಗಳು ಕೂಡ. ‘ನಮ್ಮ ನಡತೆಯನ್ನು ಗಮನಿಸರು ದೇವರು’ ಎಂದುಕೊಳ್ಳುತ್ತಿರುವರು ಆ ಜನರು.


ಹೊದಿಸುವೆನು ಆಕಾಶಕ್ಕೆ ಅಂಧಕಾರವನು ಹಾಕಿಸುವೆನು ಅದಕ್ಕೆ ಗೋಣಿತಟ್ಟಿನ ಮುಸುಕನು.


ಗುರುಗುಟ್ಟುತಿಹರು ಯೆಹೂದ್ಯರ ಮೇಲೆ ಭೋರ್ಗರೆಯುವ ಸಮುದ್ರದಂತೆ; ನಾಡಿನೆಲ್ಲೆಡೆ ಕವಿದಿಹುದು ಗಾಡಾಂಧಕಾರ; ತಾಂಡವವಾಡುತಿಹುದು ನೋಡಿದೆಡೆ ದುಃಖದುಗುಡ; ಮೋಡ ಕವಿದು ಇರುಳಾಗಿಹುದು ಹಗಲೊಳು ಕೂಡ !


ಆ ಯಜ್ಞದ ಕುರಿಮರಿ ಆರನೆಯ ಮುದ್ರೆಯನ್ನು ಒಡೆದಾಗ, ದೊಡ್ಡ ಭೂಕಂಪವಾಯಿತು. ಸೂರ್ಯನು ಕರಿಕಂಬಳಿಯಂತೆ ಕಪ್ಪಾದನು. ಪೂರ್ಣಚಂದ್ರನು ರಕ್ತದಂತೆ ಕೆಂಪಾದನು.


ಇವರಾದರೋ “ಎಂದೆಂದಿಗೂ ನೀ ಯಾಜಕನೆಂದು ಸರ್ವೇಶ್ವರನೇ ಪ್ರಮಾಣಿಸಿಹರು ಮನಸ್ಸನ್ನೆಂದೂ ಬದಲಾಯಿಸರವರು,” ಎಂಬ ಶಪಥ ಪಡೆದಿರುವ ಯಾಜಕರು.


ದೈವಯೋಜನೆಯಂತೆಯೇ ಸಕಲವೂ ಸಂಭವಿಸುತ್ತದೆ. ದೇವರು ಆದಿಯಲ್ಲೇ ಸಂಕಲ್ಪಿಸಿದ್ದಂತೆ ತಮ್ಮ ಚಿತ್ತಕ್ಕನುಗುಣವಾಗಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು.


ದೇವರು ಸಮಗ್ರ ಜ್ಞಾನ-ವಿವೇಕಗಳಿಂದ ತಮ್ಮ ರಹಸ್ಯ ಯೋಜನೆಯನ್ನು ನಮಗೆ ತಿಳಿಯಪಡಿಸಿದ್ದಾರೆ. ಮೊದಲೇ ನಿರ್ಧರಿಸಿದ್ದಂತೆ ಅದನ್ನು ಯೇಸುಕ್ರಿಸ್ತರ ಮೂಲಕ ಪರಿಪೂರ್ಣಗೊಳಿಸಬೇಕೆಂಬುದು ಅವರ ಸಂಕಲ್ಪವಾಗಿತ್ತು.


ಆಗ ಸುಮಾರು ನಡುಮಧ್ಯಾಹ್ನ. ಆಗಿನಿಂದ ಮೂರು ಗಂಟೆಯವರೆಗೂ ಸೂರ್ಯನು ಕಾಂತಿಹೀನನಾದನು; ನಾಡಿನಲ್ಲೆಲ್ಲಾ ಕತ್ತಲೆ ಕವಿಯಿತು.


ಆಗ ನಡುಮಧ್ಯಾಹ್ನ. ಆ ಹೊತ್ತಿನಿಂದ ಮೂರು ಗಂಟೆಯವರೆಗೂ ನಾಡಿನಲ್ಲೆಲ್ಲಾ ಕತ್ತಲೆ ಕವಿಯಿತು.


ಆಗ ನಡುಮಧ್ಯಾಹ್ನ. ಆಗಿನಿಂದ ಮೂರು ಗಂಟೆಯವರೆಗೂ ನಾಡಿನಲ್ಲೆಲ್ಲಾ ಕತ್ತಲೆ ಕವಿಯಿತು.


ಹೊಲಗದ್ದೆಗಳು ಹಾಳಾಗಿವೆ; ಧರೆ ದುಃಖಿಸುತ್ತಿದೆ; ಬಿತ್ತಿದ ದವಸಧಾನ್ಯ ಮಣ್ಣುಪಾಲಾಗಿದೆ; ದ್ರಾಕ್ಷಿಹಣ್ಣು ಒಣಗಿಹೋಗಿದೆ; ಎಣ್ಣೆ ಮರಗಳು ಬಾಡಿಹೋಗಿವೆ.


ಅದನ್ನು ಪಾತಾಳದ ಹಿಡಿತದಿಂದ ನಾನು ಬಿಡಿಸಲಾರೆ. ಮರಣದ ಬಾಧೆಯಿಂದ ಅವರನ್ನು ರಕ್ಷಿಸಲಾರೆ. ‘ಮರಣವೇ, ನಿನ್ನ ಮಾರಕ ವ್ಯಾಧಿಗಳಿಂದ ಅವರನ್ನು ಬಾಧಿಸು. ಪಾತಾಳವೇ, ಅವರನ್ನು ಕಬಳಿಸಿ ನಾಶಗೊಳಿಸು. ಕರುಣೆ ನನ್ನಿಂದ ದೂರವಾಗಿದೆ.


ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ; ಇದು ನಡೆದೇ ತೀರುವುದು, ನಾನು ನೆರವೇರಿಸುವೆನು; ಹಿಂತೆಗೆಯೆನು, ಕ್ಷಮಿಸೆನು, ಕರುಣಿಸೆನು; ನಿನ್ನ ದುರ್ಮಾರ್ಗ ದುಷ್ಕೃತ್ಯಗಳಿಗೆ ಸರಿಯಾಗಿ ನಿನಗೆ ನ್ಯಾಯತೀರ್ಪು ಆಗುವುದು; ಇದು ಸರ್ವೇಶ್ವರನಾದ ದೇವರ ನುಡಿ.”


ಆತನ ಮನದಾಲೋಚನೆಗಳನ್ನು ನಡೆಸಿ ನೆರವೇರಿಸುವ ತನಕ ಹಿಂದಿರುಗದು ಆತನ ರೋಷವೆಂಬಾ ಬಿರುಗಾಳಿ, ಇದನ್ನು ನೀವು ಗ್ರಹಿಸುವಿರಿ ಕಟ್ಟಕಡೆಯ ದಿನಗಳಲ್ಲಿ.


ಸರ್ವೇಶ್ವರ ತಮ್ಮ ಅಂತರಾಳದ ಸಂಕಲ್ಪಗಳನ್ನು ನಡೆಸಿ ನೆರವೇರಿಸುವ ತನಕ ಅವರ ಆ ಕೋಪವು ಹಿಂದಿರುಗದು. ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಸ್ಪಷ್ಟವಾಗಿ ಗ್ರಹಿಸಿಕೊಳ್ಳುವಿರಿ.


ದೈವಶಾಪದ ನಿಮಿತ್ತ ದೇಶ ದುಃಖಿಸುತ್ತಿದೆ ವ್ಯಭಿಚಾರದಿಂದ ನಾಡು ತುಂಬಿತುಳುಕುತ್ತಿದೆ ಅಡವಿಯ ಹುಲ್ಲುಗಾವಲು ಬಾಡಿದೆ. ನಾಡಿನ ಜನರು ಹಿಡಿದೋಡುತ್ತಿರುವ ಮಾರ್ಗ ದುರ್ಮಾರ್ಗ ಅನ್ಯಾಯ ಸಾಧನೆಗಾಗಿಯೆ ಅವರ ಅಧಿಕಾರ ಪ್ರಯೋಗ.


“ಜುದೇಯ ನಾಡು ದುಃಖಿಸುತ್ತಿದೆ ಅದರ ಪುರದ್ವಾರಗಳು ಬಹಳ ಕಪ್ಪಾಗಿವೆ. ಜೆರುಸಲೇಮಿನವರ ಗೋಳಾಟ ಕೇಳಿಸುತ್ತಿದೆ.


ಹೌದು, ಹಾಳುಮಾಡಿದ್ದಾರೆ ಪಾಳುಬಿದ್ದು ಅದು ನನಗೆ ಗೋಳಿಡುತ್ತಿದೆ ಯಾವನೂ ಗಮನಕ್ಕೆ ತಂದುಕೊಳ್ಳದೆ ನಾಡೆಲ್ಲ ಬಿಕೋ ಎನ್ನುತ್ತಿದೆ.


“ಯೆರೆಮೀಯನೇ, ನೀನಂತು ಈ ಜನರಿಗಾಗಿ ಬೇಡಿಕೊಳ್ಳಬೇಡ. ಇವರ ಪರವಾಗಿ ಮೊರೆ ಇಡಬೇಡ. ಪ್ರಾರ್ಥಿಸಲೂ ಬೇಡ, ನನ್ನ ಬಳಿ ವಿಜ್ಞಾಪಿಸಲೂ ಬೇಡ. ನಾನು ಅದನ್ನು ಕೇಳಲಾರೆ.


ಗಗನದ ನಕ್ಷತ್ರವ್ಯೂಹವು ಕ್ಷಯಿಸುವುದು, ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿಯ ಎಲೆಗಳು ಒಣಗಿಬೀಳುವಂತೆ, ಅಂಜೂರದ ತರಗುಗಳು ಉದುರುವಂತೆ ತಾರಾಮಂಡಲವೆಲ್ಲ ಕಳಚಿಬೀಳುವುದು.


ಸೊರಗಿಹೋಗುವುದು ಲೋಕ ದುಃಖಿಸುತ್ತಾ ಕುಗ್ಗಿಹೋಗುವುದು ಬುವಿ ಗೋಳಾಡುತ್ತಾ ಕಂಗೆಟ್ಟುಹೋಗುವನು ಪ್ರತಿಯೊಬ್ಬ ವಿಶ್ವವಿಖ್ಯಾತ.


ಇಸ್ರಯೇಲರ ನಿತ್ಯಾಧಾರವಾದ ಅವರು ಸುಳ್ಳಾಡುವವರಲ್ಲ; ಮಾತನ್ನು ಹಿಂತೆಗೆದುಕೊಳ್ಳುವವರಲ್ಲ; ಏಕೆಂದರೆ ಅವರು ಮನಸ್ಸು ಬದಲಾಯಿಸುವಂಥ ಮನುಷ್ಯರಲ್ಲ,” ಎಂದು ಹೇಳಿದನು.


ಬಾಬಿಲೋನಿನ ಕೋಟೆಗೆ ಎದುರಾಗಿ ಧ್ವಜವೆತ್ತಿರಿ. ಪಹರೆಯನ್ನು ಬಲಪಡಿಸಿರಿ. ಕಾವಲುಗಾರರನ್ನು ನಿಲ್ಲಿಸಿರಿ. ಹೊಂಚುಗಾರರನ್ನು ಗೊತ್ತುಮಾಡಿರಿ!’ ಸರ್ವೇಶ್ವರ ಸ್ವಾಮಿ ಬಾಬಿಲೋನಿನವರ ವಿಷಯದಲ್ಲಿ ನುಡಿದಿದ್ದನ್ನು ನೆನಪಿಗೆ ತಂದುಕೊಂಡು ನೆರವೇರಿಸಿದ್ದಾರೆ.


ಸರ್ವೇಶ್ವರ ಸಿದ್ಧಿಗೆ ತಂದಿದ್ದಾನೆ ತನ್ನ ಸಂಕಲ್ಪವನ್ನು ಈಡೇರಿಸಿದ್ದಾನೆ ಪುರಾತನ ಕಾಲದಲ್ಲಿ ತಾನು ನುಡಿದುದನ್ನು. ನಿನ್ನನ್ನು ಧ್ವಂಸಮಾಡಿದ್ದಾನೆ ದಯೆದಾಕ್ಷಿಣ್ಯವಿಲ್ಲದೆ. ಆನಂದ ತಂದಿದ್ದಾನೆ ವೈರಿಗಳಿಗೆ ಕೋಡುಮೂಡಿಸಿದ್ದಾನೆ ವಿರೋಧಿಗಳಿಗೆ !


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ನಿಮ್ಮ ಪೂರ್ವಜರ ನಿಮಿತ್ತ ನಾನು ಕೋಪಗೊಂಡಾಗ, ನಿಮಗೆ ಕೇಡುಮಾಡಬೇಕೆಂದು ನಿಷ್ಕರುಣಿಯಾಗಿ ಸಂಕಲ್ಪಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು