Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 4:29 - ಕನ್ನಡ ಸತ್ಯವೇದವು C.L. Bible (BSI)

29 ರಾಹುತರ ಹಾಗೂ ಬಿಲ್ಲುಗಾರರ ಅಬ್ಬರಕ್ಕೆ ಓಡುತ್ತಿರುವವರು ಪಟ್ಟಣಿಗರೆಲ್ಲರು ಇತ್ತ ಪೊದೆಗಳಲ್ಲಿ ಅವಿತುಕೊಳ್ಳುತ್ತಾರೆ. ಅತ್ತ ಬಂಡೆಗಳನ್ನು ಹತ್ತುತ್ತಿದ್ದಾರೆ. ಪ್ರತಿಯೊಂದು ಪಟ್ಟಣ ಪಾಳುಬಿದ್ದ ಬೀಡು ಅದರಲ್ಲಿ ಮತ್ತೆ ವಾಸಮಾಡುವವರು ಒಬ್ಬರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಪಟ್ಟಣದವರೆಲ್ಲರೂ ಸವಾರರ ಮತ್ತು ಬಿಲ್ಲುಗಾರರ ಆರ್ಭಟಕ್ಕೆ ಹೆದರಿ ಓಡುತ್ತಾರೆ; ಇತ್ತ ಪೊದೆಗಳಲ್ಲಿ ಅವಿತುಕೊಳ್ಳುತ್ತಾರೆ, ಅತ್ತ ಬಂಡೆಗಳನ್ನು ಹತ್ತುತ್ತಾರೆ; ಪ್ರತಿಯೊಂದು ಪಟ್ಟಣವು ಯಾವ ನಿವಾಸಿಯೂ ಇಲ್ಲದೆ ನಿರ್ಜನವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಪಟ್ಟಣದವರೆಲ್ಲರೂ ಸವಾರರ ಮತ್ತು ಬಿಲ್ಲುಗಾರರ ಆರ್ಭಟಕ್ಕೆ ಹೆದರಿ ಓಡುತ್ತಾರೆ; ಇತ್ತ ಪೊದೆಗಳಲ್ಲಿ ಅವಿತುಕೊಳ್ಳುತ್ತಾರೆ, ಅತ್ತ ಬಂಡೆಗಳನ್ನು ಹತ್ತುತ್ತಾರೆ; ಪ್ರತಿಯೊಂದು ಪಟ್ಟಣವು ಯಾವ ನಿವಾಸಿಯೂ ಇಲ್ಲದೆ ನಿರ್ಜನವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಯೆಹೂದದ ಜನರು ಕುದುರೆಗಳ, ಸವಾರರ, ಬಿಲ್ಲುಗಾರರ ಶಬ್ಧಗಳನ್ನು ಕೇಳಿ ಓಡಿಹೋಗುವರು. ಕೆಲವು ಜನರು ಗುಹೆಯಲ್ಲಿ ಅಡಗಿಕೊಳ್ಳುವರು. ಕೆಲವರು ಪೊದೆಗಳಲ್ಲಿ ಅವಿತುಕೊಳ್ಳುವರು. ಕೆಲವರು ಬೆಟ್ಟಗಳನ್ನು ಹತ್ತಿಹೋಗುವರು. ಯೆಹೂದದ ಎಲ್ಲಾ ನಗರಗಳು ಬರಿದಾಗುವವು. ಅಲ್ಲಿ ಒಬ್ಬರೂ ಇರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ರಾವುತರ ಮತ್ತು ಬಿಲ್ಲಿನವರ ಶಬ್ದದ ನಿಮಿತ್ತ ಪಟ್ಟಣವೆಲ್ಲಾ ಓಡಿ ಹೋಗುವುದು. ಪೊದೆಗಳಲ್ಲಿ ಹೊಕ್ಕು, ಬಂಡೆಗಳನ್ನು ಹತ್ತುವರು. ಪಟ್ಟಣಗಳೆಲ್ಲಾ ನಾಶವಾಗುವುವು. ಅವುಗಳಲ್ಲಿ ಒಬ್ಬನಾದರೂ ವಾಸಮಾಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 4:29
14 ತಿಳಿವುಗಳ ಹೋಲಿಕೆ  

ಗುಹೆಬಿಟ್ಟು ಹೊರಟುಬರುವ ಸಿಂಹದಂತೆ ರಾಷ್ಟ್ರಗಳ ವಿನಾಶಕನೊಬ್ಬನು ಎದ್ದಿದ್ದಾನೆ; ಹೊರಟು ಬರುತ್ತಿದ್ದಾನೆ. ಅವನು ಜುದೇಯ ನಾಡನ್ನು ಹಾಳುಮಾಡುವನು. ಅದರ ಪಟ್ಟಣಗಳು ನಿರ್ಜನ ಪ್ರದೇಶಗಳಾಗುವುವು.


ಅದೇ ಸಮಯದಲ್ಲಿ ‘ಪರ್ವತಗಳೇ, ನಮ್ಮನ್ನು ತುಳಿದುಬಿಡಿ; ಗುಡ್ಡಗಳೇ, ನಮ್ಮನ್ನು ನುಂಗಿಬಿಡಿ,’ ಎಂದು ಕೂಗಿಕೊಳ್ಳುವರು.


ಆಗ ಸರ್ವೇಶ್ವರಸ್ವಾಮಿ ಬಲಿಪೀಠದ ಪಕ್ಕದಲ್ಲಿ ನಿಂತಿರುವುದನ್ನು ಕಂಡೆನು. ಅವರು ನನಗೆ ಹೀಗೆಂದು ಅಪ್ಪಣೆಮಾಡಿದರು: “ಹೊಸ್ತಿಲುಗಳು ಕದಲುವಂತೆ ಕಂಬಗಳ ಬೋದಿಗೆಗೆ ಬಲವಾಗಿ ಹೊಡೆ. ಅವು ಕುಸಿದು ಎಲ್ಲರ ತಲೆಯ ಮೇಲೆ ಬೀಳಲಿ. ಅಳಿದುಳಿದವರನ್ನು ಖಡ್ಗಕ್ಕೆ ತುತ್ತಾಗಿಸುವೆನು. ಅವರಲ್ಲಿ ಯಾರೂ ಓಡಿಹೋಗರು; ಯಾರೂ ತಪ್ಪಿಸಿಕೊಳ್ಳರು.


ಒಳಗಿದ್ದ ಎಲ್ಲ ಸೈನಿಕರು ಅದೇ ರಾತ್ರಿ ಅರಸನ ತೋಟದ ಬಳಿಯಿದ್ದ ಬಾಗಿಲಿನ ಮೂಲಕ ನಗರದಿಂದ ಓಡಿಹೋದರು. ಆ ಬಾಗಿಲು ಎರಡು ಗೋಡೆಗಳ ಮಧ್ಯೆಯಿತ್ತು. ಅವರು ಅರಾಬಾ ಎಂಬ ಕಣಿವೆ ಪ್ರದೇಶದ ಮಾರ್ಗವಾಗಿ ಪಲಾಯನ ಮಾಡಿದರು.


ಒಬ್ಬ ಸೈನಿಕನ ಬೆದರಿಕೆಗೆ ಸಾವಿರ ಜನರು ಪರಾರಿಯಾಗುವರು. ಐದು ಸೈನಿಕರ ಬೆದರಿಕೆಗೆ ನೀವೆಲ್ಲರೂ ಓಡಿಹೋಗುವಿರಿ. ಕಟ್ಟಕಡೆಗೆ ಬೆಟ್ಟದ ತುದಿಯಲ್ಲಿರುವ ಧ್ವಜಸ್ತಂಭದಂತೆ, ಗುಡ್ಡದ ಮೇಲಿರುವ ಕೈಕಂಬದಂತೆ ಒಬ್ಬಂಟಿಗನಾಗಿ ಉಳಿಯುವಿರಿ.


ಆದುದರಿಂದ ಅಸ್ಸೀರಿಯದ ಅರಸನ ಸೈನ್ಯಾಧಿಪತಿಗಳನ್ನು ಅವನ ಮೇಲೆ ಬರಮಾಡಿದರು. ಆ ಸೇನಾಧಿಪತಿಗಳು ಮನಸ್ಸೆಯನ್ನು ಹಿಡಿದು ಅವನನ್ನು ಬಂಧಿಸಿ, ಬೇಡಿಹಾಕಿ, ಬಾಬಿಲೋನಿಗೆ ಒಯ್ದರು.


ಇಸ್ರಯೇಲರಿಗೆ ಕೇಡು ಬಂದೊದಗಿತು. ತಾವು ಇಕ್ಕಟ್ಟಿನಲ್ಲಿ ಇದ್ದೇವೆಂದು ಅವರು ತಿಳಿದು ಗವಿ, ಕಾಡು, ಬಂಡೆ, ನೆಲಮನೆ, ಗುಂಡಿ ಇವುಗಳಲ್ಲಿ ಅಡಗಿಕೊಂಡರು.


“ನಾನು ಜನರನ್ನು ದೂರ ತೊಲಗಿಸಿ, ನಾಡನ್ನು ನಾಶಗೊಳಿಸಿ, ನಗರಗಳನ್ನು ನಿರ್ಜನಗೊಳಿಸಿ, ಮನೆಗಳನ್ನು ಬರಿದಾಗಿಸಿ, ಧರೆಯನ್ನು ಪೂರ್ತಿಯಾಗಿ ನಾಶಗೊಳಿಸುವ ತನಕ ಪರಿಸ್ಥಿತಿ ಹೀಗಿರುವುದು.


ಅವರು ಬಿಲ್ಲನ್ನೂ ಈಟಿಯನ್ನೂ ಹಿಡಿದಿದ್ದಾರೆ. ಅವರು ಕ್ರೂರಿಗಳು, ನಿಷ್ಕರುಣಿಗಳು. ಅವರ ಧ್ವನಿ ಸಮುದ್ರದಂತೆ ಭೋರ್ಗರೆಯುತ್ತಿದೆ. ಕುದುರೆಗಳನ್ನು ಏರಿದ್ದಾರೆ. ಎಲೌ ಸಿಯೋನ್ ನಗರಿಯೇ, ಆ ಶತ್ರುಸೈನ್ಯ ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ.”


ಸರ್ವೇಶ್ವರ ಹೀಗೆನ್ನುತ್ತಾರೆ : “ಇಗೋ, ನಾನು ಬಹುಮಂದಿ ಬೆಸ್ತರನ್ನು ಕಳಿಸುವೆನು, ಅವರು ನನ್ನ ಜನರನ್ನು ಹಿಡಿಯುವರು, ಬಳಿಕ ಬಹುಜನ ಬೇಡರನ್ನು ಕಳಿಸುವೆನು. ಅವರು ಎಲ್ಲ ಬೆಟ್ಟಗುಡ್ಡಗಳಿಂದಲೂ ಬಂಡೆಗಳ ಸಂದುಗೊಂದುಗಳಿಂದಲೂ ನನ್ನ ಜನರನ್ನು ಹೊರಡಿಸಿ ಬೇಟೆಯಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು